Homeಕರೋನಾ ತಲ್ಲಣಬೆಂಗಳೂರು: ನಿಧಾನಗತಿಯಲ್ಲಿ ಕೊರೊನಾ ಏರಿಕೆ, ಎರಡು ಶಾಲೆಗಳಲ್ಲಿ 31 ಪ್ರಕರಣಗಳು

ಬೆಂಗಳೂರು: ನಿಧಾನಗತಿಯಲ್ಲಿ ಕೊರೊನಾ ಏರಿಕೆ, ಎರಡು ಶಾಲೆಗಳಲ್ಲಿ 31 ಪ್ರಕರಣಗಳು

- Advertisement -
- Advertisement -

ರಾಜ್ಯದಲ್ಲಿ ನಿಧಾನಗತಿಯಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದೆ ಎಂದು ಆರೋಗ್ಯ ಇಲಾಖೆ ಮಾಸ್ಕ್‌ ಕಡ್ಡಾಯ ಮಾಡಿ ಸುತ್ತೋಲೆ ಹೊರಡಿಸಿದ ಬೆನ್ನಲ್ಲೇ ಬೆಂಗಳೂರಿನ ಎರಡು ಖಾಸಗಿ ಶಾಲೆಯ 31 ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಬಿಬಿಎಂಪಿಯ ದಾಸರಹಳ್ಳಿ ವಲಯದ ಪೀಣ್ಯ ಎರಡನೇ ಹಂತದ ಖಾಸಗಿ ಶಾಲೆಯ 5ನೇ ತರಗತಿಯ 10 ವಿದ್ಯಾರ್ಥಿಗಳಿಗೆ ಸೋಮವಾರ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಸೋಂಕು ಇರುವ ತರಗತಿಯ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ.

ಕಳೆದ ಗುರುವಾರ (ಜೂನ್ 9) ರಾಜಗೋಪಾಲ ನಗರದ ಖಾಸಗಿ ಶಾಲೆಯ 5 ಮತ್ತು 6ನೇ ತರಗತಿಯ ಒಟ್ಟು 21 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿತ್ತು.  ಎರಡು ಶಾಲೆಗಳಿಂದ ಒಟ್ಟು 31 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದ್ದು, ಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರುಮತ್ತು ಸಿಬ್ಬಂದಿ ವರ್ಗವನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

ಇದನ್ನೂ ಓದಿ: ತಮಿಳುನಾಡು: ಕಸ್ಟಡಿ ಸಾವು, ಮೃತದೇಹ ಸ್ವೀಕರಿಸಲು ನಿರಾಕರಿಸಿದ ಕುಟುಂಬ

ಶಾಲೆಯ ತರಗತಿ ಮತ್ತು ಆವರಣಕ್ಕೆ ಸೋಂಕು ನಿವಾರಾಕ ದ್ರಾವಣ ಸಿಂಪಡಣೆ ಮಾಡಲಾಗಿದೆ. ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗುತ್ತಿದೆ ಎಂದು ದಾಸರಹಳ್ಳಿ ವಲಯದ ಆರೋಗ್ಯ ವೈದ್ಯಾಧಿಕಾರಿ ಸುರೇಶ್ ರುದ್ರಪ್ಪ ತಿಳಿಸಿದ್ದಾರೆ.

ಸೋಮವಾರ ರಾಜ್ಯದಲ್ಲಿ ಒಟ್ಟು 415 ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 400 ಪ್ರಕರಣಗಳು ವರದಿಯಾಗಿವೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳು 3,688 ಇದ್ದು, ಬೆಂಗಳೂರಿನಲ್ಲಿಯೇ 3,542 ಪ್ರಕರಣಗಳಿವೆ.

ಕಳೆದ ಜೂನ್ 11 ರಂದು ರಾಜ್ಯ ಆರೋಗ್ಯ ಇಲಾಖೆ ಮಾಸ್ಕ್ ಕಡ್ಡಾಯ ಮಾಡಿ ಸುತ್ತೋಲೆ ಹೊರಡಿಸಿದೆ. ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲು ಮಾರ್ಷಲ್‌ಗಳು ಅಥವಾ ಪೊಲೀಸ್ ಸಿಬ್ಬಂದಿಯ ಸಹಾಯ ಪಡೆಯುವಂತೆ ಸುತ್ತೊಲೆಯಲ್ಲಿ ಸೂಚಿಸಲಾಗಿದೆ.

ಮುಚ್ಚಿದ ಸ್ಥಳಗಳಾದ ಶಾಪಿಂಗ್‌ ಮಾಲ್‌ಗಳು, ರೆಸ್ಟೊರೆಂಟ್‌ಗಳು, ಪಬ್‌ಗಳು, ಹೋಟೆಲ್‌ಗಳು, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್‌ಗಳು, ಕಚೇರಿಗಳು, ಕಾರ್ಖಾನೆ ಇತ್ಯಾದಿ ಪ್ರದೇಶಗಳಲ್ಲಿ ಸಿಬ್ಬಂದಿ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಬೇಕು. ಮಾಸ್ಕ್‌ ಧರಿಸಿದ್ದರೆ ಮಾತ್ರವೇ ಪ್ರವೇಶ ಕಲ್ಪಿಸುವುದು ಆಯಾ ಸಂಸ್ಥೆಯ ಮಾಲೀಕರು, ಆಡಳಿತ ಮಂಡಳಿಗಳ ಜವಾಬ್ದಾರಿಯಾಗಿದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಸ್ವಂತ ವಾಹನಗಳು ಹಾಗೂ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ (ಬಸ್‌ ಹಾಗೂ ರೈಲು) ಪ್ರಯಾಣಿಸುವ ಸಂದರ್ಭದಲ್ಲಿ ಸಾರ್ವಜನಿಕರು ಮಾಸ್ಕ್‌ ಧರಿಸುವುದು ಕಡ್ಡಾಯವಾಗಿದೆ ಎಂದು ಸೂಚಿಸಲಾಗಿದೆ.


ಇದನ್ನೂ ಓದಿ: ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಮಾಡಿ ಸುತ್ತೋಲೆ ಹೊರಡಿಸಿದ ಆರೋಗ್ಯ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....