Homeಕರ್ನಾಟಕಜೆಡಿಎಸ್ ಚಿಹ್ನೆ ಬಳಸದಂತೆ, ಪದಾಧಿಕಾರಿಗಳ ನೇಮಕ ಮಾಡದಂತೆ ಸಿಎಂ ಇಬ್ರಾಹಿಂಗೆ ಕೋರ್ಟ್ ಆದೇಶ

ಜೆಡಿಎಸ್ ಚಿಹ್ನೆ ಬಳಸದಂತೆ, ಪದಾಧಿಕಾರಿಗಳ ನೇಮಕ ಮಾಡದಂತೆ ಸಿಎಂ ಇಬ್ರಾಹಿಂಗೆ ಕೋರ್ಟ್ ಆದೇಶ

- Advertisement -
- Advertisement -

ಜೆಡಿಎಸ್‌ ಉಚ್ಚಾಟಿತ ಅಧ್ಯಕ್ಷ ಸಿಎಂ ಇಬ್ರಾಹಿಂ ಅವರು ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಸುವಂತಿಲ್ಲ ಸುದ್ದಿಗೋಷ್ಠಿ ಹಮ್ಮಿಕೊಳ್ಳುವಂತಿಲ್ಲ ಹಾಗೂ ಪದಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವಂತಿಲ್ಲ ಎಂದು ಬೆಂಗಳೂರು ಸಿಟಿ ಸಿವಿಲ್‌ ನ್ಯಾಯಾಲಯ ಶನಿವಾರ ಮಧ್ಯಂತರ ನಿರ್ಬಂಧಕಾಜ್ಞೆ ವಿಧಿಸಿದೆ.

ಇಬ್ರಾಹಿಂ ಅವರು ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿದ್ದರೂ, ಪಕ್ಷದ ಚಿಹ್ನೆ ಹೆಸರು ಬಳಸುತ್ತಿರುವುದನ್ನು ಪ್ರಶ್ನಿಸಿ ಜೆಡಿಎಸ್‌‌ ಪ್ರಧಾನ ಕಾರ್ಯದರ್ಶಿ ಎ ಪಿ ರಂಗನಾಥ ಅವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ 9ನೇ ಹೆಚ್ಚುವರಿ ಸಿಟಿ ಸಿವಿಲ್‌ ನ್ಯಾಯಾಲಯ ಮಧ್ಯಂತರ ನಿರ್ಬಂಧಕಾಜ್ಞೆ ವಿಧಿಸಿದ್ದು ಪ್ರಕರಣವನ್ನು 12 ಫೆಬ್ರವರಿ 2024ಕ್ಕೆ ಮುಂದೂಡಲಾಗಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ನೋಟಿಸ್‌ ನೀಡುವ ಸಂಬಂಧ ಸೂಕ್ತ ಆದೇಶ ರವಾನಿಸದಿದ್ದರೆ ನೋಟಿಸ್‌ ನೀಡುವಲ್ಲಿ ವಿಳಂಬ ಉಂಟಾಗಿ ಅರ್ಜಿದಾರರ ಹಕ್ಕುಗಳ ಮೇಲೆ ಪರಿಣಾಮ ಬೀರುತ್ತದೆ. ಅಂತಹ ಸಂದರ್ಭಗಳಲ್ಲಿ ಅರ್ಜಿದಾರ ತೊಂದರೆ ಮತ್ತು ಅನ್ಯಾಯಕ್ಕೆ ತುತ್ತಾಗುತ್ತಾನೆ. ವಿಳಂಬದಿಂದಾಗಿ ನಿರ್ಬಂಧಕಾಜ್ಞೆ ನೀಡುವ ಉದ್ದೇಶಕ್ಕೆ ಸೋಲುಂಟಾಗುತ್ತದೆ. ಪ್ರಕರಣದ ಸಂದರ್ಭ ಮತ್ತು ಸನ್ನಿವೇಶ ಗಮನಿಸಿ ಮುಂದಿನ ವಿಚಾರಣೆಯವರೆಗೆ ಅರ್ಜಿದಾರರು ಮನವಿ ಮಾಡಿದಂತೆ ಮಧ್ಯಂತರ ನಿರ್ಬಂಧಕಾಜ್ಞೆ ನೀಡುತ್ತಿರುವುದಾಗಿ ನ್ಯಾಯಾಲಯದ ಆದೇಶ ತಿಳಿಸಿದೆ.

ಸಿಎಂ ಇಬ್ರಾಹಿಂ ಅವರನ್ನು ಅಧ್ಯಕ್ಷ ಹುದ್ದೆಯಿಂದ ಉಚ್ಚಾಟಿಸಿರುವುದರಿಂದ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಅವರು ಕೈಗೊಂಡ ಕ್ರಮಗಳು , ನಿರ್ಣಯಗಳು ಹಾಗೂ ನೀಡಿದ ಆದೇಶಗಳನ್ನು ಅಕ್ರಮ, ನಿರಂಕುಶ, ಅಧಿಕಾರರಹಿತ, ಅನೂರ್ಜಿತ ಹಾಗೂ ನಿರರ್ಥಕ ಎಂದು ಘೋಷಿಸಬೇಕು ಎಂದು ಎ ಪಿ ರಂಗನಾಥ ಕೋರಿದ್ದರು.

ಇಬ್ರಾಹಿಂ ಅವರು ಈ ವರ್ಷದ ಜನವರಿ 9 ರಿಂದ19ರವರೆಗೆ ಪಕ್ಷಕ್ಕೆ 2ರಿಂದ 8ನೇ ಪ್ರತಿವಾದಿಗಳ ನೇಮಕಾತಿ ಮಾಡಿದ್ದು, ಅದನ್ನು ರದ್ದುಗೊಳಿಸಬೇಕು. ಅಲ್ಲದೆ ಇಬ್ರಾಹಿಂ ಅವರು ಪಕ್ಷದ ಹೆಸರು, ಚಿಹ್ನೆ, ಲೆಟರ್‌ ಹೆಡ್‌ ಹಾಗೂ ಪತ್ರ ವ್ಯವಹಾರ ನಡೆಸದಂತೆ ಶಾಶ್ವತ ತಡೆಯಾಜ್ಞೆ ನೀಡಬೇಕು ಎಂಬುದಾಗಿ ರಂಗನಾಥ ವಿನಂತಿಸಿದ್ದರು.

ರಾಜ್ಯ ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವುದಕ್ಕೆ ಹಾಗೂ ಅವರು ಜೆಡಿಎಸ್‌ ಜೊತೆ ಗುರುತಿಸಿಕೊಳ್ಳುವುದಕ್ಕೆ ಶಾಶ್ವತ ನಿರ್ಬಂಧ ಹೇರಬೇಕು. ಜೊತೆಗೆ 2ರಿಂದ 8ನೇ ಪ್ರತಿವಾದಿಗಳು ಪದಾಧಿಕಾರಿಗಳಾಗಿ ಮುಂದುವರೆಯದಂತೆ ತಡೆ ಬೀಡಬೇಕು ಎಂದು ಅವರು ಮನವಿ ಮಾಡಿದ್ದರು.

ಇಬ್ರಾಹಿಂ ಅವರಲ್ಲದೆ ಇಮ್ರಾನ್‌ ಪಾಷಾ, ಉಮಾದೇವಿ, ಲಕ್ಷ್ಮೀ ಬಿ, ಹೆನ್ರಿಟಾ ಮಾರಿಯಾ, ಥೆರೇಸಾ ಬೋಸ್‌, ಎಸ್‌ ವಹೀದಾ ಬಾನು ಹಾಗೂ ನಜೀಮ್‌ ಅವರನ್ನು ಪ್ರಕರಣದ ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು.

ಇದನ್ನೂ ಓದಿ: ಹಾರೋಹಳ್ಳಿ ಶ್ರೀರಾಮ ಪೂಜೆ; ಸಂಸದ ಪ್ರತಾಪ್ ಸಿಂಹಗೆ ದಲಿತ ಮುಖಂಡರಿಂದ ಘೇರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...