Homeಕರ್ನಾಟಕಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

ಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

- Advertisement -
- Advertisement -

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯ ಬೇಗೂರಿನಲ್ಲಿ ನೂರಾರು ಗೂಂಡಾಗಳು ಕಳೆದ ಬುಧವಾರ (ಮೇ.28) ತಡರಾತ್ರಿ ದಲಿತರ ಮನೆ ಮತ್ತು ದೇವಸ್ಥಾನಗಳನ್ನು ಧ್ವಂಸ ಮಾಡಿರುವ ಆರೋಪ ಕೇಳಿ ಬಂದಿದೆ.

ಬೇಗೂರು ಗ್ರಾಮದ ಸರ್ವೆ ನಂಬರ್ 352ರ ಒಂದು ಎಕರೆ ಜಮೀನಿನಲ್ಲಿ ಮುನಿಸ್ವಾಮಿ ಎಂಬವರು 1970ರಿಂದ ಉಳುಮೆ ಮಾಡಿಕೊಂಡು, ಅದೇ ಭೂಮಿಯಲ್ಲಿ ಮನೆ ಕಟ್ಟಿಕೊಂಡು ವಾಸವಿದ್ದರು.

ಜಮೀನಿನ ಮುಂಭಾಗದಲ್ಲಿರುವ ಪ್ರೆಸ್ಟೀಜ್ ಕಂಪನಿ ಈ ಭೂಮಿಯನ್ನು ತನ್ನ ವಶಕ್ಕೆ ಪಡೆಯಲು ಸಾಕಷ್ಟು ಬಾರಿ ಪ್ರಯತ್ನಿಸಿತ್ತು. ಬುಧವಾರ ತಡರಾತ್ರಿ ನೂರಾರು ಗೂಂಡಾಗಳು ಏಕಾಏಕಿ ಜಮೀನಿಗೆ ನುಗ್ಗಿ, ಬುಲ್ಡೋಝರ್ ಮೂಲಕ ಮುನಿಸ್ವಾಮಿ ಅವರ ಕುಟುಂಬ ವಾಸವಿದ್ದ ಮನೆ ಮತ್ತು ಪಕ್ಕದ ದೇವಸ್ಥಾನಗಳನ್ನು ನೆಲಸಮಗೊಳಿಸಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

ಈ ಸಂಬಂಧ 500ರಕ್ಕಿಂತ ಹೆಚ್ಚು ಜನರ ಮೇಲೆ ಪ್ರಕರಣ ದಾಖಲಾಗಿದೆ. ಎಫ್‌ಐಆರ್ ಪ್ರತಿ ನಾನುಗೌರಿ.ಕಾಂಗೆ ಲಭ್ಯವಾಗಿದ್ದು, ಅದರಲ್ಲಿ ರವಿಚಂದ್ರನ್ ಹೆಚ್‌.ಆರ್ ಎಂಬವರನ್ನು ಮೊದಲನೇ, ನಯೀಮ್ ನೂರ್ ಎಂಬವರನ್ನು ಎರಡನೇ ಮತ್ತು ಸುಮಾರು 400 ರಿಂದ 500 ಇತರರನ್ನು ಮೂರನೇ ಆರೋಪಿಗಳನ್ನಾಗಿ ಗುರುತಿಸಲಾಗಿದೆ.

“ಬುಧವಾರ ರಾತ್ರಿ 12.30ರ ಸುಮಾರಿಗೆ ರವಿಚಂದ್ರನ್ ನಯೀಮ್ ಮತ್ತು ಇತರರು ನಮ್ಮ ಜಮೀನಿಗೆ ಅತಿಕ್ರಮಣ ಪ್ರವೇಶ ಮಾಡಿ, ಬುಲ್ಡೋಝರ್ ಮತ್ತು ಇತರ ಯಂತ್ರಗಳ ಮೂಲಕ ಮನೆ ಹಾಗೂ ಎರಡು ದೇವಸ್ಥಾನಗಳನ್ನು ಧ್ವಂಸಗೊಳಿಸಿದ್ದಾರೆ. ಈ ವೇಳೆ ತಂದೆ, ತಮ್ಮ ಯಲ್ಲಪ್ಪ, ಸಹೋದರ ಸಂಬಂಧಿ ವರುಣ್ ಮತ್ತು ಅಕ್ಕನ ಮಗನಾದ ಇಂದ್ರಜಿತ್ ಮೇಲೆ ಹಲ್ಲೆಗೆ ಮುಂದಾಗಿದ್ದರು. ವರುಣ್ ಅವರನ್ನು ಕಾರಿನಲ್ಲಿ ಅಪಹರಣ ಮಾಡಿಕೊಂಡು ಹೋಗಿ ಕೆಲ ಸಮಯದ ನಂತರ ವಾಪಸ್ ತಂದು ಬಿಟ್ಟಿದ್ದಾರೆ” ಎಂದು ನಾಗರಾಜ್ ಎಂಬವರು ದೂರು ನೀಡಿದ್ದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

“ಆರೋಪಿಗಳು ನಮ್ಮ ಶ್ರೀ ರೇಣುಕಾ ಯಲ್ಲಮ್ಮ ಮತ್ತು ಶ್ರೀ ಶಾಂತಿ ಮುನೇಶ್ವರ ದೇವಸ್ಥಾನಗಳನ್ನು ಧ್ವಂಸ ಮಾಡಿದ್ದಾರೆ. ದೇವರ ಕಲ್ಲಿನ ಮೂರ್ತಿಗಳು, ದೇವರ ಅಲಂಕಾರದ ಸುಮಾರು 50 ಗ್ರಾಂ ಬಂಗಾರದ ಒಡವೆಗಳು ಮತ್ತು ಮನೆಯಲ್ಲಿದ್ದ ಸಾಮಾಗ್ರಿಗಳನ್ನು ತೆಗೆದುಕೊಂಡು ಹೋಗಿದ್ದಾರೆ. ನಾವು ಪೊಲೀಸರಿಗೆ ಮಾಹಿತಿ ನೀಡಿ ರಕ್ಷಣೆ ಕೊಡುವಂತೆ ಕೋರಿದ್ದೆವು. ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ಗೂಂಡಾಗಳು ಮನೆಯ ಬೀರುವಿನಲ್ಲಿದ್ದ ಒಡವೆಗಳನ್ನು ದರೋಡೆ ಮಾಡಿದ್ದರು. ಮನೆಯ ಆವರಣದಲ್ಲಿ ನಿಂತಿದ್ದ ಮಾರುತಿ ಕಾರು ಹಾಗೂ ಡಿಯೋ ಬೈಕನ್ನು ಹಾನಿಗೊಳಿಸಿದ್ದರು. ಈ ದೃಶ್ಯಗಳನ್ನು ಸೆರೆ ಹಿಡಿಯಲು ಮುಂದಾದ ನನ್ನ ಮೊಬೈಲ್ ಫೋನ್ ಕಿತ್ತುಕೊಂಡಿದ್ದಾರೆ” ಎಂದು ನಾಗರಾಜ್ ದೂರಿನಲ್ಲಿ ಹೇಳಿದ್ದಾರೆ.

“ಮನೆಯ ಬಳಿಯಿದ್ದ ತೆಂಗು ಮತ್ತು ಹಲಸಿನ ಮರಗಳನ್ನು ಆರೋಪಿಗಳು ನೆಲಕ್ಕೆ ಕೆಡವಿದ್ದಾರೆ. ಜೋಳದ ಸಸಿಗಳನ್ನು ಹಾನಿಗೊಳಿಸಿದ್ದಾರೆ. ನಾವು ಸಾಕಿದ್ದ ನೂರಾರು ಕೋಳಿಗಳನ್ನು ದರೋಡೆ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆರೋಪಿಗಳ ವಿರುದ್ದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3 (2) (V), 3(1)(g) ಮತ್ತು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 115 (2), 138, 190,304 (2), 310 (2), 324 (5),331 (4),351 (3), 352 ರ ಅಡಿ ಪ್ರಕರಣ ದಾಖಲಿಸಲಾಗಿದೆ.

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿರುವ ದೂರುದಾರ ನಾಗರಾಜ್, “ಜಮೀನು ಬಿಟ್ಟುಕೊಡುವಂತೆ ನಮಗೆ ಈ ಹಿಂದೆಯೂ ಬೆದರಿಕೆ ಹಾಕಿದ್ದರು. ಬುಧವಾರ ರಾತ್ರಿ ನಾವು ಮನೆಯಲ್ಲಿದ್ದ ವೇಳೆ ನೂರಾರು ಜನರು ಒಂದೇ ಸಮನೆ ಮನೆಯೊಳಗೆ ನುಗ್ಗಿ ನನ್ನ ತಮ್ಮ ಯಲ್ಲಪ್ಪ, ಸಹೋದರ ಸಂಬಂಧಿ ವರುಣ್ ಮತ್ತು ಅಕ್ಕನ ಮಗನಾದ ಇಂದ್ರಜಿತ್ ಮೇಲೆ ಹಲ್ಲೆಗೆ ಮುಂದಾದರು. ಅದನ್ನು ನೋಡಿ ನನ್ನ ಅಪ್ಪ ಆಘಾತಕ್ಕೊಳಗಾದರು. ಅವರನ್ನು ನಮ್ಮದೇ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ಯಲು ನಾನು ಮುಂದಾದಾಗ ನನ್ನನ್ನು ಆಟೋದಿಂದ ಹೊರಗೆಳೆಯಲು ಯತ್ನಿಸಿದರು. ನಾನು ಅಪ್ಪನನ್ನು ಬಿಟ್ಟು ಬರಲಿಲ್ಲ” ಎಂದಿದ್ದಾರೆ.

ಮುಂದುವರಿದು, “ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ. ನನ್ನನ್ನು ಹುಡುಕುತ್ತಿದ್ದಾರಂತೆ. ನನಗೆ ಭಯ ಆಗಿದೆ ಸರ್. ನಮ್ಮ ರಕ್ಷಣೆಗೆ ಯಾರೂ ಇಲ್ಲ. ಪೊಲೀಸರಿಗೆ ದೂರು ಕೊಟ್ಟಿದ್ದೇವೆ. ಆದರೆ, ಯಾವಾಗ ಏನಾಗುತ್ತದೆ ಎಂಬ ಭಯದಲ್ಲಿ ಇಡೀ ಕುಟುಂಬ ಇದೆ. ನಮ್ಮ ಜಮೀನಿನ ಸುತ್ತ ಪ್ರೆಸ್ಟೀಜ್ ಮತ್ತು ಡಿಎಲ್‌ಎಫ್‌ ಸಂಸ್ಥೆಗಳ ಅಪಾರ್ಟ್‌ಮೆಂಟ್‌ಗಳು ಇವೆ. ದಯವಿಟ್ಟು ನಮಗೆ ರಕ್ಷಣೆ ಕೊಡಿ ಸರ್” ಎಂದು ಅಲವತ್ತುಕೊಂಡಿದ್ದಾರೆ.

‘ಪಬ್ಲಿಕ್ ಟಿವಿ’ ವರದಿಗಾರ ಮಂಜುನಾಥನಿಂದ ದೌರ್ಜನ್ಯ; ಹಲ್ಲೆ ಹಿಂದಿನ ಕಾರಣ ಬಿಚ್ಚಿಟ್ಟ ದಲಿತ ಪತ್ರಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...