Homeಕರ್ನಾಟಕಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

ಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

- Advertisement -
- Advertisement -

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯ ಬೇಗೂರಿನಲ್ಲಿ ನೂರಾರು ಗೂಂಡಾಗಳು ಕಳೆದ ಬುಧವಾರ (ಮೇ.28) ತಡರಾತ್ರಿ ದಲಿತರ ಮನೆ ಮತ್ತು ದೇವಸ್ಥಾನಗಳನ್ನು ಧ್ವಂಸ ಮಾಡಿರುವ ಆರೋಪ ಕೇಳಿ ಬಂದಿದೆ.

ಬೇಗೂರು ಗ್ರಾಮದ ಸರ್ವೆ ನಂಬರ್ 352ರ ಒಂದು ಎಕರೆ ಜಮೀನಿನಲ್ಲಿ ಮುನಿಸ್ವಾಮಿ ಎಂಬವರು 1970ರಿಂದ ಉಳುಮೆ ಮಾಡಿಕೊಂಡು, ಅದೇ ಭೂಮಿಯಲ್ಲಿ ಮನೆ ಕಟ್ಟಿಕೊಂಡು ವಾಸವಿದ್ದರು.

ಜಮೀನಿನ ಮುಂಭಾಗದಲ್ಲಿರುವ ಪ್ರೆಸ್ಟೀಜ್ ಕಂಪನಿ ಈ ಭೂಮಿಯನ್ನು ತನ್ನ ವಶಕ್ಕೆ ಪಡೆಯಲು ಸಾಕಷ್ಟು ಬಾರಿ ಪ್ರಯತ್ನಿಸಿತ್ತು. ಬುಧವಾರ ತಡರಾತ್ರಿ ನೂರಾರು ಗೂಂಡಾಗಳು ಏಕಾಏಕಿ ಜಮೀನಿಗೆ ನುಗ್ಗಿ, ಬುಲ್ಡೋಝರ್ ಮೂಲಕ ಮುನಿಸ್ವಾಮಿ ಅವರ ಕುಟುಂಬ ವಾಸವಿದ್ದ ಮನೆ ಮತ್ತು ಪಕ್ಕದ ದೇವಸ್ಥಾನಗಳನ್ನು ನೆಲಸಮಗೊಳಿಸಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

ಈ ಸಂಬಂಧ 500ರಕ್ಕಿಂತ ಹೆಚ್ಚು ಜನರ ಮೇಲೆ ಪ್ರಕರಣ ದಾಖಲಾಗಿದೆ. ಎಫ್‌ಐಆರ್ ಪ್ರತಿ ನಾನುಗೌರಿ.ಕಾಂಗೆ ಲಭ್ಯವಾಗಿದ್ದು, ಅದರಲ್ಲಿ ರವಿಚಂದ್ರನ್ ಹೆಚ್‌.ಆರ್ ಎಂಬವರನ್ನು ಮೊದಲನೇ, ನಯೀಮ್ ನೂರ್ ಎಂಬವರನ್ನು ಎರಡನೇ ಮತ್ತು ಸುಮಾರು 400 ರಿಂದ 500 ಇತರರನ್ನು ಮೂರನೇ ಆರೋಪಿಗಳನ್ನಾಗಿ ಗುರುತಿಸಲಾಗಿದೆ.

“ಬುಧವಾರ ರಾತ್ರಿ 12.30ರ ಸುಮಾರಿಗೆ ರವಿಚಂದ್ರನ್ ನಯೀಮ್ ಮತ್ತು ಇತರರು ನಮ್ಮ ಜಮೀನಿಗೆ ಅತಿಕ್ರಮಣ ಪ್ರವೇಶ ಮಾಡಿ, ಬುಲ್ಡೋಝರ್ ಮತ್ತು ಇತರ ಯಂತ್ರಗಳ ಮೂಲಕ ಮನೆ ಹಾಗೂ ಎರಡು ದೇವಸ್ಥಾನಗಳನ್ನು ಧ್ವಂಸಗೊಳಿಸಿದ್ದಾರೆ. ಈ ವೇಳೆ ತಂದೆ, ತಮ್ಮ ಯಲ್ಲಪ್ಪ, ಸಹೋದರ ಸಂಬಂಧಿ ವರುಣ್ ಮತ್ತು ಅಕ್ಕನ ಮಗನಾದ ಇಂದ್ರಜಿತ್ ಮೇಲೆ ಹಲ್ಲೆಗೆ ಮುಂದಾಗಿದ್ದರು. ವರುಣ್ ಅವರನ್ನು ಕಾರಿನಲ್ಲಿ ಅಪಹರಣ ಮಾಡಿಕೊಂಡು ಹೋಗಿ ಕೆಲ ಸಮಯದ ನಂತರ ವಾಪಸ್ ತಂದು ಬಿಟ್ಟಿದ್ದಾರೆ” ಎಂದು ನಾಗರಾಜ್ ಎಂಬವರು ದೂರು ನೀಡಿದ್ದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

“ಆರೋಪಿಗಳು ನಮ್ಮ ಶ್ರೀ ರೇಣುಕಾ ಯಲ್ಲಮ್ಮ ಮತ್ತು ಶ್ರೀ ಶಾಂತಿ ಮುನೇಶ್ವರ ದೇವಸ್ಥಾನಗಳನ್ನು ಧ್ವಂಸ ಮಾಡಿದ್ದಾರೆ. ದೇವರ ಕಲ್ಲಿನ ಮೂರ್ತಿಗಳು, ದೇವರ ಅಲಂಕಾರದ ಸುಮಾರು 50 ಗ್ರಾಂ ಬಂಗಾರದ ಒಡವೆಗಳು ಮತ್ತು ಮನೆಯಲ್ಲಿದ್ದ ಸಾಮಾಗ್ರಿಗಳನ್ನು ತೆಗೆದುಕೊಂಡು ಹೋಗಿದ್ದಾರೆ. ನಾವು ಪೊಲೀಸರಿಗೆ ಮಾಹಿತಿ ನೀಡಿ ರಕ್ಷಣೆ ಕೊಡುವಂತೆ ಕೋರಿದ್ದೆವು. ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ಗೂಂಡಾಗಳು ಮನೆಯ ಬೀರುವಿನಲ್ಲಿದ್ದ ಒಡವೆಗಳನ್ನು ದರೋಡೆ ಮಾಡಿದ್ದರು. ಮನೆಯ ಆವರಣದಲ್ಲಿ ನಿಂತಿದ್ದ ಮಾರುತಿ ಕಾರು ಹಾಗೂ ಡಿಯೋ ಬೈಕನ್ನು ಹಾನಿಗೊಳಿಸಿದ್ದರು. ಈ ದೃಶ್ಯಗಳನ್ನು ಸೆರೆ ಹಿಡಿಯಲು ಮುಂದಾದ ನನ್ನ ಮೊಬೈಲ್ ಫೋನ್ ಕಿತ್ತುಕೊಂಡಿದ್ದಾರೆ” ಎಂದು ನಾಗರಾಜ್ ದೂರಿನಲ್ಲಿ ಹೇಳಿದ್ದಾರೆ.

“ಮನೆಯ ಬಳಿಯಿದ್ದ ತೆಂಗು ಮತ್ತು ಹಲಸಿನ ಮರಗಳನ್ನು ಆರೋಪಿಗಳು ನೆಲಕ್ಕೆ ಕೆಡವಿದ್ದಾರೆ. ಜೋಳದ ಸಸಿಗಳನ್ನು ಹಾನಿಗೊಳಿಸಿದ್ದಾರೆ. ನಾವು ಸಾಕಿದ್ದ ನೂರಾರು ಕೋಳಿಗಳನ್ನು ದರೋಡೆ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆರೋಪಿಗಳ ವಿರುದ್ದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3 (2) (V), 3(1)(g) ಮತ್ತು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 115 (2), 138, 190,304 (2), 310 (2), 324 (5),331 (4),351 (3), 352 ರ ಅಡಿ ಪ್ರಕರಣ ದಾಖಲಿಸಲಾಗಿದೆ.

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿರುವ ದೂರುದಾರ ನಾಗರಾಜ್, “ಜಮೀನು ಬಿಟ್ಟುಕೊಡುವಂತೆ ನಮಗೆ ಈ ಹಿಂದೆಯೂ ಬೆದರಿಕೆ ಹಾಕಿದ್ದರು. ಬುಧವಾರ ರಾತ್ರಿ ನಾವು ಮನೆಯಲ್ಲಿದ್ದ ವೇಳೆ ನೂರಾರು ಜನರು ಒಂದೇ ಸಮನೆ ಮನೆಯೊಳಗೆ ನುಗ್ಗಿ ನನ್ನ ತಮ್ಮ ಯಲ್ಲಪ್ಪ, ಸಹೋದರ ಸಂಬಂಧಿ ವರುಣ್ ಮತ್ತು ಅಕ್ಕನ ಮಗನಾದ ಇಂದ್ರಜಿತ್ ಮೇಲೆ ಹಲ್ಲೆಗೆ ಮುಂದಾದರು. ಅದನ್ನು ನೋಡಿ ನನ್ನ ಅಪ್ಪ ಆಘಾತಕ್ಕೊಳಗಾದರು. ಅವರನ್ನು ನಮ್ಮದೇ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ಯಲು ನಾನು ಮುಂದಾದಾಗ ನನ್ನನ್ನು ಆಟೋದಿಂದ ಹೊರಗೆಳೆಯಲು ಯತ್ನಿಸಿದರು. ನಾನು ಅಪ್ಪನನ್ನು ಬಿಟ್ಟು ಬರಲಿಲ್ಲ” ಎಂದಿದ್ದಾರೆ.

ಮುಂದುವರಿದು, “ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ. ನನ್ನನ್ನು ಹುಡುಕುತ್ತಿದ್ದಾರಂತೆ. ನನಗೆ ಭಯ ಆಗಿದೆ ಸರ್. ನಮ್ಮ ರಕ್ಷಣೆಗೆ ಯಾರೂ ಇಲ್ಲ. ಪೊಲೀಸರಿಗೆ ದೂರು ಕೊಟ್ಟಿದ್ದೇವೆ. ಆದರೆ, ಯಾವಾಗ ಏನಾಗುತ್ತದೆ ಎಂಬ ಭಯದಲ್ಲಿ ಇಡೀ ಕುಟುಂಬ ಇದೆ. ನಮ್ಮ ಜಮೀನಿನ ಸುತ್ತ ಪ್ರೆಸ್ಟೀಜ್ ಮತ್ತು ಡಿಎಲ್‌ಎಫ್‌ ಸಂಸ್ಥೆಗಳ ಅಪಾರ್ಟ್‌ಮೆಂಟ್‌ಗಳು ಇವೆ. ದಯವಿಟ್ಟು ನಮಗೆ ರಕ್ಷಣೆ ಕೊಡಿ ಸರ್” ಎಂದು ಅಲವತ್ತುಕೊಂಡಿದ್ದಾರೆ.

‘ಪಬ್ಲಿಕ್ ಟಿವಿ’ ವರದಿಗಾರ ಮಂಜುನಾಥನಿಂದ ದೌರ್ಜನ್ಯ; ಹಲ್ಲೆ ಹಿಂದಿನ ಕಾರಣ ಬಿಚ್ಚಿಟ್ಟ ದಲಿತ ಪತ್ರಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...