Homeಕರ್ನಾಟಕಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

ಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

- Advertisement -
- Advertisement -

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯ ಬೇಗೂರಿನಲ್ಲಿ ನೂರಾರು ಗೂಂಡಾಗಳು ಕಳೆದ ಬುಧವಾರ (ಮೇ.28) ತಡರಾತ್ರಿ ದಲಿತರ ಮನೆ ಮತ್ತು ದೇವಸ್ಥಾನಗಳನ್ನು ಧ್ವಂಸ ಮಾಡಿರುವ ಆರೋಪ ಕೇಳಿ ಬಂದಿದೆ.

ಬೇಗೂರು ಗ್ರಾಮದ ಸರ್ವೆ ನಂಬರ್ 352ರ ಒಂದು ಎಕರೆ ಜಮೀನಿನಲ್ಲಿ ಮುನಿಸ್ವಾಮಿ ಎಂಬವರು 1970ರಿಂದ ಉಳುಮೆ ಮಾಡಿಕೊಂಡು, ಅದೇ ಭೂಮಿಯಲ್ಲಿ ಮನೆ ಕಟ್ಟಿಕೊಂಡು ವಾಸವಿದ್ದರು.

ಜಮೀನಿನ ಮುಂಭಾಗದಲ್ಲಿರುವ ಪ್ರೆಸ್ಟೀಜ್ ಕಂಪನಿ ಈ ಭೂಮಿಯನ್ನು ತನ್ನ ವಶಕ್ಕೆ ಪಡೆಯಲು ಸಾಕಷ್ಟು ಬಾರಿ ಪ್ರಯತ್ನಿಸಿತ್ತು. ಬುಧವಾರ ತಡರಾತ್ರಿ ನೂರಾರು ಗೂಂಡಾಗಳು ಏಕಾಏಕಿ ಜಮೀನಿಗೆ ನುಗ್ಗಿ, ಬುಲ್ಡೋಝರ್ ಮೂಲಕ ಮುನಿಸ್ವಾಮಿ ಅವರ ಕುಟುಂಬ ವಾಸವಿದ್ದ ಮನೆ ಮತ್ತು ಪಕ್ಕದ ದೇವಸ್ಥಾನಗಳನ್ನು ನೆಲಸಮಗೊಳಿಸಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

ಈ ಸಂಬಂಧ 500ರಕ್ಕಿಂತ ಹೆಚ್ಚು ಜನರ ಮೇಲೆ ಪ್ರಕರಣ ದಾಖಲಾಗಿದೆ. ಎಫ್‌ಐಆರ್ ಪ್ರತಿ ನಾನುಗೌರಿ.ಕಾಂಗೆ ಲಭ್ಯವಾಗಿದ್ದು, ಅದರಲ್ಲಿ ರವಿಚಂದ್ರನ್ ಹೆಚ್‌.ಆರ್ ಎಂಬವರನ್ನು ಮೊದಲನೇ, ನಯೀಮ್ ನೂರ್ ಎಂಬವರನ್ನು ಎರಡನೇ ಮತ್ತು ಸುಮಾರು 400 ರಿಂದ 500 ಇತರರನ್ನು ಮೂರನೇ ಆರೋಪಿಗಳನ್ನಾಗಿ ಗುರುತಿಸಲಾಗಿದೆ.

“ಬುಧವಾರ ರಾತ್ರಿ 12.30ರ ಸುಮಾರಿಗೆ ರವಿಚಂದ್ರನ್ ನಯೀಮ್ ಮತ್ತು ಇತರರು ನಮ್ಮ ಜಮೀನಿಗೆ ಅತಿಕ್ರಮಣ ಪ್ರವೇಶ ಮಾಡಿ, ಬುಲ್ಡೋಝರ್ ಮತ್ತು ಇತರ ಯಂತ್ರಗಳ ಮೂಲಕ ಮನೆ ಹಾಗೂ ಎರಡು ದೇವಸ್ಥಾನಗಳನ್ನು ಧ್ವಂಸಗೊಳಿಸಿದ್ದಾರೆ. ಈ ವೇಳೆ ತಂದೆ, ತಮ್ಮ ಯಲ್ಲಪ್ಪ, ಸಹೋದರ ಸಂಬಂಧಿ ವರುಣ್ ಮತ್ತು ಅಕ್ಕನ ಮಗನಾದ ಇಂದ್ರಜಿತ್ ಮೇಲೆ ಹಲ್ಲೆಗೆ ಮುಂದಾಗಿದ್ದರು. ವರುಣ್ ಅವರನ್ನು ಕಾರಿನಲ್ಲಿ ಅಪಹರಣ ಮಾಡಿಕೊಂಡು ಹೋಗಿ ಕೆಲ ಸಮಯದ ನಂತರ ವಾಪಸ್ ತಂದು ಬಿಟ್ಟಿದ್ದಾರೆ” ಎಂದು ನಾಗರಾಜ್ ಎಂಬವರು ದೂರು ನೀಡಿದ್ದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

“ಆರೋಪಿಗಳು ನಮ್ಮ ಶ್ರೀ ರೇಣುಕಾ ಯಲ್ಲಮ್ಮ ಮತ್ತು ಶ್ರೀ ಶಾಂತಿ ಮುನೇಶ್ವರ ದೇವಸ್ಥಾನಗಳನ್ನು ಧ್ವಂಸ ಮಾಡಿದ್ದಾರೆ. ದೇವರ ಕಲ್ಲಿನ ಮೂರ್ತಿಗಳು, ದೇವರ ಅಲಂಕಾರದ ಸುಮಾರು 50 ಗ್ರಾಂ ಬಂಗಾರದ ಒಡವೆಗಳು ಮತ್ತು ಮನೆಯಲ್ಲಿದ್ದ ಸಾಮಾಗ್ರಿಗಳನ್ನು ತೆಗೆದುಕೊಂಡು ಹೋಗಿದ್ದಾರೆ. ನಾವು ಪೊಲೀಸರಿಗೆ ಮಾಹಿತಿ ನೀಡಿ ರಕ್ಷಣೆ ಕೊಡುವಂತೆ ಕೋರಿದ್ದೆವು. ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ಗೂಂಡಾಗಳು ಮನೆಯ ಬೀರುವಿನಲ್ಲಿದ್ದ ಒಡವೆಗಳನ್ನು ದರೋಡೆ ಮಾಡಿದ್ದರು. ಮನೆಯ ಆವರಣದಲ್ಲಿ ನಿಂತಿದ್ದ ಮಾರುತಿ ಕಾರು ಹಾಗೂ ಡಿಯೋ ಬೈಕನ್ನು ಹಾನಿಗೊಳಿಸಿದ್ದರು. ಈ ದೃಶ್ಯಗಳನ್ನು ಸೆರೆ ಹಿಡಿಯಲು ಮುಂದಾದ ನನ್ನ ಮೊಬೈಲ್ ಫೋನ್ ಕಿತ್ತುಕೊಂಡಿದ್ದಾರೆ” ಎಂದು ನಾಗರಾಜ್ ದೂರಿನಲ್ಲಿ ಹೇಳಿದ್ದಾರೆ.

“ಮನೆಯ ಬಳಿಯಿದ್ದ ತೆಂಗು ಮತ್ತು ಹಲಸಿನ ಮರಗಳನ್ನು ಆರೋಪಿಗಳು ನೆಲಕ್ಕೆ ಕೆಡವಿದ್ದಾರೆ. ಜೋಳದ ಸಸಿಗಳನ್ನು ಹಾನಿಗೊಳಿಸಿದ್ದಾರೆ. ನಾವು ಸಾಕಿದ್ದ ನೂರಾರು ಕೋಳಿಗಳನ್ನು ದರೋಡೆ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆರೋಪಿಗಳ ವಿರುದ್ದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3 (2) (V), 3(1)(g) ಮತ್ತು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 115 (2), 138, 190,304 (2), 310 (2), 324 (5),331 (4),351 (3), 352 ರ ಅಡಿ ಪ್ರಕರಣ ದಾಖಲಿಸಲಾಗಿದೆ.

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿರುವ ದೂರುದಾರ ನಾಗರಾಜ್, “ಜಮೀನು ಬಿಟ್ಟುಕೊಡುವಂತೆ ನಮಗೆ ಈ ಹಿಂದೆಯೂ ಬೆದರಿಕೆ ಹಾಕಿದ್ದರು. ಬುಧವಾರ ರಾತ್ರಿ ನಾವು ಮನೆಯಲ್ಲಿದ್ದ ವೇಳೆ ನೂರಾರು ಜನರು ಒಂದೇ ಸಮನೆ ಮನೆಯೊಳಗೆ ನುಗ್ಗಿ ನನ್ನ ತಮ್ಮ ಯಲ್ಲಪ್ಪ, ಸಹೋದರ ಸಂಬಂಧಿ ವರುಣ್ ಮತ್ತು ಅಕ್ಕನ ಮಗನಾದ ಇಂದ್ರಜಿತ್ ಮೇಲೆ ಹಲ್ಲೆಗೆ ಮುಂದಾದರು. ಅದನ್ನು ನೋಡಿ ನನ್ನ ಅಪ್ಪ ಆಘಾತಕ್ಕೊಳಗಾದರು. ಅವರನ್ನು ನಮ್ಮದೇ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ಯಲು ನಾನು ಮುಂದಾದಾಗ ನನ್ನನ್ನು ಆಟೋದಿಂದ ಹೊರಗೆಳೆಯಲು ಯತ್ನಿಸಿದರು. ನಾನು ಅಪ್ಪನನ್ನು ಬಿಟ್ಟು ಬರಲಿಲ್ಲ” ಎಂದಿದ್ದಾರೆ.

ಮುಂದುವರಿದು, “ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ. ನನ್ನನ್ನು ಹುಡುಕುತ್ತಿದ್ದಾರಂತೆ. ನನಗೆ ಭಯ ಆಗಿದೆ ಸರ್. ನಮ್ಮ ರಕ್ಷಣೆಗೆ ಯಾರೂ ಇಲ್ಲ. ಪೊಲೀಸರಿಗೆ ದೂರು ಕೊಟ್ಟಿದ್ದೇವೆ. ಆದರೆ, ಯಾವಾಗ ಏನಾಗುತ್ತದೆ ಎಂಬ ಭಯದಲ್ಲಿ ಇಡೀ ಕುಟುಂಬ ಇದೆ. ನಮ್ಮ ಜಮೀನಿನ ಸುತ್ತ ಪ್ರೆಸ್ಟೀಜ್ ಮತ್ತು ಡಿಎಲ್‌ಎಫ್‌ ಸಂಸ್ಥೆಗಳ ಅಪಾರ್ಟ್‌ಮೆಂಟ್‌ಗಳು ಇವೆ. ದಯವಿಟ್ಟು ನಮಗೆ ರಕ್ಷಣೆ ಕೊಡಿ ಸರ್” ಎಂದು ಅಲವತ್ತುಕೊಂಡಿದ್ದಾರೆ.

‘ಪಬ್ಲಿಕ್ ಟಿವಿ’ ವರದಿಗಾರ ಮಂಜುನಾಥನಿಂದ ದೌರ್ಜನ್ಯ; ಹಲ್ಲೆ ಹಿಂದಿನ ಕಾರಣ ಬಿಚ್ಚಿಟ್ಟ ದಲಿತ ಪತ್ರಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...