Homeಕರ್ನಾಟಕಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

ಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

- Advertisement -
- Advertisement -

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯ ಬೇಗೂರಿನಲ್ಲಿ ನೂರಾರು ಗೂಂಡಾಗಳು ಕಳೆದ ಬುಧವಾರ (ಮೇ.28) ತಡರಾತ್ರಿ ದಲಿತರ ಮನೆ ಮತ್ತು ದೇವಸ್ಥಾನಗಳನ್ನು ಧ್ವಂಸ ಮಾಡಿರುವ ಆರೋಪ ಕೇಳಿ ಬಂದಿದೆ.

ಬೇಗೂರು ಗ್ರಾಮದ ಸರ್ವೆ ನಂಬರ್ 352ರ ಒಂದು ಎಕರೆ ಜಮೀನಿನಲ್ಲಿ ಮುನಿಸ್ವಾಮಿ ಎಂಬವರು 1970ರಿಂದ ಉಳುಮೆ ಮಾಡಿಕೊಂಡು, ಅದೇ ಭೂಮಿಯಲ್ಲಿ ಮನೆ ಕಟ್ಟಿಕೊಂಡು ವಾಸವಿದ್ದರು.

ಜಮೀನಿನ ಮುಂಭಾಗದಲ್ಲಿರುವ ಪ್ರೆಸ್ಟೀಜ್ ಕಂಪನಿ ಈ ಭೂಮಿಯನ್ನು ತನ್ನ ವಶಕ್ಕೆ ಪಡೆಯಲು ಸಾಕಷ್ಟು ಬಾರಿ ಪ್ರಯತ್ನಿಸಿತ್ತು. ಬುಧವಾರ ತಡರಾತ್ರಿ ನೂರಾರು ಗೂಂಡಾಗಳು ಏಕಾಏಕಿ ಜಮೀನಿಗೆ ನುಗ್ಗಿ, ಬುಲ್ಡೋಝರ್ ಮೂಲಕ ಮುನಿಸ್ವಾಮಿ ಅವರ ಕುಟುಂಬ ವಾಸವಿದ್ದ ಮನೆ ಮತ್ತು ಪಕ್ಕದ ದೇವಸ್ಥಾನಗಳನ್ನು ನೆಲಸಮಗೊಳಿಸಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

ಈ ಸಂಬಂಧ 500ರಕ್ಕಿಂತ ಹೆಚ್ಚು ಜನರ ಮೇಲೆ ಪ್ರಕರಣ ದಾಖಲಾಗಿದೆ. ಎಫ್‌ಐಆರ್ ಪ್ರತಿ ನಾನುಗೌರಿ.ಕಾಂಗೆ ಲಭ್ಯವಾಗಿದ್ದು, ಅದರಲ್ಲಿ ರವಿಚಂದ್ರನ್ ಹೆಚ್‌.ಆರ್ ಎಂಬವರನ್ನು ಮೊದಲನೇ, ನಯೀಮ್ ನೂರ್ ಎಂಬವರನ್ನು ಎರಡನೇ ಮತ್ತು ಸುಮಾರು 400 ರಿಂದ 500 ಇತರರನ್ನು ಮೂರನೇ ಆರೋಪಿಗಳನ್ನಾಗಿ ಗುರುತಿಸಲಾಗಿದೆ.

“ಬುಧವಾರ ರಾತ್ರಿ 12.30ರ ಸುಮಾರಿಗೆ ರವಿಚಂದ್ರನ್ ನಯೀಮ್ ಮತ್ತು ಇತರರು ನಮ್ಮ ಜಮೀನಿಗೆ ಅತಿಕ್ರಮಣ ಪ್ರವೇಶ ಮಾಡಿ, ಬುಲ್ಡೋಝರ್ ಮತ್ತು ಇತರ ಯಂತ್ರಗಳ ಮೂಲಕ ಮನೆ ಹಾಗೂ ಎರಡು ದೇವಸ್ಥಾನಗಳನ್ನು ಧ್ವಂಸಗೊಳಿಸಿದ್ದಾರೆ. ಈ ವೇಳೆ ತಂದೆ, ತಮ್ಮ ಯಲ್ಲಪ್ಪ, ಸಹೋದರ ಸಂಬಂಧಿ ವರುಣ್ ಮತ್ತು ಅಕ್ಕನ ಮಗನಾದ ಇಂದ್ರಜಿತ್ ಮೇಲೆ ಹಲ್ಲೆಗೆ ಮುಂದಾಗಿದ್ದರು. ವರುಣ್ ಅವರನ್ನು ಕಾರಿನಲ್ಲಿ ಅಪಹರಣ ಮಾಡಿಕೊಂಡು ಹೋಗಿ ಕೆಲ ಸಮಯದ ನಂತರ ವಾಪಸ್ ತಂದು ಬಿಟ್ಟಿದ್ದಾರೆ” ಎಂದು ನಾಗರಾಜ್ ಎಂಬವರು ದೂರು ನೀಡಿದ್ದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

“ಆರೋಪಿಗಳು ನಮ್ಮ ಶ್ರೀ ರೇಣುಕಾ ಯಲ್ಲಮ್ಮ ಮತ್ತು ಶ್ರೀ ಶಾಂತಿ ಮುನೇಶ್ವರ ದೇವಸ್ಥಾನಗಳನ್ನು ಧ್ವಂಸ ಮಾಡಿದ್ದಾರೆ. ದೇವರ ಕಲ್ಲಿನ ಮೂರ್ತಿಗಳು, ದೇವರ ಅಲಂಕಾರದ ಸುಮಾರು 50 ಗ್ರಾಂ ಬಂಗಾರದ ಒಡವೆಗಳು ಮತ್ತು ಮನೆಯಲ್ಲಿದ್ದ ಸಾಮಾಗ್ರಿಗಳನ್ನು ತೆಗೆದುಕೊಂಡು ಹೋಗಿದ್ದಾರೆ. ನಾವು ಪೊಲೀಸರಿಗೆ ಮಾಹಿತಿ ನೀಡಿ ರಕ್ಷಣೆ ಕೊಡುವಂತೆ ಕೋರಿದ್ದೆವು. ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ಗೂಂಡಾಗಳು ಮನೆಯ ಬೀರುವಿನಲ್ಲಿದ್ದ ಒಡವೆಗಳನ್ನು ದರೋಡೆ ಮಾಡಿದ್ದರು. ಮನೆಯ ಆವರಣದಲ್ಲಿ ನಿಂತಿದ್ದ ಮಾರುತಿ ಕಾರು ಹಾಗೂ ಡಿಯೋ ಬೈಕನ್ನು ಹಾನಿಗೊಳಿಸಿದ್ದರು. ಈ ದೃಶ್ಯಗಳನ್ನು ಸೆರೆ ಹಿಡಿಯಲು ಮುಂದಾದ ನನ್ನ ಮೊಬೈಲ್ ಫೋನ್ ಕಿತ್ತುಕೊಂಡಿದ್ದಾರೆ” ಎಂದು ನಾಗರಾಜ್ ದೂರಿನಲ್ಲಿ ಹೇಳಿದ್ದಾರೆ.

“ಮನೆಯ ಬಳಿಯಿದ್ದ ತೆಂಗು ಮತ್ತು ಹಲಸಿನ ಮರಗಳನ್ನು ಆರೋಪಿಗಳು ನೆಲಕ್ಕೆ ಕೆಡವಿದ್ದಾರೆ. ಜೋಳದ ಸಸಿಗಳನ್ನು ಹಾನಿಗೊಳಿಸಿದ್ದಾರೆ. ನಾವು ಸಾಕಿದ್ದ ನೂರಾರು ಕೋಳಿಗಳನ್ನು ದರೋಡೆ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆರೋಪಿಗಳ ವಿರುದ್ದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3 (2) (V), 3(1)(g) ಮತ್ತು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 115 (2), 138, 190,304 (2), 310 (2), 324 (5),331 (4),351 (3), 352 ರ ಅಡಿ ಪ್ರಕರಣ ದಾಖಲಿಸಲಾಗಿದೆ.

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿರುವ ದೂರುದಾರ ನಾಗರಾಜ್, “ಜಮೀನು ಬಿಟ್ಟುಕೊಡುವಂತೆ ನಮಗೆ ಈ ಹಿಂದೆಯೂ ಬೆದರಿಕೆ ಹಾಕಿದ್ದರು. ಬುಧವಾರ ರಾತ್ರಿ ನಾವು ಮನೆಯಲ್ಲಿದ್ದ ವೇಳೆ ನೂರಾರು ಜನರು ಒಂದೇ ಸಮನೆ ಮನೆಯೊಳಗೆ ನುಗ್ಗಿ ನನ್ನ ತಮ್ಮ ಯಲ್ಲಪ್ಪ, ಸಹೋದರ ಸಂಬಂಧಿ ವರುಣ್ ಮತ್ತು ಅಕ್ಕನ ಮಗನಾದ ಇಂದ್ರಜಿತ್ ಮೇಲೆ ಹಲ್ಲೆಗೆ ಮುಂದಾದರು. ಅದನ್ನು ನೋಡಿ ನನ್ನ ಅಪ್ಪ ಆಘಾತಕ್ಕೊಳಗಾದರು. ಅವರನ್ನು ನಮ್ಮದೇ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ಯಲು ನಾನು ಮುಂದಾದಾಗ ನನ್ನನ್ನು ಆಟೋದಿಂದ ಹೊರಗೆಳೆಯಲು ಯತ್ನಿಸಿದರು. ನಾನು ಅಪ್ಪನನ್ನು ಬಿಟ್ಟು ಬರಲಿಲ್ಲ” ಎಂದಿದ್ದಾರೆ.

ಮುಂದುವರಿದು, “ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ. ನನ್ನನ್ನು ಹುಡುಕುತ್ತಿದ್ದಾರಂತೆ. ನನಗೆ ಭಯ ಆಗಿದೆ ಸರ್. ನಮ್ಮ ರಕ್ಷಣೆಗೆ ಯಾರೂ ಇಲ್ಲ. ಪೊಲೀಸರಿಗೆ ದೂರು ಕೊಟ್ಟಿದ್ದೇವೆ. ಆದರೆ, ಯಾವಾಗ ಏನಾಗುತ್ತದೆ ಎಂಬ ಭಯದಲ್ಲಿ ಇಡೀ ಕುಟುಂಬ ಇದೆ. ನಮ್ಮ ಜಮೀನಿನ ಸುತ್ತ ಪ್ರೆಸ್ಟೀಜ್ ಮತ್ತು ಡಿಎಲ್‌ಎಫ್‌ ಸಂಸ್ಥೆಗಳ ಅಪಾರ್ಟ್‌ಮೆಂಟ್‌ಗಳು ಇವೆ. ದಯವಿಟ್ಟು ನಮಗೆ ರಕ್ಷಣೆ ಕೊಡಿ ಸರ್” ಎಂದು ಅಲವತ್ತುಕೊಂಡಿದ್ದಾರೆ.

‘ಪಬ್ಲಿಕ್ ಟಿವಿ’ ವರದಿಗಾರ ಮಂಜುನಾಥನಿಂದ ದೌರ್ಜನ್ಯ; ಹಲ್ಲೆ ಹಿಂದಿನ ಕಾರಣ ಬಿಚ್ಚಿಟ್ಟ ದಲಿತ ಪತ್ರಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...