Homeಕರ್ನಾಟಕಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

ಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

- Advertisement -
- Advertisement -

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯ ಬೇಗೂರಿನಲ್ಲಿ ನೂರಾರು ಗೂಂಡಾಗಳು ಕಳೆದ ಬುಧವಾರ (ಮೇ.28) ತಡರಾತ್ರಿ ದಲಿತರ ಮನೆ ಮತ್ತು ದೇವಸ್ಥಾನಗಳನ್ನು ಧ್ವಂಸ ಮಾಡಿರುವ ಆರೋಪ ಕೇಳಿ ಬಂದಿದೆ.

ಬೇಗೂರು ಗ್ರಾಮದ ಸರ್ವೆ ನಂಬರ್ 352ರ ಒಂದು ಎಕರೆ ಜಮೀನಿನಲ್ಲಿ ಮುನಿಸ್ವಾಮಿ ಎಂಬವರು 1970ರಿಂದ ಉಳುಮೆ ಮಾಡಿಕೊಂಡು, ಅದೇ ಭೂಮಿಯಲ್ಲಿ ಮನೆ ಕಟ್ಟಿಕೊಂಡು ವಾಸವಿದ್ದರು.

ಜಮೀನಿನ ಮುಂಭಾಗದಲ್ಲಿರುವ ಪ್ರೆಸ್ಟೀಜ್ ಕಂಪನಿ ಈ ಭೂಮಿಯನ್ನು ತನ್ನ ವಶಕ್ಕೆ ಪಡೆಯಲು ಸಾಕಷ್ಟು ಬಾರಿ ಪ್ರಯತ್ನಿಸಿತ್ತು. ಬುಧವಾರ ತಡರಾತ್ರಿ ನೂರಾರು ಗೂಂಡಾಗಳು ಏಕಾಏಕಿ ಜಮೀನಿಗೆ ನುಗ್ಗಿ, ಬುಲ್ಡೋಝರ್ ಮೂಲಕ ಮುನಿಸ್ವಾಮಿ ಅವರ ಕುಟುಂಬ ವಾಸವಿದ್ದ ಮನೆ ಮತ್ತು ಪಕ್ಕದ ದೇವಸ್ಥಾನಗಳನ್ನು ನೆಲಸಮಗೊಳಿಸಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.

ಈ ಸಂಬಂಧ 500ರಕ್ಕಿಂತ ಹೆಚ್ಚು ಜನರ ಮೇಲೆ ಪ್ರಕರಣ ದಾಖಲಾಗಿದೆ. ಎಫ್‌ಐಆರ್ ಪ್ರತಿ ನಾನುಗೌರಿ.ಕಾಂಗೆ ಲಭ್ಯವಾಗಿದ್ದು, ಅದರಲ್ಲಿ ರವಿಚಂದ್ರನ್ ಹೆಚ್‌.ಆರ್ ಎಂಬವರನ್ನು ಮೊದಲನೇ, ನಯೀಮ್ ನೂರ್ ಎಂಬವರನ್ನು ಎರಡನೇ ಮತ್ತು ಸುಮಾರು 400 ರಿಂದ 500 ಇತರರನ್ನು ಮೂರನೇ ಆರೋಪಿಗಳನ್ನಾಗಿ ಗುರುತಿಸಲಾಗಿದೆ.

“ಬುಧವಾರ ರಾತ್ರಿ 12.30ರ ಸುಮಾರಿಗೆ ರವಿಚಂದ್ರನ್ ನಯೀಮ್ ಮತ್ತು ಇತರರು ನಮ್ಮ ಜಮೀನಿಗೆ ಅತಿಕ್ರಮಣ ಪ್ರವೇಶ ಮಾಡಿ, ಬುಲ್ಡೋಝರ್ ಮತ್ತು ಇತರ ಯಂತ್ರಗಳ ಮೂಲಕ ಮನೆ ಹಾಗೂ ಎರಡು ದೇವಸ್ಥಾನಗಳನ್ನು ಧ್ವಂಸಗೊಳಿಸಿದ್ದಾರೆ. ಈ ವೇಳೆ ತಂದೆ, ತಮ್ಮ ಯಲ್ಲಪ್ಪ, ಸಹೋದರ ಸಂಬಂಧಿ ವರುಣ್ ಮತ್ತು ಅಕ್ಕನ ಮಗನಾದ ಇಂದ್ರಜಿತ್ ಮೇಲೆ ಹಲ್ಲೆಗೆ ಮುಂದಾಗಿದ್ದರು. ವರುಣ್ ಅವರನ್ನು ಕಾರಿನಲ್ಲಿ ಅಪಹರಣ ಮಾಡಿಕೊಂಡು ಹೋಗಿ ಕೆಲ ಸಮಯದ ನಂತರ ವಾಪಸ್ ತಂದು ಬಿಟ್ಟಿದ್ದಾರೆ” ಎಂದು ನಾಗರಾಜ್ ಎಂಬವರು ದೂರು ನೀಡಿದ್ದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

“ಆರೋಪಿಗಳು ನಮ್ಮ ಶ್ರೀ ರೇಣುಕಾ ಯಲ್ಲಮ್ಮ ಮತ್ತು ಶ್ರೀ ಶಾಂತಿ ಮುನೇಶ್ವರ ದೇವಸ್ಥಾನಗಳನ್ನು ಧ್ವಂಸ ಮಾಡಿದ್ದಾರೆ. ದೇವರ ಕಲ್ಲಿನ ಮೂರ್ತಿಗಳು, ದೇವರ ಅಲಂಕಾರದ ಸುಮಾರು 50 ಗ್ರಾಂ ಬಂಗಾರದ ಒಡವೆಗಳು ಮತ್ತು ಮನೆಯಲ್ಲಿದ್ದ ಸಾಮಾಗ್ರಿಗಳನ್ನು ತೆಗೆದುಕೊಂಡು ಹೋಗಿದ್ದಾರೆ. ನಾವು ಪೊಲೀಸರಿಗೆ ಮಾಹಿತಿ ನೀಡಿ ರಕ್ಷಣೆ ಕೊಡುವಂತೆ ಕೋರಿದ್ದೆವು. ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ಗೂಂಡಾಗಳು ಮನೆಯ ಬೀರುವಿನಲ್ಲಿದ್ದ ಒಡವೆಗಳನ್ನು ದರೋಡೆ ಮಾಡಿದ್ದರು. ಮನೆಯ ಆವರಣದಲ್ಲಿ ನಿಂತಿದ್ದ ಮಾರುತಿ ಕಾರು ಹಾಗೂ ಡಿಯೋ ಬೈಕನ್ನು ಹಾನಿಗೊಳಿಸಿದ್ದರು. ಈ ದೃಶ್ಯಗಳನ್ನು ಸೆರೆ ಹಿಡಿಯಲು ಮುಂದಾದ ನನ್ನ ಮೊಬೈಲ್ ಫೋನ್ ಕಿತ್ತುಕೊಂಡಿದ್ದಾರೆ” ಎಂದು ನಾಗರಾಜ್ ದೂರಿನಲ್ಲಿ ಹೇಳಿದ್ದಾರೆ.

“ಮನೆಯ ಬಳಿಯಿದ್ದ ತೆಂಗು ಮತ್ತು ಹಲಸಿನ ಮರಗಳನ್ನು ಆರೋಪಿಗಳು ನೆಲಕ್ಕೆ ಕೆಡವಿದ್ದಾರೆ. ಜೋಳದ ಸಸಿಗಳನ್ನು ಹಾನಿಗೊಳಿಸಿದ್ದಾರೆ. ನಾವು ಸಾಕಿದ್ದ ನೂರಾರು ಕೋಳಿಗಳನ್ನು ದರೋಡೆ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆರೋಪಿಗಳ ವಿರುದ್ದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3 (2) (V), 3(1)(g) ಮತ್ತು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 115 (2), 138, 190,304 (2), 310 (2), 324 (5),331 (4),351 (3), 352 ರ ಅಡಿ ಪ್ರಕರಣ ದಾಖಲಿಸಲಾಗಿದೆ.

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿರುವ ದೂರುದಾರ ನಾಗರಾಜ್, “ಜಮೀನು ಬಿಟ್ಟುಕೊಡುವಂತೆ ನಮಗೆ ಈ ಹಿಂದೆಯೂ ಬೆದರಿಕೆ ಹಾಕಿದ್ದರು. ಬುಧವಾರ ರಾತ್ರಿ ನಾವು ಮನೆಯಲ್ಲಿದ್ದ ವೇಳೆ ನೂರಾರು ಜನರು ಒಂದೇ ಸಮನೆ ಮನೆಯೊಳಗೆ ನುಗ್ಗಿ ನನ್ನ ತಮ್ಮ ಯಲ್ಲಪ್ಪ, ಸಹೋದರ ಸಂಬಂಧಿ ವರುಣ್ ಮತ್ತು ಅಕ್ಕನ ಮಗನಾದ ಇಂದ್ರಜಿತ್ ಮೇಲೆ ಹಲ್ಲೆಗೆ ಮುಂದಾದರು. ಅದನ್ನು ನೋಡಿ ನನ್ನ ಅಪ್ಪ ಆಘಾತಕ್ಕೊಳಗಾದರು. ಅವರನ್ನು ನಮ್ಮದೇ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ಯಲು ನಾನು ಮುಂದಾದಾಗ ನನ್ನನ್ನು ಆಟೋದಿಂದ ಹೊರಗೆಳೆಯಲು ಯತ್ನಿಸಿದರು. ನಾನು ಅಪ್ಪನನ್ನು ಬಿಟ್ಟು ಬರಲಿಲ್ಲ” ಎಂದಿದ್ದಾರೆ.

ಮುಂದುವರಿದು, “ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ. ನನ್ನನ್ನು ಹುಡುಕುತ್ತಿದ್ದಾರಂತೆ. ನನಗೆ ಭಯ ಆಗಿದೆ ಸರ್. ನಮ್ಮ ರಕ್ಷಣೆಗೆ ಯಾರೂ ಇಲ್ಲ. ಪೊಲೀಸರಿಗೆ ದೂರು ಕೊಟ್ಟಿದ್ದೇವೆ. ಆದರೆ, ಯಾವಾಗ ಏನಾಗುತ್ತದೆ ಎಂಬ ಭಯದಲ್ಲಿ ಇಡೀ ಕುಟುಂಬ ಇದೆ. ನಮ್ಮ ಜಮೀನಿನ ಸುತ್ತ ಪ್ರೆಸ್ಟೀಜ್ ಮತ್ತು ಡಿಎಲ್‌ಎಫ್‌ ಸಂಸ್ಥೆಗಳ ಅಪಾರ್ಟ್‌ಮೆಂಟ್‌ಗಳು ಇವೆ. ದಯವಿಟ್ಟು ನಮಗೆ ರಕ್ಷಣೆ ಕೊಡಿ ಸರ್” ಎಂದು ಅಲವತ್ತುಕೊಂಡಿದ್ದಾರೆ.

‘ಪಬ್ಲಿಕ್ ಟಿವಿ’ ವರದಿಗಾರ ಮಂಜುನಾಥನಿಂದ ದೌರ್ಜನ್ಯ; ಹಲ್ಲೆ ಹಿಂದಿನ ಕಾರಣ ಬಿಚ್ಚಿಟ್ಟ ದಲಿತ ಪತ್ರಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...