Homeಕರ್ನಾಟಕಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ..

ಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ..

- Advertisement -
- Advertisement -

ಕಳೆದೊಂದು ತಿಂಗಳಿಂದ ಸದ್ದು ಮಾಡುತ್ತಿರುವ ಐ ಮಾನಿಟರ್ ಅಡ್ವೈಸರಿ ಹಗರಣದಲ್ಲಿ ಸಿಟ್ ತನಿಖೆ ನಡೆಯುತ್ತಿದ್ದು ಪ್ರತಿ ದಿನವೂ ಹಲವು ಆರೋಪಿಗಳು ಬಲೆಗೆ ಬೀಳುತ್ತಿದ್ದಾರೆ. ಇದುವರೆಗೂ ರಾಜಕಾರಣಿಗಳು, ಆಡಳಿತ ಮಂಡಳಿ ಸದಸ್ಯರ ಹೆಸರುಗಳು ಮಾತ್ರ ಕೇಳಿ ಬರುತ್ತಿದ್ದವು. ಆದರೀಗ ಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ ಆಗಿದ್ದು ಮಾಲೀಕ ಮನ್ಸೂರ್ ಖಾನ್‍ನಿಂದ ಲಂಚ ಸ್ವೀಕಾರ ಆರೋಪದಡಿ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್ ಶಂಕರ್ ರವರನ್ನು ಬಂಧಿಸಲಾಗಿದೆ.

1.5 ಕೋಟಿ ಲಂಚ ಪಡೆದ ಆರೋಪಿ ಜಿಲ್ಲಾಧಿಕಾರಿ ವಿಜಯ್ ಶಂಕರ್

2017ರಿಂದಲೇ ಕಂಪನಿಯು ಅವ್ಯವಹಾರಕ್ಕೆ ಕೈ ಹಾಕಿತ್ತು ಮತ್ತು ಜನರಿಗೆ ವಂಚಿಸಲು ಸಿದ್ದತೆ ನಡೆಸಿತ್ತು. ಇದಕ್ಕೆ ಸಂಬಂಧಿಸಿದಂತೆ ಹಲವು ದೂರುಗಳು ದಾಖಲಾದ ಪರಿಣಾಮ ತನಿಖೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿತ್ತು. ಬೇಕಂತಲೇ ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರು ತನಿಖೆ ನಡೆಸದೆ ಅದನ್ನು ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಎಲ್.ಸಿ ನಾಗರಾಜ್‍ರವರಿಗೆ ವರ್ಗಾಹಿಸಿದ್ದರು. ಇನ್ನು ಇಂತಹ ವ್ಯವಹಾರ ಕುದುರಿಸುವುದರಲ್ಲಿ ನಿಷ್ಣಾತನಾದ ನಾಗರಾಜ್ ತನಿಖೆ ನಡೆಸುವ ನೆಪದಲ್ಲಿ ಮನ್ಸೂರ್ ಖಾನ್‍ನಿಂದ 4.5 ಕೋಟಿ ಲಂಚ ಪಡೆದು ಸರ್ಕಾರಕ್ಕೆ ಸುಳ್ಳು ವರದಿ ಸಲ್ಲಿಸಿದ್ದರು ಎನ್ನಲಾಗಿದೆ.

4.5 ಕೋಟಿ ಲಂಚ ಪಡೆದ ಆರೋಪಿ ಉಪವಿಭಾಗಾಧಿಕಾರಿ ನಾಗರಾಜ್

ಈ ವಿಚಾರವಾಗಿ ಜುಲೈ 5 ರಂದು ಎಲ್.ಸಿ ನಾಗರಾಜ್‍ರನ್ನು ವಿಚಾರಣೆಗೊಳಪಡಿಸಿದಾಗ ಅನುಮಾನಗಳು ದಟ್ಟವಾದ ಹಿನ್ನೆಲೆಯಲ್ಲಿ ಅವರನ್ನು ಮತ್ತು ಅವರ ಸಹಚರ ಗ್ರಾಮಲೆಕ್ಕಿಗ ಮಂಜುನಾಥ್‍ನನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದರು. ಅವರನ್ನು ಮತ್ತಷ್ಟು ವಿಚಾರಣೆ ನಡೆಸಿದಾಗ ಈ ವರ್ಷದ ಏಪ್ರಿಲ್ 6 ರಂದು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರಿಗೆ ಮನ್ಸೂರ್ ಖಾನ್ 1.5 ಕೋಟಿ ಲಂಚ ನೀಡಿದ್ದರು. ನಂತರ ಏಪ್ರಿಲ್ 8ರಂದು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರು ವಿಚಾರಣೆಯ ಅಗತ್ಯವಿಲ್ಲ ಎಂದು ಷರಾ ಬರೆದು ಸಹಿ ಹಾಕಿದ್ದರು.

ಈ ಆಧಾರದಲ್ಲಿ ಸೋಮವಾರ ಎಸ್‍ಐಟಿ ಅಧಿಕಾರಿಗಳ ನೋಟಿಸ್‍ನಂತೆ ವಿಚಾರಣೆಗೆ ವಿಜಯ್ ಶಂಕರ್‍ರವರು ಹಾಜರಾದಾಗ ಅವರನ್ನು ಸಿಟ್ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ಸದ್ಯಕ್ಕೆ ಉಪ ವಿಭಾಗಾಧಿಕಾರಿ ಎಲ್.ಸಿ ನಾಗರಾಜ್ ರವರನ್ನು ಎಸಿಬಿ ದೂರು ದಾಖಲಿಸಿ ವಿಚಾರಣೆ ನಡೆಸುತ್ತಿದೆ.

ಎಸ್‍ಐಟಿ ವಿಭಾಗದ ಮುಖ್ಯಸ್ಥ ರವಿಕಾಂತೇಗೌಡ ಮತ್ತು ಅಪರಾಧ ವಿಭಾಗದ ಡಿಸಿಪಿ ಗಿರೀಶ್ ರವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಮತ್ತಷ್ಟು ಅಧಿಕಾರಿಗಳು ಭಾಗಿಯಾಗಿರುವ ಶಂಕೆಯಿದ್ದು ತೀವ್ರ ವಿಚಾರಣೆ ಜಾರಿಯಲ್ಲಿದೆ.

ಎಸ್.ಐ.ಟಿ ಮುಖ್ಯಸ್ಥ ರವಿಕಾಂತೇಗೌಡ

ಲಂಚ ಪಡೆದ 1.5 ಕೋಟಿ ಹಣ ಎಲ್ಲಿದೆ ಗೊತ್ತೆ: ಇನ್ನು ವಿಜಯ್ ಶಂಕರ್ ಯಾರಿಗೂ ಅನುಮಾನ ಬರಬಾರದೆಂದು ಲಂಚದ ಹಣವನ್ನು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ ನೀಡಿ ತನ್ನ ಮಡದಿ ಮತ್ತು ಮಕ್ಕಳ ಹೆಸರಿನಲ್ಲಿ ಫ್ಲಾಟ್ ಖರೀದಿಸಲು ಪ್ರಯತ್ನಿಸಿದ್ದರು ಎಂದು ಹೇಳಲಾಗುತ್ತಿದೆ. ಈ ಕುರಿತು ಆ ರಿಯಲ್ ಎಸ್ಟೇಟ್ ಉದ್ಯಮಿಯನ್ನು ವಿಚಾರಣೆ ನಡೆಸುತ್ತಿರುವ ಎಸ್.ಐ.ಟಿ ಅಧಿಕಾರಿಗಳು ಸಂಜೆ ವೇಳೆಗೆ ಸಂಪೂರ್ಣ ಚಿತ್ರಣ ನೀಡಲಿದ್ದಾರೆ.

ಇವರಿಗೆ ಶಿಕ್ಷೆ ಏನು?
ಈಗಾಗಲೇ ಎಲ್.ಸಿ ನಾಗರಾಜ್ ಬಂಧನವಾಗಿ ನಾಲ್ಕು ದಿನಗಳಾದ್ದರಿಂದ ಅವರನ್ನು ಅಮಾನತ್ತು ಮಾಡಬಹುದಾಗಿದೆ. ಈ ಕುರಿತು ಕ್ರಮಗಳು ಜಾರಿಯಲ್ಲಿವೆ ಎಂಬ ಸುದ್ದಿ ಕೇಳಿಬಂದಿದೆ. ಇನ್ನು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರ ಬಗ್ಗೆ ನಾಳೆ ತೀರ್ಮಾನ ತೆಗೆದುಕೊಳ್ಳಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಜನರ ಕಥೆ?: ಇನ್ನು ಈ ಹಗರಣದಲ್ಲಿ ನೇರ ಬಲಿಪಶುಗಳಾಗಿರುವ ಸಾವಿರಾರು ಜನ ಇದನ್ನು ಮೂಕದೃಷ್ಟಿಯಿಂದ ನೋಡುತ್ತಿದ್ದಾರೆ. ಒಂದಷ್ಟು ಚಿನ್ನಾಭರಣ, ಒಂದಷ್ಟು ಹಣ ಅಲ್ಲಲ್ಲಿ ಜಪ್ತಿಯಾಗುತ್ತಿರುವುದು ಮತ್ತು ಮನ್ಸೂರ್ ಖಾನ್ ತನ್ನ ವಿಡಿಯೋದಲ್ಲಿ “ನನ್ನ ಆಸ್ತಿ ಮಾರಿ ನಿಮ್ಮ ಹಣ ವಾಪಸ್ ಕೊಡುತ್ತೇನೆ” ಎಂದಿರುವುದು ಜನರಿಗೆ ಒಂದಷ್ಟು ಭರವಸೆ ಮೂಡಿಸಿದೆ.

ಆದರೆ ಈ ಭ್ರಷ್ಟ ಅಧಿಕಾರಿಗಳು ಅಂದೇ ಸರಿಯಾದ ತನಿಖೆ ನಡೆಸಿ ವರದಿ ಸಲ್ಲಿಸಿದ್ದರೆ ಒಂದಷ್ಟು ಜನರಿಗೆ ಮೋಸವಾಗದಂತೆ ತಡೆಗಟ್ಟಬಹುದಾಗಿತ್ತು. ಮತ್ತಷ್ಟು ಜನರು ಈ ಐಎಂಎ ನಂಬಿ ಹಣ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...