Homeಕರ್ನಾಟಕಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ..

ಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ..

- Advertisement -
- Advertisement -

ಕಳೆದೊಂದು ತಿಂಗಳಿಂದ ಸದ್ದು ಮಾಡುತ್ತಿರುವ ಐ ಮಾನಿಟರ್ ಅಡ್ವೈಸರಿ ಹಗರಣದಲ್ಲಿ ಸಿಟ್ ತನಿಖೆ ನಡೆಯುತ್ತಿದ್ದು ಪ್ರತಿ ದಿನವೂ ಹಲವು ಆರೋಪಿಗಳು ಬಲೆಗೆ ಬೀಳುತ್ತಿದ್ದಾರೆ. ಇದುವರೆಗೂ ರಾಜಕಾರಣಿಗಳು, ಆಡಳಿತ ಮಂಡಳಿ ಸದಸ್ಯರ ಹೆಸರುಗಳು ಮಾತ್ರ ಕೇಳಿ ಬರುತ್ತಿದ್ದವು. ಆದರೀಗ ಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ ಆಗಿದ್ದು ಮಾಲೀಕ ಮನ್ಸೂರ್ ಖಾನ್‍ನಿಂದ ಲಂಚ ಸ್ವೀಕಾರ ಆರೋಪದಡಿ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್ ಶಂಕರ್ ರವರನ್ನು ಬಂಧಿಸಲಾಗಿದೆ.

1.5 ಕೋಟಿ ಲಂಚ ಪಡೆದ ಆರೋಪಿ ಜಿಲ್ಲಾಧಿಕಾರಿ ವಿಜಯ್ ಶಂಕರ್

2017ರಿಂದಲೇ ಕಂಪನಿಯು ಅವ್ಯವಹಾರಕ್ಕೆ ಕೈ ಹಾಕಿತ್ತು ಮತ್ತು ಜನರಿಗೆ ವಂಚಿಸಲು ಸಿದ್ದತೆ ನಡೆಸಿತ್ತು. ಇದಕ್ಕೆ ಸಂಬಂಧಿಸಿದಂತೆ ಹಲವು ದೂರುಗಳು ದಾಖಲಾದ ಪರಿಣಾಮ ತನಿಖೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿತ್ತು. ಬೇಕಂತಲೇ ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರು ತನಿಖೆ ನಡೆಸದೆ ಅದನ್ನು ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಎಲ್.ಸಿ ನಾಗರಾಜ್‍ರವರಿಗೆ ವರ್ಗಾಹಿಸಿದ್ದರು. ಇನ್ನು ಇಂತಹ ವ್ಯವಹಾರ ಕುದುರಿಸುವುದರಲ್ಲಿ ನಿಷ್ಣಾತನಾದ ನಾಗರಾಜ್ ತನಿಖೆ ನಡೆಸುವ ನೆಪದಲ್ಲಿ ಮನ್ಸೂರ್ ಖಾನ್‍ನಿಂದ 4.5 ಕೋಟಿ ಲಂಚ ಪಡೆದು ಸರ್ಕಾರಕ್ಕೆ ಸುಳ್ಳು ವರದಿ ಸಲ್ಲಿಸಿದ್ದರು ಎನ್ನಲಾಗಿದೆ.

4.5 ಕೋಟಿ ಲಂಚ ಪಡೆದ ಆರೋಪಿ ಉಪವಿಭಾಗಾಧಿಕಾರಿ ನಾಗರಾಜ್

ಈ ವಿಚಾರವಾಗಿ ಜುಲೈ 5 ರಂದು ಎಲ್.ಸಿ ನಾಗರಾಜ್‍ರನ್ನು ವಿಚಾರಣೆಗೊಳಪಡಿಸಿದಾಗ ಅನುಮಾನಗಳು ದಟ್ಟವಾದ ಹಿನ್ನೆಲೆಯಲ್ಲಿ ಅವರನ್ನು ಮತ್ತು ಅವರ ಸಹಚರ ಗ್ರಾಮಲೆಕ್ಕಿಗ ಮಂಜುನಾಥ್‍ನನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದರು. ಅವರನ್ನು ಮತ್ತಷ್ಟು ವಿಚಾರಣೆ ನಡೆಸಿದಾಗ ಈ ವರ್ಷದ ಏಪ್ರಿಲ್ 6 ರಂದು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರಿಗೆ ಮನ್ಸೂರ್ ಖಾನ್ 1.5 ಕೋಟಿ ಲಂಚ ನೀಡಿದ್ದರು. ನಂತರ ಏಪ್ರಿಲ್ 8ರಂದು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರು ವಿಚಾರಣೆಯ ಅಗತ್ಯವಿಲ್ಲ ಎಂದು ಷರಾ ಬರೆದು ಸಹಿ ಹಾಕಿದ್ದರು.

ಈ ಆಧಾರದಲ್ಲಿ ಸೋಮವಾರ ಎಸ್‍ಐಟಿ ಅಧಿಕಾರಿಗಳ ನೋಟಿಸ್‍ನಂತೆ ವಿಚಾರಣೆಗೆ ವಿಜಯ್ ಶಂಕರ್‍ರವರು ಹಾಜರಾದಾಗ ಅವರನ್ನು ಸಿಟ್ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ಸದ್ಯಕ್ಕೆ ಉಪ ವಿಭಾಗಾಧಿಕಾರಿ ಎಲ್.ಸಿ ನಾಗರಾಜ್ ರವರನ್ನು ಎಸಿಬಿ ದೂರು ದಾಖಲಿಸಿ ವಿಚಾರಣೆ ನಡೆಸುತ್ತಿದೆ.

ಎಸ್‍ಐಟಿ ವಿಭಾಗದ ಮುಖ್ಯಸ್ಥ ರವಿಕಾಂತೇಗೌಡ ಮತ್ತು ಅಪರಾಧ ವಿಭಾಗದ ಡಿಸಿಪಿ ಗಿರೀಶ್ ರವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಮತ್ತಷ್ಟು ಅಧಿಕಾರಿಗಳು ಭಾಗಿಯಾಗಿರುವ ಶಂಕೆಯಿದ್ದು ತೀವ್ರ ವಿಚಾರಣೆ ಜಾರಿಯಲ್ಲಿದೆ.

ಎಸ್.ಐ.ಟಿ ಮುಖ್ಯಸ್ಥ ರವಿಕಾಂತೇಗೌಡ

ಲಂಚ ಪಡೆದ 1.5 ಕೋಟಿ ಹಣ ಎಲ್ಲಿದೆ ಗೊತ್ತೆ: ಇನ್ನು ವಿಜಯ್ ಶಂಕರ್ ಯಾರಿಗೂ ಅನುಮಾನ ಬರಬಾರದೆಂದು ಲಂಚದ ಹಣವನ್ನು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ ನೀಡಿ ತನ್ನ ಮಡದಿ ಮತ್ತು ಮಕ್ಕಳ ಹೆಸರಿನಲ್ಲಿ ಫ್ಲಾಟ್ ಖರೀದಿಸಲು ಪ್ರಯತ್ನಿಸಿದ್ದರು ಎಂದು ಹೇಳಲಾಗುತ್ತಿದೆ. ಈ ಕುರಿತು ಆ ರಿಯಲ್ ಎಸ್ಟೇಟ್ ಉದ್ಯಮಿಯನ್ನು ವಿಚಾರಣೆ ನಡೆಸುತ್ತಿರುವ ಎಸ್.ಐ.ಟಿ ಅಧಿಕಾರಿಗಳು ಸಂಜೆ ವೇಳೆಗೆ ಸಂಪೂರ್ಣ ಚಿತ್ರಣ ನೀಡಲಿದ್ದಾರೆ.

ಇವರಿಗೆ ಶಿಕ್ಷೆ ಏನು?
ಈಗಾಗಲೇ ಎಲ್.ಸಿ ನಾಗರಾಜ್ ಬಂಧನವಾಗಿ ನಾಲ್ಕು ದಿನಗಳಾದ್ದರಿಂದ ಅವರನ್ನು ಅಮಾನತ್ತು ಮಾಡಬಹುದಾಗಿದೆ. ಈ ಕುರಿತು ಕ್ರಮಗಳು ಜಾರಿಯಲ್ಲಿವೆ ಎಂಬ ಸುದ್ದಿ ಕೇಳಿಬಂದಿದೆ. ಇನ್ನು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರ ಬಗ್ಗೆ ನಾಳೆ ತೀರ್ಮಾನ ತೆಗೆದುಕೊಳ್ಳಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಜನರ ಕಥೆ?: ಇನ್ನು ಈ ಹಗರಣದಲ್ಲಿ ನೇರ ಬಲಿಪಶುಗಳಾಗಿರುವ ಸಾವಿರಾರು ಜನ ಇದನ್ನು ಮೂಕದೃಷ್ಟಿಯಿಂದ ನೋಡುತ್ತಿದ್ದಾರೆ. ಒಂದಷ್ಟು ಚಿನ್ನಾಭರಣ, ಒಂದಷ್ಟು ಹಣ ಅಲ್ಲಲ್ಲಿ ಜಪ್ತಿಯಾಗುತ್ತಿರುವುದು ಮತ್ತು ಮನ್ಸೂರ್ ಖಾನ್ ತನ್ನ ವಿಡಿಯೋದಲ್ಲಿ “ನನ್ನ ಆಸ್ತಿ ಮಾರಿ ನಿಮ್ಮ ಹಣ ವಾಪಸ್ ಕೊಡುತ್ತೇನೆ” ಎಂದಿರುವುದು ಜನರಿಗೆ ಒಂದಷ್ಟು ಭರವಸೆ ಮೂಡಿಸಿದೆ.

ಆದರೆ ಈ ಭ್ರಷ್ಟ ಅಧಿಕಾರಿಗಳು ಅಂದೇ ಸರಿಯಾದ ತನಿಖೆ ನಡೆಸಿ ವರದಿ ಸಲ್ಲಿಸಿದ್ದರೆ ಒಂದಷ್ಟು ಜನರಿಗೆ ಮೋಸವಾಗದಂತೆ ತಡೆಗಟ್ಟಬಹುದಾಗಿತ್ತು. ಮತ್ತಷ್ಟು ಜನರು ಈ ಐಎಂಎ ನಂಬಿ ಹಣ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...