Homeಕರ್ನಾಟಕಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ..

ಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ..

- Advertisement -
- Advertisement -

ಕಳೆದೊಂದು ತಿಂಗಳಿಂದ ಸದ್ದು ಮಾಡುತ್ತಿರುವ ಐ ಮಾನಿಟರ್ ಅಡ್ವೈಸರಿ ಹಗರಣದಲ್ಲಿ ಸಿಟ್ ತನಿಖೆ ನಡೆಯುತ್ತಿದ್ದು ಪ್ರತಿ ದಿನವೂ ಹಲವು ಆರೋಪಿಗಳು ಬಲೆಗೆ ಬೀಳುತ್ತಿದ್ದಾರೆ. ಇದುವರೆಗೂ ರಾಜಕಾರಣಿಗಳು, ಆಡಳಿತ ಮಂಡಳಿ ಸದಸ್ಯರ ಹೆಸರುಗಳು ಮಾತ್ರ ಕೇಳಿ ಬರುತ್ತಿದ್ದವು. ಆದರೀಗ ಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ ಆಗಿದ್ದು ಮಾಲೀಕ ಮನ್ಸೂರ್ ಖಾನ್‍ನಿಂದ ಲಂಚ ಸ್ವೀಕಾರ ಆರೋಪದಡಿ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್ ಶಂಕರ್ ರವರನ್ನು ಬಂಧಿಸಲಾಗಿದೆ.

1.5 ಕೋಟಿ ಲಂಚ ಪಡೆದ ಆರೋಪಿ ಜಿಲ್ಲಾಧಿಕಾರಿ ವಿಜಯ್ ಶಂಕರ್

2017ರಿಂದಲೇ ಕಂಪನಿಯು ಅವ್ಯವಹಾರಕ್ಕೆ ಕೈ ಹಾಕಿತ್ತು ಮತ್ತು ಜನರಿಗೆ ವಂಚಿಸಲು ಸಿದ್ದತೆ ನಡೆಸಿತ್ತು. ಇದಕ್ಕೆ ಸಂಬಂಧಿಸಿದಂತೆ ಹಲವು ದೂರುಗಳು ದಾಖಲಾದ ಪರಿಣಾಮ ತನಿಖೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿತ್ತು. ಬೇಕಂತಲೇ ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರು ತನಿಖೆ ನಡೆಸದೆ ಅದನ್ನು ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಎಲ್.ಸಿ ನಾಗರಾಜ್‍ರವರಿಗೆ ವರ್ಗಾಹಿಸಿದ್ದರು. ಇನ್ನು ಇಂತಹ ವ್ಯವಹಾರ ಕುದುರಿಸುವುದರಲ್ಲಿ ನಿಷ್ಣಾತನಾದ ನಾಗರಾಜ್ ತನಿಖೆ ನಡೆಸುವ ನೆಪದಲ್ಲಿ ಮನ್ಸೂರ್ ಖಾನ್‍ನಿಂದ 4.5 ಕೋಟಿ ಲಂಚ ಪಡೆದು ಸರ್ಕಾರಕ್ಕೆ ಸುಳ್ಳು ವರದಿ ಸಲ್ಲಿಸಿದ್ದರು ಎನ್ನಲಾಗಿದೆ.

4.5 ಕೋಟಿ ಲಂಚ ಪಡೆದ ಆರೋಪಿ ಉಪವಿಭಾಗಾಧಿಕಾರಿ ನಾಗರಾಜ್

ಈ ವಿಚಾರವಾಗಿ ಜುಲೈ 5 ರಂದು ಎಲ್.ಸಿ ನಾಗರಾಜ್‍ರನ್ನು ವಿಚಾರಣೆಗೊಳಪಡಿಸಿದಾಗ ಅನುಮಾನಗಳು ದಟ್ಟವಾದ ಹಿನ್ನೆಲೆಯಲ್ಲಿ ಅವರನ್ನು ಮತ್ತು ಅವರ ಸಹಚರ ಗ್ರಾಮಲೆಕ್ಕಿಗ ಮಂಜುನಾಥ್‍ನನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದರು. ಅವರನ್ನು ಮತ್ತಷ್ಟು ವಿಚಾರಣೆ ನಡೆಸಿದಾಗ ಈ ವರ್ಷದ ಏಪ್ರಿಲ್ 6 ರಂದು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರಿಗೆ ಮನ್ಸೂರ್ ಖಾನ್ 1.5 ಕೋಟಿ ಲಂಚ ನೀಡಿದ್ದರು. ನಂತರ ಏಪ್ರಿಲ್ 8ರಂದು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರು ವಿಚಾರಣೆಯ ಅಗತ್ಯವಿಲ್ಲ ಎಂದು ಷರಾ ಬರೆದು ಸಹಿ ಹಾಕಿದ್ದರು.

ಈ ಆಧಾರದಲ್ಲಿ ಸೋಮವಾರ ಎಸ್‍ಐಟಿ ಅಧಿಕಾರಿಗಳ ನೋಟಿಸ್‍ನಂತೆ ವಿಚಾರಣೆಗೆ ವಿಜಯ್ ಶಂಕರ್‍ರವರು ಹಾಜರಾದಾಗ ಅವರನ್ನು ಸಿಟ್ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ಸದ್ಯಕ್ಕೆ ಉಪ ವಿಭಾಗಾಧಿಕಾರಿ ಎಲ್.ಸಿ ನಾಗರಾಜ್ ರವರನ್ನು ಎಸಿಬಿ ದೂರು ದಾಖಲಿಸಿ ವಿಚಾರಣೆ ನಡೆಸುತ್ತಿದೆ.

ಎಸ್‍ಐಟಿ ವಿಭಾಗದ ಮುಖ್ಯಸ್ಥ ರವಿಕಾಂತೇಗೌಡ ಮತ್ತು ಅಪರಾಧ ವಿಭಾಗದ ಡಿಸಿಪಿ ಗಿರೀಶ್ ರವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಮತ್ತಷ್ಟು ಅಧಿಕಾರಿಗಳು ಭಾಗಿಯಾಗಿರುವ ಶಂಕೆಯಿದ್ದು ತೀವ್ರ ವಿಚಾರಣೆ ಜಾರಿಯಲ್ಲಿದೆ.

ಎಸ್.ಐ.ಟಿ ಮುಖ್ಯಸ್ಥ ರವಿಕಾಂತೇಗೌಡ

ಲಂಚ ಪಡೆದ 1.5 ಕೋಟಿ ಹಣ ಎಲ್ಲಿದೆ ಗೊತ್ತೆ: ಇನ್ನು ವಿಜಯ್ ಶಂಕರ್ ಯಾರಿಗೂ ಅನುಮಾನ ಬರಬಾರದೆಂದು ಲಂಚದ ಹಣವನ್ನು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ ನೀಡಿ ತನ್ನ ಮಡದಿ ಮತ್ತು ಮಕ್ಕಳ ಹೆಸರಿನಲ್ಲಿ ಫ್ಲಾಟ್ ಖರೀದಿಸಲು ಪ್ರಯತ್ನಿಸಿದ್ದರು ಎಂದು ಹೇಳಲಾಗುತ್ತಿದೆ. ಈ ಕುರಿತು ಆ ರಿಯಲ್ ಎಸ್ಟೇಟ್ ಉದ್ಯಮಿಯನ್ನು ವಿಚಾರಣೆ ನಡೆಸುತ್ತಿರುವ ಎಸ್.ಐ.ಟಿ ಅಧಿಕಾರಿಗಳು ಸಂಜೆ ವೇಳೆಗೆ ಸಂಪೂರ್ಣ ಚಿತ್ರಣ ನೀಡಲಿದ್ದಾರೆ.

ಇವರಿಗೆ ಶಿಕ್ಷೆ ಏನು?
ಈಗಾಗಲೇ ಎಲ್.ಸಿ ನಾಗರಾಜ್ ಬಂಧನವಾಗಿ ನಾಲ್ಕು ದಿನಗಳಾದ್ದರಿಂದ ಅವರನ್ನು ಅಮಾನತ್ತು ಮಾಡಬಹುದಾಗಿದೆ. ಈ ಕುರಿತು ಕ್ರಮಗಳು ಜಾರಿಯಲ್ಲಿವೆ ಎಂಬ ಸುದ್ದಿ ಕೇಳಿಬಂದಿದೆ. ಇನ್ನು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರ ಬಗ್ಗೆ ನಾಳೆ ತೀರ್ಮಾನ ತೆಗೆದುಕೊಳ್ಳಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಜನರ ಕಥೆ?: ಇನ್ನು ಈ ಹಗರಣದಲ್ಲಿ ನೇರ ಬಲಿಪಶುಗಳಾಗಿರುವ ಸಾವಿರಾರು ಜನ ಇದನ್ನು ಮೂಕದೃಷ್ಟಿಯಿಂದ ನೋಡುತ್ತಿದ್ದಾರೆ. ಒಂದಷ್ಟು ಚಿನ್ನಾಭರಣ, ಒಂದಷ್ಟು ಹಣ ಅಲ್ಲಲ್ಲಿ ಜಪ್ತಿಯಾಗುತ್ತಿರುವುದು ಮತ್ತು ಮನ್ಸೂರ್ ಖಾನ್ ತನ್ನ ವಿಡಿಯೋದಲ್ಲಿ “ನನ್ನ ಆಸ್ತಿ ಮಾರಿ ನಿಮ್ಮ ಹಣ ವಾಪಸ್ ಕೊಡುತ್ತೇನೆ” ಎಂದಿರುವುದು ಜನರಿಗೆ ಒಂದಷ್ಟು ಭರವಸೆ ಮೂಡಿಸಿದೆ.

ಆದರೆ ಈ ಭ್ರಷ್ಟ ಅಧಿಕಾರಿಗಳು ಅಂದೇ ಸರಿಯಾದ ತನಿಖೆ ನಡೆಸಿ ವರದಿ ಸಲ್ಲಿಸಿದ್ದರೆ ಒಂದಷ್ಟು ಜನರಿಗೆ ಮೋಸವಾಗದಂತೆ ತಡೆಗಟ್ಟಬಹುದಾಗಿತ್ತು. ಮತ್ತಷ್ಟು ಜನರು ಈ ಐಎಂಎ ನಂಬಿ ಹಣ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ಸಹಮತ: ಶರಣಾಗತಿಗೆ ನಿರಾಕರಿಸಿದ ಅಧ್ಯಕ್ಷ ಪೆಝೇಷ್ಕಿಯಾನ್

ತನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಮಾತುಕತೆಯ ಮಾರ್ಗವನ್ನು ಮುಂದುವರಿಸಲು ಇರಾನ್ ಬದ್ಧವಾಗಿದೆ ಎಂದು ದೇಶದ ಅಧ್ಯಕ್ಷ ಮಸೂದ್ ಪೆಝೇಷ್ಕಿಯಾನ್ ಪುನರುಚ್ಚರಿಸಿದ್ದು, ಯಾವುದೇ ಕಾರಣಕ್ಕೂ ಟೆಹ್ರಾನ್ ಶರಣಾಗತಿಗೆ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ (ಆಗಸ್ಟ್ 7) ತಮ್ಮ...

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...