Homeಕರ್ನಾಟಕಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ..

ಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ..

- Advertisement -
- Advertisement -

ಕಳೆದೊಂದು ತಿಂಗಳಿಂದ ಸದ್ದು ಮಾಡುತ್ತಿರುವ ಐ ಮಾನಿಟರ್ ಅಡ್ವೈಸರಿ ಹಗರಣದಲ್ಲಿ ಸಿಟ್ ತನಿಖೆ ನಡೆಯುತ್ತಿದ್ದು ಪ್ರತಿ ದಿನವೂ ಹಲವು ಆರೋಪಿಗಳು ಬಲೆಗೆ ಬೀಳುತ್ತಿದ್ದಾರೆ. ಇದುವರೆಗೂ ರಾಜಕಾರಣಿಗಳು, ಆಡಳಿತ ಮಂಡಳಿ ಸದಸ್ಯರ ಹೆಸರುಗಳು ಮಾತ್ರ ಕೇಳಿ ಬರುತ್ತಿದ್ದವು. ಆದರೀಗ ಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ ಆಗಿದ್ದು ಮಾಲೀಕ ಮನ್ಸೂರ್ ಖಾನ್‍ನಿಂದ ಲಂಚ ಸ್ವೀಕಾರ ಆರೋಪದಡಿ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್ ಶಂಕರ್ ರವರನ್ನು ಬಂಧಿಸಲಾಗಿದೆ.

1.5 ಕೋಟಿ ಲಂಚ ಪಡೆದ ಆರೋಪಿ ಜಿಲ್ಲಾಧಿಕಾರಿ ವಿಜಯ್ ಶಂಕರ್

2017ರಿಂದಲೇ ಕಂಪನಿಯು ಅವ್ಯವಹಾರಕ್ಕೆ ಕೈ ಹಾಕಿತ್ತು ಮತ್ತು ಜನರಿಗೆ ವಂಚಿಸಲು ಸಿದ್ದತೆ ನಡೆಸಿತ್ತು. ಇದಕ್ಕೆ ಸಂಬಂಧಿಸಿದಂತೆ ಹಲವು ದೂರುಗಳು ದಾಖಲಾದ ಪರಿಣಾಮ ತನಿಖೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿತ್ತು. ಬೇಕಂತಲೇ ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರು ತನಿಖೆ ನಡೆಸದೆ ಅದನ್ನು ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಎಲ್.ಸಿ ನಾಗರಾಜ್‍ರವರಿಗೆ ವರ್ಗಾಹಿಸಿದ್ದರು. ಇನ್ನು ಇಂತಹ ವ್ಯವಹಾರ ಕುದುರಿಸುವುದರಲ್ಲಿ ನಿಷ್ಣಾತನಾದ ನಾಗರಾಜ್ ತನಿಖೆ ನಡೆಸುವ ನೆಪದಲ್ಲಿ ಮನ್ಸೂರ್ ಖಾನ್‍ನಿಂದ 4.5 ಕೋಟಿ ಲಂಚ ಪಡೆದು ಸರ್ಕಾರಕ್ಕೆ ಸುಳ್ಳು ವರದಿ ಸಲ್ಲಿಸಿದ್ದರು ಎನ್ನಲಾಗಿದೆ.

4.5 ಕೋಟಿ ಲಂಚ ಪಡೆದ ಆರೋಪಿ ಉಪವಿಭಾಗಾಧಿಕಾರಿ ನಾಗರಾಜ್

ಈ ವಿಚಾರವಾಗಿ ಜುಲೈ 5 ರಂದು ಎಲ್.ಸಿ ನಾಗರಾಜ್‍ರನ್ನು ವಿಚಾರಣೆಗೊಳಪಡಿಸಿದಾಗ ಅನುಮಾನಗಳು ದಟ್ಟವಾದ ಹಿನ್ನೆಲೆಯಲ್ಲಿ ಅವರನ್ನು ಮತ್ತು ಅವರ ಸಹಚರ ಗ್ರಾಮಲೆಕ್ಕಿಗ ಮಂಜುನಾಥ್‍ನನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದರು. ಅವರನ್ನು ಮತ್ತಷ್ಟು ವಿಚಾರಣೆ ನಡೆಸಿದಾಗ ಈ ವರ್ಷದ ಏಪ್ರಿಲ್ 6 ರಂದು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರಿಗೆ ಮನ್ಸೂರ್ ಖಾನ್ 1.5 ಕೋಟಿ ಲಂಚ ನೀಡಿದ್ದರು. ನಂತರ ಏಪ್ರಿಲ್ 8ರಂದು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರು ವಿಚಾರಣೆಯ ಅಗತ್ಯವಿಲ್ಲ ಎಂದು ಷರಾ ಬರೆದು ಸಹಿ ಹಾಕಿದ್ದರು.

ಈ ಆಧಾರದಲ್ಲಿ ಸೋಮವಾರ ಎಸ್‍ಐಟಿ ಅಧಿಕಾರಿಗಳ ನೋಟಿಸ್‍ನಂತೆ ವಿಚಾರಣೆಗೆ ವಿಜಯ್ ಶಂಕರ್‍ರವರು ಹಾಜರಾದಾಗ ಅವರನ್ನು ಸಿಟ್ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ಸದ್ಯಕ್ಕೆ ಉಪ ವಿಭಾಗಾಧಿಕಾರಿ ಎಲ್.ಸಿ ನಾಗರಾಜ್ ರವರನ್ನು ಎಸಿಬಿ ದೂರು ದಾಖಲಿಸಿ ವಿಚಾರಣೆ ನಡೆಸುತ್ತಿದೆ.

ಎಸ್‍ಐಟಿ ವಿಭಾಗದ ಮುಖ್ಯಸ್ಥ ರವಿಕಾಂತೇಗೌಡ ಮತ್ತು ಅಪರಾಧ ವಿಭಾಗದ ಡಿಸಿಪಿ ಗಿರೀಶ್ ರವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಮತ್ತಷ್ಟು ಅಧಿಕಾರಿಗಳು ಭಾಗಿಯಾಗಿರುವ ಶಂಕೆಯಿದ್ದು ತೀವ್ರ ವಿಚಾರಣೆ ಜಾರಿಯಲ್ಲಿದೆ.

ಎಸ್.ಐ.ಟಿ ಮುಖ್ಯಸ್ಥ ರವಿಕಾಂತೇಗೌಡ

ಲಂಚ ಪಡೆದ 1.5 ಕೋಟಿ ಹಣ ಎಲ್ಲಿದೆ ಗೊತ್ತೆ: ಇನ್ನು ವಿಜಯ್ ಶಂಕರ್ ಯಾರಿಗೂ ಅನುಮಾನ ಬರಬಾರದೆಂದು ಲಂಚದ ಹಣವನ್ನು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ ನೀಡಿ ತನ್ನ ಮಡದಿ ಮತ್ತು ಮಕ್ಕಳ ಹೆಸರಿನಲ್ಲಿ ಫ್ಲಾಟ್ ಖರೀದಿಸಲು ಪ್ರಯತ್ನಿಸಿದ್ದರು ಎಂದು ಹೇಳಲಾಗುತ್ತಿದೆ. ಈ ಕುರಿತು ಆ ರಿಯಲ್ ಎಸ್ಟೇಟ್ ಉದ್ಯಮಿಯನ್ನು ವಿಚಾರಣೆ ನಡೆಸುತ್ತಿರುವ ಎಸ್.ಐ.ಟಿ ಅಧಿಕಾರಿಗಳು ಸಂಜೆ ವೇಳೆಗೆ ಸಂಪೂರ್ಣ ಚಿತ್ರಣ ನೀಡಲಿದ್ದಾರೆ.

ಇವರಿಗೆ ಶಿಕ್ಷೆ ಏನು?
ಈಗಾಗಲೇ ಎಲ್.ಸಿ ನಾಗರಾಜ್ ಬಂಧನವಾಗಿ ನಾಲ್ಕು ದಿನಗಳಾದ್ದರಿಂದ ಅವರನ್ನು ಅಮಾನತ್ತು ಮಾಡಬಹುದಾಗಿದೆ. ಈ ಕುರಿತು ಕ್ರಮಗಳು ಜಾರಿಯಲ್ಲಿವೆ ಎಂಬ ಸುದ್ದಿ ಕೇಳಿಬಂದಿದೆ. ಇನ್ನು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರ ಬಗ್ಗೆ ನಾಳೆ ತೀರ್ಮಾನ ತೆಗೆದುಕೊಳ್ಳಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಜನರ ಕಥೆ?: ಇನ್ನು ಈ ಹಗರಣದಲ್ಲಿ ನೇರ ಬಲಿಪಶುಗಳಾಗಿರುವ ಸಾವಿರಾರು ಜನ ಇದನ್ನು ಮೂಕದೃಷ್ಟಿಯಿಂದ ನೋಡುತ್ತಿದ್ದಾರೆ. ಒಂದಷ್ಟು ಚಿನ್ನಾಭರಣ, ಒಂದಷ್ಟು ಹಣ ಅಲ್ಲಲ್ಲಿ ಜಪ್ತಿಯಾಗುತ್ತಿರುವುದು ಮತ್ತು ಮನ್ಸೂರ್ ಖಾನ್ ತನ್ನ ವಿಡಿಯೋದಲ್ಲಿ “ನನ್ನ ಆಸ್ತಿ ಮಾರಿ ನಿಮ್ಮ ಹಣ ವಾಪಸ್ ಕೊಡುತ್ತೇನೆ” ಎಂದಿರುವುದು ಜನರಿಗೆ ಒಂದಷ್ಟು ಭರವಸೆ ಮೂಡಿಸಿದೆ.

ಆದರೆ ಈ ಭ್ರಷ್ಟ ಅಧಿಕಾರಿಗಳು ಅಂದೇ ಸರಿಯಾದ ತನಿಖೆ ನಡೆಸಿ ವರದಿ ಸಲ್ಲಿಸಿದ್ದರೆ ಒಂದಷ್ಟು ಜನರಿಗೆ ಮೋಸವಾಗದಂತೆ ತಡೆಗಟ್ಟಬಹುದಾಗಿತ್ತು. ಮತ್ತಷ್ಟು ಜನರು ಈ ಐಎಂಎ ನಂಬಿ ಹಣ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...