Homeಕರ್ನಾಟಕಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ..

ಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ..

- Advertisement -
- Advertisement -

ಕಳೆದೊಂದು ತಿಂಗಳಿಂದ ಸದ್ದು ಮಾಡುತ್ತಿರುವ ಐ ಮಾನಿಟರ್ ಅಡ್ವೈಸರಿ ಹಗರಣದಲ್ಲಿ ಸಿಟ್ ತನಿಖೆ ನಡೆಯುತ್ತಿದ್ದು ಪ್ರತಿ ದಿನವೂ ಹಲವು ಆರೋಪಿಗಳು ಬಲೆಗೆ ಬೀಳುತ್ತಿದ್ದಾರೆ. ಇದುವರೆಗೂ ರಾಜಕಾರಣಿಗಳು, ಆಡಳಿತ ಮಂಡಳಿ ಸದಸ್ಯರ ಹೆಸರುಗಳು ಮಾತ್ರ ಕೇಳಿ ಬರುತ್ತಿದ್ದವು. ಆದರೀಗ ಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ ಆಗಿದ್ದು ಮಾಲೀಕ ಮನ್ಸೂರ್ ಖಾನ್‍ನಿಂದ ಲಂಚ ಸ್ವೀಕಾರ ಆರೋಪದಡಿ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್ ಶಂಕರ್ ರವರನ್ನು ಬಂಧಿಸಲಾಗಿದೆ.

1.5 ಕೋಟಿ ಲಂಚ ಪಡೆದ ಆರೋಪಿ ಜಿಲ್ಲಾಧಿಕಾರಿ ವಿಜಯ್ ಶಂಕರ್

2017ರಿಂದಲೇ ಕಂಪನಿಯು ಅವ್ಯವಹಾರಕ್ಕೆ ಕೈ ಹಾಕಿತ್ತು ಮತ್ತು ಜನರಿಗೆ ವಂಚಿಸಲು ಸಿದ್ದತೆ ನಡೆಸಿತ್ತು. ಇದಕ್ಕೆ ಸಂಬಂಧಿಸಿದಂತೆ ಹಲವು ದೂರುಗಳು ದಾಖಲಾದ ಪರಿಣಾಮ ತನಿಖೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿತ್ತು. ಬೇಕಂತಲೇ ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರು ತನಿಖೆ ನಡೆಸದೆ ಅದನ್ನು ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಎಲ್.ಸಿ ನಾಗರಾಜ್‍ರವರಿಗೆ ವರ್ಗಾಹಿಸಿದ್ದರು. ಇನ್ನು ಇಂತಹ ವ್ಯವಹಾರ ಕುದುರಿಸುವುದರಲ್ಲಿ ನಿಷ್ಣಾತನಾದ ನಾಗರಾಜ್ ತನಿಖೆ ನಡೆಸುವ ನೆಪದಲ್ಲಿ ಮನ್ಸೂರ್ ಖಾನ್‍ನಿಂದ 4.5 ಕೋಟಿ ಲಂಚ ಪಡೆದು ಸರ್ಕಾರಕ್ಕೆ ಸುಳ್ಳು ವರದಿ ಸಲ್ಲಿಸಿದ್ದರು ಎನ್ನಲಾಗಿದೆ.

4.5 ಕೋಟಿ ಲಂಚ ಪಡೆದ ಆರೋಪಿ ಉಪವಿಭಾಗಾಧಿಕಾರಿ ನಾಗರಾಜ್

ಈ ವಿಚಾರವಾಗಿ ಜುಲೈ 5 ರಂದು ಎಲ್.ಸಿ ನಾಗರಾಜ್‍ರನ್ನು ವಿಚಾರಣೆಗೊಳಪಡಿಸಿದಾಗ ಅನುಮಾನಗಳು ದಟ್ಟವಾದ ಹಿನ್ನೆಲೆಯಲ್ಲಿ ಅವರನ್ನು ಮತ್ತು ಅವರ ಸಹಚರ ಗ್ರಾಮಲೆಕ್ಕಿಗ ಮಂಜುನಾಥ್‍ನನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದರು. ಅವರನ್ನು ಮತ್ತಷ್ಟು ವಿಚಾರಣೆ ನಡೆಸಿದಾಗ ಈ ವರ್ಷದ ಏಪ್ರಿಲ್ 6 ರಂದು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರಿಗೆ ಮನ್ಸೂರ್ ಖಾನ್ 1.5 ಕೋಟಿ ಲಂಚ ನೀಡಿದ್ದರು. ನಂತರ ಏಪ್ರಿಲ್ 8ರಂದು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರು ವಿಚಾರಣೆಯ ಅಗತ್ಯವಿಲ್ಲ ಎಂದು ಷರಾ ಬರೆದು ಸಹಿ ಹಾಕಿದ್ದರು.

ಈ ಆಧಾರದಲ್ಲಿ ಸೋಮವಾರ ಎಸ್‍ಐಟಿ ಅಧಿಕಾರಿಗಳ ನೋಟಿಸ್‍ನಂತೆ ವಿಚಾರಣೆಗೆ ವಿಜಯ್ ಶಂಕರ್‍ರವರು ಹಾಜರಾದಾಗ ಅವರನ್ನು ಸಿಟ್ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ಸದ್ಯಕ್ಕೆ ಉಪ ವಿಭಾಗಾಧಿಕಾರಿ ಎಲ್.ಸಿ ನಾಗರಾಜ್ ರವರನ್ನು ಎಸಿಬಿ ದೂರು ದಾಖಲಿಸಿ ವಿಚಾರಣೆ ನಡೆಸುತ್ತಿದೆ.

ಎಸ್‍ಐಟಿ ವಿಭಾಗದ ಮುಖ್ಯಸ್ಥ ರವಿಕಾಂತೇಗೌಡ ಮತ್ತು ಅಪರಾಧ ವಿಭಾಗದ ಡಿಸಿಪಿ ಗಿರೀಶ್ ರವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಮತ್ತಷ್ಟು ಅಧಿಕಾರಿಗಳು ಭಾಗಿಯಾಗಿರುವ ಶಂಕೆಯಿದ್ದು ತೀವ್ರ ವಿಚಾರಣೆ ಜಾರಿಯಲ್ಲಿದೆ.

ಎಸ್.ಐ.ಟಿ ಮುಖ್ಯಸ್ಥ ರವಿಕಾಂತೇಗೌಡ

ಲಂಚ ಪಡೆದ 1.5 ಕೋಟಿ ಹಣ ಎಲ್ಲಿದೆ ಗೊತ್ತೆ: ಇನ್ನು ವಿಜಯ್ ಶಂಕರ್ ಯಾರಿಗೂ ಅನುಮಾನ ಬರಬಾರದೆಂದು ಲಂಚದ ಹಣವನ್ನು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ ನೀಡಿ ತನ್ನ ಮಡದಿ ಮತ್ತು ಮಕ್ಕಳ ಹೆಸರಿನಲ್ಲಿ ಫ್ಲಾಟ್ ಖರೀದಿಸಲು ಪ್ರಯತ್ನಿಸಿದ್ದರು ಎಂದು ಹೇಳಲಾಗುತ್ತಿದೆ. ಈ ಕುರಿತು ಆ ರಿಯಲ್ ಎಸ್ಟೇಟ್ ಉದ್ಯಮಿಯನ್ನು ವಿಚಾರಣೆ ನಡೆಸುತ್ತಿರುವ ಎಸ್.ಐ.ಟಿ ಅಧಿಕಾರಿಗಳು ಸಂಜೆ ವೇಳೆಗೆ ಸಂಪೂರ್ಣ ಚಿತ್ರಣ ನೀಡಲಿದ್ದಾರೆ.

ಇವರಿಗೆ ಶಿಕ್ಷೆ ಏನು?
ಈಗಾಗಲೇ ಎಲ್.ಸಿ ನಾಗರಾಜ್ ಬಂಧನವಾಗಿ ನಾಲ್ಕು ದಿನಗಳಾದ್ದರಿಂದ ಅವರನ್ನು ಅಮಾನತ್ತು ಮಾಡಬಹುದಾಗಿದೆ. ಈ ಕುರಿತು ಕ್ರಮಗಳು ಜಾರಿಯಲ್ಲಿವೆ ಎಂಬ ಸುದ್ದಿ ಕೇಳಿಬಂದಿದೆ. ಇನ್ನು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರ ಬಗ್ಗೆ ನಾಳೆ ತೀರ್ಮಾನ ತೆಗೆದುಕೊಳ್ಳಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಜನರ ಕಥೆ?: ಇನ್ನು ಈ ಹಗರಣದಲ್ಲಿ ನೇರ ಬಲಿಪಶುಗಳಾಗಿರುವ ಸಾವಿರಾರು ಜನ ಇದನ್ನು ಮೂಕದೃಷ್ಟಿಯಿಂದ ನೋಡುತ್ತಿದ್ದಾರೆ. ಒಂದಷ್ಟು ಚಿನ್ನಾಭರಣ, ಒಂದಷ್ಟು ಹಣ ಅಲ್ಲಲ್ಲಿ ಜಪ್ತಿಯಾಗುತ್ತಿರುವುದು ಮತ್ತು ಮನ್ಸೂರ್ ಖಾನ್ ತನ್ನ ವಿಡಿಯೋದಲ್ಲಿ “ನನ್ನ ಆಸ್ತಿ ಮಾರಿ ನಿಮ್ಮ ಹಣ ವಾಪಸ್ ಕೊಡುತ್ತೇನೆ” ಎಂದಿರುವುದು ಜನರಿಗೆ ಒಂದಷ್ಟು ಭರವಸೆ ಮೂಡಿಸಿದೆ.

ಆದರೆ ಈ ಭ್ರಷ್ಟ ಅಧಿಕಾರಿಗಳು ಅಂದೇ ಸರಿಯಾದ ತನಿಖೆ ನಡೆಸಿ ವರದಿ ಸಲ್ಲಿಸಿದ್ದರೆ ಒಂದಷ್ಟು ಜನರಿಗೆ ಮೋಸವಾಗದಂತೆ ತಡೆಗಟ್ಟಬಹುದಾಗಿತ್ತು. ಮತ್ತಷ್ಟು ಜನರು ಈ ಐಎಂಎ ನಂಬಿ ಹಣ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...