Homeಕರ್ನಾಟಕಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ..

ಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ..

- Advertisement -
- Advertisement -

ಕಳೆದೊಂದು ತಿಂಗಳಿಂದ ಸದ್ದು ಮಾಡುತ್ತಿರುವ ಐ ಮಾನಿಟರ್ ಅಡ್ವೈಸರಿ ಹಗರಣದಲ್ಲಿ ಸಿಟ್ ತನಿಖೆ ನಡೆಯುತ್ತಿದ್ದು ಪ್ರತಿ ದಿನವೂ ಹಲವು ಆರೋಪಿಗಳು ಬಲೆಗೆ ಬೀಳುತ್ತಿದ್ದಾರೆ. ಇದುವರೆಗೂ ರಾಜಕಾರಣಿಗಳು, ಆಡಳಿತ ಮಂಡಳಿ ಸದಸ್ಯರ ಹೆಸರುಗಳು ಮಾತ್ರ ಕೇಳಿ ಬರುತ್ತಿದ್ದವು. ಆದರೀಗ ಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ ಆಗಿದ್ದು ಮಾಲೀಕ ಮನ್ಸೂರ್ ಖಾನ್‍ನಿಂದ ಲಂಚ ಸ್ವೀಕಾರ ಆರೋಪದಡಿ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್ ಶಂಕರ್ ರವರನ್ನು ಬಂಧಿಸಲಾಗಿದೆ.

1.5 ಕೋಟಿ ಲಂಚ ಪಡೆದ ಆರೋಪಿ ಜಿಲ್ಲಾಧಿಕಾರಿ ವಿಜಯ್ ಶಂಕರ್

2017ರಿಂದಲೇ ಕಂಪನಿಯು ಅವ್ಯವಹಾರಕ್ಕೆ ಕೈ ಹಾಕಿತ್ತು ಮತ್ತು ಜನರಿಗೆ ವಂಚಿಸಲು ಸಿದ್ದತೆ ನಡೆಸಿತ್ತು. ಇದಕ್ಕೆ ಸಂಬಂಧಿಸಿದಂತೆ ಹಲವು ದೂರುಗಳು ದಾಖಲಾದ ಪರಿಣಾಮ ತನಿಖೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿತ್ತು. ಬೇಕಂತಲೇ ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರು ತನಿಖೆ ನಡೆಸದೆ ಅದನ್ನು ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಎಲ್.ಸಿ ನಾಗರಾಜ್‍ರವರಿಗೆ ವರ್ಗಾಹಿಸಿದ್ದರು. ಇನ್ನು ಇಂತಹ ವ್ಯವಹಾರ ಕುದುರಿಸುವುದರಲ್ಲಿ ನಿಷ್ಣಾತನಾದ ನಾಗರಾಜ್ ತನಿಖೆ ನಡೆಸುವ ನೆಪದಲ್ಲಿ ಮನ್ಸೂರ್ ಖಾನ್‍ನಿಂದ 4.5 ಕೋಟಿ ಲಂಚ ಪಡೆದು ಸರ್ಕಾರಕ್ಕೆ ಸುಳ್ಳು ವರದಿ ಸಲ್ಲಿಸಿದ್ದರು ಎನ್ನಲಾಗಿದೆ.

4.5 ಕೋಟಿ ಲಂಚ ಪಡೆದ ಆರೋಪಿ ಉಪವಿಭಾಗಾಧಿಕಾರಿ ನಾಗರಾಜ್

ಈ ವಿಚಾರವಾಗಿ ಜುಲೈ 5 ರಂದು ಎಲ್.ಸಿ ನಾಗರಾಜ್‍ರನ್ನು ವಿಚಾರಣೆಗೊಳಪಡಿಸಿದಾಗ ಅನುಮಾನಗಳು ದಟ್ಟವಾದ ಹಿನ್ನೆಲೆಯಲ್ಲಿ ಅವರನ್ನು ಮತ್ತು ಅವರ ಸಹಚರ ಗ್ರಾಮಲೆಕ್ಕಿಗ ಮಂಜುನಾಥ್‍ನನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದರು. ಅವರನ್ನು ಮತ್ತಷ್ಟು ವಿಚಾರಣೆ ನಡೆಸಿದಾಗ ಈ ವರ್ಷದ ಏಪ್ರಿಲ್ 6 ರಂದು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರಿಗೆ ಮನ್ಸೂರ್ ಖಾನ್ 1.5 ಕೋಟಿ ಲಂಚ ನೀಡಿದ್ದರು. ನಂತರ ಏಪ್ರಿಲ್ 8ರಂದು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರು ವಿಚಾರಣೆಯ ಅಗತ್ಯವಿಲ್ಲ ಎಂದು ಷರಾ ಬರೆದು ಸಹಿ ಹಾಕಿದ್ದರು.

ಈ ಆಧಾರದಲ್ಲಿ ಸೋಮವಾರ ಎಸ್‍ಐಟಿ ಅಧಿಕಾರಿಗಳ ನೋಟಿಸ್‍ನಂತೆ ವಿಚಾರಣೆಗೆ ವಿಜಯ್ ಶಂಕರ್‍ರವರು ಹಾಜರಾದಾಗ ಅವರನ್ನು ಸಿಟ್ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ಸದ್ಯಕ್ಕೆ ಉಪ ವಿಭಾಗಾಧಿಕಾರಿ ಎಲ್.ಸಿ ನಾಗರಾಜ್ ರವರನ್ನು ಎಸಿಬಿ ದೂರು ದಾಖಲಿಸಿ ವಿಚಾರಣೆ ನಡೆಸುತ್ತಿದೆ.

ಎಸ್‍ಐಟಿ ವಿಭಾಗದ ಮುಖ್ಯಸ್ಥ ರವಿಕಾಂತೇಗೌಡ ಮತ್ತು ಅಪರಾಧ ವಿಭಾಗದ ಡಿಸಿಪಿ ಗಿರೀಶ್ ರವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಮತ್ತಷ್ಟು ಅಧಿಕಾರಿಗಳು ಭಾಗಿಯಾಗಿರುವ ಶಂಕೆಯಿದ್ದು ತೀವ್ರ ವಿಚಾರಣೆ ಜಾರಿಯಲ್ಲಿದೆ.

ಎಸ್.ಐ.ಟಿ ಮುಖ್ಯಸ್ಥ ರವಿಕಾಂತೇಗೌಡ

ಲಂಚ ಪಡೆದ 1.5 ಕೋಟಿ ಹಣ ಎಲ್ಲಿದೆ ಗೊತ್ತೆ: ಇನ್ನು ವಿಜಯ್ ಶಂಕರ್ ಯಾರಿಗೂ ಅನುಮಾನ ಬರಬಾರದೆಂದು ಲಂಚದ ಹಣವನ್ನು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ ನೀಡಿ ತನ್ನ ಮಡದಿ ಮತ್ತು ಮಕ್ಕಳ ಹೆಸರಿನಲ್ಲಿ ಫ್ಲಾಟ್ ಖರೀದಿಸಲು ಪ್ರಯತ್ನಿಸಿದ್ದರು ಎಂದು ಹೇಳಲಾಗುತ್ತಿದೆ. ಈ ಕುರಿತು ಆ ರಿಯಲ್ ಎಸ್ಟೇಟ್ ಉದ್ಯಮಿಯನ್ನು ವಿಚಾರಣೆ ನಡೆಸುತ್ತಿರುವ ಎಸ್.ಐ.ಟಿ ಅಧಿಕಾರಿಗಳು ಸಂಜೆ ವೇಳೆಗೆ ಸಂಪೂರ್ಣ ಚಿತ್ರಣ ನೀಡಲಿದ್ದಾರೆ.

ಇವರಿಗೆ ಶಿಕ್ಷೆ ಏನು?
ಈಗಾಗಲೇ ಎಲ್.ಸಿ ನಾಗರಾಜ್ ಬಂಧನವಾಗಿ ನಾಲ್ಕು ದಿನಗಳಾದ್ದರಿಂದ ಅವರನ್ನು ಅಮಾನತ್ತು ಮಾಡಬಹುದಾಗಿದೆ. ಈ ಕುರಿತು ಕ್ರಮಗಳು ಜಾರಿಯಲ್ಲಿವೆ ಎಂಬ ಸುದ್ದಿ ಕೇಳಿಬಂದಿದೆ. ಇನ್ನು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರ ಬಗ್ಗೆ ನಾಳೆ ತೀರ್ಮಾನ ತೆಗೆದುಕೊಳ್ಳಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಜನರ ಕಥೆ?: ಇನ್ನು ಈ ಹಗರಣದಲ್ಲಿ ನೇರ ಬಲಿಪಶುಗಳಾಗಿರುವ ಸಾವಿರಾರು ಜನ ಇದನ್ನು ಮೂಕದೃಷ್ಟಿಯಿಂದ ನೋಡುತ್ತಿದ್ದಾರೆ. ಒಂದಷ್ಟು ಚಿನ್ನಾಭರಣ, ಒಂದಷ್ಟು ಹಣ ಅಲ್ಲಲ್ಲಿ ಜಪ್ತಿಯಾಗುತ್ತಿರುವುದು ಮತ್ತು ಮನ್ಸೂರ್ ಖಾನ್ ತನ್ನ ವಿಡಿಯೋದಲ್ಲಿ “ನನ್ನ ಆಸ್ತಿ ಮಾರಿ ನಿಮ್ಮ ಹಣ ವಾಪಸ್ ಕೊಡುತ್ತೇನೆ” ಎಂದಿರುವುದು ಜನರಿಗೆ ಒಂದಷ್ಟು ಭರವಸೆ ಮೂಡಿಸಿದೆ.

ಆದರೆ ಈ ಭ್ರಷ್ಟ ಅಧಿಕಾರಿಗಳು ಅಂದೇ ಸರಿಯಾದ ತನಿಖೆ ನಡೆಸಿ ವರದಿ ಸಲ್ಲಿಸಿದ್ದರೆ ಒಂದಷ್ಟು ಜನರಿಗೆ ಮೋಸವಾಗದಂತೆ ತಡೆಗಟ್ಟಬಹುದಾಗಿತ್ತು. ಮತ್ತಷ್ಟು ಜನರು ಈ ಐಎಂಎ ನಂಬಿ ಹಣ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...