Homeಕರ್ನಾಟಕಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ..

ಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ..

- Advertisement -
- Advertisement -

ಕಳೆದೊಂದು ತಿಂಗಳಿಂದ ಸದ್ದು ಮಾಡುತ್ತಿರುವ ಐ ಮಾನಿಟರ್ ಅಡ್ವೈಸರಿ ಹಗರಣದಲ್ಲಿ ಸಿಟ್ ತನಿಖೆ ನಡೆಯುತ್ತಿದ್ದು ಪ್ರತಿ ದಿನವೂ ಹಲವು ಆರೋಪಿಗಳು ಬಲೆಗೆ ಬೀಳುತ್ತಿದ್ದಾರೆ. ಇದುವರೆಗೂ ರಾಜಕಾರಣಿಗಳು, ಆಡಳಿತ ಮಂಡಳಿ ಸದಸ್ಯರ ಹೆಸರುಗಳು ಮಾತ್ರ ಕೇಳಿ ಬರುತ್ತಿದ್ದವು. ಆದರೀಗ ಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ ಆಗಿದ್ದು ಮಾಲೀಕ ಮನ್ಸೂರ್ ಖಾನ್‍ನಿಂದ ಲಂಚ ಸ್ವೀಕಾರ ಆರೋಪದಡಿ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್ ಶಂಕರ್ ರವರನ್ನು ಬಂಧಿಸಲಾಗಿದೆ.

1.5 ಕೋಟಿ ಲಂಚ ಪಡೆದ ಆರೋಪಿ ಜಿಲ್ಲಾಧಿಕಾರಿ ವಿಜಯ್ ಶಂಕರ್

2017ರಿಂದಲೇ ಕಂಪನಿಯು ಅವ್ಯವಹಾರಕ್ಕೆ ಕೈ ಹಾಕಿತ್ತು ಮತ್ತು ಜನರಿಗೆ ವಂಚಿಸಲು ಸಿದ್ದತೆ ನಡೆಸಿತ್ತು. ಇದಕ್ಕೆ ಸಂಬಂಧಿಸಿದಂತೆ ಹಲವು ದೂರುಗಳು ದಾಖಲಾದ ಪರಿಣಾಮ ತನಿಖೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿತ್ತು. ಬೇಕಂತಲೇ ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರು ತನಿಖೆ ನಡೆಸದೆ ಅದನ್ನು ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಎಲ್.ಸಿ ನಾಗರಾಜ್‍ರವರಿಗೆ ವರ್ಗಾಹಿಸಿದ್ದರು. ಇನ್ನು ಇಂತಹ ವ್ಯವಹಾರ ಕುದುರಿಸುವುದರಲ್ಲಿ ನಿಷ್ಣಾತನಾದ ನಾಗರಾಜ್ ತನಿಖೆ ನಡೆಸುವ ನೆಪದಲ್ಲಿ ಮನ್ಸೂರ್ ಖಾನ್‍ನಿಂದ 4.5 ಕೋಟಿ ಲಂಚ ಪಡೆದು ಸರ್ಕಾರಕ್ಕೆ ಸುಳ್ಳು ವರದಿ ಸಲ್ಲಿಸಿದ್ದರು ಎನ್ನಲಾಗಿದೆ.

4.5 ಕೋಟಿ ಲಂಚ ಪಡೆದ ಆರೋಪಿ ಉಪವಿಭಾಗಾಧಿಕಾರಿ ನಾಗರಾಜ್

ಈ ವಿಚಾರವಾಗಿ ಜುಲೈ 5 ರಂದು ಎಲ್.ಸಿ ನಾಗರಾಜ್‍ರನ್ನು ವಿಚಾರಣೆಗೊಳಪಡಿಸಿದಾಗ ಅನುಮಾನಗಳು ದಟ್ಟವಾದ ಹಿನ್ನೆಲೆಯಲ್ಲಿ ಅವರನ್ನು ಮತ್ತು ಅವರ ಸಹಚರ ಗ್ರಾಮಲೆಕ್ಕಿಗ ಮಂಜುನಾಥ್‍ನನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದರು. ಅವರನ್ನು ಮತ್ತಷ್ಟು ವಿಚಾರಣೆ ನಡೆಸಿದಾಗ ಈ ವರ್ಷದ ಏಪ್ರಿಲ್ 6 ರಂದು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರಿಗೆ ಮನ್ಸೂರ್ ಖಾನ್ 1.5 ಕೋಟಿ ಲಂಚ ನೀಡಿದ್ದರು. ನಂತರ ಏಪ್ರಿಲ್ 8ರಂದು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರು ವಿಚಾರಣೆಯ ಅಗತ್ಯವಿಲ್ಲ ಎಂದು ಷರಾ ಬರೆದು ಸಹಿ ಹಾಕಿದ್ದರು.

ಈ ಆಧಾರದಲ್ಲಿ ಸೋಮವಾರ ಎಸ್‍ಐಟಿ ಅಧಿಕಾರಿಗಳ ನೋಟಿಸ್‍ನಂತೆ ವಿಚಾರಣೆಗೆ ವಿಜಯ್ ಶಂಕರ್‍ರವರು ಹಾಜರಾದಾಗ ಅವರನ್ನು ಸಿಟ್ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ಸದ್ಯಕ್ಕೆ ಉಪ ವಿಭಾಗಾಧಿಕಾರಿ ಎಲ್.ಸಿ ನಾಗರಾಜ್ ರವರನ್ನು ಎಸಿಬಿ ದೂರು ದಾಖಲಿಸಿ ವಿಚಾರಣೆ ನಡೆಸುತ್ತಿದೆ.

ಎಸ್‍ಐಟಿ ವಿಭಾಗದ ಮುಖ್ಯಸ್ಥ ರವಿಕಾಂತೇಗೌಡ ಮತ್ತು ಅಪರಾಧ ವಿಭಾಗದ ಡಿಸಿಪಿ ಗಿರೀಶ್ ರವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಮತ್ತಷ್ಟು ಅಧಿಕಾರಿಗಳು ಭಾಗಿಯಾಗಿರುವ ಶಂಕೆಯಿದ್ದು ತೀವ್ರ ವಿಚಾರಣೆ ಜಾರಿಯಲ್ಲಿದೆ.

ಎಸ್.ಐ.ಟಿ ಮುಖ್ಯಸ್ಥ ರವಿಕಾಂತೇಗೌಡ

ಲಂಚ ಪಡೆದ 1.5 ಕೋಟಿ ಹಣ ಎಲ್ಲಿದೆ ಗೊತ್ತೆ: ಇನ್ನು ವಿಜಯ್ ಶಂಕರ್ ಯಾರಿಗೂ ಅನುಮಾನ ಬರಬಾರದೆಂದು ಲಂಚದ ಹಣವನ್ನು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ ನೀಡಿ ತನ್ನ ಮಡದಿ ಮತ್ತು ಮಕ್ಕಳ ಹೆಸರಿನಲ್ಲಿ ಫ್ಲಾಟ್ ಖರೀದಿಸಲು ಪ್ರಯತ್ನಿಸಿದ್ದರು ಎಂದು ಹೇಳಲಾಗುತ್ತಿದೆ. ಈ ಕುರಿತು ಆ ರಿಯಲ್ ಎಸ್ಟೇಟ್ ಉದ್ಯಮಿಯನ್ನು ವಿಚಾರಣೆ ನಡೆಸುತ್ತಿರುವ ಎಸ್.ಐ.ಟಿ ಅಧಿಕಾರಿಗಳು ಸಂಜೆ ವೇಳೆಗೆ ಸಂಪೂರ್ಣ ಚಿತ್ರಣ ನೀಡಲಿದ್ದಾರೆ.

ಇವರಿಗೆ ಶಿಕ್ಷೆ ಏನು?
ಈಗಾಗಲೇ ಎಲ್.ಸಿ ನಾಗರಾಜ್ ಬಂಧನವಾಗಿ ನಾಲ್ಕು ದಿನಗಳಾದ್ದರಿಂದ ಅವರನ್ನು ಅಮಾನತ್ತು ಮಾಡಬಹುದಾಗಿದೆ. ಈ ಕುರಿತು ಕ್ರಮಗಳು ಜಾರಿಯಲ್ಲಿವೆ ಎಂಬ ಸುದ್ದಿ ಕೇಳಿಬಂದಿದೆ. ಇನ್ನು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರ ಬಗ್ಗೆ ನಾಳೆ ತೀರ್ಮಾನ ತೆಗೆದುಕೊಳ್ಳಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಜನರ ಕಥೆ?: ಇನ್ನು ಈ ಹಗರಣದಲ್ಲಿ ನೇರ ಬಲಿಪಶುಗಳಾಗಿರುವ ಸಾವಿರಾರು ಜನ ಇದನ್ನು ಮೂಕದೃಷ್ಟಿಯಿಂದ ನೋಡುತ್ತಿದ್ದಾರೆ. ಒಂದಷ್ಟು ಚಿನ್ನಾಭರಣ, ಒಂದಷ್ಟು ಹಣ ಅಲ್ಲಲ್ಲಿ ಜಪ್ತಿಯಾಗುತ್ತಿರುವುದು ಮತ್ತು ಮನ್ಸೂರ್ ಖಾನ್ ತನ್ನ ವಿಡಿಯೋದಲ್ಲಿ “ನನ್ನ ಆಸ್ತಿ ಮಾರಿ ನಿಮ್ಮ ಹಣ ವಾಪಸ್ ಕೊಡುತ್ತೇನೆ” ಎಂದಿರುವುದು ಜನರಿಗೆ ಒಂದಷ್ಟು ಭರವಸೆ ಮೂಡಿಸಿದೆ.

ಆದರೆ ಈ ಭ್ರಷ್ಟ ಅಧಿಕಾರಿಗಳು ಅಂದೇ ಸರಿಯಾದ ತನಿಖೆ ನಡೆಸಿ ವರದಿ ಸಲ್ಲಿಸಿದ್ದರೆ ಒಂದಷ್ಟು ಜನರಿಗೆ ಮೋಸವಾಗದಂತೆ ತಡೆಗಟ್ಟಬಹುದಾಗಿತ್ತು. ಮತ್ತಷ್ಟು ಜನರು ಈ ಐಎಂಎ ನಂಬಿ ಹಣ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...