Homeಕರ್ನಾಟಕಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ..

ಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ..

- Advertisement -
- Advertisement -

ಕಳೆದೊಂದು ತಿಂಗಳಿಂದ ಸದ್ದು ಮಾಡುತ್ತಿರುವ ಐ ಮಾನಿಟರ್ ಅಡ್ವೈಸರಿ ಹಗರಣದಲ್ಲಿ ಸಿಟ್ ತನಿಖೆ ನಡೆಯುತ್ತಿದ್ದು ಪ್ರತಿ ದಿನವೂ ಹಲವು ಆರೋಪಿಗಳು ಬಲೆಗೆ ಬೀಳುತ್ತಿದ್ದಾರೆ. ಇದುವರೆಗೂ ರಾಜಕಾರಣಿಗಳು, ಆಡಳಿತ ಮಂಡಳಿ ಸದಸ್ಯರ ಹೆಸರುಗಳು ಮಾತ್ರ ಕೇಳಿ ಬರುತ್ತಿದ್ದವು. ಆದರೀಗ ಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ ಆಗಿದ್ದು ಮಾಲೀಕ ಮನ್ಸೂರ್ ಖಾನ್‍ನಿಂದ ಲಂಚ ಸ್ವೀಕಾರ ಆರೋಪದಡಿ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್ ಶಂಕರ್ ರವರನ್ನು ಬಂಧಿಸಲಾಗಿದೆ.

1.5 ಕೋಟಿ ಲಂಚ ಪಡೆದ ಆರೋಪಿ ಜಿಲ್ಲಾಧಿಕಾರಿ ವಿಜಯ್ ಶಂಕರ್

2017ರಿಂದಲೇ ಕಂಪನಿಯು ಅವ್ಯವಹಾರಕ್ಕೆ ಕೈ ಹಾಕಿತ್ತು ಮತ್ತು ಜನರಿಗೆ ವಂಚಿಸಲು ಸಿದ್ದತೆ ನಡೆಸಿತ್ತು. ಇದಕ್ಕೆ ಸಂಬಂಧಿಸಿದಂತೆ ಹಲವು ದೂರುಗಳು ದಾಖಲಾದ ಪರಿಣಾಮ ತನಿಖೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿತ್ತು. ಬೇಕಂತಲೇ ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರು ತನಿಖೆ ನಡೆಸದೆ ಅದನ್ನು ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಎಲ್.ಸಿ ನಾಗರಾಜ್‍ರವರಿಗೆ ವರ್ಗಾಹಿಸಿದ್ದರು. ಇನ್ನು ಇಂತಹ ವ್ಯವಹಾರ ಕುದುರಿಸುವುದರಲ್ಲಿ ನಿಷ್ಣಾತನಾದ ನಾಗರಾಜ್ ತನಿಖೆ ನಡೆಸುವ ನೆಪದಲ್ಲಿ ಮನ್ಸೂರ್ ಖಾನ್‍ನಿಂದ 4.5 ಕೋಟಿ ಲಂಚ ಪಡೆದು ಸರ್ಕಾರಕ್ಕೆ ಸುಳ್ಳು ವರದಿ ಸಲ್ಲಿಸಿದ್ದರು ಎನ್ನಲಾಗಿದೆ.

4.5 ಕೋಟಿ ಲಂಚ ಪಡೆದ ಆರೋಪಿ ಉಪವಿಭಾಗಾಧಿಕಾರಿ ನಾಗರಾಜ್

ಈ ವಿಚಾರವಾಗಿ ಜುಲೈ 5 ರಂದು ಎಲ್.ಸಿ ನಾಗರಾಜ್‍ರನ್ನು ವಿಚಾರಣೆಗೊಳಪಡಿಸಿದಾಗ ಅನುಮಾನಗಳು ದಟ್ಟವಾದ ಹಿನ್ನೆಲೆಯಲ್ಲಿ ಅವರನ್ನು ಮತ್ತು ಅವರ ಸಹಚರ ಗ್ರಾಮಲೆಕ್ಕಿಗ ಮಂಜುನಾಥ್‍ನನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದರು. ಅವರನ್ನು ಮತ್ತಷ್ಟು ವಿಚಾರಣೆ ನಡೆಸಿದಾಗ ಈ ವರ್ಷದ ಏಪ್ರಿಲ್ 6 ರಂದು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರಿಗೆ ಮನ್ಸೂರ್ ಖಾನ್ 1.5 ಕೋಟಿ ಲಂಚ ನೀಡಿದ್ದರು. ನಂತರ ಏಪ್ರಿಲ್ 8ರಂದು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರು ವಿಚಾರಣೆಯ ಅಗತ್ಯವಿಲ್ಲ ಎಂದು ಷರಾ ಬರೆದು ಸಹಿ ಹಾಕಿದ್ದರು.

ಈ ಆಧಾರದಲ್ಲಿ ಸೋಮವಾರ ಎಸ್‍ಐಟಿ ಅಧಿಕಾರಿಗಳ ನೋಟಿಸ್‍ನಂತೆ ವಿಚಾರಣೆಗೆ ವಿಜಯ್ ಶಂಕರ್‍ರವರು ಹಾಜರಾದಾಗ ಅವರನ್ನು ಸಿಟ್ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ಸದ್ಯಕ್ಕೆ ಉಪ ವಿಭಾಗಾಧಿಕಾರಿ ಎಲ್.ಸಿ ನಾಗರಾಜ್ ರವರನ್ನು ಎಸಿಬಿ ದೂರು ದಾಖಲಿಸಿ ವಿಚಾರಣೆ ನಡೆಸುತ್ತಿದೆ.

ಎಸ್‍ಐಟಿ ವಿಭಾಗದ ಮುಖ್ಯಸ್ಥ ರವಿಕಾಂತೇಗೌಡ ಮತ್ತು ಅಪರಾಧ ವಿಭಾಗದ ಡಿಸಿಪಿ ಗಿರೀಶ್ ರವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಮತ್ತಷ್ಟು ಅಧಿಕಾರಿಗಳು ಭಾಗಿಯಾಗಿರುವ ಶಂಕೆಯಿದ್ದು ತೀವ್ರ ವಿಚಾರಣೆ ಜಾರಿಯಲ್ಲಿದೆ.

ಎಸ್.ಐ.ಟಿ ಮುಖ್ಯಸ್ಥ ರವಿಕಾಂತೇಗೌಡ

ಲಂಚ ಪಡೆದ 1.5 ಕೋಟಿ ಹಣ ಎಲ್ಲಿದೆ ಗೊತ್ತೆ: ಇನ್ನು ವಿಜಯ್ ಶಂಕರ್ ಯಾರಿಗೂ ಅನುಮಾನ ಬರಬಾರದೆಂದು ಲಂಚದ ಹಣವನ್ನು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ ನೀಡಿ ತನ್ನ ಮಡದಿ ಮತ್ತು ಮಕ್ಕಳ ಹೆಸರಿನಲ್ಲಿ ಫ್ಲಾಟ್ ಖರೀದಿಸಲು ಪ್ರಯತ್ನಿಸಿದ್ದರು ಎಂದು ಹೇಳಲಾಗುತ್ತಿದೆ. ಈ ಕುರಿತು ಆ ರಿಯಲ್ ಎಸ್ಟೇಟ್ ಉದ್ಯಮಿಯನ್ನು ವಿಚಾರಣೆ ನಡೆಸುತ್ತಿರುವ ಎಸ್.ಐ.ಟಿ ಅಧಿಕಾರಿಗಳು ಸಂಜೆ ವೇಳೆಗೆ ಸಂಪೂರ್ಣ ಚಿತ್ರಣ ನೀಡಲಿದ್ದಾರೆ.

ಇವರಿಗೆ ಶಿಕ್ಷೆ ಏನು?
ಈಗಾಗಲೇ ಎಲ್.ಸಿ ನಾಗರಾಜ್ ಬಂಧನವಾಗಿ ನಾಲ್ಕು ದಿನಗಳಾದ್ದರಿಂದ ಅವರನ್ನು ಅಮಾನತ್ತು ಮಾಡಬಹುದಾಗಿದೆ. ಈ ಕುರಿತು ಕ್ರಮಗಳು ಜಾರಿಯಲ್ಲಿವೆ ಎಂಬ ಸುದ್ದಿ ಕೇಳಿಬಂದಿದೆ. ಇನ್ನು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರ ಬಗ್ಗೆ ನಾಳೆ ತೀರ್ಮಾನ ತೆಗೆದುಕೊಳ್ಳಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಜನರ ಕಥೆ?: ಇನ್ನು ಈ ಹಗರಣದಲ್ಲಿ ನೇರ ಬಲಿಪಶುಗಳಾಗಿರುವ ಸಾವಿರಾರು ಜನ ಇದನ್ನು ಮೂಕದೃಷ್ಟಿಯಿಂದ ನೋಡುತ್ತಿದ್ದಾರೆ. ಒಂದಷ್ಟು ಚಿನ್ನಾಭರಣ, ಒಂದಷ್ಟು ಹಣ ಅಲ್ಲಲ್ಲಿ ಜಪ್ತಿಯಾಗುತ್ತಿರುವುದು ಮತ್ತು ಮನ್ಸೂರ್ ಖಾನ್ ತನ್ನ ವಿಡಿಯೋದಲ್ಲಿ “ನನ್ನ ಆಸ್ತಿ ಮಾರಿ ನಿಮ್ಮ ಹಣ ವಾಪಸ್ ಕೊಡುತ್ತೇನೆ” ಎಂದಿರುವುದು ಜನರಿಗೆ ಒಂದಷ್ಟು ಭರವಸೆ ಮೂಡಿಸಿದೆ.

ಆದರೆ ಈ ಭ್ರಷ್ಟ ಅಧಿಕಾರಿಗಳು ಅಂದೇ ಸರಿಯಾದ ತನಿಖೆ ನಡೆಸಿ ವರದಿ ಸಲ್ಲಿಸಿದ್ದರೆ ಒಂದಷ್ಟು ಜನರಿಗೆ ಮೋಸವಾಗದಂತೆ ತಡೆಗಟ್ಟಬಹುದಾಗಿತ್ತು. ಮತ್ತಷ್ಟು ಜನರು ಈ ಐಎಂಎ ನಂಬಿ ಹಣ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...