Homeಕರ್ನಾಟಕಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ..

ಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ..

- Advertisement -
- Advertisement -

ಕಳೆದೊಂದು ತಿಂಗಳಿಂದ ಸದ್ದು ಮಾಡುತ್ತಿರುವ ಐ ಮಾನಿಟರ್ ಅಡ್ವೈಸರಿ ಹಗರಣದಲ್ಲಿ ಸಿಟ್ ತನಿಖೆ ನಡೆಯುತ್ತಿದ್ದು ಪ್ರತಿ ದಿನವೂ ಹಲವು ಆರೋಪಿಗಳು ಬಲೆಗೆ ಬೀಳುತ್ತಿದ್ದಾರೆ. ಇದುವರೆಗೂ ರಾಜಕಾರಣಿಗಳು, ಆಡಳಿತ ಮಂಡಳಿ ಸದಸ್ಯರ ಹೆಸರುಗಳು ಮಾತ್ರ ಕೇಳಿ ಬರುತ್ತಿದ್ದವು. ಆದರೀಗ ಐಎಂಎ ವಂಚನೆಯಲ್ಲಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಎಲ್ಲರೂ ಪಾಲುದಾರರೆ ಆಗಿದ್ದು ಮಾಲೀಕ ಮನ್ಸೂರ್ ಖಾನ್‍ನಿಂದ ಲಂಚ ಸ್ವೀಕಾರ ಆರೋಪದಡಿ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್ ಶಂಕರ್ ರವರನ್ನು ಬಂಧಿಸಲಾಗಿದೆ.

1.5 ಕೋಟಿ ಲಂಚ ಪಡೆದ ಆರೋಪಿ ಜಿಲ್ಲಾಧಿಕಾರಿ ವಿಜಯ್ ಶಂಕರ್

2017ರಿಂದಲೇ ಕಂಪನಿಯು ಅವ್ಯವಹಾರಕ್ಕೆ ಕೈ ಹಾಕಿತ್ತು ಮತ್ತು ಜನರಿಗೆ ವಂಚಿಸಲು ಸಿದ್ದತೆ ನಡೆಸಿತ್ತು. ಇದಕ್ಕೆ ಸಂಬಂಧಿಸಿದಂತೆ ಹಲವು ದೂರುಗಳು ದಾಖಲಾದ ಪರಿಣಾಮ ತನಿಖೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿತ್ತು. ಬೇಕಂತಲೇ ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರು ತನಿಖೆ ನಡೆಸದೆ ಅದನ್ನು ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಎಲ್.ಸಿ ನಾಗರಾಜ್‍ರವರಿಗೆ ವರ್ಗಾಹಿಸಿದ್ದರು. ಇನ್ನು ಇಂತಹ ವ್ಯವಹಾರ ಕುದುರಿಸುವುದರಲ್ಲಿ ನಿಷ್ಣಾತನಾದ ನಾಗರಾಜ್ ತನಿಖೆ ನಡೆಸುವ ನೆಪದಲ್ಲಿ ಮನ್ಸೂರ್ ಖಾನ್‍ನಿಂದ 4.5 ಕೋಟಿ ಲಂಚ ಪಡೆದು ಸರ್ಕಾರಕ್ಕೆ ಸುಳ್ಳು ವರದಿ ಸಲ್ಲಿಸಿದ್ದರು ಎನ್ನಲಾಗಿದೆ.

4.5 ಕೋಟಿ ಲಂಚ ಪಡೆದ ಆರೋಪಿ ಉಪವಿಭಾಗಾಧಿಕಾರಿ ನಾಗರಾಜ್

ಈ ವಿಚಾರವಾಗಿ ಜುಲೈ 5 ರಂದು ಎಲ್.ಸಿ ನಾಗರಾಜ್‍ರನ್ನು ವಿಚಾರಣೆಗೊಳಪಡಿಸಿದಾಗ ಅನುಮಾನಗಳು ದಟ್ಟವಾದ ಹಿನ್ನೆಲೆಯಲ್ಲಿ ಅವರನ್ನು ಮತ್ತು ಅವರ ಸಹಚರ ಗ್ರಾಮಲೆಕ್ಕಿಗ ಮಂಜುನಾಥ್‍ನನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದರು. ಅವರನ್ನು ಮತ್ತಷ್ಟು ವಿಚಾರಣೆ ನಡೆಸಿದಾಗ ಈ ವರ್ಷದ ಏಪ್ರಿಲ್ 6 ರಂದು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರಿಗೆ ಮನ್ಸೂರ್ ಖಾನ್ 1.5 ಕೋಟಿ ಲಂಚ ನೀಡಿದ್ದರು. ನಂತರ ಏಪ್ರಿಲ್ 8ರಂದು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರು ವಿಚಾರಣೆಯ ಅಗತ್ಯವಿಲ್ಲ ಎಂದು ಷರಾ ಬರೆದು ಸಹಿ ಹಾಕಿದ್ದರು.

ಈ ಆಧಾರದಲ್ಲಿ ಸೋಮವಾರ ಎಸ್‍ಐಟಿ ಅಧಿಕಾರಿಗಳ ನೋಟಿಸ್‍ನಂತೆ ವಿಚಾರಣೆಗೆ ವಿಜಯ್ ಶಂಕರ್‍ರವರು ಹಾಜರಾದಾಗ ಅವರನ್ನು ಸಿಟ್ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ಸದ್ಯಕ್ಕೆ ಉಪ ವಿಭಾಗಾಧಿಕಾರಿ ಎಲ್.ಸಿ ನಾಗರಾಜ್ ರವರನ್ನು ಎಸಿಬಿ ದೂರು ದಾಖಲಿಸಿ ವಿಚಾರಣೆ ನಡೆಸುತ್ತಿದೆ.

ಎಸ್‍ಐಟಿ ವಿಭಾಗದ ಮುಖ್ಯಸ್ಥ ರವಿಕಾಂತೇಗೌಡ ಮತ್ತು ಅಪರಾಧ ವಿಭಾಗದ ಡಿಸಿಪಿ ಗಿರೀಶ್ ರವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಮತ್ತಷ್ಟು ಅಧಿಕಾರಿಗಳು ಭಾಗಿಯಾಗಿರುವ ಶಂಕೆಯಿದ್ದು ತೀವ್ರ ವಿಚಾರಣೆ ಜಾರಿಯಲ್ಲಿದೆ.

ಎಸ್.ಐ.ಟಿ ಮುಖ್ಯಸ್ಥ ರವಿಕಾಂತೇಗೌಡ

ಲಂಚ ಪಡೆದ 1.5 ಕೋಟಿ ಹಣ ಎಲ್ಲಿದೆ ಗೊತ್ತೆ: ಇನ್ನು ವಿಜಯ್ ಶಂಕರ್ ಯಾರಿಗೂ ಅನುಮಾನ ಬರಬಾರದೆಂದು ಲಂಚದ ಹಣವನ್ನು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ ನೀಡಿ ತನ್ನ ಮಡದಿ ಮತ್ತು ಮಕ್ಕಳ ಹೆಸರಿನಲ್ಲಿ ಫ್ಲಾಟ್ ಖರೀದಿಸಲು ಪ್ರಯತ್ನಿಸಿದ್ದರು ಎಂದು ಹೇಳಲಾಗುತ್ತಿದೆ. ಈ ಕುರಿತು ಆ ರಿಯಲ್ ಎಸ್ಟೇಟ್ ಉದ್ಯಮಿಯನ್ನು ವಿಚಾರಣೆ ನಡೆಸುತ್ತಿರುವ ಎಸ್.ಐ.ಟಿ ಅಧಿಕಾರಿಗಳು ಸಂಜೆ ವೇಳೆಗೆ ಸಂಪೂರ್ಣ ಚಿತ್ರಣ ನೀಡಲಿದ್ದಾರೆ.

ಇವರಿಗೆ ಶಿಕ್ಷೆ ಏನು?
ಈಗಾಗಲೇ ಎಲ್.ಸಿ ನಾಗರಾಜ್ ಬಂಧನವಾಗಿ ನಾಲ್ಕು ದಿನಗಳಾದ್ದರಿಂದ ಅವರನ್ನು ಅಮಾನತ್ತು ಮಾಡಬಹುದಾಗಿದೆ. ಈ ಕುರಿತು ಕ್ರಮಗಳು ಜಾರಿಯಲ್ಲಿವೆ ಎಂಬ ಸುದ್ದಿ ಕೇಳಿಬಂದಿದೆ. ಇನ್ನು ಜಿಲ್ಲಾಧಿಕಾರಿ ವಿಜಯ್ ಶಂಕರ್‍ರವರ ಬಗ್ಗೆ ನಾಳೆ ತೀರ್ಮಾನ ತೆಗೆದುಕೊಳ್ಳಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಜನರ ಕಥೆ?: ಇನ್ನು ಈ ಹಗರಣದಲ್ಲಿ ನೇರ ಬಲಿಪಶುಗಳಾಗಿರುವ ಸಾವಿರಾರು ಜನ ಇದನ್ನು ಮೂಕದೃಷ್ಟಿಯಿಂದ ನೋಡುತ್ತಿದ್ದಾರೆ. ಒಂದಷ್ಟು ಚಿನ್ನಾಭರಣ, ಒಂದಷ್ಟು ಹಣ ಅಲ್ಲಲ್ಲಿ ಜಪ್ತಿಯಾಗುತ್ತಿರುವುದು ಮತ್ತು ಮನ್ಸೂರ್ ಖಾನ್ ತನ್ನ ವಿಡಿಯೋದಲ್ಲಿ “ನನ್ನ ಆಸ್ತಿ ಮಾರಿ ನಿಮ್ಮ ಹಣ ವಾಪಸ್ ಕೊಡುತ್ತೇನೆ” ಎಂದಿರುವುದು ಜನರಿಗೆ ಒಂದಷ್ಟು ಭರವಸೆ ಮೂಡಿಸಿದೆ.

ಆದರೆ ಈ ಭ್ರಷ್ಟ ಅಧಿಕಾರಿಗಳು ಅಂದೇ ಸರಿಯಾದ ತನಿಖೆ ನಡೆಸಿ ವರದಿ ಸಲ್ಲಿಸಿದ್ದರೆ ಒಂದಷ್ಟು ಜನರಿಗೆ ಮೋಸವಾಗದಂತೆ ತಡೆಗಟ್ಟಬಹುದಾಗಿತ್ತು. ಮತ್ತಷ್ಟು ಜನರು ಈ ಐಎಂಎ ನಂಬಿ ಹಣ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...