Homeಕರ್ನಾಟಕಬೆಂಗಳೂರು: ಹುತಾತ್ಮ ಚೌಕ ಸಂರಕ್ಷಣೆಗೆ ಆಗ್ರಹ; ಸಹಿ ಸಂಗ್ರಹ ಅಭಿಯಾನ ಆರಂಭ

ಬೆಂಗಳೂರು: ಹುತಾತ್ಮ ಚೌಕ ಸಂರಕ್ಷಣೆಗೆ ಆಗ್ರಹ; ಸಹಿ ಸಂಗ್ರಹ ಅಭಿಯಾನ ಆರಂಭ

- Advertisement -
- Advertisement -

ಬೆಂಗಳೂರಿನ ಮಧ್ಯದ ಮೈಸೂರು ಬ್ಯಾಂಕ್ ವೃತ್ತದಲ್ಲಿರುವ 1942ರ ಕ್ವಿಟ್ ಇಂಡಿಯಾ ಚಳವಳಿ ಹುತಾತ್ಮ ಸ್ಮಾರಕ ಸಂರಕ್ಷಣೆಗೆ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿ ವೇದಿಕೆ ಹಾಗೂ ಇತರೆ ಎಲ್ಲ ಜನಪರ ಸಂಘಟನೆಗಳು ಸಹಿ ಸಂಗ್ರಹ ಅಭಿಯಾನ ಆರಂಭಿಸಿವೆ.

ಸಹಿ ಸಂಗ್ರಹ ಮಾಡಿ ಜುಲೈ 20ರಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ನೀಡಲು ನಿರ್ಧರಿಸಲಾಗಿದೆ. ಈ ಅಭಿಯಾನಕ್ಕೆ ಕೈ ಜೋಡಿಸಿ, ಮನವಿ ಪತ್ರಕ್ಕೆ ತಮ್ಮ ಹೆಸರನ್ನು ಸೇರಿಸುವ ಮೂಲಕ ಸಾಮಾಜಿಕ ಮಾಧ್ಯದಲ್ಲಿ ಬೆಂಬಲ ಸೂಚಿಸುವಂತೆ ಜನಪರ ಹೋರಾಟಗಾರರು ಕೋರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಖಿಲ ಭಾರತ ಸ್ವಾತಂತ್ರ್ಯ ಯೋಧರ ಸಮಿತಿ ಪ್ರಧಾನ ಕಾರ್ಯದರ್ಶಿ ಅಪ್ಪರಾವ್ ನವಲೆ, ಸಮಿತಿ ಮಹಿಳಾ ವಿಭಾಗದ ಪ್ರಧಾನ ಕಾರ್ಯದರ್ಶಿ ಜಾನ್ಸಿರಾಣಿ, ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ, ಕೆಜೆವಿಎಸ್‌ನ ಈ ಬಸವರಾಜು, ಸಮತಾ ಸಂಘಟನೆ ಪ್ರಭಾ ಬೆಳವಂಗಲ, ಕರ್ನಾಟಕ ಜನಶಕ್ತಿಯ ಸಿರಿಮನೆ ನಾಗರಾಜ, ಸಮುದಾಯ ಸಾಂಸ್ಕೃತಿಕ ಸಂಘಟನೆಯ ಗುಂಡಣ್ಣ ಚಿಕ್ಕಮಗಳೂರು, ಸಾಮಾಜಿಕ ಹೋರಾಟಗಾರ ಎಚ್.ಎಂ.ವೆಂಕಟೇಶ್, ಸಾಮಾಜಿಕ ಕಾರ್ಯಕರ್ತ ಅಲ್ದೂರ್ ಶಿವರಾಜ್, ಭೂಮಿಕ ಪತ್ರಿಕೆಯ ಸಂಪಾದಕ ಲಕ್ಷ್ಮಣ್‌, ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಯು.ಬಸವರಾಜ್ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.

ಸಂಘಟನೆಗಳ ಮನವಿ ಪತ್ರದಲ್ಲಿ ಏನಿದೆ?

ನಮ್ಮ ದೇಶವು ‘ಆಜಾದಿ 75’ ವರ್ಷಾಚರಣೆಯನ್ನು ದೇಶದೆಲ್ಲಡೆ ಸಂಭ್ರಮದಿಂದ ಆಚರಿಸುತ್ತಿರುವುದು ತಮಗೆ ತಿಳಿದ ಸಂಗತಿಯಾಗಿದೆ.

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕರ್ನಾಟಕದ ಜನಸಾಮಾನ್ಯರು ‌ಕೂಡ ಸ್ವಾತಂತ್ರ್ಯಕ್ಕಾಗಿ ಅಂದಿನ ವಿವಿಧ ಪ್ರದೇಶಗಳಲ್ಲಿ ಹಲವು ರೀತಿಯ ತ್ಯಾಗ ಬಲಿದಾನದ ಹೋರಾಟಗಳನ್ನು ನಡೆಸಿದ್ದಾರೆ. ಅದರಲ್ಲಿ 1942 ರಲ್ಲಿ ‌ಮಹಾತ್ಮಾ ಗಾಂಧಿಜೀಯವರು ಕರೆ ನೀಡಿದ ‘ಕ್ವಿಟ್ ಇಂಡಿಯಾ’ ಚಳವಳಿ ಕರೆಗೆ ಓಗೊಟ್ಟು ಬೆಂಗಳೂರಿನ ‘ಸೆಂಟ್ರಲ್ ಕಾಲೇಜ್‌’ನ ವಿದ್ಯಾರ್ಥಿಗಳು ನಡೆಸಿದ ನಡೆಸಿದ ಹೋರಾಟ ಸ್ಪೂರ್ತಿದಾಯಕವಾದುದ್ದು.
ವಿದ್ಯಾರ್ಥಿಗಳು ಅಂದು ನಡೆಸಿದ ಹೋರಾಟದ ಮೇಲೆ ಅಂದಿನ ಬ್ರಿಟಿಷ್‌ ಪೊಲೀಸರು ಗುಂಡಿನ‌ದಾಳಿ ನಡೆಸಿದ ಪರಿಣಾಮ ಸೆಂಟ್ರಲ್ ಕಾಲೇಜಿನ ವಿದ್ಯಾರ್ಥಿಗಳಾದ ಶಾಮಣ್ಣ ಬೇಟೆ ರಂಗಪ್ಪ, ಜಿ.ವಿ.ತಿರುಮಲಯ್ಯ, ಪ್ರಲ್ಹಾದ ಶೆಟ್ಟಿ ಹಾಗೂ ಗುಂಡಪ್ಪ ಎನ್ನುವ ನಾಲ್ಕು ವಿದ್ಯಾರ್ಥಿಗಳು ಹುತಾತ್ಮರಾದರು.

ಈ ಹುತಾತ್ಮರ ನೆನಪಿನಲ್ಲಿ ಬೆಂಗಳೂರು‌ ನಗರ ಪಾಲಿಕೆ 1972ರಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ‘ಹುತಾತ್ಮರ ನೆನಪಿನಲ್ಲಿ ಸ್ಮಾರಕ’ ಸ್ಥಾಪಿಸಿ ಅವರಿಗೆ ಗೌರವ ಸಲ್ಲಿಸಿದೆ. ಆದರೆ ಬೆಂಗಳೂರಿನ ಕೇಂದ್ರಸ್ಥಾನದಲ್ಲಿರುವ ಆ ಹುತಾತ್ಮ ಸ್ಮಾರಕದ ಸುತ್ತ ಇತ್ತೀಚಿನ ವರ್ಷಗಳಲ್ಲಿ ಎದ್ದಿರುವ ಅನಧಿಕೃತ ಕಟ್ಟಡದ ಪರಿಣಾಮ ಅಲ್ಲಿರುವ ‘ಹುತಾತ್ಮ ಸ್ಮಾರಕ’ವೇ ಸಾರ್ವಜನಿಕವಾಗಿ ಮರೆಯಾಗಿ ಹೋಗಿದೆ.

ಮೈಸೂರು ಬ್ಯಾಂಕ್ ವೃತ್ತದಲ್ಲಿ ಇರುವ ಈ ಹುತಾತ್ಮ ಸ್ಮಾರಕವನ್ನು ಸಂರಕ್ಷಿಸಬೇಕು ಮತ್ತು ಮೈಸೂರು ಬ್ಯಾಂಕ್ ವೃತ್ತವನ್ನು ‘ಹುತಾತ್ಮ ವೃತ್ತ’ವೆಂದು ಘೋಷಿಸಬೇಕೆಂದು ಈ ಹಿಂದೆಯೇ ಹಲವು ಬಾರಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಶತಾಯುಷಿ ಎಚ್.ಎಸ್.ದೊರೆಸ್ವಾಮಿಯವರ ನೇತೃತ್ವದಲ್ಲಿ ಹಲವು ಸ್ವಾತಂತ್ರ್ಯ ಹೋರಾಟಗಾರರು ಮತ್ತು ಹಲವು ಸಂಘಟನೆಗಳು ಚಳವಳಿ ನಡೆಸಿ ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿದ್ದರು. ಆದರೆ ಆ ಬಗ್ಗೆ ಇದುವರೆಗೂ ಯಾವುದೇ ಸೂಕ್ತ ಕ್ರಮವಹಿಸದಿರುವುದು ನೋವಿನ‌ ಸಂಗತಿ.

ಆದುದರಿಂದ ಈಗ ದೇಶ ‘ಆಜಾದಿ 75’ರ ಆಚರಣೆಯಲ್ಲಿದೆ. ಇಂತಹ ಸನ್ನಿವೇಶದಲ್ಲಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರಿಗೆ ಹೆಚ್ಚಿನ ಗೌರವ ನೀಡಬೇಕಿರುವುದು ನಮ್ಮೆಲ್ಲರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಅಲ್ಲದೆ ಆಧುನಿಕತೆಯ ಭರಾಟೆಯಲ್ಲಿ ಸಿಲುಕಿರುವ ವಿದ್ಯಾರ್ಥಿ ಯುವಜನರಿಗೆ ಹಾಗೂ ಸಾರ್ವಜನಿಕರಿಗೆ ಇಂತಹ ಹುತಾತ್ಮರ ಬಗ್ಗೆ ತಿಳಿಯಪಡಿಸುವುದು ತೀರ ಅವಶ್ಯವಿದೆ.

ಇದನ್ನೂ ಓದಿರಿ: ದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

ಈ ಹಿನ್ನಲೆಯಲ್ಲಿ ತಾವು ಬೆಂಗಳೂರಿನ ಕೇಂದ್ರಭಾಗದಲ್ಲಿರುವ ಆ ಹುತಾತ್ಮ ಸ್ಮಾರಕವನ್ನು ಸಾರ್ವಜನಿಕರ ಕಾಣುವಂತೆ ಮಾಡುವುದು ಹಾಗೂ ಅದರ ದರ್ಶನಕ್ಕೆ ಮುಕ್ತ ಲಭ್ಯವಾಗುವಾಗುವಂತೆ ಕೂಡಲೇ ಕ್ರಮವಹಿಸಬೇಕು ಎಂದು ಕೋರುತ್ತವೆ.

ನಮ್ಮ ಸಂಘಟನೆ ಹಾಗೂ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿ ವೇದಿಕೆ ಹಾಗೂ ಇತರೆ ಎಲ್ಲ ಜನಪರ ಸಂಘಟನೆಗಳೊಂದಿಗೆ ಸೇರಿ ಇದೇ ಆಗಸ್ಟ್ 9ರ ಕ್ವಿಟ್ ಇಂಡಿಯಾ ನೆನಪಿನಲ್ಲಿ ಒಂದು ಕಿರು ಕಾರ್ಯಕ್ರಮವನ್ನು ಹುತಾತ್ಮ ಸ್ಮಾರಕದ ಬಳಿ ಆಯೋಜಿಸಲು ನಿರ್ಧರಿಸಿದ್ದೇವೆ. ಅದಕ್ಕೆ ಅಲ್ಲಿ ಸೂಕ್ತ ಸ್ಥಳಾವಕಾಶ ಮಾಡಿಕೊಡಲು ಕೋರುತ್ತೇವೆ ಮತ್ತು ಮುಂದಿನ ತಮ್ಮ‌ಸಚಿವ ಸಂಪುಟದ ಸಭೆಯಲ್ಲಿ ಮೈಸೂರು ಬ್ಯಾಂಕ್ ವೃತ್ತವನ್ನು ‘ಹುತಾತ್ಮರ ವೃತ್ತ’ ಎಂದು ಅಧಿಕೃತವಾಗಿ ಘೋಷಿಸಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತಮ್ಮ ಅಮೂಲ್ಯ ಜೀವಗಳನ್ನು ತೆತ್ತ ಆ ಹುತಾತ್ಮರಿಗೆ ಸೂಕ್ತ ಗೌರವವನ್ನು ತಮ್ಮ ಸರ್ಕಾರ ಸಲ್ಲಿಸಲು ಕೋರುತ್ತಿದ್ದೇವೆ. ಈ ಬಗ್ಗೆ ತಮ್ಮ‌ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದೆ ಎಂದು‌ ಭಾವಿಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...