Homeಕರ್ನಾಟಕಬೆಂಗಳೂರು: ಹುತಾತ್ಮ ಚೌಕ ಸಂರಕ್ಷಣೆಗೆ ಆಗ್ರಹ; ಸಹಿ ಸಂಗ್ರಹ ಅಭಿಯಾನ ಆರಂಭ

ಬೆಂಗಳೂರು: ಹುತಾತ್ಮ ಚೌಕ ಸಂರಕ್ಷಣೆಗೆ ಆಗ್ರಹ; ಸಹಿ ಸಂಗ್ರಹ ಅಭಿಯಾನ ಆರಂಭ

- Advertisement -
- Advertisement -

ಬೆಂಗಳೂರಿನ ಮಧ್ಯದ ಮೈಸೂರು ಬ್ಯಾಂಕ್ ವೃತ್ತದಲ್ಲಿರುವ 1942ರ ಕ್ವಿಟ್ ಇಂಡಿಯಾ ಚಳವಳಿ ಹುತಾತ್ಮ ಸ್ಮಾರಕ ಸಂರಕ್ಷಣೆಗೆ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿ ವೇದಿಕೆ ಹಾಗೂ ಇತರೆ ಎಲ್ಲ ಜನಪರ ಸಂಘಟನೆಗಳು ಸಹಿ ಸಂಗ್ರಹ ಅಭಿಯಾನ ಆರಂಭಿಸಿವೆ.

ಸಹಿ ಸಂಗ್ರಹ ಮಾಡಿ ಜುಲೈ 20ರಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ನೀಡಲು ನಿರ್ಧರಿಸಲಾಗಿದೆ. ಈ ಅಭಿಯಾನಕ್ಕೆ ಕೈ ಜೋಡಿಸಿ, ಮನವಿ ಪತ್ರಕ್ಕೆ ತಮ್ಮ ಹೆಸರನ್ನು ಸೇರಿಸುವ ಮೂಲಕ ಸಾಮಾಜಿಕ ಮಾಧ್ಯದಲ್ಲಿ ಬೆಂಬಲ ಸೂಚಿಸುವಂತೆ ಜನಪರ ಹೋರಾಟಗಾರರು ಕೋರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಖಿಲ ಭಾರತ ಸ್ವಾತಂತ್ರ್ಯ ಯೋಧರ ಸಮಿತಿ ಪ್ರಧಾನ ಕಾರ್ಯದರ್ಶಿ ಅಪ್ಪರಾವ್ ನವಲೆ, ಸಮಿತಿ ಮಹಿಳಾ ವಿಭಾಗದ ಪ್ರಧಾನ ಕಾರ್ಯದರ್ಶಿ ಜಾನ್ಸಿರಾಣಿ, ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ, ಕೆಜೆವಿಎಸ್‌ನ ಈ ಬಸವರಾಜು, ಸಮತಾ ಸಂಘಟನೆ ಪ್ರಭಾ ಬೆಳವಂಗಲ, ಕರ್ನಾಟಕ ಜನಶಕ್ತಿಯ ಸಿರಿಮನೆ ನಾಗರಾಜ, ಸಮುದಾಯ ಸಾಂಸ್ಕೃತಿಕ ಸಂಘಟನೆಯ ಗುಂಡಣ್ಣ ಚಿಕ್ಕಮಗಳೂರು, ಸಾಮಾಜಿಕ ಹೋರಾಟಗಾರ ಎಚ್.ಎಂ.ವೆಂಕಟೇಶ್, ಸಾಮಾಜಿಕ ಕಾರ್ಯಕರ್ತ ಅಲ್ದೂರ್ ಶಿವರಾಜ್, ಭೂಮಿಕ ಪತ್ರಿಕೆಯ ಸಂಪಾದಕ ಲಕ್ಷ್ಮಣ್‌, ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಯು.ಬಸವರಾಜ್ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.

ಸಂಘಟನೆಗಳ ಮನವಿ ಪತ್ರದಲ್ಲಿ ಏನಿದೆ?

ನಮ್ಮ ದೇಶವು ‘ಆಜಾದಿ 75’ ವರ್ಷಾಚರಣೆಯನ್ನು ದೇಶದೆಲ್ಲಡೆ ಸಂಭ್ರಮದಿಂದ ಆಚರಿಸುತ್ತಿರುವುದು ತಮಗೆ ತಿಳಿದ ಸಂಗತಿಯಾಗಿದೆ.

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕರ್ನಾಟಕದ ಜನಸಾಮಾನ್ಯರು ‌ಕೂಡ ಸ್ವಾತಂತ್ರ್ಯಕ್ಕಾಗಿ ಅಂದಿನ ವಿವಿಧ ಪ್ರದೇಶಗಳಲ್ಲಿ ಹಲವು ರೀತಿಯ ತ್ಯಾಗ ಬಲಿದಾನದ ಹೋರಾಟಗಳನ್ನು ನಡೆಸಿದ್ದಾರೆ. ಅದರಲ್ಲಿ 1942 ರಲ್ಲಿ ‌ಮಹಾತ್ಮಾ ಗಾಂಧಿಜೀಯವರು ಕರೆ ನೀಡಿದ ‘ಕ್ವಿಟ್ ಇಂಡಿಯಾ’ ಚಳವಳಿ ಕರೆಗೆ ಓಗೊಟ್ಟು ಬೆಂಗಳೂರಿನ ‘ಸೆಂಟ್ರಲ್ ಕಾಲೇಜ್‌’ನ ವಿದ್ಯಾರ್ಥಿಗಳು ನಡೆಸಿದ ನಡೆಸಿದ ಹೋರಾಟ ಸ್ಪೂರ್ತಿದಾಯಕವಾದುದ್ದು.
ವಿದ್ಯಾರ್ಥಿಗಳು ಅಂದು ನಡೆಸಿದ ಹೋರಾಟದ ಮೇಲೆ ಅಂದಿನ ಬ್ರಿಟಿಷ್‌ ಪೊಲೀಸರು ಗುಂಡಿನ‌ದಾಳಿ ನಡೆಸಿದ ಪರಿಣಾಮ ಸೆಂಟ್ರಲ್ ಕಾಲೇಜಿನ ವಿದ್ಯಾರ್ಥಿಗಳಾದ ಶಾಮಣ್ಣ ಬೇಟೆ ರಂಗಪ್ಪ, ಜಿ.ವಿ.ತಿರುಮಲಯ್ಯ, ಪ್ರಲ್ಹಾದ ಶೆಟ್ಟಿ ಹಾಗೂ ಗುಂಡಪ್ಪ ಎನ್ನುವ ನಾಲ್ಕು ವಿದ್ಯಾರ್ಥಿಗಳು ಹುತಾತ್ಮರಾದರು.

ಈ ಹುತಾತ್ಮರ ನೆನಪಿನಲ್ಲಿ ಬೆಂಗಳೂರು‌ ನಗರ ಪಾಲಿಕೆ 1972ರಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ‘ಹುತಾತ್ಮರ ನೆನಪಿನಲ್ಲಿ ಸ್ಮಾರಕ’ ಸ್ಥಾಪಿಸಿ ಅವರಿಗೆ ಗೌರವ ಸಲ್ಲಿಸಿದೆ. ಆದರೆ ಬೆಂಗಳೂರಿನ ಕೇಂದ್ರಸ್ಥಾನದಲ್ಲಿರುವ ಆ ಹುತಾತ್ಮ ಸ್ಮಾರಕದ ಸುತ್ತ ಇತ್ತೀಚಿನ ವರ್ಷಗಳಲ್ಲಿ ಎದ್ದಿರುವ ಅನಧಿಕೃತ ಕಟ್ಟಡದ ಪರಿಣಾಮ ಅಲ್ಲಿರುವ ‘ಹುತಾತ್ಮ ಸ್ಮಾರಕ’ವೇ ಸಾರ್ವಜನಿಕವಾಗಿ ಮರೆಯಾಗಿ ಹೋಗಿದೆ.

ಮೈಸೂರು ಬ್ಯಾಂಕ್ ವೃತ್ತದಲ್ಲಿ ಇರುವ ಈ ಹುತಾತ್ಮ ಸ್ಮಾರಕವನ್ನು ಸಂರಕ್ಷಿಸಬೇಕು ಮತ್ತು ಮೈಸೂರು ಬ್ಯಾಂಕ್ ವೃತ್ತವನ್ನು ‘ಹುತಾತ್ಮ ವೃತ್ತ’ವೆಂದು ಘೋಷಿಸಬೇಕೆಂದು ಈ ಹಿಂದೆಯೇ ಹಲವು ಬಾರಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಶತಾಯುಷಿ ಎಚ್.ಎಸ್.ದೊರೆಸ್ವಾಮಿಯವರ ನೇತೃತ್ವದಲ್ಲಿ ಹಲವು ಸ್ವಾತಂತ್ರ್ಯ ಹೋರಾಟಗಾರರು ಮತ್ತು ಹಲವು ಸಂಘಟನೆಗಳು ಚಳವಳಿ ನಡೆಸಿ ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿದ್ದರು. ಆದರೆ ಆ ಬಗ್ಗೆ ಇದುವರೆಗೂ ಯಾವುದೇ ಸೂಕ್ತ ಕ್ರಮವಹಿಸದಿರುವುದು ನೋವಿನ‌ ಸಂಗತಿ.

ಆದುದರಿಂದ ಈಗ ದೇಶ ‘ಆಜಾದಿ 75’ರ ಆಚರಣೆಯಲ್ಲಿದೆ. ಇಂತಹ ಸನ್ನಿವೇಶದಲ್ಲಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರಿಗೆ ಹೆಚ್ಚಿನ ಗೌರವ ನೀಡಬೇಕಿರುವುದು ನಮ್ಮೆಲ್ಲರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಅಲ್ಲದೆ ಆಧುನಿಕತೆಯ ಭರಾಟೆಯಲ್ಲಿ ಸಿಲುಕಿರುವ ವಿದ್ಯಾರ್ಥಿ ಯುವಜನರಿಗೆ ಹಾಗೂ ಸಾರ್ವಜನಿಕರಿಗೆ ಇಂತಹ ಹುತಾತ್ಮರ ಬಗ್ಗೆ ತಿಳಿಯಪಡಿಸುವುದು ತೀರ ಅವಶ್ಯವಿದೆ.

ಇದನ್ನೂ ಓದಿರಿ: ದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

ಈ ಹಿನ್ನಲೆಯಲ್ಲಿ ತಾವು ಬೆಂಗಳೂರಿನ ಕೇಂದ್ರಭಾಗದಲ್ಲಿರುವ ಆ ಹುತಾತ್ಮ ಸ್ಮಾರಕವನ್ನು ಸಾರ್ವಜನಿಕರ ಕಾಣುವಂತೆ ಮಾಡುವುದು ಹಾಗೂ ಅದರ ದರ್ಶನಕ್ಕೆ ಮುಕ್ತ ಲಭ್ಯವಾಗುವಾಗುವಂತೆ ಕೂಡಲೇ ಕ್ರಮವಹಿಸಬೇಕು ಎಂದು ಕೋರುತ್ತವೆ.

ನಮ್ಮ ಸಂಘಟನೆ ಹಾಗೂ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿ ವೇದಿಕೆ ಹಾಗೂ ಇತರೆ ಎಲ್ಲ ಜನಪರ ಸಂಘಟನೆಗಳೊಂದಿಗೆ ಸೇರಿ ಇದೇ ಆಗಸ್ಟ್ 9ರ ಕ್ವಿಟ್ ಇಂಡಿಯಾ ನೆನಪಿನಲ್ಲಿ ಒಂದು ಕಿರು ಕಾರ್ಯಕ್ರಮವನ್ನು ಹುತಾತ್ಮ ಸ್ಮಾರಕದ ಬಳಿ ಆಯೋಜಿಸಲು ನಿರ್ಧರಿಸಿದ್ದೇವೆ. ಅದಕ್ಕೆ ಅಲ್ಲಿ ಸೂಕ್ತ ಸ್ಥಳಾವಕಾಶ ಮಾಡಿಕೊಡಲು ಕೋರುತ್ತೇವೆ ಮತ್ತು ಮುಂದಿನ ತಮ್ಮ‌ಸಚಿವ ಸಂಪುಟದ ಸಭೆಯಲ್ಲಿ ಮೈಸೂರು ಬ್ಯಾಂಕ್ ವೃತ್ತವನ್ನು ‘ಹುತಾತ್ಮರ ವೃತ್ತ’ ಎಂದು ಅಧಿಕೃತವಾಗಿ ಘೋಷಿಸಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತಮ್ಮ ಅಮೂಲ್ಯ ಜೀವಗಳನ್ನು ತೆತ್ತ ಆ ಹುತಾತ್ಮರಿಗೆ ಸೂಕ್ತ ಗೌರವವನ್ನು ತಮ್ಮ ಸರ್ಕಾರ ಸಲ್ಲಿಸಲು ಕೋರುತ್ತಿದ್ದೇವೆ. ಈ ಬಗ್ಗೆ ತಮ್ಮ‌ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದೆ ಎಂದು‌ ಭಾವಿಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...