Homeಕರ್ನಾಟಕಬೆಂಗಳೂರು: ಹುತಾತ್ಮ ಚೌಕ ಸಂರಕ್ಷಣೆಗೆ ಆಗ್ರಹ; ಸಹಿ ಸಂಗ್ರಹ ಅಭಿಯಾನ ಆರಂಭ

ಬೆಂಗಳೂರು: ಹುತಾತ್ಮ ಚೌಕ ಸಂರಕ್ಷಣೆಗೆ ಆಗ್ರಹ; ಸಹಿ ಸಂಗ್ರಹ ಅಭಿಯಾನ ಆರಂಭ

- Advertisement -
- Advertisement -

ಬೆಂಗಳೂರಿನ ಮಧ್ಯದ ಮೈಸೂರು ಬ್ಯಾಂಕ್ ವೃತ್ತದಲ್ಲಿರುವ 1942ರ ಕ್ವಿಟ್ ಇಂಡಿಯಾ ಚಳವಳಿ ಹುತಾತ್ಮ ಸ್ಮಾರಕ ಸಂರಕ್ಷಣೆಗೆ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿ ವೇದಿಕೆ ಹಾಗೂ ಇತರೆ ಎಲ್ಲ ಜನಪರ ಸಂಘಟನೆಗಳು ಸಹಿ ಸಂಗ್ರಹ ಅಭಿಯಾನ ಆರಂಭಿಸಿವೆ.

ಸಹಿ ಸಂಗ್ರಹ ಮಾಡಿ ಜುಲೈ 20ರಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ನೀಡಲು ನಿರ್ಧರಿಸಲಾಗಿದೆ. ಈ ಅಭಿಯಾನಕ್ಕೆ ಕೈ ಜೋಡಿಸಿ, ಮನವಿ ಪತ್ರಕ್ಕೆ ತಮ್ಮ ಹೆಸರನ್ನು ಸೇರಿಸುವ ಮೂಲಕ ಸಾಮಾಜಿಕ ಮಾಧ್ಯದಲ್ಲಿ ಬೆಂಬಲ ಸೂಚಿಸುವಂತೆ ಜನಪರ ಹೋರಾಟಗಾರರು ಕೋರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಖಿಲ ಭಾರತ ಸ್ವಾತಂತ್ರ್ಯ ಯೋಧರ ಸಮಿತಿ ಪ್ರಧಾನ ಕಾರ್ಯದರ್ಶಿ ಅಪ್ಪರಾವ್ ನವಲೆ, ಸಮಿತಿ ಮಹಿಳಾ ವಿಭಾಗದ ಪ್ರಧಾನ ಕಾರ್ಯದರ್ಶಿ ಜಾನ್ಸಿರಾಣಿ, ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ, ಕೆಜೆವಿಎಸ್‌ನ ಈ ಬಸವರಾಜು, ಸಮತಾ ಸಂಘಟನೆ ಪ್ರಭಾ ಬೆಳವಂಗಲ, ಕರ್ನಾಟಕ ಜನಶಕ್ತಿಯ ಸಿರಿಮನೆ ನಾಗರಾಜ, ಸಮುದಾಯ ಸಾಂಸ್ಕೃತಿಕ ಸಂಘಟನೆಯ ಗುಂಡಣ್ಣ ಚಿಕ್ಕಮಗಳೂರು, ಸಾಮಾಜಿಕ ಹೋರಾಟಗಾರ ಎಚ್.ಎಂ.ವೆಂಕಟೇಶ್, ಸಾಮಾಜಿಕ ಕಾರ್ಯಕರ್ತ ಅಲ್ದೂರ್ ಶಿವರಾಜ್, ಭೂಮಿಕ ಪತ್ರಿಕೆಯ ಸಂಪಾದಕ ಲಕ್ಷ್ಮಣ್‌, ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಯು.ಬಸವರಾಜ್ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.

ಸಂಘಟನೆಗಳ ಮನವಿ ಪತ್ರದಲ್ಲಿ ಏನಿದೆ?

ನಮ್ಮ ದೇಶವು ‘ಆಜಾದಿ 75’ ವರ್ಷಾಚರಣೆಯನ್ನು ದೇಶದೆಲ್ಲಡೆ ಸಂಭ್ರಮದಿಂದ ಆಚರಿಸುತ್ತಿರುವುದು ತಮಗೆ ತಿಳಿದ ಸಂಗತಿಯಾಗಿದೆ.

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕರ್ನಾಟಕದ ಜನಸಾಮಾನ್ಯರು ‌ಕೂಡ ಸ್ವಾತಂತ್ರ್ಯಕ್ಕಾಗಿ ಅಂದಿನ ವಿವಿಧ ಪ್ರದೇಶಗಳಲ್ಲಿ ಹಲವು ರೀತಿಯ ತ್ಯಾಗ ಬಲಿದಾನದ ಹೋರಾಟಗಳನ್ನು ನಡೆಸಿದ್ದಾರೆ. ಅದರಲ್ಲಿ 1942 ರಲ್ಲಿ ‌ಮಹಾತ್ಮಾ ಗಾಂಧಿಜೀಯವರು ಕರೆ ನೀಡಿದ ‘ಕ್ವಿಟ್ ಇಂಡಿಯಾ’ ಚಳವಳಿ ಕರೆಗೆ ಓಗೊಟ್ಟು ಬೆಂಗಳೂರಿನ ‘ಸೆಂಟ್ರಲ್ ಕಾಲೇಜ್‌’ನ ವಿದ್ಯಾರ್ಥಿಗಳು ನಡೆಸಿದ ನಡೆಸಿದ ಹೋರಾಟ ಸ್ಪೂರ್ತಿದಾಯಕವಾದುದ್ದು.
ವಿದ್ಯಾರ್ಥಿಗಳು ಅಂದು ನಡೆಸಿದ ಹೋರಾಟದ ಮೇಲೆ ಅಂದಿನ ಬ್ರಿಟಿಷ್‌ ಪೊಲೀಸರು ಗುಂಡಿನ‌ದಾಳಿ ನಡೆಸಿದ ಪರಿಣಾಮ ಸೆಂಟ್ರಲ್ ಕಾಲೇಜಿನ ವಿದ್ಯಾರ್ಥಿಗಳಾದ ಶಾಮಣ್ಣ ಬೇಟೆ ರಂಗಪ್ಪ, ಜಿ.ವಿ.ತಿರುಮಲಯ್ಯ, ಪ್ರಲ್ಹಾದ ಶೆಟ್ಟಿ ಹಾಗೂ ಗುಂಡಪ್ಪ ಎನ್ನುವ ನಾಲ್ಕು ವಿದ್ಯಾರ್ಥಿಗಳು ಹುತಾತ್ಮರಾದರು.

ಈ ಹುತಾತ್ಮರ ನೆನಪಿನಲ್ಲಿ ಬೆಂಗಳೂರು‌ ನಗರ ಪಾಲಿಕೆ 1972ರಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ‘ಹುತಾತ್ಮರ ನೆನಪಿನಲ್ಲಿ ಸ್ಮಾರಕ’ ಸ್ಥಾಪಿಸಿ ಅವರಿಗೆ ಗೌರವ ಸಲ್ಲಿಸಿದೆ. ಆದರೆ ಬೆಂಗಳೂರಿನ ಕೇಂದ್ರಸ್ಥಾನದಲ್ಲಿರುವ ಆ ಹುತಾತ್ಮ ಸ್ಮಾರಕದ ಸುತ್ತ ಇತ್ತೀಚಿನ ವರ್ಷಗಳಲ್ಲಿ ಎದ್ದಿರುವ ಅನಧಿಕೃತ ಕಟ್ಟಡದ ಪರಿಣಾಮ ಅಲ್ಲಿರುವ ‘ಹುತಾತ್ಮ ಸ್ಮಾರಕ’ವೇ ಸಾರ್ವಜನಿಕವಾಗಿ ಮರೆಯಾಗಿ ಹೋಗಿದೆ.

ಮೈಸೂರು ಬ್ಯಾಂಕ್ ವೃತ್ತದಲ್ಲಿ ಇರುವ ಈ ಹುತಾತ್ಮ ಸ್ಮಾರಕವನ್ನು ಸಂರಕ್ಷಿಸಬೇಕು ಮತ್ತು ಮೈಸೂರು ಬ್ಯಾಂಕ್ ವೃತ್ತವನ್ನು ‘ಹುತಾತ್ಮ ವೃತ್ತ’ವೆಂದು ಘೋಷಿಸಬೇಕೆಂದು ಈ ಹಿಂದೆಯೇ ಹಲವು ಬಾರಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಶತಾಯುಷಿ ಎಚ್.ಎಸ್.ದೊರೆಸ್ವಾಮಿಯವರ ನೇತೃತ್ವದಲ್ಲಿ ಹಲವು ಸ್ವಾತಂತ್ರ್ಯ ಹೋರಾಟಗಾರರು ಮತ್ತು ಹಲವು ಸಂಘಟನೆಗಳು ಚಳವಳಿ ನಡೆಸಿ ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿದ್ದರು. ಆದರೆ ಆ ಬಗ್ಗೆ ಇದುವರೆಗೂ ಯಾವುದೇ ಸೂಕ್ತ ಕ್ರಮವಹಿಸದಿರುವುದು ನೋವಿನ‌ ಸಂಗತಿ.

ಆದುದರಿಂದ ಈಗ ದೇಶ ‘ಆಜಾದಿ 75’ರ ಆಚರಣೆಯಲ್ಲಿದೆ. ಇಂತಹ ಸನ್ನಿವೇಶದಲ್ಲಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರಿಗೆ ಹೆಚ್ಚಿನ ಗೌರವ ನೀಡಬೇಕಿರುವುದು ನಮ್ಮೆಲ್ಲರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಅಲ್ಲದೆ ಆಧುನಿಕತೆಯ ಭರಾಟೆಯಲ್ಲಿ ಸಿಲುಕಿರುವ ವಿದ್ಯಾರ್ಥಿ ಯುವಜನರಿಗೆ ಹಾಗೂ ಸಾರ್ವಜನಿಕರಿಗೆ ಇಂತಹ ಹುತಾತ್ಮರ ಬಗ್ಗೆ ತಿಳಿಯಪಡಿಸುವುದು ತೀರ ಅವಶ್ಯವಿದೆ.

ಇದನ್ನೂ ಓದಿರಿ: ದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

ಈ ಹಿನ್ನಲೆಯಲ್ಲಿ ತಾವು ಬೆಂಗಳೂರಿನ ಕೇಂದ್ರಭಾಗದಲ್ಲಿರುವ ಆ ಹುತಾತ್ಮ ಸ್ಮಾರಕವನ್ನು ಸಾರ್ವಜನಿಕರ ಕಾಣುವಂತೆ ಮಾಡುವುದು ಹಾಗೂ ಅದರ ದರ್ಶನಕ್ಕೆ ಮುಕ್ತ ಲಭ್ಯವಾಗುವಾಗುವಂತೆ ಕೂಡಲೇ ಕ್ರಮವಹಿಸಬೇಕು ಎಂದು ಕೋರುತ್ತವೆ.

ನಮ್ಮ ಸಂಘಟನೆ ಹಾಗೂ ಸ್ವಾತಂತ್ರ್ಯ ಸೇನಾನಿ ಎಚ್.ಎಸ್.ದೊರೆಸ್ವಾಮಿ ವೇದಿಕೆ ಹಾಗೂ ಇತರೆ ಎಲ್ಲ ಜನಪರ ಸಂಘಟನೆಗಳೊಂದಿಗೆ ಸೇರಿ ಇದೇ ಆಗಸ್ಟ್ 9ರ ಕ್ವಿಟ್ ಇಂಡಿಯಾ ನೆನಪಿನಲ್ಲಿ ಒಂದು ಕಿರು ಕಾರ್ಯಕ್ರಮವನ್ನು ಹುತಾತ್ಮ ಸ್ಮಾರಕದ ಬಳಿ ಆಯೋಜಿಸಲು ನಿರ್ಧರಿಸಿದ್ದೇವೆ. ಅದಕ್ಕೆ ಅಲ್ಲಿ ಸೂಕ್ತ ಸ್ಥಳಾವಕಾಶ ಮಾಡಿಕೊಡಲು ಕೋರುತ್ತೇವೆ ಮತ್ತು ಮುಂದಿನ ತಮ್ಮ‌ಸಚಿವ ಸಂಪುಟದ ಸಭೆಯಲ್ಲಿ ಮೈಸೂರು ಬ್ಯಾಂಕ್ ವೃತ್ತವನ್ನು ‘ಹುತಾತ್ಮರ ವೃತ್ತ’ ಎಂದು ಅಧಿಕೃತವಾಗಿ ಘೋಷಿಸಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತಮ್ಮ ಅಮೂಲ್ಯ ಜೀವಗಳನ್ನು ತೆತ್ತ ಆ ಹುತಾತ್ಮರಿಗೆ ಸೂಕ್ತ ಗೌರವವನ್ನು ತಮ್ಮ ಸರ್ಕಾರ ಸಲ್ಲಿಸಲು ಕೋರುತ್ತಿದ್ದೇವೆ. ಈ ಬಗ್ಗೆ ತಮ್ಮ‌ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದೆ ಎಂದು‌ ಭಾವಿಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...