Homeಕರ್ನಾಟಕಬೆಂಗಳೂರು: ಮುಖ ಚಹರೆ ಗುರುತಿಸುವಿಕೆ ರದ್ದುಪಡಿಸಲು ಆಗ್ರಹ

ಬೆಂಗಳೂರು: ಮುಖ ಚಹರೆ ಗುರುತಿಸುವಿಕೆ ರದ್ದುಪಡಿಸಲು ಆಗ್ರಹ

- Advertisement -
- Advertisement -

ಶಿಕ್ಷಕರ ಹಾಜರಾತಿ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಮುಂತಾದವುಗಳಿಗೆ ಮುಖ ಚಹರೆ ಗುರುತಿಸುವಿಕೆ (ಎಫ್‌ಆರ್‌ಎಸ್‌) ಕಡ್ಡಾಯಗೊಳಿಸಿರುವುದನ್ನು ಕೈಬಿಡಲು ವಿವಿಧ ಕ್ಷೇತ್ರದ ತಜ್ಞರು ಒತ್ತಾಯಿಸಿದರು.

ಮಂಗಳವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ಜಂಟಿಯಾಗಿ ಮುಖ ಚಹರೆ ಗುರುತಿಸುವಿಕೆ ವ್ಯವಸ್ಥೆಯ ಅನುಷ್ಠಾನದಿಂದ ಆಹಾರ ಮತ್ತು ಶಿಕ್ಷಣದ ಹಕ್ಕಿನ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದರ ಕುರಿತು ಆಯೋಜಿಸಿದ್ದ ಸಮಾಲೋಚನಾ ಸಭೆಯಲ್ಲಿ ಎಫ್‌ಆರ್‌ಎಸ್ ಜಾರಿಗೆ ವಿರೋಧ ವ್ಯಕ್ತವಾಯಿತು.

ಒಂದೆಡೆ, ಕೇಂದ್ರ ಸರ್ಕಾರ ಪಿಎಂ-ಪೋಷಣ್‌ ಯೋಜನೆಯಡಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರ ನೀಡಲು ಮುಖ ಚಹರೆ ಗುರುತಿಸುವಿಕೆ ವ್ಯವಸ್ಥೆ ಜಾರಿಗೊಳಿಸಿದೆ. ಮತ್ತೊಂದೆಡೆ, ರಾಜ್ಯ ಸರ್ಕಾರವು ಎಫ್‌ಆರ್‌ಎಸ್ ಜಾರಿಗೆ ತರುವ ಮುನ್ನ ಸಾರ್ವಜನಿಕ ಚರ್ಚೆಗಳನ್ನಾಗಲೀ, ಪಾಲುದಾರರ ಅಭಿಪ್ರಾಯವನ್ನಾಗಲಿ ಆಲಿಸಿಲ್ಲ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಅಂಗನವಾಡಿ ಕಾರ್ಯಕರ್ತೆಯರು. ಚಿಂತಕರು, ಸಾಮಾಜಿಕ ಹೋರಾಟಗಾರರು, ವಕೀಲರು, ಸ್ವತಂತ್ರ ತಂತ್ರಾಂಶ ಹೋರಾಟಗಾರರು ಮತ್ತು ನಾಗರಿಕ ಸಮಾಜದ ಪ್ರತಿನಿಧಿಗಳು ಅಸಮಾಧಾನ ವ್ಯಕ್ತಪಡಿಸಿದರು.

ಸಭೆಯಲ್ಲಿ ಮಾತನಾಡಿದ ಆಹಾರ ಹಕ್ಕು ಕಾರ್ಯಕರ್ತೆ ಮತ್ತು ಶಿಕ್ಷಣ ತಜ್ಞೆ ಡಾ. ದೀಪಾ ಸಿನ್ಹಾ, ಸಮಗ್ರ ಶಿಶು ಅಭಿವೃದ್ಧಿ ಸೇವೆಗಳಲ್ಲಿ (ಐಸಿಡಿಎಸ್) ಮುಖ ಚಹರೆ ಗುರುತಿಸುವಿಕೆ ಪರಿಚಯಿಸುತ್ತಿರುವುದು ಸಾಮಾಜಿಕ ಭದ್ರತಾ ಯೋಜನೆಗಳ ಮೇಲೆ ನಡೆಸಲಾಗುತ್ತಿರುವ ಸರಣಿ ದಾಳಿಗಳಲ್ಲಿನ ಒಂದು. ಎಸ್‌ಎನ್‌ಪಿ ಮತ್ತು ಟೇಕ್ ಹೋಮ್ ರೇಷನ್‌ಗಳ ಗುಣಮಟ್ಟ ಕುಸಿಯುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಲು ಮೀಸಲಿಟ್ಟಿರುವ ಬಜೆಟ್ ಹೆಚ್ಚಿಸುವ ಬದಲು, ಎಫ್‌ಆರ್‌ಎಸ್‌ ಹೆಸರಿನಲ್ಲಿ ಫಲಾನುಭವಿಗಳನ್ನು ಹೊರದೂಡುವ ಮಾರ್ಗಗಳನ್ನು ಸರ್ಕಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಅಭಿಪ್ರಾಯಪಟ್ಟರು.

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಅಧ್ಯಾಪಕ ಡಾ. ರಾಜೇಂದ್ರನ್ ನಾರಾಯಣನ್ ಮಾತನಾಡಿ, ಎಫ್‌ಆರ್‌ಎಸ್‌ ಒಂದು ಕಣ್ಣಾವಲು ವ್ಯವಸ್ಥೆಯಾಗಿದೆ. ಇದನ್ನು ಮೊಟ್ಟ ಮೊದಲು ರೂಪಿಸಿ, ಜಾರಿಗೊಳಿಸಿದ ಸ್ಕ್ಯಾನ್ ಫ್ರಾನ್ಸಿಸ್ಕೋದಲ್ಲಿಯೇ ಈ ತಂತ್ರಜ್ಞಾನವನ್ನು ಬಳಸದಿರಲು ನಿರ್ಣಯ ಕೈಗೊಳ್ಳಲಾಗಿದೆ. ಹೀಗಿರುವಾಗ ಇದನ್ನು ನಮ್ಮ ಹಳ್ಳಿಗಳಲ್ಲೇಕೆ ಜಾರಿಗೊಳಿಸಬೇಕು ಎಂದು ಪ್ರಶ್ನಿಸಿದರು. ಎಫ್‌ಆರ್‌ಎಸ್‌ ಯೋಜನೆಯು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ಘನತೆಯ ಸಾಂವಿಧಾನಿಕ ಮೌಲ್ಯಗಳ ಮೇಲಿನ ದಾಳಿಯೂ ಆಗಿದೆ ಎಂದು ಹೇಳಿದರು.

ಅಖಿಲ ಕರ್ನಾಟಕ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್. ವರಲಕ್ಷ್ಮಿ ಮಾತನಾಡಿ, ಸಾರ್ವತ್ರಿಕವಾಗಿರಬೇಕಾದ ಐಸಿಡಿಎಸ್‌ ಯೋಜನೆಯನ್ನು ಕೆಲವೇ ಕೆಲವು ಫಲಾನುಭವಿಗಳಿಗೆ ಸೀಮಿತಗೊಳಿಸುವ ಹುನ್ನಾರ ಇದಾಗಿದೆ. ಎಫ್‌ಆರ್‌ಎಸ್‌ ವ್ಯವಸ್ಥೆಯನ್ನು ಜಾರಿಗೆ ತರುವಲ್ಲಿ ಬಹಳ ಸಮಸ್ಯೆಗಳು ತಲೆದೋರಿದ್ದು, ಅದನ್ನು ಜಾರಿಗೆ ತರಲು ಸಾಧ್ಯವಾಗದ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಇಲಾಖೆಯು ಕ್ರಮಗಳನ್ನು ಜರುಗಿಸಲು ಮುಂದಾಗಿದೆ. ಅಲ್ಲದೇ, ಎಫ್‌ಆರ್‌ಎಸ್‌ ಯೋಜನೆಯು ಅಂಗನವಾಡಿ ನೌಕರರ ಕೆಲಸದ ಒತ್ತಡವನ್ನು ಅತೀವವಾಗಿ ಹೆಚ್ಚಿಸಿದೆ ಎಂದರು.

ವಕೀಲ ವಿನಯ್ ಶ್ರೀನಿವಾಸ್ ಮಾತನಾಡಿ, ಈಗ ಜಾರಿಗೊಳಿಸಲಾಗುತ್ತಿರುವ ಎಫ್‌ಆರ್‌ಎಸ್‌ ತಂತ್ರಜ್ಞಾನವು ಕೆ.ಎಸ್. ಪುಟ್ಟಸ್ವಾಮಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಗೌಪ್ಯತೆಯ ಹಕ್ಕಿನ ಕುರಿತಾದ ಸುಪ್ರೀಂ ಕೋರ್ಟ್ ತೀರ್ಪುನ್ನು ಮತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ತಿಳಿಸಿದರು.

ಸ್ಥಳೀಯ ಪೂರೈಕೆ ಸರಪಳಿ (Local Supply Chain)ಗಳನ್ನು ಮುರಿದು, ಫೋರ್ಟಿಫೈಡ್ ಆಹಾರದ ಕಡೆಗೆ ದಾಪುಗಾಲಿಡಲು ಡೇಟಾವನ್ನು ಎಫ್‌ಆರ್‌ಎಸ್‌ ಮೂಲಕ ಸಂಗ್ರಹಿಸಲಾಗುತ್ತಿದೆ ಎಂಬುದರ ಬಗ್ಗೆ ಮತ್ತು ಡೇಟಾ ಗೌಪ್ಯತೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಫ್ರೀ ಸಾಫ್ಟ್‌ವೇರ್ ಮೂವ್‌ಮೆಂಟ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ನವೀನ್ ಮಾತನಾಡಿದರು.

ಭಾರತ ಜ್ಞಾನ ವಿಜ್ಞಾನ ಸಮಿತಿ ಕರ್ನಾಟಕದ ಉಪಾಧ್ಯಕ್ಷ ಶುಭಂಕರ್ ಚಕ್ರವರ್ತಿ ಮಾತನಾಡಿ, ಶಿಕ್ಷಕರ ಹಾಜರಾತಿಯನ್ನು ಟ್ರ್ಯಾಕ್ ಮಾಡಲು ಶಿಕ್ಷಣ ಇಲಾಖೆಯು ಜುಲೈ 1ರಿಂದ ಎಫ್‌ಆರ್‌ಎಸ್‌ ಪರಿಚಯಿಸಿದೆ. ಅತ್ಯಂತ ಕಡಿಮೆ ಶಿಕ್ಷಕರ ಗೈರುಹಾಜರಿ ಪ್ರಮಾಣ ಹೊಂದಿರುವ ಕರ್ನಾಟಕದಲ್ಲಿ ಇಂತಹ ಯೋಜನೆಗಳ ಅವಶ್ಯಕತೆ ಏನಿದೆ ಎಂದು ಪ್ರಶ್ನಿಸಿದರು. ನಾಗರಿಕ ಸಮಾಜವು ಈ ಬಗ್ಗೆ ಒಗ್ಗೂಡಿ ಎಫ್‌ಆರ್‌ಎಸ್‌ ತಂತ್ರಜ್ಞಾನದ ಅನುಷ್ಠಾನದ ವಿರುದ್ಧ ಹೋರಾಡಬೇಕು ಎಂದು ಅವರು ಕರೆ ನೀಡಿದರು.

ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾದ ಮಗು ಮತ್ತು ಕಾನೂನು ಕೇಂದ್ರದ ಸುಧಾ, ಬೆಂಗಳೂರಿನ ಸಿವಿಕ್ ಸಂಸ್ಥೆಯ ಕಾತ್ಯಾಯಿನಿ ಚಾಮರಾಜ್ ಮತ್ತಿತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಧರ್ಮಸ್ಥಳ ಸುದ್ದಿ ಪ್ರಕಟಿಸದಂತೆ ತಡೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಯೂಟ್ಯೂಬ್ ಚಾನೆಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...