Homeಕರ್ನಾಟಕಬೆಂಗಳೂರು: ಮುಖ ಚಹರೆ ಗುರುತಿಸುವಿಕೆ ರದ್ದುಪಡಿಸಲು ಆಗ್ರಹ

ಬೆಂಗಳೂರು: ಮುಖ ಚಹರೆ ಗುರುತಿಸುವಿಕೆ ರದ್ದುಪಡಿಸಲು ಆಗ್ರಹ

- Advertisement -
- Advertisement -

ಶಿಕ್ಷಕರ ಹಾಜರಾತಿ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಮುಂತಾದವುಗಳಿಗೆ ಮುಖ ಚಹರೆ ಗುರುತಿಸುವಿಕೆ (ಎಫ್‌ಆರ್‌ಎಸ್‌) ಕಡ್ಡಾಯಗೊಳಿಸಿರುವುದನ್ನು ಕೈಬಿಡಲು ವಿವಿಧ ಕ್ಷೇತ್ರದ ತಜ್ಞರು ಒತ್ತಾಯಿಸಿದರು.

ಮಂಗಳವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ಜಂಟಿಯಾಗಿ ಮುಖ ಚಹರೆ ಗುರುತಿಸುವಿಕೆ ವ್ಯವಸ್ಥೆಯ ಅನುಷ್ಠಾನದಿಂದ ಆಹಾರ ಮತ್ತು ಶಿಕ್ಷಣದ ಹಕ್ಕಿನ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದರ ಕುರಿತು ಆಯೋಜಿಸಿದ್ದ ಸಮಾಲೋಚನಾ ಸಭೆಯಲ್ಲಿ ಎಫ್‌ಆರ್‌ಎಸ್ ಜಾರಿಗೆ ವಿರೋಧ ವ್ಯಕ್ತವಾಯಿತು.

ಒಂದೆಡೆ, ಕೇಂದ್ರ ಸರ್ಕಾರ ಪಿಎಂ-ಪೋಷಣ್‌ ಯೋಜನೆಯಡಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರ ನೀಡಲು ಮುಖ ಚಹರೆ ಗುರುತಿಸುವಿಕೆ ವ್ಯವಸ್ಥೆ ಜಾರಿಗೊಳಿಸಿದೆ. ಮತ್ತೊಂದೆಡೆ, ರಾಜ್ಯ ಸರ್ಕಾರವು ಎಫ್‌ಆರ್‌ಎಸ್ ಜಾರಿಗೆ ತರುವ ಮುನ್ನ ಸಾರ್ವಜನಿಕ ಚರ್ಚೆಗಳನ್ನಾಗಲೀ, ಪಾಲುದಾರರ ಅಭಿಪ್ರಾಯವನ್ನಾಗಲಿ ಆಲಿಸಿಲ್ಲ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಅಂಗನವಾಡಿ ಕಾರ್ಯಕರ್ತೆಯರು. ಚಿಂತಕರು, ಸಾಮಾಜಿಕ ಹೋರಾಟಗಾರರು, ವಕೀಲರು, ಸ್ವತಂತ್ರ ತಂತ್ರಾಂಶ ಹೋರಾಟಗಾರರು ಮತ್ತು ನಾಗರಿಕ ಸಮಾಜದ ಪ್ರತಿನಿಧಿಗಳು ಅಸಮಾಧಾನ ವ್ಯಕ್ತಪಡಿಸಿದರು.

ಸಭೆಯಲ್ಲಿ ಮಾತನಾಡಿದ ಆಹಾರ ಹಕ್ಕು ಕಾರ್ಯಕರ್ತೆ ಮತ್ತು ಶಿಕ್ಷಣ ತಜ್ಞೆ ಡಾ. ದೀಪಾ ಸಿನ್ಹಾ, ಸಮಗ್ರ ಶಿಶು ಅಭಿವೃದ್ಧಿ ಸೇವೆಗಳಲ್ಲಿ (ಐಸಿಡಿಎಸ್) ಮುಖ ಚಹರೆ ಗುರುತಿಸುವಿಕೆ ಪರಿಚಯಿಸುತ್ತಿರುವುದು ಸಾಮಾಜಿಕ ಭದ್ರತಾ ಯೋಜನೆಗಳ ಮೇಲೆ ನಡೆಸಲಾಗುತ್ತಿರುವ ಸರಣಿ ದಾಳಿಗಳಲ್ಲಿನ ಒಂದು. ಎಸ್‌ಎನ್‌ಪಿ ಮತ್ತು ಟೇಕ್ ಹೋಮ್ ರೇಷನ್‌ಗಳ ಗುಣಮಟ್ಟ ಕುಸಿಯುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಲು ಮೀಸಲಿಟ್ಟಿರುವ ಬಜೆಟ್ ಹೆಚ್ಚಿಸುವ ಬದಲು, ಎಫ್‌ಆರ್‌ಎಸ್‌ ಹೆಸರಿನಲ್ಲಿ ಫಲಾನುಭವಿಗಳನ್ನು ಹೊರದೂಡುವ ಮಾರ್ಗಗಳನ್ನು ಸರ್ಕಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಅಭಿಪ್ರಾಯಪಟ್ಟರು.

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಅಧ್ಯಾಪಕ ಡಾ. ರಾಜೇಂದ್ರನ್ ನಾರಾಯಣನ್ ಮಾತನಾಡಿ, ಎಫ್‌ಆರ್‌ಎಸ್‌ ಒಂದು ಕಣ್ಣಾವಲು ವ್ಯವಸ್ಥೆಯಾಗಿದೆ. ಇದನ್ನು ಮೊಟ್ಟ ಮೊದಲು ರೂಪಿಸಿ, ಜಾರಿಗೊಳಿಸಿದ ಸ್ಕ್ಯಾನ್ ಫ್ರಾನ್ಸಿಸ್ಕೋದಲ್ಲಿಯೇ ಈ ತಂತ್ರಜ್ಞಾನವನ್ನು ಬಳಸದಿರಲು ನಿರ್ಣಯ ಕೈಗೊಳ್ಳಲಾಗಿದೆ. ಹೀಗಿರುವಾಗ ಇದನ್ನು ನಮ್ಮ ಹಳ್ಳಿಗಳಲ್ಲೇಕೆ ಜಾರಿಗೊಳಿಸಬೇಕು ಎಂದು ಪ್ರಶ್ನಿಸಿದರು. ಎಫ್‌ಆರ್‌ಎಸ್‌ ಯೋಜನೆಯು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ಘನತೆಯ ಸಾಂವಿಧಾನಿಕ ಮೌಲ್ಯಗಳ ಮೇಲಿನ ದಾಳಿಯೂ ಆಗಿದೆ ಎಂದು ಹೇಳಿದರು.

ಅಖಿಲ ಕರ್ನಾಟಕ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್. ವರಲಕ್ಷ್ಮಿ ಮಾತನಾಡಿ, ಸಾರ್ವತ್ರಿಕವಾಗಿರಬೇಕಾದ ಐಸಿಡಿಎಸ್‌ ಯೋಜನೆಯನ್ನು ಕೆಲವೇ ಕೆಲವು ಫಲಾನುಭವಿಗಳಿಗೆ ಸೀಮಿತಗೊಳಿಸುವ ಹುನ್ನಾರ ಇದಾಗಿದೆ. ಎಫ್‌ಆರ್‌ಎಸ್‌ ವ್ಯವಸ್ಥೆಯನ್ನು ಜಾರಿಗೆ ತರುವಲ್ಲಿ ಬಹಳ ಸಮಸ್ಯೆಗಳು ತಲೆದೋರಿದ್ದು, ಅದನ್ನು ಜಾರಿಗೆ ತರಲು ಸಾಧ್ಯವಾಗದ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಇಲಾಖೆಯು ಕ್ರಮಗಳನ್ನು ಜರುಗಿಸಲು ಮುಂದಾಗಿದೆ. ಅಲ್ಲದೇ, ಎಫ್‌ಆರ್‌ಎಸ್‌ ಯೋಜನೆಯು ಅಂಗನವಾಡಿ ನೌಕರರ ಕೆಲಸದ ಒತ್ತಡವನ್ನು ಅತೀವವಾಗಿ ಹೆಚ್ಚಿಸಿದೆ ಎಂದರು.

ವಕೀಲ ವಿನಯ್ ಶ್ರೀನಿವಾಸ್ ಮಾತನಾಡಿ, ಈಗ ಜಾರಿಗೊಳಿಸಲಾಗುತ್ತಿರುವ ಎಫ್‌ಆರ್‌ಎಸ್‌ ತಂತ್ರಜ್ಞಾನವು ಕೆ.ಎಸ್. ಪುಟ್ಟಸ್ವಾಮಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಗೌಪ್ಯತೆಯ ಹಕ್ಕಿನ ಕುರಿತಾದ ಸುಪ್ರೀಂ ಕೋರ್ಟ್ ತೀರ್ಪುನ್ನು ಮತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ತಿಳಿಸಿದರು.

ಸ್ಥಳೀಯ ಪೂರೈಕೆ ಸರಪಳಿ (Local Supply Chain)ಗಳನ್ನು ಮುರಿದು, ಫೋರ್ಟಿಫೈಡ್ ಆಹಾರದ ಕಡೆಗೆ ದಾಪುಗಾಲಿಡಲು ಡೇಟಾವನ್ನು ಎಫ್‌ಆರ್‌ಎಸ್‌ ಮೂಲಕ ಸಂಗ್ರಹಿಸಲಾಗುತ್ತಿದೆ ಎಂಬುದರ ಬಗ್ಗೆ ಮತ್ತು ಡೇಟಾ ಗೌಪ್ಯತೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಫ್ರೀ ಸಾಫ್ಟ್‌ವೇರ್ ಮೂವ್‌ಮೆಂಟ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ನವೀನ್ ಮಾತನಾಡಿದರು.

ಭಾರತ ಜ್ಞಾನ ವಿಜ್ಞಾನ ಸಮಿತಿ ಕರ್ನಾಟಕದ ಉಪಾಧ್ಯಕ್ಷ ಶುಭಂಕರ್ ಚಕ್ರವರ್ತಿ ಮಾತನಾಡಿ, ಶಿಕ್ಷಕರ ಹಾಜರಾತಿಯನ್ನು ಟ್ರ್ಯಾಕ್ ಮಾಡಲು ಶಿಕ್ಷಣ ಇಲಾಖೆಯು ಜುಲೈ 1ರಿಂದ ಎಫ್‌ಆರ್‌ಎಸ್‌ ಪರಿಚಯಿಸಿದೆ. ಅತ್ಯಂತ ಕಡಿಮೆ ಶಿಕ್ಷಕರ ಗೈರುಹಾಜರಿ ಪ್ರಮಾಣ ಹೊಂದಿರುವ ಕರ್ನಾಟಕದಲ್ಲಿ ಇಂತಹ ಯೋಜನೆಗಳ ಅವಶ್ಯಕತೆ ಏನಿದೆ ಎಂದು ಪ್ರಶ್ನಿಸಿದರು. ನಾಗರಿಕ ಸಮಾಜವು ಈ ಬಗ್ಗೆ ಒಗ್ಗೂಡಿ ಎಫ್‌ಆರ್‌ಎಸ್‌ ತಂತ್ರಜ್ಞಾನದ ಅನುಷ್ಠಾನದ ವಿರುದ್ಧ ಹೋರಾಡಬೇಕು ಎಂದು ಅವರು ಕರೆ ನೀಡಿದರು.

ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾದ ಮಗು ಮತ್ತು ಕಾನೂನು ಕೇಂದ್ರದ ಸುಧಾ, ಬೆಂಗಳೂರಿನ ಸಿವಿಕ್ ಸಂಸ್ಥೆಯ ಕಾತ್ಯಾಯಿನಿ ಚಾಮರಾಜ್ ಮತ್ತಿತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಧರ್ಮಸ್ಥಳ ಸುದ್ದಿ ಪ್ರಕಟಿಸದಂತೆ ತಡೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಯೂಟ್ಯೂಬ್ ಚಾನೆಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...