Homeಕರ್ನಾಟಕಬೆಂಗಳೂರು: ಮುಖ ಚಹರೆ ಗುರುತಿಸುವಿಕೆ ರದ್ದುಪಡಿಸಲು ಆಗ್ರಹ

ಬೆಂಗಳೂರು: ಮುಖ ಚಹರೆ ಗುರುತಿಸುವಿಕೆ ರದ್ದುಪಡಿಸಲು ಆಗ್ರಹ

- Advertisement -
- Advertisement -

ಶಿಕ್ಷಕರ ಹಾಜರಾತಿ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಮುಂತಾದವುಗಳಿಗೆ ಮುಖ ಚಹರೆ ಗುರುತಿಸುವಿಕೆ (ಎಫ್‌ಆರ್‌ಎಸ್‌) ಕಡ್ಡಾಯಗೊಳಿಸಿರುವುದನ್ನು ಕೈಬಿಡಲು ವಿವಿಧ ಕ್ಷೇತ್ರದ ತಜ್ಞರು ಒತ್ತಾಯಿಸಿದರು.

ಮಂಗಳವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ಜಂಟಿಯಾಗಿ ಮುಖ ಚಹರೆ ಗುರುತಿಸುವಿಕೆ ವ್ಯವಸ್ಥೆಯ ಅನುಷ್ಠಾನದಿಂದ ಆಹಾರ ಮತ್ತು ಶಿಕ್ಷಣದ ಹಕ್ಕಿನ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದರ ಕುರಿತು ಆಯೋಜಿಸಿದ್ದ ಸಮಾಲೋಚನಾ ಸಭೆಯಲ್ಲಿ ಎಫ್‌ಆರ್‌ಎಸ್ ಜಾರಿಗೆ ವಿರೋಧ ವ್ಯಕ್ತವಾಯಿತು.

ಒಂದೆಡೆ, ಕೇಂದ್ರ ಸರ್ಕಾರ ಪಿಎಂ-ಪೋಷಣ್‌ ಯೋಜನೆಯಡಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರ ನೀಡಲು ಮುಖ ಚಹರೆ ಗುರುತಿಸುವಿಕೆ ವ್ಯವಸ್ಥೆ ಜಾರಿಗೊಳಿಸಿದೆ. ಮತ್ತೊಂದೆಡೆ, ರಾಜ್ಯ ಸರ್ಕಾರವು ಎಫ್‌ಆರ್‌ಎಸ್ ಜಾರಿಗೆ ತರುವ ಮುನ್ನ ಸಾರ್ವಜನಿಕ ಚರ್ಚೆಗಳನ್ನಾಗಲೀ, ಪಾಲುದಾರರ ಅಭಿಪ್ರಾಯವನ್ನಾಗಲಿ ಆಲಿಸಿಲ್ಲ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಅಂಗನವಾಡಿ ಕಾರ್ಯಕರ್ತೆಯರು. ಚಿಂತಕರು, ಸಾಮಾಜಿಕ ಹೋರಾಟಗಾರರು, ವಕೀಲರು, ಸ್ವತಂತ್ರ ತಂತ್ರಾಂಶ ಹೋರಾಟಗಾರರು ಮತ್ತು ನಾಗರಿಕ ಸಮಾಜದ ಪ್ರತಿನಿಧಿಗಳು ಅಸಮಾಧಾನ ವ್ಯಕ್ತಪಡಿಸಿದರು.

ಸಭೆಯಲ್ಲಿ ಮಾತನಾಡಿದ ಆಹಾರ ಹಕ್ಕು ಕಾರ್ಯಕರ್ತೆ ಮತ್ತು ಶಿಕ್ಷಣ ತಜ್ಞೆ ಡಾ. ದೀಪಾ ಸಿನ್ಹಾ, ಸಮಗ್ರ ಶಿಶು ಅಭಿವೃದ್ಧಿ ಸೇವೆಗಳಲ್ಲಿ (ಐಸಿಡಿಎಸ್) ಮುಖ ಚಹರೆ ಗುರುತಿಸುವಿಕೆ ಪರಿಚಯಿಸುತ್ತಿರುವುದು ಸಾಮಾಜಿಕ ಭದ್ರತಾ ಯೋಜನೆಗಳ ಮೇಲೆ ನಡೆಸಲಾಗುತ್ತಿರುವ ಸರಣಿ ದಾಳಿಗಳಲ್ಲಿನ ಒಂದು. ಎಸ್‌ಎನ್‌ಪಿ ಮತ್ತು ಟೇಕ್ ಹೋಮ್ ರೇಷನ್‌ಗಳ ಗುಣಮಟ್ಟ ಕುಸಿಯುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಲು ಮೀಸಲಿಟ್ಟಿರುವ ಬಜೆಟ್ ಹೆಚ್ಚಿಸುವ ಬದಲು, ಎಫ್‌ಆರ್‌ಎಸ್‌ ಹೆಸರಿನಲ್ಲಿ ಫಲಾನುಭವಿಗಳನ್ನು ಹೊರದೂಡುವ ಮಾರ್ಗಗಳನ್ನು ಸರ್ಕಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಅಭಿಪ್ರಾಯಪಟ್ಟರು.

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಅಧ್ಯಾಪಕ ಡಾ. ರಾಜೇಂದ್ರನ್ ನಾರಾಯಣನ್ ಮಾತನಾಡಿ, ಎಫ್‌ಆರ್‌ಎಸ್‌ ಒಂದು ಕಣ್ಣಾವಲು ವ್ಯವಸ್ಥೆಯಾಗಿದೆ. ಇದನ್ನು ಮೊಟ್ಟ ಮೊದಲು ರೂಪಿಸಿ, ಜಾರಿಗೊಳಿಸಿದ ಸ್ಕ್ಯಾನ್ ಫ್ರಾನ್ಸಿಸ್ಕೋದಲ್ಲಿಯೇ ಈ ತಂತ್ರಜ್ಞಾನವನ್ನು ಬಳಸದಿರಲು ನಿರ್ಣಯ ಕೈಗೊಳ್ಳಲಾಗಿದೆ. ಹೀಗಿರುವಾಗ ಇದನ್ನು ನಮ್ಮ ಹಳ್ಳಿಗಳಲ್ಲೇಕೆ ಜಾರಿಗೊಳಿಸಬೇಕು ಎಂದು ಪ್ರಶ್ನಿಸಿದರು. ಎಫ್‌ಆರ್‌ಎಸ್‌ ಯೋಜನೆಯು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ಘನತೆಯ ಸಾಂವಿಧಾನಿಕ ಮೌಲ್ಯಗಳ ಮೇಲಿನ ದಾಳಿಯೂ ಆಗಿದೆ ಎಂದು ಹೇಳಿದರು.

ಅಖಿಲ ಕರ್ನಾಟಕ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್. ವರಲಕ್ಷ್ಮಿ ಮಾತನಾಡಿ, ಸಾರ್ವತ್ರಿಕವಾಗಿರಬೇಕಾದ ಐಸಿಡಿಎಸ್‌ ಯೋಜನೆಯನ್ನು ಕೆಲವೇ ಕೆಲವು ಫಲಾನುಭವಿಗಳಿಗೆ ಸೀಮಿತಗೊಳಿಸುವ ಹುನ್ನಾರ ಇದಾಗಿದೆ. ಎಫ್‌ಆರ್‌ಎಸ್‌ ವ್ಯವಸ್ಥೆಯನ್ನು ಜಾರಿಗೆ ತರುವಲ್ಲಿ ಬಹಳ ಸಮಸ್ಯೆಗಳು ತಲೆದೋರಿದ್ದು, ಅದನ್ನು ಜಾರಿಗೆ ತರಲು ಸಾಧ್ಯವಾಗದ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಇಲಾಖೆಯು ಕ್ರಮಗಳನ್ನು ಜರುಗಿಸಲು ಮುಂದಾಗಿದೆ. ಅಲ್ಲದೇ, ಎಫ್‌ಆರ್‌ಎಸ್‌ ಯೋಜನೆಯು ಅಂಗನವಾಡಿ ನೌಕರರ ಕೆಲಸದ ಒತ್ತಡವನ್ನು ಅತೀವವಾಗಿ ಹೆಚ್ಚಿಸಿದೆ ಎಂದರು.

ವಕೀಲ ವಿನಯ್ ಶ್ರೀನಿವಾಸ್ ಮಾತನಾಡಿ, ಈಗ ಜಾರಿಗೊಳಿಸಲಾಗುತ್ತಿರುವ ಎಫ್‌ಆರ್‌ಎಸ್‌ ತಂತ್ರಜ್ಞಾನವು ಕೆ.ಎಸ್. ಪುಟ್ಟಸ್ವಾಮಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಗೌಪ್ಯತೆಯ ಹಕ್ಕಿನ ಕುರಿತಾದ ಸುಪ್ರೀಂ ಕೋರ್ಟ್ ತೀರ್ಪುನ್ನು ಮತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ತಿಳಿಸಿದರು.

ಸ್ಥಳೀಯ ಪೂರೈಕೆ ಸರಪಳಿ (Local Supply Chain)ಗಳನ್ನು ಮುರಿದು, ಫೋರ್ಟಿಫೈಡ್ ಆಹಾರದ ಕಡೆಗೆ ದಾಪುಗಾಲಿಡಲು ಡೇಟಾವನ್ನು ಎಫ್‌ಆರ್‌ಎಸ್‌ ಮೂಲಕ ಸಂಗ್ರಹಿಸಲಾಗುತ್ತಿದೆ ಎಂಬುದರ ಬಗ್ಗೆ ಮತ್ತು ಡೇಟಾ ಗೌಪ್ಯತೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಫ್ರೀ ಸಾಫ್ಟ್‌ವೇರ್ ಮೂವ್‌ಮೆಂಟ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ನವೀನ್ ಮಾತನಾಡಿದರು.

ಭಾರತ ಜ್ಞಾನ ವಿಜ್ಞಾನ ಸಮಿತಿ ಕರ್ನಾಟಕದ ಉಪಾಧ್ಯಕ್ಷ ಶುಭಂಕರ್ ಚಕ್ರವರ್ತಿ ಮಾತನಾಡಿ, ಶಿಕ್ಷಕರ ಹಾಜರಾತಿಯನ್ನು ಟ್ರ್ಯಾಕ್ ಮಾಡಲು ಶಿಕ್ಷಣ ಇಲಾಖೆಯು ಜುಲೈ 1ರಿಂದ ಎಫ್‌ಆರ್‌ಎಸ್‌ ಪರಿಚಯಿಸಿದೆ. ಅತ್ಯಂತ ಕಡಿಮೆ ಶಿಕ್ಷಕರ ಗೈರುಹಾಜರಿ ಪ್ರಮಾಣ ಹೊಂದಿರುವ ಕರ್ನಾಟಕದಲ್ಲಿ ಇಂತಹ ಯೋಜನೆಗಳ ಅವಶ್ಯಕತೆ ಏನಿದೆ ಎಂದು ಪ್ರಶ್ನಿಸಿದರು. ನಾಗರಿಕ ಸಮಾಜವು ಈ ಬಗ್ಗೆ ಒಗ್ಗೂಡಿ ಎಫ್‌ಆರ್‌ಎಸ್‌ ತಂತ್ರಜ್ಞಾನದ ಅನುಷ್ಠಾನದ ವಿರುದ್ಧ ಹೋರಾಡಬೇಕು ಎಂದು ಅವರು ಕರೆ ನೀಡಿದರು.

ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾದ ಮಗು ಮತ್ತು ಕಾನೂನು ಕೇಂದ್ರದ ಸುಧಾ, ಬೆಂಗಳೂರಿನ ಸಿವಿಕ್ ಸಂಸ್ಥೆಯ ಕಾತ್ಯಾಯಿನಿ ಚಾಮರಾಜ್ ಮತ್ತಿತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಧರ್ಮಸ್ಥಳ ಸುದ್ದಿ ಪ್ರಕಟಿಸದಂತೆ ತಡೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಯೂಟ್ಯೂಬ್ ಚಾನೆಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...