Homeಕರ್ನಾಟಕಬೆಂಗಳೂರು-ಧಾರವಾಡ 'ವಂದೇ ಭಾರತ್' ಎಕ್ಸ್‌ಪ್ರೆಸ್ ರೈಲು ಪ್ರಯಾಣ ದರ ದುಬಾರಿ: ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ವಿರೋಧ

ಬೆಂಗಳೂರು-ಧಾರವಾಡ ‘ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲು ಪ್ರಯಾಣ ದರ ದುಬಾರಿ: ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ವಿರೋಧ

- Advertisement -
- Advertisement -

ಬೆಂಗಳೂರು-ಧಾರವಾಡ ನಡುವೆ ಸಂಚರಿಸಲಿರುವ ‘ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಜೂನ್ 27ರಂದು) ಚಾಲನೆ ನೀಡಿದ್ದಾರೆ. ಈ ರೈಲಿನ ಪ್ರಯಾಣ ದರ ದುಬಾರಿಯಾಗಿದ್ದು, ರಾಜ್ಯದ ಸಾಮಾನ್ಯ ಜನರು ಈ ರೈಲಿನಿಂದ ದೂರ ಉಳಿಯಬೇಕಾದ ಅನಿವಾರ್ಯತೆ ಇದೆ ಎನ್ನುವ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ಧಾರವಾಡದಿಂದ ಹೊರಡಲಿರುವ ‘ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಜೂನ್ 27ರಂದು ಬೆಳಿಗ್ಗೆ 10ಕ್ಕೆ ವಿಡಿಯೊ ಸಂವಾದದ ಮೂಲಕ ಚಾಲನೆ ನೀಡಲಿದರು. ಉದ್ಘಾಟನೆಯ ದಿನದಂದು ಧಾರವಾಡದಿಂದ ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ತಲುಪುವ ನಡುವೆ 14 ರೈಲು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ. ಸಂಜೆ 5.05ಕ್ಕೆ ಬೆಂಗಳೂರಿಗೆ ಬರುವುದರಿಂದ ಮತ್ತೆ ಧಾರವಾಡಕ್ಕೆ ಅಂದು ಹಿಂದಿರುಗುವುದಿಲ್ಲ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ದೇಶದ ವಿವಿಧೆಡೆ ಐದು ‘ವಂದೇ ಭಾರತ್’ ರೈಲುಗಳಿಗೆ ಅಂದು ಏಕಕಾಲಕ್ಕೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಬೆಳಗ್ಗೆ 5.45 ಕ್ಕೆ ಹೊರಡಲಿದ್ದು, ಮಧ್ಯಾಹ್ನ 12.10 ಕ್ಕೆ ಧಾರವಾಡ ತಲುಪಲಿದೆ. ಧಾರವಾಡದಿಂದ ಮಧ್ಯಾಹ್ನ 1.15ಕ್ಕೆ ಹೊರಟು ರಾತ್ರಿ 7.45ಕ್ಕೆ ಬೆಂಗಳೂರು ತಲುಪಲಿದೆ.

ಬೆಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡ ನಡುವಿನ ಪ್ರಯಾಣದ ಸಮಯ ಸರಿಸುಮಾರು 6 ಗಂಟೆ 30 ನಿಮಿಷಗಳು. ಈ ಹೊಸ ರೈಲು ಮಂಗಳವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಕಾರ್ಯನಿರ್ವಹಿಸುತ್ತದೆ.

ಬೆಂಗಳೂರು-ಧಾರವಾಡ ಸಂಚರಿಸುವ ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲಿನ ದರ ಪಟ್ಟಿ ನೋಡಿದರೆ ನೀವು ಶಾಕ್ ಆಗುವುದು ನಿಶ್ಚಿತ. ಎರಡು ವಿಭಾಗ, ಪ್ರತ್ಯೇಕ ದರ- ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ಎಕ್ಸಿಕ್ಯೂಟಿವ್ ಚೇರ್ (EC) ಮತ್ತು AC ಚೇರ್ ಕಾರ್ (CC) ಎಂಬ ಎರಡು ವಿಭಾಗಗಳನ್ನು ಒಳಗೊಂಡಿದೆ.

ಬೆಂಗಳೂರಿನಿಂದ ಧಾರವಾಡಕ್ಕೆ ಎಕ್ಸಿಕ್ಯೂಟಿವ್ ಚೇರ್ ಟಿಕೆಟ್ ದರ ರೂ. 2010 ಆದರೆ ಚೇರ್ ಕಾರ್ ಟಿಕೆಟ್ ಬೆಲೆ ರೂ. 1165. ಆಗಿದೆ.

ಧಾರವಾಡದಿಂದ ಬೆಂಗಳೂರಿಗೆ ಎಕ್ಸಿಕ್ಯೂಟಿವ್ ಚೇರ್ ಟಿಕೆಟ್ ದರ ರೂ. 2440 ಆದರೆ AC ಚೇರ್ ಕಾರ್ ಟಿಕೆಟ್ ದರ ರೂ. 1330. ಆಗಿದೆ.

ಧಾರವಾಡ- ಬೆಂಗಳೂರು ದರ ತುಟ್ಟಿ ಏಕೆ?

ಧಾರವಾಡ – ಬೆಂಗಳೂರು ಪ್ರಯಾಣಿಕರಿಗೆ ತಮ್ಮ ಪ್ರಯಾಣದ ಸಮಯದಲ್ಲಿ ತಿಂಡಿ, ಊಟವನ್ನು ನೀಡಲಾಗುತ್ತದೆ. ಹೀಗಾಗಿ ಧಾರವಾಡದಿಂದ ಬೆಂಗಳೂರಿಗೆ ಆಗಮಿಸುವ ಟಿಕೆಟ್ ದರ ಹೆಚ್ಚಾಗಿದೆ. ಆದರೆ ಬೆಂಗಳೂರು – ಧಾರವಾಡ ಪ್ರಯಾಣಿಕರಿಗೆ ಉಪಹಾರ ಮತ್ತು ತಿಂಡಿ ಮಾತ್ರ ಸಿಗುತ್ತದೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಪಕ್ಕದ ಯಶವಂತಪುರ ರೈಲು ನಿಲ್ದಾಣಕ್ಕೆ ಎಕ್ಸಿಕ್ಯೂಟಿವ್ ಚೇರ್ ಟಿಕೆಟ್ ದರ ರೂ. 545 ಆದರೆ ಚೇರ್ ಕಾರ್ ಟಿಕೆಟ್ ಬೆಲೆ ರೂ.410 ಆಗಿದೆ.

ಇನ್ನು ಧಾರವಾಡದಿಂದ ಪಕ್ಕದ ಹುಬ್ಬಳ್ಳಿಗೆ ಎಕ್ಸಿಕ್ಯೂಟಿವ್ ಚೇರ್ ಟಿಕೆಟ್ ದರ ರೂ. 545 ಆದರೆ ಚೇರ್ ಕಾರ್ ಟಿಕೆಟ್ ಬೆಲೆ ರೂ.410 ಆಗಿದೆ.

 

ಧಾರವಾಡ- ಬೆಂಗಳೂರು ಪ್ರಯಾಣ ದರ ದುಬಾರಿ: ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ವಿರೋಧ

ಫೇಸ್‌ಬುಕ್‌ನಲ್ಲಿ ಧಾರವಾಡ- ಬೆಂಗಳೂರು ಪ್ರಯಾಣ ದರದ ಪಟ್ಟಿ ಹಂಚಿಕೊಂಡಿರುವ ಬಳಕೆದಾರರು, ”ಇದೇನು ರೈಲು ಸಾರಿಗೆಯೋ ಅಥವಾ ವಿಮಾನ ಸಾರಿಗೆಯೋ.?” ಎಂದು ಪ್ರಶ್ನೆ ಮಾಡಿದ್ದಾರೆ.

ಮತ್ತೋರ್ವ ಫೇಸ್‌ಬುಕ್ ಬಳಕೆದಾರರು, ”ಇಡೀ ನಮ್ಮ ದೇಶದ ಸಾರಿಗೆ ವ್ಯವಸ್ಥೆಯಲ್ಲಿ ಅತ್ಯಂತ ಕಡಿಮೆ ಸಾರಿಗೆ ಪ್ರಯಾಣ ದರ ಅಂದರೆ ರೈಲು ದರ ಇತ್ತು. ಈಗ ವಂದೆ ಮಾತರಂ ರೈಲಿನ ಹೆಸರಿನಲ್ಲಿ ಇಲ್ಲೂ ಹಗಲು ದರೋಡೆ ಶುರು ಮಾಡಿದ್ದಾರೆ ನೋಡಿ 15-20 ಕಿಮಿ ಗೆ 410 ರೂ, ಅಂದರೆ ಏನು… ಇದರಲ್ಲಿ ಬಡ ಮತ್ತು ಮಧ್ಯಮ ವರ್ಗದವರು ಪ್ರಯಾಣಿಸಲು ಸಾಧ್ಯವೇ.? #ಆಚೇದೀನ್.‌..” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದರದ ಬಗ್ಗೆ ಅಸಮಧಾನ ವ್ಯಕ್ತಪಡಿಸುವ ಮತ್ತೋರ್ವ ಫೇಸ್‌ಬುಕ್‌ ಬಳಕೆದಾರರು, ”ಇದು ವಂದೇ ಭಾರತ ಎಕ್ಸ್‌ಪ್ರೆಸ್‌ ರೈಲು…ಕಣ್ರಪ್ಪ ನಮ್ಮಂತವರಿಗಲ್ಲ.. ಮೆಜೆಸ್ಟಿಕ್ ನಿಂದ ಯಶವಂತಪುರಕ್ಕೆ 410 ರುಪಾಯಿ. ಹುಬ್ಬಳ್ಳಿಯಿಂದ ಧಾರವಾಡಕ್ಕೆ 410 ರುಪಾಯಿ. ಬೋಲೋ ಭಾರತ್ ಮಾತಾ ಕಿ.ಜೈ” ಎಂದು ಪೋಸ್ಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...