Homeಕರ್ನಾಟಕಬೆಂಗಳೂರು-ಧಾರವಾಡ 'ವಂದೇ ಭಾರತ್' ಎಕ್ಸ್‌ಪ್ರೆಸ್ ರೈಲು ಪ್ರಯಾಣ ದರ ದುಬಾರಿ: ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ವಿರೋಧ

ಬೆಂಗಳೂರು-ಧಾರವಾಡ ‘ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲು ಪ್ರಯಾಣ ದರ ದುಬಾರಿ: ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ವಿರೋಧ

- Advertisement -
- Advertisement -

ಬೆಂಗಳೂರು-ಧಾರವಾಡ ನಡುವೆ ಸಂಚರಿಸಲಿರುವ ‘ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಜೂನ್ 27ರಂದು) ಚಾಲನೆ ನೀಡಿದ್ದಾರೆ. ಈ ರೈಲಿನ ಪ್ರಯಾಣ ದರ ದುಬಾರಿಯಾಗಿದ್ದು, ರಾಜ್ಯದ ಸಾಮಾನ್ಯ ಜನರು ಈ ರೈಲಿನಿಂದ ದೂರ ಉಳಿಯಬೇಕಾದ ಅನಿವಾರ್ಯತೆ ಇದೆ ಎನ್ನುವ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ಧಾರವಾಡದಿಂದ ಹೊರಡಲಿರುವ ‘ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಜೂನ್ 27ರಂದು ಬೆಳಿಗ್ಗೆ 10ಕ್ಕೆ ವಿಡಿಯೊ ಸಂವಾದದ ಮೂಲಕ ಚಾಲನೆ ನೀಡಲಿದರು. ಉದ್ಘಾಟನೆಯ ದಿನದಂದು ಧಾರವಾಡದಿಂದ ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ತಲುಪುವ ನಡುವೆ 14 ರೈಲು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ. ಸಂಜೆ 5.05ಕ್ಕೆ ಬೆಂಗಳೂರಿಗೆ ಬರುವುದರಿಂದ ಮತ್ತೆ ಧಾರವಾಡಕ್ಕೆ ಅಂದು ಹಿಂದಿರುಗುವುದಿಲ್ಲ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ದೇಶದ ವಿವಿಧೆಡೆ ಐದು ‘ವಂದೇ ಭಾರತ್’ ರೈಲುಗಳಿಗೆ ಅಂದು ಏಕಕಾಲಕ್ಕೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಬೆಳಗ್ಗೆ 5.45 ಕ್ಕೆ ಹೊರಡಲಿದ್ದು, ಮಧ್ಯಾಹ್ನ 12.10 ಕ್ಕೆ ಧಾರವಾಡ ತಲುಪಲಿದೆ. ಧಾರವಾಡದಿಂದ ಮಧ್ಯಾಹ್ನ 1.15ಕ್ಕೆ ಹೊರಟು ರಾತ್ರಿ 7.45ಕ್ಕೆ ಬೆಂಗಳೂರು ತಲುಪಲಿದೆ.

ಬೆಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡ ನಡುವಿನ ಪ್ರಯಾಣದ ಸಮಯ ಸರಿಸುಮಾರು 6 ಗಂಟೆ 30 ನಿಮಿಷಗಳು. ಈ ಹೊಸ ರೈಲು ಮಂಗಳವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಕಾರ್ಯನಿರ್ವಹಿಸುತ್ತದೆ.

ಬೆಂಗಳೂರು-ಧಾರವಾಡ ಸಂಚರಿಸುವ ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲಿನ ದರ ಪಟ್ಟಿ ನೋಡಿದರೆ ನೀವು ಶಾಕ್ ಆಗುವುದು ನಿಶ್ಚಿತ. ಎರಡು ವಿಭಾಗ, ಪ್ರತ್ಯೇಕ ದರ- ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ಎಕ್ಸಿಕ್ಯೂಟಿವ್ ಚೇರ್ (EC) ಮತ್ತು AC ಚೇರ್ ಕಾರ್ (CC) ಎಂಬ ಎರಡು ವಿಭಾಗಗಳನ್ನು ಒಳಗೊಂಡಿದೆ.

ಬೆಂಗಳೂರಿನಿಂದ ಧಾರವಾಡಕ್ಕೆ ಎಕ್ಸಿಕ್ಯೂಟಿವ್ ಚೇರ್ ಟಿಕೆಟ್ ದರ ರೂ. 2010 ಆದರೆ ಚೇರ್ ಕಾರ್ ಟಿಕೆಟ್ ಬೆಲೆ ರೂ. 1165. ಆಗಿದೆ.

ಧಾರವಾಡದಿಂದ ಬೆಂಗಳೂರಿಗೆ ಎಕ್ಸಿಕ್ಯೂಟಿವ್ ಚೇರ್ ಟಿಕೆಟ್ ದರ ರೂ. 2440 ಆದರೆ AC ಚೇರ್ ಕಾರ್ ಟಿಕೆಟ್ ದರ ರೂ. 1330. ಆಗಿದೆ.

ಧಾರವಾಡ- ಬೆಂಗಳೂರು ದರ ತುಟ್ಟಿ ಏಕೆ?

ಧಾರವಾಡ – ಬೆಂಗಳೂರು ಪ್ರಯಾಣಿಕರಿಗೆ ತಮ್ಮ ಪ್ರಯಾಣದ ಸಮಯದಲ್ಲಿ ತಿಂಡಿ, ಊಟವನ್ನು ನೀಡಲಾಗುತ್ತದೆ. ಹೀಗಾಗಿ ಧಾರವಾಡದಿಂದ ಬೆಂಗಳೂರಿಗೆ ಆಗಮಿಸುವ ಟಿಕೆಟ್ ದರ ಹೆಚ್ಚಾಗಿದೆ. ಆದರೆ ಬೆಂಗಳೂರು – ಧಾರವಾಡ ಪ್ರಯಾಣಿಕರಿಗೆ ಉಪಹಾರ ಮತ್ತು ತಿಂಡಿ ಮಾತ್ರ ಸಿಗುತ್ತದೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಪಕ್ಕದ ಯಶವಂತಪುರ ರೈಲು ನಿಲ್ದಾಣಕ್ಕೆ ಎಕ್ಸಿಕ್ಯೂಟಿವ್ ಚೇರ್ ಟಿಕೆಟ್ ದರ ರೂ. 545 ಆದರೆ ಚೇರ್ ಕಾರ್ ಟಿಕೆಟ್ ಬೆಲೆ ರೂ.410 ಆಗಿದೆ.

ಇನ್ನು ಧಾರವಾಡದಿಂದ ಪಕ್ಕದ ಹುಬ್ಬಳ್ಳಿಗೆ ಎಕ್ಸಿಕ್ಯೂಟಿವ್ ಚೇರ್ ಟಿಕೆಟ್ ದರ ರೂ. 545 ಆದರೆ ಚೇರ್ ಕಾರ್ ಟಿಕೆಟ್ ಬೆಲೆ ರೂ.410 ಆಗಿದೆ.

 

ಧಾರವಾಡ- ಬೆಂಗಳೂರು ಪ್ರಯಾಣ ದರ ದುಬಾರಿ: ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ವಿರೋಧ

ಫೇಸ್‌ಬುಕ್‌ನಲ್ಲಿ ಧಾರವಾಡ- ಬೆಂಗಳೂರು ಪ್ರಯಾಣ ದರದ ಪಟ್ಟಿ ಹಂಚಿಕೊಂಡಿರುವ ಬಳಕೆದಾರರು, ”ಇದೇನು ರೈಲು ಸಾರಿಗೆಯೋ ಅಥವಾ ವಿಮಾನ ಸಾರಿಗೆಯೋ.?” ಎಂದು ಪ್ರಶ್ನೆ ಮಾಡಿದ್ದಾರೆ.

ಮತ್ತೋರ್ವ ಫೇಸ್‌ಬುಕ್ ಬಳಕೆದಾರರು, ”ಇಡೀ ನಮ್ಮ ದೇಶದ ಸಾರಿಗೆ ವ್ಯವಸ್ಥೆಯಲ್ಲಿ ಅತ್ಯಂತ ಕಡಿಮೆ ಸಾರಿಗೆ ಪ್ರಯಾಣ ದರ ಅಂದರೆ ರೈಲು ದರ ಇತ್ತು. ಈಗ ವಂದೆ ಮಾತರಂ ರೈಲಿನ ಹೆಸರಿನಲ್ಲಿ ಇಲ್ಲೂ ಹಗಲು ದರೋಡೆ ಶುರು ಮಾಡಿದ್ದಾರೆ ನೋಡಿ 15-20 ಕಿಮಿ ಗೆ 410 ರೂ, ಅಂದರೆ ಏನು… ಇದರಲ್ಲಿ ಬಡ ಮತ್ತು ಮಧ್ಯಮ ವರ್ಗದವರು ಪ್ರಯಾಣಿಸಲು ಸಾಧ್ಯವೇ.? #ಆಚೇದೀನ್.‌..” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದರದ ಬಗ್ಗೆ ಅಸಮಧಾನ ವ್ಯಕ್ತಪಡಿಸುವ ಮತ್ತೋರ್ವ ಫೇಸ್‌ಬುಕ್‌ ಬಳಕೆದಾರರು, ”ಇದು ವಂದೇ ಭಾರತ ಎಕ್ಸ್‌ಪ್ರೆಸ್‌ ರೈಲು…ಕಣ್ರಪ್ಪ ನಮ್ಮಂತವರಿಗಲ್ಲ.. ಮೆಜೆಸ್ಟಿಕ್ ನಿಂದ ಯಶವಂತಪುರಕ್ಕೆ 410 ರುಪಾಯಿ. ಹುಬ್ಬಳ್ಳಿಯಿಂದ ಧಾರವಾಡಕ್ಕೆ 410 ರುಪಾಯಿ. ಬೋಲೋ ಭಾರತ್ ಮಾತಾ ಕಿ.ಜೈ” ಎಂದು ಪೋಸ್ಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...