Homeಕರ್ನಾಟಕಬೆಂಗಳೂರು ರೈತ ಗಣರಾಜ್ಯೋತ್ಸವ: ಚಳವಳಿಯನ್ನು ಹತ್ತಿಕ್ಕುತ್ತಿರುವ ಪೊಲೀಸರು

ಬೆಂಗಳೂರು ರೈತ ಗಣರಾಜ್ಯೋತ್ಸವ: ಚಳವಳಿಯನ್ನು ಹತ್ತಿಕ್ಕುತ್ತಿರುವ ಪೊಲೀಸರು

ನಾವು ನಾಳೆ‌ ಟ್ರ್ಯಾಕ್ಟರ್ ಪೆರೇಡ್ ಮಾಡೇ ಮಾಡುತ್ತೇವೆ. ಟ್ಯಾಕ್ಟರ್ ಪೆರೇಡ್‌ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ರೈತರು ಹೇಳಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾನೂನಿನ ವಿರುದ್ದ ದೇಶದಾದ್ಯಂತ ಹೋರಾಟ ನಡೆಯುತ್ತಿದೆ. ದೆಹಲಿಯಲ್ಲಿ ಟ್ರಾಕ್ಟರ್‌ ರ್‍ಯಾಲಿ ನಡೆಸಲು ಈಗಾಗಲೇ ಪೊಲೀಸರು ಅನುಮತಿ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಗಣರಾಜ್ಯೋತ್ಸವದಂದು ಬೆಂಗಳೂರಿನಲ್ಲೂ ರೈತರು ಟ್ರಾಕ್ಟರ್‌ ರ್‍ಯಾಲಿ ಆಯೋಜಿಸಿದ್ದಾರೆ. ಆದರೆ ರ್‍ಯಾಲಿಗೆ ಆಗಮಿಸುತ್ತಿರುವ ಟ್ರಾಕ್ಟರ್‌ಗಳನ್ನು ರಾಜ್ಯ ಪೊಲೀಸರು ಅಲ್ಲಲ್ಲೇ ತೆಡೆದು ಚಳವಳಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸುವ ರೈತರು ಟ್ರಾಕ್ಟರ್‌‌ನಲ್ಲಿ ಬಂದರೆ ಟ್ರಾಫಿಕ್ ಜಾಂ ಆಗುತ್ತದೆ, ಆದ್ದರಿಂದ ಟ್ರ್ಯಾಕ್ಟರ್ ಮೂಲಕ ಬರಬಾರದು ಎಂದಿರುವ ರಾಜ್ಯ ಡಿಜಿ ಅಂಡ್ ಐಜಿಪಿ ಪ್ರವೀಣ್ ಸೂದ್‌ ಜಿಲ್ಲಾ ಗಡಿಗಳಲ್ಲೇ ಟ್ರಾಕ್ಟರ್ ತಡೆಯಲು ಸೂಚನೆ ನೀಡಿದ್ದಾರೆ. ಭಾನುವಾರ ಬೆಂಗಳೂರಿಗೆ ಹೊರಟಿದ್ದ ರೈತರನ್ನು ಬೆಳಗಾವಿಯಲ್ಲಿ ತಡೆದು ನಿಲ್ಲಿಸಿದ್ದ ಪೊಲೀಸರು, ಟ್ರಾಕ್ಟರ್‌ ಬಿಟ್ಟು ಬೇರೆ ಯಾವುದೆ ವಾಹನಗಳಲ್ಲಿ ಹೊರಡಿ ಎಂದು ಹೇಳಿದ್ದರು.

ಇದನ್ನೂ ಓದಿ: ರ್‍ಯಾಲಿಗೆ ಟ್ರಾಕ್ಟರ್‌ ತರಬೇಡಿ ಎಂದ ಬೆಂಗಳೂರು ಪೊಲೀಸರು: ತಂದೇ ತರುತ್ತೇವೆ ಎಂದ ರೈತರು!

ರೈತರ ಗಣರಾಜ್ಯೋತ್ಸವಕ್ಕೆ ಇನ್ನು ಕಲವೇ ಗಂಟೆಗಳಿರುವಾಗ ಪೊಲೀಸರು ತಮ್ಮ ಕೆಲಸವನ್ನು ಚುರುಕುಗೊಳಿಸಿದ್ದಾರೆ. ಟ್ರಾಕ್ಟರ್‌ಗಳನ್ನು ಹೋರಾಟಕ್ಕೆ ತರಬಾರದು ಎಂದು ಪೊಲೀಸರು ವಿನಂತಿಸುತ್ತಿದ್ದು, ರೈತ ಮುಖಂಡರು ನಾವು ಟ್ರಾಕ್ಟರ್‌ ರ್‍ಯಾಲಿ ನಡೆಸಿಯೆ ತೀರುತ್ತೇವೆ ಎಂದು ಹೇಳಿದ್ದಾರೆ. ಹುಣಸೂರು, ಚಿಕ್ಕಬಳ್ಳಾಪುರ, ಮಡಿಕೇರಿ, ತುಮಕೂರಿನಲ್ಲಿ ಪೊಲೀಸರು ಟ್ರಾಕ್ಟರ್‌ಗಳನ್ನು ಈಗಾಗಲೇ ತಡೆಹಿಡಿದಿದ್ದಾರೆ.

ಭಾನುವಾರ, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಪೊಲೀಸರ ಕ್ರಮವನ್ನು ವಿರೋಧಿಸಿದ್ದು, “ರಾಜ್ಯದಲ್ಲಿ ರೈತರು, ಕಾರ್ಮಿಕರು ದಲಿತರು ಸೇರಿ ಬೆಂಗಳೂರಲ್ಲಿ ಟ್ರಾಕ್ಟರ್‌‌ ಪೆರೇಡ್ ಮೂಲಕ ಗಣರಾಜ್ಯೋತ್ಸವ ಆಚರಣೆ ಮಾಡಲು ತೀರ್ಮಾನ ಮಾಡಿದ್ದೇವೆ. ಟ್ರಾಕ್ಟರ್ ರೈತರ ಸಂಕೇತ. ಈ‌ ಕಾರ್ಯಕ್ರಮ ಟ್ರಾಕ್ಟರ್ ವರ್ಸರ್ಸ್ ಟ್ಯಾಂಕರ್ ಆಗಿದೆ. ಟ್ರಾಕ್ಟರ್‌ಗಳಿಗೆ ಅಡ್ಡಿಪಡಿಸಬೇಡಿ, ನಮ್ಮನ್ನು ಗೌರವಯುತವಾಗಿ ಬೆಂಗಳೂರಿಗೆ ಬರ ಮಾಡಿಕೊಂಡು ಅಷ್ಟೇ ಗೌರವವಾಗಿ ಬಿಳ್ಕೊಡಿ” ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬೊಮ್ಮಯಿ ಅವರಿಗೆ ವಿನಂತಿ ಮಾಡಿದ್ದರು.

ರೈತರ ಟ್ರ್ಯಾಕ್ಟರ್‌ಗಳನ್ನು ಜಪ್ತಿ ಮಾಡಿದರೆ, ಅವನ್ನು ಬಿಡಿಸಿಕೊಡಲು ನಾವೇ ಹೋಗುತ್ತೇವೆ ಎಂದು ಕಾಂಗ್ರೇಸ್ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ಹೇಳಿದ್ದಾರೆ.

ಇದನ್ನೂ ಓದಿ: ರೈತರ ಗಣರಾಜ್ಯೋತ್ಸವ: ತುಮಕೂರಿನಲ್ಲಿ ಟ್ರಾಕ್ಟರ್‌‌‌‌ ತಡೆದ ಪೊಲೀಸರು

ಇಂದು ಪತ್ರಿಕಾಗೋಷ್ಠಯಲ್ಲಿ ಮಾತನಾಡಿದ್ದ ’ಸಂಯುಕ್ತ ಹೋರಾಟ ಕರ್ನಾಟ’ ಮುಖಂಡರು, “ಮುಂಬೈ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದ ರೈತರು ಸೇರಿದಂತೆ ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರಿನಿಂದ ಅತಿ ಹೆಚ್ಚಿನ ರೈತರು ನಾಳೆಯ ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಆದರೆ ಟ್ರ್ಯಾಕ್ಟರ್‌ಗಳನ್ನು ಎಲ್ಲೆಡೆ ಪೊಲೀಸರು ತಡೆಯುತ್ತಿದ್ದು ಇದನ್ನು ನಾವು ಖಂಡಿಸುತ್ತೇವೆ. ಏನೇ ಸಮಸ್ಯೆಗಳಿದ್ದರೆ ಪೊಲೀಸ್ ಅಧಿಕಾರಿಗಳು ನಮ್ಮೊಂದಿಗೆ ಚರ್ಚೆ ಮಾಡಲಿ. ಆದರೆ ನಿರ್ಬಂಧ ಹಾಕಲು ಪೊಲೀಸರು ಮುಂದಾದರೆ ಪರಿಸ್ಥಿತಿ ಕೈಮೀರುತ್ತದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಸರ್ಕಾರವೇ ಜವಾಬ್ದಾರಿ” ಎಂದು ಎಚ್ಚರಿಸಿದ್ದಾರೆ.

ಈ ನಡುವೆ ಟ್ರ್ಯಾಕ್ಟರ್ ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ನಗರ ಪೋಲಿಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ. ಇದಕ್ಕೆ ರೈತ ಮುಖಂಡರು ಕಿಡಿಕಾರಿದ್ದು, ಕೇಂದ್ರ ಸರ್ಕಾರವೇ ಟ್ರ್ಯಾಕ್ಟರ್ ‌ಪೆರೇಡ್‌ಗೆ ಅವಕಾಶ ಕೊಟ್ಟಿದೆ. ದೆಹಲಿಯಲ್ಲಿಯೇ ಟ್ರ್ಯಾಕ್ಟರ್ ಪರೇಡ್ ನಡೆಯುತ್ತೆ ಅಂದ ಮೇಲೆ ರಾಜ್ಯ ಸರ್ಕಾರ ಏಕೆ ಅನುಮತಿ ಕೊಡಲ್ಲಾ? ನಾವು ನಾಳೆ‌ ಟ್ರ್ಯಾಕ್ಟರ್ ಪೆರೇಡ್ ಮಾಡೇ ಮಾಡುತ್ತೇವೆ. ಟ್ಯಾಕ್ಟರ್ ಪೆರೇಡ್ ಇಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಮ್ಮನ್ನು ತಡೆದರೆ ಉಗ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಟ್ರಾಕ್ಟರ್‌ ರ್‍ಯಾಲಿ: ರೈತರು ತಮಗೆ ತಾವೇ ಅಳವಡಿಸಿಕೊಂಡ ಮಾರ್ಗಸೂಚಿಗಳು ಇಲ್ಲಿವೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...