Homeಕರ್ನಾಟಕಬೆಂಗಳೂರು ರೈತ ಗಣರಾಜ್ಯೋತ್ಸವ: ಚಳವಳಿಯನ್ನು ಹತ್ತಿಕ್ಕುತ್ತಿರುವ ಪೊಲೀಸರು

ಬೆಂಗಳೂರು ರೈತ ಗಣರಾಜ್ಯೋತ್ಸವ: ಚಳವಳಿಯನ್ನು ಹತ್ತಿಕ್ಕುತ್ತಿರುವ ಪೊಲೀಸರು

ನಾವು ನಾಳೆ‌ ಟ್ರ್ಯಾಕ್ಟರ್ ಪೆರೇಡ್ ಮಾಡೇ ಮಾಡುತ್ತೇವೆ. ಟ್ಯಾಕ್ಟರ್ ಪೆರೇಡ್‌ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ರೈತರು ಹೇಳಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾನೂನಿನ ವಿರುದ್ದ ದೇಶದಾದ್ಯಂತ ಹೋರಾಟ ನಡೆಯುತ್ತಿದೆ. ದೆಹಲಿಯಲ್ಲಿ ಟ್ರಾಕ್ಟರ್‌ ರ್‍ಯಾಲಿ ನಡೆಸಲು ಈಗಾಗಲೇ ಪೊಲೀಸರು ಅನುಮತಿ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಗಣರಾಜ್ಯೋತ್ಸವದಂದು ಬೆಂಗಳೂರಿನಲ್ಲೂ ರೈತರು ಟ್ರಾಕ್ಟರ್‌ ರ್‍ಯಾಲಿ ಆಯೋಜಿಸಿದ್ದಾರೆ. ಆದರೆ ರ್‍ಯಾಲಿಗೆ ಆಗಮಿಸುತ್ತಿರುವ ಟ್ರಾಕ್ಟರ್‌ಗಳನ್ನು ರಾಜ್ಯ ಪೊಲೀಸರು ಅಲ್ಲಲ್ಲೇ ತೆಡೆದು ಚಳವಳಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸುವ ರೈತರು ಟ್ರಾಕ್ಟರ್‌‌ನಲ್ಲಿ ಬಂದರೆ ಟ್ರಾಫಿಕ್ ಜಾಂ ಆಗುತ್ತದೆ, ಆದ್ದರಿಂದ ಟ್ರ್ಯಾಕ್ಟರ್ ಮೂಲಕ ಬರಬಾರದು ಎಂದಿರುವ ರಾಜ್ಯ ಡಿಜಿ ಅಂಡ್ ಐಜಿಪಿ ಪ್ರವೀಣ್ ಸೂದ್‌ ಜಿಲ್ಲಾ ಗಡಿಗಳಲ್ಲೇ ಟ್ರಾಕ್ಟರ್ ತಡೆಯಲು ಸೂಚನೆ ನೀಡಿದ್ದಾರೆ. ಭಾನುವಾರ ಬೆಂಗಳೂರಿಗೆ ಹೊರಟಿದ್ದ ರೈತರನ್ನು ಬೆಳಗಾವಿಯಲ್ಲಿ ತಡೆದು ನಿಲ್ಲಿಸಿದ್ದ ಪೊಲೀಸರು, ಟ್ರಾಕ್ಟರ್‌ ಬಿಟ್ಟು ಬೇರೆ ಯಾವುದೆ ವಾಹನಗಳಲ್ಲಿ ಹೊರಡಿ ಎಂದು ಹೇಳಿದ್ದರು.

ಇದನ್ನೂ ಓದಿ: ರ್‍ಯಾಲಿಗೆ ಟ್ರಾಕ್ಟರ್‌ ತರಬೇಡಿ ಎಂದ ಬೆಂಗಳೂರು ಪೊಲೀಸರು: ತಂದೇ ತರುತ್ತೇವೆ ಎಂದ ರೈತರು!

ರೈತರ ಗಣರಾಜ್ಯೋತ್ಸವಕ್ಕೆ ಇನ್ನು ಕಲವೇ ಗಂಟೆಗಳಿರುವಾಗ ಪೊಲೀಸರು ತಮ್ಮ ಕೆಲಸವನ್ನು ಚುರುಕುಗೊಳಿಸಿದ್ದಾರೆ. ಟ್ರಾಕ್ಟರ್‌ಗಳನ್ನು ಹೋರಾಟಕ್ಕೆ ತರಬಾರದು ಎಂದು ಪೊಲೀಸರು ವಿನಂತಿಸುತ್ತಿದ್ದು, ರೈತ ಮುಖಂಡರು ನಾವು ಟ್ರಾಕ್ಟರ್‌ ರ್‍ಯಾಲಿ ನಡೆಸಿಯೆ ತೀರುತ್ತೇವೆ ಎಂದು ಹೇಳಿದ್ದಾರೆ. ಹುಣಸೂರು, ಚಿಕ್ಕಬಳ್ಳಾಪುರ, ಮಡಿಕೇರಿ, ತುಮಕೂರಿನಲ್ಲಿ ಪೊಲೀಸರು ಟ್ರಾಕ್ಟರ್‌ಗಳನ್ನು ಈಗಾಗಲೇ ತಡೆಹಿಡಿದಿದ್ದಾರೆ.

ಭಾನುವಾರ, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಪೊಲೀಸರ ಕ್ರಮವನ್ನು ವಿರೋಧಿಸಿದ್ದು, “ರಾಜ್ಯದಲ್ಲಿ ರೈತರು, ಕಾರ್ಮಿಕರು ದಲಿತರು ಸೇರಿ ಬೆಂಗಳೂರಲ್ಲಿ ಟ್ರಾಕ್ಟರ್‌‌ ಪೆರೇಡ್ ಮೂಲಕ ಗಣರಾಜ್ಯೋತ್ಸವ ಆಚರಣೆ ಮಾಡಲು ತೀರ್ಮಾನ ಮಾಡಿದ್ದೇವೆ. ಟ್ರಾಕ್ಟರ್ ರೈತರ ಸಂಕೇತ. ಈ‌ ಕಾರ್ಯಕ್ರಮ ಟ್ರಾಕ್ಟರ್ ವರ್ಸರ್ಸ್ ಟ್ಯಾಂಕರ್ ಆಗಿದೆ. ಟ್ರಾಕ್ಟರ್‌ಗಳಿಗೆ ಅಡ್ಡಿಪಡಿಸಬೇಡಿ, ನಮ್ಮನ್ನು ಗೌರವಯುತವಾಗಿ ಬೆಂಗಳೂರಿಗೆ ಬರ ಮಾಡಿಕೊಂಡು ಅಷ್ಟೇ ಗೌರವವಾಗಿ ಬಿಳ್ಕೊಡಿ” ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬೊಮ್ಮಯಿ ಅವರಿಗೆ ವಿನಂತಿ ಮಾಡಿದ್ದರು.

ರೈತರ ಟ್ರ್ಯಾಕ್ಟರ್‌ಗಳನ್ನು ಜಪ್ತಿ ಮಾಡಿದರೆ, ಅವನ್ನು ಬಿಡಿಸಿಕೊಡಲು ನಾವೇ ಹೋಗುತ್ತೇವೆ ಎಂದು ಕಾಂಗ್ರೇಸ್ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ಹೇಳಿದ್ದಾರೆ.

ಇದನ್ನೂ ಓದಿ: ರೈತರ ಗಣರಾಜ್ಯೋತ್ಸವ: ತುಮಕೂರಿನಲ್ಲಿ ಟ್ರಾಕ್ಟರ್‌‌‌‌ ತಡೆದ ಪೊಲೀಸರು

ಇಂದು ಪತ್ರಿಕಾಗೋಷ್ಠಯಲ್ಲಿ ಮಾತನಾಡಿದ್ದ ’ಸಂಯುಕ್ತ ಹೋರಾಟ ಕರ್ನಾಟ’ ಮುಖಂಡರು, “ಮುಂಬೈ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದ ರೈತರು ಸೇರಿದಂತೆ ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರಿನಿಂದ ಅತಿ ಹೆಚ್ಚಿನ ರೈತರು ನಾಳೆಯ ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಆದರೆ ಟ್ರ್ಯಾಕ್ಟರ್‌ಗಳನ್ನು ಎಲ್ಲೆಡೆ ಪೊಲೀಸರು ತಡೆಯುತ್ತಿದ್ದು ಇದನ್ನು ನಾವು ಖಂಡಿಸುತ್ತೇವೆ. ಏನೇ ಸಮಸ್ಯೆಗಳಿದ್ದರೆ ಪೊಲೀಸ್ ಅಧಿಕಾರಿಗಳು ನಮ್ಮೊಂದಿಗೆ ಚರ್ಚೆ ಮಾಡಲಿ. ಆದರೆ ನಿರ್ಬಂಧ ಹಾಕಲು ಪೊಲೀಸರು ಮುಂದಾದರೆ ಪರಿಸ್ಥಿತಿ ಕೈಮೀರುತ್ತದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಸರ್ಕಾರವೇ ಜವಾಬ್ದಾರಿ” ಎಂದು ಎಚ್ಚರಿಸಿದ್ದಾರೆ.

ಈ ನಡುವೆ ಟ್ರ್ಯಾಕ್ಟರ್ ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ನಗರ ಪೋಲಿಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ. ಇದಕ್ಕೆ ರೈತ ಮುಖಂಡರು ಕಿಡಿಕಾರಿದ್ದು, ಕೇಂದ್ರ ಸರ್ಕಾರವೇ ಟ್ರ್ಯಾಕ್ಟರ್ ‌ಪೆರೇಡ್‌ಗೆ ಅವಕಾಶ ಕೊಟ್ಟಿದೆ. ದೆಹಲಿಯಲ್ಲಿಯೇ ಟ್ರ್ಯಾಕ್ಟರ್ ಪರೇಡ್ ನಡೆಯುತ್ತೆ ಅಂದ ಮೇಲೆ ರಾಜ್ಯ ಸರ್ಕಾರ ಏಕೆ ಅನುಮತಿ ಕೊಡಲ್ಲಾ? ನಾವು ನಾಳೆ‌ ಟ್ರ್ಯಾಕ್ಟರ್ ಪೆರೇಡ್ ಮಾಡೇ ಮಾಡುತ್ತೇವೆ. ಟ್ಯಾಕ್ಟರ್ ಪೆರೇಡ್ ಇಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಮ್ಮನ್ನು ತಡೆದರೆ ಉಗ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಟ್ರಾಕ್ಟರ್‌ ರ್‍ಯಾಲಿ: ರೈತರು ತಮಗೆ ತಾವೇ ಅಳವಡಿಸಿಕೊಂಡ ಮಾರ್ಗಸೂಚಿಗಳು ಇಲ್ಲಿವೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...