Homeಕರ್ನಾಟಕಬೆಂಗಳೂರು ರೈತ ಗಣರಾಜ್ಯೋತ್ಸವ: ಚಳವಳಿಯನ್ನು ಹತ್ತಿಕ್ಕುತ್ತಿರುವ ಪೊಲೀಸರು

ಬೆಂಗಳೂರು ರೈತ ಗಣರಾಜ್ಯೋತ್ಸವ: ಚಳವಳಿಯನ್ನು ಹತ್ತಿಕ್ಕುತ್ತಿರುವ ಪೊಲೀಸರು

ನಾವು ನಾಳೆ‌ ಟ್ರ್ಯಾಕ್ಟರ್ ಪೆರೇಡ್ ಮಾಡೇ ಮಾಡುತ್ತೇವೆ. ಟ್ಯಾಕ್ಟರ್ ಪೆರೇಡ್‌ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ರೈತರು ಹೇಳಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾನೂನಿನ ವಿರುದ್ದ ದೇಶದಾದ್ಯಂತ ಹೋರಾಟ ನಡೆಯುತ್ತಿದೆ. ದೆಹಲಿಯಲ್ಲಿ ಟ್ರಾಕ್ಟರ್‌ ರ್‍ಯಾಲಿ ನಡೆಸಲು ಈಗಾಗಲೇ ಪೊಲೀಸರು ಅನುಮತಿ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಗಣರಾಜ್ಯೋತ್ಸವದಂದು ಬೆಂಗಳೂರಿನಲ್ಲೂ ರೈತರು ಟ್ರಾಕ್ಟರ್‌ ರ್‍ಯಾಲಿ ಆಯೋಜಿಸಿದ್ದಾರೆ. ಆದರೆ ರ್‍ಯಾಲಿಗೆ ಆಗಮಿಸುತ್ತಿರುವ ಟ್ರಾಕ್ಟರ್‌ಗಳನ್ನು ರಾಜ್ಯ ಪೊಲೀಸರು ಅಲ್ಲಲ್ಲೇ ತೆಡೆದು ಚಳವಳಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸುವ ರೈತರು ಟ್ರಾಕ್ಟರ್‌‌ನಲ್ಲಿ ಬಂದರೆ ಟ್ರಾಫಿಕ್ ಜಾಂ ಆಗುತ್ತದೆ, ಆದ್ದರಿಂದ ಟ್ರ್ಯಾಕ್ಟರ್ ಮೂಲಕ ಬರಬಾರದು ಎಂದಿರುವ ರಾಜ್ಯ ಡಿಜಿ ಅಂಡ್ ಐಜಿಪಿ ಪ್ರವೀಣ್ ಸೂದ್‌ ಜಿಲ್ಲಾ ಗಡಿಗಳಲ್ಲೇ ಟ್ರಾಕ್ಟರ್ ತಡೆಯಲು ಸೂಚನೆ ನೀಡಿದ್ದಾರೆ. ಭಾನುವಾರ ಬೆಂಗಳೂರಿಗೆ ಹೊರಟಿದ್ದ ರೈತರನ್ನು ಬೆಳಗಾವಿಯಲ್ಲಿ ತಡೆದು ನಿಲ್ಲಿಸಿದ್ದ ಪೊಲೀಸರು, ಟ್ರಾಕ್ಟರ್‌ ಬಿಟ್ಟು ಬೇರೆ ಯಾವುದೆ ವಾಹನಗಳಲ್ಲಿ ಹೊರಡಿ ಎಂದು ಹೇಳಿದ್ದರು.

ಇದನ್ನೂ ಓದಿ: ರ್‍ಯಾಲಿಗೆ ಟ್ರಾಕ್ಟರ್‌ ತರಬೇಡಿ ಎಂದ ಬೆಂಗಳೂರು ಪೊಲೀಸರು: ತಂದೇ ತರುತ್ತೇವೆ ಎಂದ ರೈತರು!

ರೈತರ ಗಣರಾಜ್ಯೋತ್ಸವಕ್ಕೆ ಇನ್ನು ಕಲವೇ ಗಂಟೆಗಳಿರುವಾಗ ಪೊಲೀಸರು ತಮ್ಮ ಕೆಲಸವನ್ನು ಚುರುಕುಗೊಳಿಸಿದ್ದಾರೆ. ಟ್ರಾಕ್ಟರ್‌ಗಳನ್ನು ಹೋರಾಟಕ್ಕೆ ತರಬಾರದು ಎಂದು ಪೊಲೀಸರು ವಿನಂತಿಸುತ್ತಿದ್ದು, ರೈತ ಮುಖಂಡರು ನಾವು ಟ್ರಾಕ್ಟರ್‌ ರ್‍ಯಾಲಿ ನಡೆಸಿಯೆ ತೀರುತ್ತೇವೆ ಎಂದು ಹೇಳಿದ್ದಾರೆ. ಹುಣಸೂರು, ಚಿಕ್ಕಬಳ್ಳಾಪುರ, ಮಡಿಕೇರಿ, ತುಮಕೂರಿನಲ್ಲಿ ಪೊಲೀಸರು ಟ್ರಾಕ್ಟರ್‌ಗಳನ್ನು ಈಗಾಗಲೇ ತಡೆಹಿಡಿದಿದ್ದಾರೆ.

ಭಾನುವಾರ, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಪೊಲೀಸರ ಕ್ರಮವನ್ನು ವಿರೋಧಿಸಿದ್ದು, “ರಾಜ್ಯದಲ್ಲಿ ರೈತರು, ಕಾರ್ಮಿಕರು ದಲಿತರು ಸೇರಿ ಬೆಂಗಳೂರಲ್ಲಿ ಟ್ರಾಕ್ಟರ್‌‌ ಪೆರೇಡ್ ಮೂಲಕ ಗಣರಾಜ್ಯೋತ್ಸವ ಆಚರಣೆ ಮಾಡಲು ತೀರ್ಮಾನ ಮಾಡಿದ್ದೇವೆ. ಟ್ರಾಕ್ಟರ್ ರೈತರ ಸಂಕೇತ. ಈ‌ ಕಾರ್ಯಕ್ರಮ ಟ್ರಾಕ್ಟರ್ ವರ್ಸರ್ಸ್ ಟ್ಯಾಂಕರ್ ಆಗಿದೆ. ಟ್ರಾಕ್ಟರ್‌ಗಳಿಗೆ ಅಡ್ಡಿಪಡಿಸಬೇಡಿ, ನಮ್ಮನ್ನು ಗೌರವಯುತವಾಗಿ ಬೆಂಗಳೂರಿಗೆ ಬರ ಮಾಡಿಕೊಂಡು ಅಷ್ಟೇ ಗೌರವವಾಗಿ ಬಿಳ್ಕೊಡಿ” ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬೊಮ್ಮಯಿ ಅವರಿಗೆ ವಿನಂತಿ ಮಾಡಿದ್ದರು.

ರೈತರ ಟ್ರ್ಯಾಕ್ಟರ್‌ಗಳನ್ನು ಜಪ್ತಿ ಮಾಡಿದರೆ, ಅವನ್ನು ಬಿಡಿಸಿಕೊಡಲು ನಾವೇ ಹೋಗುತ್ತೇವೆ ಎಂದು ಕಾಂಗ್ರೇಸ್ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ಹೇಳಿದ್ದಾರೆ.

ಇದನ್ನೂ ಓದಿ: ರೈತರ ಗಣರಾಜ್ಯೋತ್ಸವ: ತುಮಕೂರಿನಲ್ಲಿ ಟ್ರಾಕ್ಟರ್‌‌‌‌ ತಡೆದ ಪೊಲೀಸರು

ಇಂದು ಪತ್ರಿಕಾಗೋಷ್ಠಯಲ್ಲಿ ಮಾತನಾಡಿದ್ದ ’ಸಂಯುಕ್ತ ಹೋರಾಟ ಕರ್ನಾಟ’ ಮುಖಂಡರು, “ಮುಂಬೈ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದ ರೈತರು ಸೇರಿದಂತೆ ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರಿನಿಂದ ಅತಿ ಹೆಚ್ಚಿನ ರೈತರು ನಾಳೆಯ ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಆದರೆ ಟ್ರ್ಯಾಕ್ಟರ್‌ಗಳನ್ನು ಎಲ್ಲೆಡೆ ಪೊಲೀಸರು ತಡೆಯುತ್ತಿದ್ದು ಇದನ್ನು ನಾವು ಖಂಡಿಸುತ್ತೇವೆ. ಏನೇ ಸಮಸ್ಯೆಗಳಿದ್ದರೆ ಪೊಲೀಸ್ ಅಧಿಕಾರಿಗಳು ನಮ್ಮೊಂದಿಗೆ ಚರ್ಚೆ ಮಾಡಲಿ. ಆದರೆ ನಿರ್ಬಂಧ ಹಾಕಲು ಪೊಲೀಸರು ಮುಂದಾದರೆ ಪರಿಸ್ಥಿತಿ ಕೈಮೀರುತ್ತದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಸರ್ಕಾರವೇ ಜವಾಬ್ದಾರಿ” ಎಂದು ಎಚ್ಚರಿಸಿದ್ದಾರೆ.

ಈ ನಡುವೆ ಟ್ರ್ಯಾಕ್ಟರ್ ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ನಗರ ಪೋಲಿಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ. ಇದಕ್ಕೆ ರೈತ ಮುಖಂಡರು ಕಿಡಿಕಾರಿದ್ದು, ಕೇಂದ್ರ ಸರ್ಕಾರವೇ ಟ್ರ್ಯಾಕ್ಟರ್ ‌ಪೆರೇಡ್‌ಗೆ ಅವಕಾಶ ಕೊಟ್ಟಿದೆ. ದೆಹಲಿಯಲ್ಲಿಯೇ ಟ್ರ್ಯಾಕ್ಟರ್ ಪರೇಡ್ ನಡೆಯುತ್ತೆ ಅಂದ ಮೇಲೆ ರಾಜ್ಯ ಸರ್ಕಾರ ಏಕೆ ಅನುಮತಿ ಕೊಡಲ್ಲಾ? ನಾವು ನಾಳೆ‌ ಟ್ರ್ಯಾಕ್ಟರ್ ಪೆರೇಡ್ ಮಾಡೇ ಮಾಡುತ್ತೇವೆ. ಟ್ಯಾಕ್ಟರ್ ಪೆರೇಡ್ ಇಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಮ್ಮನ್ನು ತಡೆದರೆ ಉಗ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಟ್ರಾಕ್ಟರ್‌ ರ್‍ಯಾಲಿ: ರೈತರು ತಮಗೆ ತಾವೇ ಅಳವಡಿಸಿಕೊಂಡ ಮಾರ್ಗಸೂಚಿಗಳು ಇಲ್ಲಿವೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...