Homeಕರ್ನಾಟಕಬೆಂಗಳೂರು ರೈತ ಗಣರಾಜ್ಯೋತ್ಸವ: ಚಳವಳಿಯನ್ನು ಹತ್ತಿಕ್ಕುತ್ತಿರುವ ಪೊಲೀಸರು

ಬೆಂಗಳೂರು ರೈತ ಗಣರಾಜ್ಯೋತ್ಸವ: ಚಳವಳಿಯನ್ನು ಹತ್ತಿಕ್ಕುತ್ತಿರುವ ಪೊಲೀಸರು

ನಾವು ನಾಳೆ‌ ಟ್ರ್ಯಾಕ್ಟರ್ ಪೆರೇಡ್ ಮಾಡೇ ಮಾಡುತ್ತೇವೆ. ಟ್ಯಾಕ್ಟರ್ ಪೆರೇಡ್‌ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ರೈತರು ಹೇಳಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾನೂನಿನ ವಿರುದ್ದ ದೇಶದಾದ್ಯಂತ ಹೋರಾಟ ನಡೆಯುತ್ತಿದೆ. ದೆಹಲಿಯಲ್ಲಿ ಟ್ರಾಕ್ಟರ್‌ ರ್‍ಯಾಲಿ ನಡೆಸಲು ಈಗಾಗಲೇ ಪೊಲೀಸರು ಅನುಮತಿ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಗಣರಾಜ್ಯೋತ್ಸವದಂದು ಬೆಂಗಳೂರಿನಲ್ಲೂ ರೈತರು ಟ್ರಾಕ್ಟರ್‌ ರ್‍ಯಾಲಿ ಆಯೋಜಿಸಿದ್ದಾರೆ. ಆದರೆ ರ್‍ಯಾಲಿಗೆ ಆಗಮಿಸುತ್ತಿರುವ ಟ್ರಾಕ್ಟರ್‌ಗಳನ್ನು ರಾಜ್ಯ ಪೊಲೀಸರು ಅಲ್ಲಲ್ಲೇ ತೆಡೆದು ಚಳವಳಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸುವ ರೈತರು ಟ್ರಾಕ್ಟರ್‌‌ನಲ್ಲಿ ಬಂದರೆ ಟ್ರಾಫಿಕ್ ಜಾಂ ಆಗುತ್ತದೆ, ಆದ್ದರಿಂದ ಟ್ರ್ಯಾಕ್ಟರ್ ಮೂಲಕ ಬರಬಾರದು ಎಂದಿರುವ ರಾಜ್ಯ ಡಿಜಿ ಅಂಡ್ ಐಜಿಪಿ ಪ್ರವೀಣ್ ಸೂದ್‌ ಜಿಲ್ಲಾ ಗಡಿಗಳಲ್ಲೇ ಟ್ರಾಕ್ಟರ್ ತಡೆಯಲು ಸೂಚನೆ ನೀಡಿದ್ದಾರೆ. ಭಾನುವಾರ ಬೆಂಗಳೂರಿಗೆ ಹೊರಟಿದ್ದ ರೈತರನ್ನು ಬೆಳಗಾವಿಯಲ್ಲಿ ತಡೆದು ನಿಲ್ಲಿಸಿದ್ದ ಪೊಲೀಸರು, ಟ್ರಾಕ್ಟರ್‌ ಬಿಟ್ಟು ಬೇರೆ ಯಾವುದೆ ವಾಹನಗಳಲ್ಲಿ ಹೊರಡಿ ಎಂದು ಹೇಳಿದ್ದರು.

ಇದನ್ನೂ ಓದಿ: ರ್‍ಯಾಲಿಗೆ ಟ್ರಾಕ್ಟರ್‌ ತರಬೇಡಿ ಎಂದ ಬೆಂಗಳೂರು ಪೊಲೀಸರು: ತಂದೇ ತರುತ್ತೇವೆ ಎಂದ ರೈತರು!

ರೈತರ ಗಣರಾಜ್ಯೋತ್ಸವಕ್ಕೆ ಇನ್ನು ಕಲವೇ ಗಂಟೆಗಳಿರುವಾಗ ಪೊಲೀಸರು ತಮ್ಮ ಕೆಲಸವನ್ನು ಚುರುಕುಗೊಳಿಸಿದ್ದಾರೆ. ಟ್ರಾಕ್ಟರ್‌ಗಳನ್ನು ಹೋರಾಟಕ್ಕೆ ತರಬಾರದು ಎಂದು ಪೊಲೀಸರು ವಿನಂತಿಸುತ್ತಿದ್ದು, ರೈತ ಮುಖಂಡರು ನಾವು ಟ್ರಾಕ್ಟರ್‌ ರ್‍ಯಾಲಿ ನಡೆಸಿಯೆ ತೀರುತ್ತೇವೆ ಎಂದು ಹೇಳಿದ್ದಾರೆ. ಹುಣಸೂರು, ಚಿಕ್ಕಬಳ್ಳಾಪುರ, ಮಡಿಕೇರಿ, ತುಮಕೂರಿನಲ್ಲಿ ಪೊಲೀಸರು ಟ್ರಾಕ್ಟರ್‌ಗಳನ್ನು ಈಗಾಗಲೇ ತಡೆಹಿಡಿದಿದ್ದಾರೆ.

ಭಾನುವಾರ, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಪೊಲೀಸರ ಕ್ರಮವನ್ನು ವಿರೋಧಿಸಿದ್ದು, “ರಾಜ್ಯದಲ್ಲಿ ರೈತರು, ಕಾರ್ಮಿಕರು ದಲಿತರು ಸೇರಿ ಬೆಂಗಳೂರಲ್ಲಿ ಟ್ರಾಕ್ಟರ್‌‌ ಪೆರೇಡ್ ಮೂಲಕ ಗಣರಾಜ್ಯೋತ್ಸವ ಆಚರಣೆ ಮಾಡಲು ತೀರ್ಮಾನ ಮಾಡಿದ್ದೇವೆ. ಟ್ರಾಕ್ಟರ್ ರೈತರ ಸಂಕೇತ. ಈ‌ ಕಾರ್ಯಕ್ರಮ ಟ್ರಾಕ್ಟರ್ ವರ್ಸರ್ಸ್ ಟ್ಯಾಂಕರ್ ಆಗಿದೆ. ಟ್ರಾಕ್ಟರ್‌ಗಳಿಗೆ ಅಡ್ಡಿಪಡಿಸಬೇಡಿ, ನಮ್ಮನ್ನು ಗೌರವಯುತವಾಗಿ ಬೆಂಗಳೂರಿಗೆ ಬರ ಮಾಡಿಕೊಂಡು ಅಷ್ಟೇ ಗೌರವವಾಗಿ ಬಿಳ್ಕೊಡಿ” ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬೊಮ್ಮಯಿ ಅವರಿಗೆ ವಿನಂತಿ ಮಾಡಿದ್ದರು.

ರೈತರ ಟ್ರ್ಯಾಕ್ಟರ್‌ಗಳನ್ನು ಜಪ್ತಿ ಮಾಡಿದರೆ, ಅವನ್ನು ಬಿಡಿಸಿಕೊಡಲು ನಾವೇ ಹೋಗುತ್ತೇವೆ ಎಂದು ಕಾಂಗ್ರೇಸ್ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ಹೇಳಿದ್ದಾರೆ.

ಇದನ್ನೂ ಓದಿ: ರೈತರ ಗಣರಾಜ್ಯೋತ್ಸವ: ತುಮಕೂರಿನಲ್ಲಿ ಟ್ರಾಕ್ಟರ್‌‌‌‌ ತಡೆದ ಪೊಲೀಸರು

ಇಂದು ಪತ್ರಿಕಾಗೋಷ್ಠಯಲ್ಲಿ ಮಾತನಾಡಿದ್ದ ’ಸಂಯುಕ್ತ ಹೋರಾಟ ಕರ್ನಾಟ’ ಮುಖಂಡರು, “ಮುಂಬೈ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದ ರೈತರು ಸೇರಿದಂತೆ ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರಿನಿಂದ ಅತಿ ಹೆಚ್ಚಿನ ರೈತರು ನಾಳೆಯ ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಆದರೆ ಟ್ರ್ಯಾಕ್ಟರ್‌ಗಳನ್ನು ಎಲ್ಲೆಡೆ ಪೊಲೀಸರು ತಡೆಯುತ್ತಿದ್ದು ಇದನ್ನು ನಾವು ಖಂಡಿಸುತ್ತೇವೆ. ಏನೇ ಸಮಸ್ಯೆಗಳಿದ್ದರೆ ಪೊಲೀಸ್ ಅಧಿಕಾರಿಗಳು ನಮ್ಮೊಂದಿಗೆ ಚರ್ಚೆ ಮಾಡಲಿ. ಆದರೆ ನಿರ್ಬಂಧ ಹಾಕಲು ಪೊಲೀಸರು ಮುಂದಾದರೆ ಪರಿಸ್ಥಿತಿ ಕೈಮೀರುತ್ತದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಸರ್ಕಾರವೇ ಜವಾಬ್ದಾರಿ” ಎಂದು ಎಚ್ಚರಿಸಿದ್ದಾರೆ.

ಈ ನಡುವೆ ಟ್ರ್ಯಾಕ್ಟರ್ ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ನಗರ ಪೋಲಿಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ. ಇದಕ್ಕೆ ರೈತ ಮುಖಂಡರು ಕಿಡಿಕಾರಿದ್ದು, ಕೇಂದ್ರ ಸರ್ಕಾರವೇ ಟ್ರ್ಯಾಕ್ಟರ್ ‌ಪೆರೇಡ್‌ಗೆ ಅವಕಾಶ ಕೊಟ್ಟಿದೆ. ದೆಹಲಿಯಲ್ಲಿಯೇ ಟ್ರ್ಯಾಕ್ಟರ್ ಪರೇಡ್ ನಡೆಯುತ್ತೆ ಅಂದ ಮೇಲೆ ರಾಜ್ಯ ಸರ್ಕಾರ ಏಕೆ ಅನುಮತಿ ಕೊಡಲ್ಲಾ? ನಾವು ನಾಳೆ‌ ಟ್ರ್ಯಾಕ್ಟರ್ ಪೆರೇಡ್ ಮಾಡೇ ಮಾಡುತ್ತೇವೆ. ಟ್ಯಾಕ್ಟರ್ ಪೆರೇಡ್ ಇಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಮ್ಮನ್ನು ತಡೆದರೆ ಉಗ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಟ್ರಾಕ್ಟರ್‌ ರ್‍ಯಾಲಿ: ರೈತರು ತಮಗೆ ತಾವೇ ಅಳವಡಿಸಿಕೊಂಡ ಮಾರ್ಗಸೂಚಿಗಳು ಇಲ್ಲಿವೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...