Homeಕರ್ನಾಟಕಬೆಂಗಳೂರು: ಡಿ.11ರಂದು ಒಳಮೀಸಲಾತಿ ಹೋರಾಟ ಸಂಘಟಿಸಿದ 10 ದಲಿತ ಮುಖಂಡರ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಡಿ.11ರಂದು ಒಳಮೀಸಲಾತಿ ಹೋರಾಟ ಸಂಘಟಿಸಿದ 10 ದಲಿತ ಮುಖಂಡರ ವಿರುದ್ಧ ಎಫ್‌ಐಆರ್‌

ಒಳಮೀಸಲಾತಿ ಹೋರಾಟಗಾರರು 2000-3000 ಜನರ ಅಕ್ರಮ ಕೂಟ ಸೇರಿಸಿಕೊಂಡು ಸಾರ್ವಜನಿಕರಿಗೆ ಅಡ್ಡಿಪಡಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ

- Advertisement -
- Advertisement -

ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಡಿಸೆಂಬರ್‌ 11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಹೋರಾಟ ಹಮ್ಮಿಕೊಂಡಿದ್ದ ಹೋರಾಟಗಾರರ ಮೇಲೆ ಬೆಂಗಳೂರಿನ ಕಾಟನ್‌ಪೇಟೆ ಪೊಲೀಸರು ಪ್ರಕರಣ ದಾಖಸಿದ್ದಾರೆ.

ಮಳೆ, ಚಳಿ, ಬಿಸಿಲೆನ್ನದೆ ಸಾಮಾಜಿಕ ನ್ಯಾಯಕ್ಕಾಗಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟವು ಹತ್ತನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟಗಾರರ ಮೇಲೆ ಈಗ ಕಾನೂನಿನ ಕುಣಿಕೆ ಬೀಸಲಾಗಿದೆ.

ಸಾರ್ವಜನಿಕರಿಗೆ ಅಡ್ಡಿಪಡಿಸಿ, ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪವನ್ನು ಹತ್ತು ಜನ ಹೋರಾಟಗಾರರ ವಿರುದ್ಧ ಹೊರಿಸಲಾಗಿದೆ. ಕರ್ನಾಟಕ ಪೊಲೀಸ್ ಆಕ್ಟ್‌ 1963 ಸೆಕ್ಷನ್‌ 103, ಐಪಿಸಿ ಸೆಕ್ಷನ್‌ 341, 143, 149, 188ರ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಶಿವರಾಯ ಅಕ್ಕರಕಿ, ಒಳಮೀಸಲಾತಿ ಹೋರಾಟಗಾರದ ಮುಂಚೂಣಿ ನಾಯಕರಾದ ಅಂಬಣ್ಣ ಅರೋಲಿಕರ್‌, ಮಾದಿಗ ದಂಡೋರ ಸಮಿತಿಯ ಪಾವಗಡ ಶ್ರೀರಾಮ್‌, ಪ್ರಾದೇಶಿಕ ಮಾದಿಗ ಸಂಘದ ಶಂಕರ್ ಪೂಜಾರಿ, ಎಸ್‌ಎಸ್‌ಎಸ್‌ಒ ಅಧ್ಯಕ್ಷ ಭಾಸ್ಕರ್‌ ಪ್ರಸಾದ್‌, ದಸಂಸ ಮುಖಂಡರಾದ ಎನ್‌.ಮೂರ್ತಿ, ಬಿ.ಗೋಪಾಲ್‌, ಹೆಣ್ಣೂರ್‌ ಶ್ರೀನಿವಾಸ್‌, ಎಂಆರ್‌ಎಚ್‌ಎಸ್‌ ಮುಖಂಡರಾದ ಭಾಗ್ಯಮ್ಮ, ಎಂಡಿಎಸ್‌ಎಸ್ ಮುಖಂಡರಾದ ಲಿಂಗರಾಜು ಅವರನ್ನು ಕ್ರಮವಾಗಿ ಆರೋಪಿಗಳನ್ನಾಗಿ ಮಾಡಲಾಗಿದೆ.

ಎಫ್‌ಐಆರ್‌ನಲ್ಲಿ ಏನಿದೆ?

ಕಾಟನ್‌ಪೇಟೆ ಪೊಲೀಸ್ ಇನ್‌ಸ್ಪೆಕ್ಟರ್‌ ಬಿ.ಬಾಲರಾಜು ಅವರ ದೂರುದಾರರಾಗಿದ್ದು, ಹೋರಾಟಗಾರರ ಮೇಲೆ ಆರೋಪಗಳನ್ನು ಹೊರಿಸಿದ್ದಾರೆ.

ಡಿಸೆಂಬರ್‌ 11ರಂದು ಒಳಮೀಸಲಾತಿ ಹೋರಾಟಗಾರರು ತಮ್ಮ ನೇತೃತ್ವದಲ್ಲಿ ಸುಮಾರು 2000-3000 ಜನರ ಅಕ್ರಮ ಕೂಟ ಸೇರಿಸಿಕೊಂಡು ರೈಲ್ವೆ ನಿಲ್ದಾಣದ ಆರ್‌ಎಂಎಸ್‌ ಗೇಟ್ ಮುಂಭಾಗದಲ್ಲಿ, ಶಾಂತಲಾ ಸರ್ಕಲ್‌ನಿಂದ ಖೋಡೆ ಸರ್ಕಲ್‌ ಕಡೆಗೆ ಹೋಗುವ ಸಾರ್ವಜನಿಕ ಮುಖ್ಯ ರಸ್ತೆಯ ವಾಹನಗಳನ್ನು ತಡೆದಿದ್ದಾರೆ. ಸುಮಾರು 11.30ರಿಂದ 12.30ರವರೆಗೆ ತಡೆದು ಮೆರವಣಿಗೆ ಮಾಡಲು ಏಕಾಏಕಿ ಬಂದು ಕೂಗಾಟ ನಡೆಸಿದ್ದಾರೆ ಎಂದು ದೂರಲಾಗಿದೆ.

“ಸಾರ್ವಜನಿಕ ಸಂಚಾರಕ್ಕೆ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿರುವ ಬಗ್ಗೆ ಮಾಹಿತಿ ಬಂದಿತು. ನಾನು (ಇನ್‌ಸ್ಪೆಕ್ಟರ್‌) ಸದರಿ ಸ್ಥಳಕ್ಕೆ ಸಿಬ್ಬಂದಿ ಜೊತೆಯಲ್ಲಿ ತೆರಳಿ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದೇನೆ. ಸದರಿ ಪ್ರತಿಭಟನಾಕಾರರನ್ನು ಮುಂಜಾಗ್ರತಾ ಕ್ರಮವಾಗಿ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ತಡೆಯಲಾಗಿದೆ. ಹೈಕೋರ್ಟ್‌ 03.03.2022ರಂದು ನೀಡಿರುವ ಆದೇಶದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ಹೊರತುಪಡಿಸಿ ಯಾವುದೇ ಸ್ಥಳದಲ್ಲಿ ಪ್ರತಿಭಟನೆ ಹಾಗೂ ಮೆರವಣಿಗೆಗೆ ಅವಕಾಶವಿಲ್ಲವೆಂದು ಹೇಳಲಾಗಿದೆ. 10.01.2022ರಲ್ಲಿ ಪ್ರಕಟನೆ ನೀಡಿದ ಬಗ್ಗೆ ವಿವರಿಸಿ ತಿಳಿಸಿದರೂ ನಮ್ಮ ಮಾತನ್ನು ಲೆಕ್ಕಿಸದೇ ಸುಮಾರು  3,000 ಜನರನ್ನು ಕರೆದುಕೊಂಡು ಸಾರ್ವಜನಿಕ ರಸ್ತೆಗಳನ್ನು ತಡೆದು ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೂ ಕಾಲ್ನಡಿಗೆಯಲ್ಲಿ ಘೋಷಣೆ ಕೂಗುತ್ತಾ ರಸ್ತೆ ತಡೆದು ಮೆರವಣಿಗೆ ಹೊರಟ್ಟಿದ್ದರು” ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

“ಸಾರ್ವಜನಿಕ ಸ್ಥಳವಾದ ರೈಲ್ವೆ ಸ್ಟೇಷನ್ ಮುಂಭಾಗ ಏಕಾಏಕಿ ಅಕ್ರಮ ಕೂಟ ಸೇರಿಸಿಕೊಂಡು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಲಾಗಿದೆ. ಸಾರ್ವಜನಿಕ ರಸ್ತೆಯಲ್ಲಿ ವಾಹನಗಳನ್ನು ತಡೆದು ಸಾರ್ವಜನಿಕರ ಸಂಚಾರಕ್ಕೆ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗಿದೆ” ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಎಫ್‌ಐಆರ್‌ ವಿರುದ್ಧ ಹೋರಾಟಗಾರರ ಆಕ್ರೋಶ

ಒಳಮೀಸಲಾತಿ ಹೋರಾಟದ ನಾಯಕರಾದ ಅಂಬಣ್ಣ ಅರೋಲಿಕರ್‌ ಪ್ರತಿಕ್ರಿಯಿಸಿ, “ಡಿಸೆಂಬರ್ 11ರ ಹೋರಾಟದಲ್ಲಿ ಭಾಗವಹಿಸಿದ 10 ಜನರ ಮೇಲೆ ಕೇಸ್ ದಾಖಲಾಗಿದೆ. ನಮ್ಮ ಹೋರಾಟಕ್ಕೆ ಕಾರಣವಾದವರು ಮುಖ್ಯಮಂತ್ರಿ (ಆರೋಪಿ-1), ಗೃಹ ಸಚಿವ (ಆರೋಪಿ-2), ಸಮಾಜ ಕಲ್ಯಾಣ ಇಲಾಖೆ ಸಚಿವ (ಆರೋಪಿ-3) ಎಂದು ಸ್ವಯಂ ಪ್ರೇರಿತ ಕೇಸ್ ದಾಖಲಿಸದಿದ್ದರೆ ನಾವೇ ಪ್ರಕರಣ ದಾಖಲಿಸಲಿದ್ದೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ವಕೀಲರು ಹಾಗೂ ಹೋರಾಟಗಾರರಾದ ಪಾವಗಡ ಶ್ರೀರಾಮ್‌ ಮಾತನಾಡಿ, “ಎರಡು ದಶಕಗಳ ಹೋರಾಟದಲ್ಲಿ ನಮ್ಮ ವಿರುದ್ಧ 18 ಪ್ರಕರಣಗಳನ್ನು ದಾಖಲಿಸಲಾಗಿದೆ. ಎಲ್ಲ ಪ್ರಕರಣದಲ್ಲೂ ನಾನು ಆರೋಪಿ ನಂ.1 ಆಗಿದ್ದೆ. ಈ ಪ್ರಕರಣದಲ್ಲಿ ಆರೋಪಿ ನಂ.3 ಮಾಡಿದ್ದಾರೆ. ಎಲ್ಲ ಪಕ್ಷಗಳು ನಮಗೆ ಮೋಸ ಮಾಡಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಭರವಸೆ ನೀಡಿದ್ದ ಕಾರಣಕ್ಕಾಗಿ ಈ ಅಧಿವೇಶನದಲ್ಲಿ ಗಮನ ಸೆಳೆಯಲು ಹೋರಾಟ ಹಮ್ಮಿಕೊಂಡಿದ್ದೆವು. ನಾವು ಯಾವುದೇ ಆಸ್ತಿಪಾಸ್ತಿ ನಷ್ಟ ಮಾಡಿಲ್ಲ. ಆದರೂ ಪ್ರಕರಣ ದಾಖಲಿಸಲಾಗಿದೆ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ” ಎಂದು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಹೋರಾಟಗಾರ ಭಾಸ್ಕರ್‌ ಪ್ರಸಾದ್, “ನಾನು ರೈಲ್ವೇ ಸ್ಟೇಷನ್ ಕಡೆ ತಲೆ ಹಾಕಿಯೇ ಅದೆಷ್ಟೋ ತಿಂಗಳುಗಳಾಗಿವೆ ಎಂಬುದು ನಿಜ ಸಂಗತಿ. ಆ ಪ್ರತಿಭಟನೆಯ ದಿನ ನಾನು ಬೇರೆ ಬೇರೆ ಏರ್ಪಾಡುಗಳು ಹಾಗೂ ನನ್ನ ರಚನೆಯ ‘ಮಾದಿಗ ಭಾರತ’ ಪುಸ್ತಕ ಬಿಡುಗಡೆಯ ಕಾರಣಕ್ಕಾಗಿ, ಬೆಳಿಗ್ಗೆ 10 ಗಂಟೆಗೆ ಫ್ರೀಡಂ ಪಾರ್ಕಿಗೆ ಹೋಗಿದ್ದವನು ಅಂದು ಸಂಜೆ ಪೊಲೀಸರು ಹೋರಾಟಗಾರರನ್ನೆಲ್ಲ ಬಂಧಿಸಿ ಕರೆದೊಯ್ಯುವವರೆಗೂ ಫ್ರೀಡಂ ಪಾರ್ಕ್ ಬಿಟ್ಟು ಆಚೀಚೆ ಕದಲಿಲ್ಲ. ಆದರೂ ನಾನು ಪ್ರಕರಣದ ಆರೋಪಿಯಾಗಿದ್ದೇನೆ. ನಾನು ಈ ಪ್ರಕರಣದಿಂದ ಎಸ್ಕೇಪ್ ಆಗಲು ಈ ವಿವರಣೆ ನೀಡ್ತಿಲ್ಲ” ಎಂದಿದ್ದಾರೆ.

“ರೈಲ್ವೆ ಸ್ಟೇಷನ್ ಮತ್ತು ಫ್ರೀಡಂ ಪಾರ್ಕ್‌ನಲ್ಲಿ ಇದುವರೆಗೂ ಅದೆಷ್ಟು ಸಾವಿರಾರು ಪ್ರತಿಭಟನೆಗಳು ನಡೆದಿವೆ. ಅವುಗಳಿಗಾಗಿ ಅದೆಷ್ಟು ಜನರ ಮೇಲೆ ಪ್ರಕರಣ ದಾಖಲಾಗಿದೆ ಎಂದು ಈಗ ಪೋಲಿಸರು ಹೇಳಬೇಕು. ತಾನು ಒಳಮೀಸಲಾತಿ ಪರ ಎಂದು ಬಿಜೆಪಿ ಸರ್ಕಾರ ಹೇಳಿಕೊಳ್ಳುತ್ತದೆ. ನಿಜವಾದ ಒಳಮೀಸಲಾತಿ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...