Homeಕರ್ನಾಟಕಬೆಂಗಳೂರು: ಡಿ.11ರಂದು ಒಳಮೀಸಲಾತಿ ಹೋರಾಟ ಸಂಘಟಿಸಿದ 10 ದಲಿತ ಮುಖಂಡರ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಡಿ.11ರಂದು ಒಳಮೀಸಲಾತಿ ಹೋರಾಟ ಸಂಘಟಿಸಿದ 10 ದಲಿತ ಮುಖಂಡರ ವಿರುದ್ಧ ಎಫ್‌ಐಆರ್‌

ಒಳಮೀಸಲಾತಿ ಹೋರಾಟಗಾರರು 2000-3000 ಜನರ ಅಕ್ರಮ ಕೂಟ ಸೇರಿಸಿಕೊಂಡು ಸಾರ್ವಜನಿಕರಿಗೆ ಅಡ್ಡಿಪಡಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ

- Advertisement -
- Advertisement -

ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಡಿಸೆಂಬರ್‌ 11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಹೋರಾಟ ಹಮ್ಮಿಕೊಂಡಿದ್ದ ಹೋರಾಟಗಾರರ ಮೇಲೆ ಬೆಂಗಳೂರಿನ ಕಾಟನ್‌ಪೇಟೆ ಪೊಲೀಸರು ಪ್ರಕರಣ ದಾಖಸಿದ್ದಾರೆ.

ಮಳೆ, ಚಳಿ, ಬಿಸಿಲೆನ್ನದೆ ಸಾಮಾಜಿಕ ನ್ಯಾಯಕ್ಕಾಗಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟವು ಹತ್ತನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟಗಾರರ ಮೇಲೆ ಈಗ ಕಾನೂನಿನ ಕುಣಿಕೆ ಬೀಸಲಾಗಿದೆ.

ಸಾರ್ವಜನಿಕರಿಗೆ ಅಡ್ಡಿಪಡಿಸಿ, ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪವನ್ನು ಹತ್ತು ಜನ ಹೋರಾಟಗಾರರ ವಿರುದ್ಧ ಹೊರಿಸಲಾಗಿದೆ. ಕರ್ನಾಟಕ ಪೊಲೀಸ್ ಆಕ್ಟ್‌ 1963 ಸೆಕ್ಷನ್‌ 103, ಐಪಿಸಿ ಸೆಕ್ಷನ್‌ 341, 143, 149, 188ರ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಶಿವರಾಯ ಅಕ್ಕರಕಿ, ಒಳಮೀಸಲಾತಿ ಹೋರಾಟಗಾರದ ಮುಂಚೂಣಿ ನಾಯಕರಾದ ಅಂಬಣ್ಣ ಅರೋಲಿಕರ್‌, ಮಾದಿಗ ದಂಡೋರ ಸಮಿತಿಯ ಪಾವಗಡ ಶ್ರೀರಾಮ್‌, ಪ್ರಾದೇಶಿಕ ಮಾದಿಗ ಸಂಘದ ಶಂಕರ್ ಪೂಜಾರಿ, ಎಸ್‌ಎಸ್‌ಎಸ್‌ಒ ಅಧ್ಯಕ್ಷ ಭಾಸ್ಕರ್‌ ಪ್ರಸಾದ್‌, ದಸಂಸ ಮುಖಂಡರಾದ ಎನ್‌.ಮೂರ್ತಿ, ಬಿ.ಗೋಪಾಲ್‌, ಹೆಣ್ಣೂರ್‌ ಶ್ರೀನಿವಾಸ್‌, ಎಂಆರ್‌ಎಚ್‌ಎಸ್‌ ಮುಖಂಡರಾದ ಭಾಗ್ಯಮ್ಮ, ಎಂಡಿಎಸ್‌ಎಸ್ ಮುಖಂಡರಾದ ಲಿಂಗರಾಜು ಅವರನ್ನು ಕ್ರಮವಾಗಿ ಆರೋಪಿಗಳನ್ನಾಗಿ ಮಾಡಲಾಗಿದೆ.

ಎಫ್‌ಐಆರ್‌ನಲ್ಲಿ ಏನಿದೆ?

ಕಾಟನ್‌ಪೇಟೆ ಪೊಲೀಸ್ ಇನ್‌ಸ್ಪೆಕ್ಟರ್‌ ಬಿ.ಬಾಲರಾಜು ಅವರ ದೂರುದಾರರಾಗಿದ್ದು, ಹೋರಾಟಗಾರರ ಮೇಲೆ ಆರೋಪಗಳನ್ನು ಹೊರಿಸಿದ್ದಾರೆ.

ಡಿಸೆಂಬರ್‌ 11ರಂದು ಒಳಮೀಸಲಾತಿ ಹೋರಾಟಗಾರರು ತಮ್ಮ ನೇತೃತ್ವದಲ್ಲಿ ಸುಮಾರು 2000-3000 ಜನರ ಅಕ್ರಮ ಕೂಟ ಸೇರಿಸಿಕೊಂಡು ರೈಲ್ವೆ ನಿಲ್ದಾಣದ ಆರ್‌ಎಂಎಸ್‌ ಗೇಟ್ ಮುಂಭಾಗದಲ್ಲಿ, ಶಾಂತಲಾ ಸರ್ಕಲ್‌ನಿಂದ ಖೋಡೆ ಸರ್ಕಲ್‌ ಕಡೆಗೆ ಹೋಗುವ ಸಾರ್ವಜನಿಕ ಮುಖ್ಯ ರಸ್ತೆಯ ವಾಹನಗಳನ್ನು ತಡೆದಿದ್ದಾರೆ. ಸುಮಾರು 11.30ರಿಂದ 12.30ರವರೆಗೆ ತಡೆದು ಮೆರವಣಿಗೆ ಮಾಡಲು ಏಕಾಏಕಿ ಬಂದು ಕೂಗಾಟ ನಡೆಸಿದ್ದಾರೆ ಎಂದು ದೂರಲಾಗಿದೆ.

“ಸಾರ್ವಜನಿಕ ಸಂಚಾರಕ್ಕೆ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿರುವ ಬಗ್ಗೆ ಮಾಹಿತಿ ಬಂದಿತು. ನಾನು (ಇನ್‌ಸ್ಪೆಕ್ಟರ್‌) ಸದರಿ ಸ್ಥಳಕ್ಕೆ ಸಿಬ್ಬಂದಿ ಜೊತೆಯಲ್ಲಿ ತೆರಳಿ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದೇನೆ. ಸದರಿ ಪ್ರತಿಭಟನಾಕಾರರನ್ನು ಮುಂಜಾಗ್ರತಾ ಕ್ರಮವಾಗಿ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ತಡೆಯಲಾಗಿದೆ. ಹೈಕೋರ್ಟ್‌ 03.03.2022ರಂದು ನೀಡಿರುವ ಆದೇಶದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ಹೊರತುಪಡಿಸಿ ಯಾವುದೇ ಸ್ಥಳದಲ್ಲಿ ಪ್ರತಿಭಟನೆ ಹಾಗೂ ಮೆರವಣಿಗೆಗೆ ಅವಕಾಶವಿಲ್ಲವೆಂದು ಹೇಳಲಾಗಿದೆ. 10.01.2022ರಲ್ಲಿ ಪ್ರಕಟನೆ ನೀಡಿದ ಬಗ್ಗೆ ವಿವರಿಸಿ ತಿಳಿಸಿದರೂ ನಮ್ಮ ಮಾತನ್ನು ಲೆಕ್ಕಿಸದೇ ಸುಮಾರು  3,000 ಜನರನ್ನು ಕರೆದುಕೊಂಡು ಸಾರ್ವಜನಿಕ ರಸ್ತೆಗಳನ್ನು ತಡೆದು ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೂ ಕಾಲ್ನಡಿಗೆಯಲ್ಲಿ ಘೋಷಣೆ ಕೂಗುತ್ತಾ ರಸ್ತೆ ತಡೆದು ಮೆರವಣಿಗೆ ಹೊರಟ್ಟಿದ್ದರು” ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

“ಸಾರ್ವಜನಿಕ ಸ್ಥಳವಾದ ರೈಲ್ವೆ ಸ್ಟೇಷನ್ ಮುಂಭಾಗ ಏಕಾಏಕಿ ಅಕ್ರಮ ಕೂಟ ಸೇರಿಸಿಕೊಂಡು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಲಾಗಿದೆ. ಸಾರ್ವಜನಿಕ ರಸ್ತೆಯಲ್ಲಿ ವಾಹನಗಳನ್ನು ತಡೆದು ಸಾರ್ವಜನಿಕರ ಸಂಚಾರಕ್ಕೆ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗಿದೆ” ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಎಫ್‌ಐಆರ್‌ ವಿರುದ್ಧ ಹೋರಾಟಗಾರರ ಆಕ್ರೋಶ

ಒಳಮೀಸಲಾತಿ ಹೋರಾಟದ ನಾಯಕರಾದ ಅಂಬಣ್ಣ ಅರೋಲಿಕರ್‌ ಪ್ರತಿಕ್ರಿಯಿಸಿ, “ಡಿಸೆಂಬರ್ 11ರ ಹೋರಾಟದಲ್ಲಿ ಭಾಗವಹಿಸಿದ 10 ಜನರ ಮೇಲೆ ಕೇಸ್ ದಾಖಲಾಗಿದೆ. ನಮ್ಮ ಹೋರಾಟಕ್ಕೆ ಕಾರಣವಾದವರು ಮುಖ್ಯಮಂತ್ರಿ (ಆರೋಪಿ-1), ಗೃಹ ಸಚಿವ (ಆರೋಪಿ-2), ಸಮಾಜ ಕಲ್ಯಾಣ ಇಲಾಖೆ ಸಚಿವ (ಆರೋಪಿ-3) ಎಂದು ಸ್ವಯಂ ಪ್ರೇರಿತ ಕೇಸ್ ದಾಖಲಿಸದಿದ್ದರೆ ನಾವೇ ಪ್ರಕರಣ ದಾಖಲಿಸಲಿದ್ದೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ವಕೀಲರು ಹಾಗೂ ಹೋರಾಟಗಾರರಾದ ಪಾವಗಡ ಶ್ರೀರಾಮ್‌ ಮಾತನಾಡಿ, “ಎರಡು ದಶಕಗಳ ಹೋರಾಟದಲ್ಲಿ ನಮ್ಮ ವಿರುದ್ಧ 18 ಪ್ರಕರಣಗಳನ್ನು ದಾಖಲಿಸಲಾಗಿದೆ. ಎಲ್ಲ ಪ್ರಕರಣದಲ್ಲೂ ನಾನು ಆರೋಪಿ ನಂ.1 ಆಗಿದ್ದೆ. ಈ ಪ್ರಕರಣದಲ್ಲಿ ಆರೋಪಿ ನಂ.3 ಮಾಡಿದ್ದಾರೆ. ಎಲ್ಲ ಪಕ್ಷಗಳು ನಮಗೆ ಮೋಸ ಮಾಡಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಭರವಸೆ ನೀಡಿದ್ದ ಕಾರಣಕ್ಕಾಗಿ ಈ ಅಧಿವೇಶನದಲ್ಲಿ ಗಮನ ಸೆಳೆಯಲು ಹೋರಾಟ ಹಮ್ಮಿಕೊಂಡಿದ್ದೆವು. ನಾವು ಯಾವುದೇ ಆಸ್ತಿಪಾಸ್ತಿ ನಷ್ಟ ಮಾಡಿಲ್ಲ. ಆದರೂ ಪ್ರಕರಣ ದಾಖಲಿಸಲಾಗಿದೆ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ” ಎಂದು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಹೋರಾಟಗಾರ ಭಾಸ್ಕರ್‌ ಪ್ರಸಾದ್, “ನಾನು ರೈಲ್ವೇ ಸ್ಟೇಷನ್ ಕಡೆ ತಲೆ ಹಾಕಿಯೇ ಅದೆಷ್ಟೋ ತಿಂಗಳುಗಳಾಗಿವೆ ಎಂಬುದು ನಿಜ ಸಂಗತಿ. ಆ ಪ್ರತಿಭಟನೆಯ ದಿನ ನಾನು ಬೇರೆ ಬೇರೆ ಏರ್ಪಾಡುಗಳು ಹಾಗೂ ನನ್ನ ರಚನೆಯ ‘ಮಾದಿಗ ಭಾರತ’ ಪುಸ್ತಕ ಬಿಡುಗಡೆಯ ಕಾರಣಕ್ಕಾಗಿ, ಬೆಳಿಗ್ಗೆ 10 ಗಂಟೆಗೆ ಫ್ರೀಡಂ ಪಾರ್ಕಿಗೆ ಹೋಗಿದ್ದವನು ಅಂದು ಸಂಜೆ ಪೊಲೀಸರು ಹೋರಾಟಗಾರರನ್ನೆಲ್ಲ ಬಂಧಿಸಿ ಕರೆದೊಯ್ಯುವವರೆಗೂ ಫ್ರೀಡಂ ಪಾರ್ಕ್ ಬಿಟ್ಟು ಆಚೀಚೆ ಕದಲಿಲ್ಲ. ಆದರೂ ನಾನು ಪ್ರಕರಣದ ಆರೋಪಿಯಾಗಿದ್ದೇನೆ. ನಾನು ಈ ಪ್ರಕರಣದಿಂದ ಎಸ್ಕೇಪ್ ಆಗಲು ಈ ವಿವರಣೆ ನೀಡ್ತಿಲ್ಲ” ಎಂದಿದ್ದಾರೆ.

“ರೈಲ್ವೆ ಸ್ಟೇಷನ್ ಮತ್ತು ಫ್ರೀಡಂ ಪಾರ್ಕ್‌ನಲ್ಲಿ ಇದುವರೆಗೂ ಅದೆಷ್ಟು ಸಾವಿರಾರು ಪ್ರತಿಭಟನೆಗಳು ನಡೆದಿವೆ. ಅವುಗಳಿಗಾಗಿ ಅದೆಷ್ಟು ಜನರ ಮೇಲೆ ಪ್ರಕರಣ ದಾಖಲಾಗಿದೆ ಎಂದು ಈಗ ಪೋಲಿಸರು ಹೇಳಬೇಕು. ತಾನು ಒಳಮೀಸಲಾತಿ ಪರ ಎಂದು ಬಿಜೆಪಿ ಸರ್ಕಾರ ಹೇಳಿಕೊಳ್ಳುತ್ತದೆ. ನಿಜವಾದ ಒಳಮೀಸಲಾತಿ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...