Homeಕರ್ನಾಟಕಬೆಂಗಳೂರು: ಡಿ.11ರಂದು ಒಳಮೀಸಲಾತಿ ಹೋರಾಟ ಸಂಘಟಿಸಿದ 10 ದಲಿತ ಮುಖಂಡರ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಡಿ.11ರಂದು ಒಳಮೀಸಲಾತಿ ಹೋರಾಟ ಸಂಘಟಿಸಿದ 10 ದಲಿತ ಮುಖಂಡರ ವಿರುದ್ಧ ಎಫ್‌ಐಆರ್‌

ಒಳಮೀಸಲಾತಿ ಹೋರಾಟಗಾರರು 2000-3000 ಜನರ ಅಕ್ರಮ ಕೂಟ ಸೇರಿಸಿಕೊಂಡು ಸಾರ್ವಜನಿಕರಿಗೆ ಅಡ್ಡಿಪಡಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ

- Advertisement -
- Advertisement -

ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಡಿಸೆಂಬರ್‌ 11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಹೋರಾಟ ಹಮ್ಮಿಕೊಂಡಿದ್ದ ಹೋರಾಟಗಾರರ ಮೇಲೆ ಬೆಂಗಳೂರಿನ ಕಾಟನ್‌ಪೇಟೆ ಪೊಲೀಸರು ಪ್ರಕರಣ ದಾಖಸಿದ್ದಾರೆ.

ಮಳೆ, ಚಳಿ, ಬಿಸಿಲೆನ್ನದೆ ಸಾಮಾಜಿಕ ನ್ಯಾಯಕ್ಕಾಗಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟವು ಹತ್ತನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟಗಾರರ ಮೇಲೆ ಈಗ ಕಾನೂನಿನ ಕುಣಿಕೆ ಬೀಸಲಾಗಿದೆ.

ಸಾರ್ವಜನಿಕರಿಗೆ ಅಡ್ಡಿಪಡಿಸಿ, ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪವನ್ನು ಹತ್ತು ಜನ ಹೋರಾಟಗಾರರ ವಿರುದ್ಧ ಹೊರಿಸಲಾಗಿದೆ. ಕರ್ನಾಟಕ ಪೊಲೀಸ್ ಆಕ್ಟ್‌ 1963 ಸೆಕ್ಷನ್‌ 103, ಐಪಿಸಿ ಸೆಕ್ಷನ್‌ 341, 143, 149, 188ರ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಶಿವರಾಯ ಅಕ್ಕರಕಿ, ಒಳಮೀಸಲಾತಿ ಹೋರಾಟಗಾರದ ಮುಂಚೂಣಿ ನಾಯಕರಾದ ಅಂಬಣ್ಣ ಅರೋಲಿಕರ್‌, ಮಾದಿಗ ದಂಡೋರ ಸಮಿತಿಯ ಪಾವಗಡ ಶ್ರೀರಾಮ್‌, ಪ್ರಾದೇಶಿಕ ಮಾದಿಗ ಸಂಘದ ಶಂಕರ್ ಪೂಜಾರಿ, ಎಸ್‌ಎಸ್‌ಎಸ್‌ಒ ಅಧ್ಯಕ್ಷ ಭಾಸ್ಕರ್‌ ಪ್ರಸಾದ್‌, ದಸಂಸ ಮುಖಂಡರಾದ ಎನ್‌.ಮೂರ್ತಿ, ಬಿ.ಗೋಪಾಲ್‌, ಹೆಣ್ಣೂರ್‌ ಶ್ರೀನಿವಾಸ್‌, ಎಂಆರ್‌ಎಚ್‌ಎಸ್‌ ಮುಖಂಡರಾದ ಭಾಗ್ಯಮ್ಮ, ಎಂಡಿಎಸ್‌ಎಸ್ ಮುಖಂಡರಾದ ಲಿಂಗರಾಜು ಅವರನ್ನು ಕ್ರಮವಾಗಿ ಆರೋಪಿಗಳನ್ನಾಗಿ ಮಾಡಲಾಗಿದೆ.

ಎಫ್‌ಐಆರ್‌ನಲ್ಲಿ ಏನಿದೆ?

ಕಾಟನ್‌ಪೇಟೆ ಪೊಲೀಸ್ ಇನ್‌ಸ್ಪೆಕ್ಟರ್‌ ಬಿ.ಬಾಲರಾಜು ಅವರ ದೂರುದಾರರಾಗಿದ್ದು, ಹೋರಾಟಗಾರರ ಮೇಲೆ ಆರೋಪಗಳನ್ನು ಹೊರಿಸಿದ್ದಾರೆ.

ಡಿಸೆಂಬರ್‌ 11ರಂದು ಒಳಮೀಸಲಾತಿ ಹೋರಾಟಗಾರರು ತಮ್ಮ ನೇತೃತ್ವದಲ್ಲಿ ಸುಮಾರು 2000-3000 ಜನರ ಅಕ್ರಮ ಕೂಟ ಸೇರಿಸಿಕೊಂಡು ರೈಲ್ವೆ ನಿಲ್ದಾಣದ ಆರ್‌ಎಂಎಸ್‌ ಗೇಟ್ ಮುಂಭಾಗದಲ್ಲಿ, ಶಾಂತಲಾ ಸರ್ಕಲ್‌ನಿಂದ ಖೋಡೆ ಸರ್ಕಲ್‌ ಕಡೆಗೆ ಹೋಗುವ ಸಾರ್ವಜನಿಕ ಮುಖ್ಯ ರಸ್ತೆಯ ವಾಹನಗಳನ್ನು ತಡೆದಿದ್ದಾರೆ. ಸುಮಾರು 11.30ರಿಂದ 12.30ರವರೆಗೆ ತಡೆದು ಮೆರವಣಿಗೆ ಮಾಡಲು ಏಕಾಏಕಿ ಬಂದು ಕೂಗಾಟ ನಡೆಸಿದ್ದಾರೆ ಎಂದು ದೂರಲಾಗಿದೆ.

“ಸಾರ್ವಜನಿಕ ಸಂಚಾರಕ್ಕೆ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿರುವ ಬಗ್ಗೆ ಮಾಹಿತಿ ಬಂದಿತು. ನಾನು (ಇನ್‌ಸ್ಪೆಕ್ಟರ್‌) ಸದರಿ ಸ್ಥಳಕ್ಕೆ ಸಿಬ್ಬಂದಿ ಜೊತೆಯಲ್ಲಿ ತೆರಳಿ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದೇನೆ. ಸದರಿ ಪ್ರತಿಭಟನಾಕಾರರನ್ನು ಮುಂಜಾಗ್ರತಾ ಕ್ರಮವಾಗಿ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ತಡೆಯಲಾಗಿದೆ. ಹೈಕೋರ್ಟ್‌ 03.03.2022ರಂದು ನೀಡಿರುವ ಆದೇಶದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ಹೊರತುಪಡಿಸಿ ಯಾವುದೇ ಸ್ಥಳದಲ್ಲಿ ಪ್ರತಿಭಟನೆ ಹಾಗೂ ಮೆರವಣಿಗೆಗೆ ಅವಕಾಶವಿಲ್ಲವೆಂದು ಹೇಳಲಾಗಿದೆ. 10.01.2022ರಲ್ಲಿ ಪ್ರಕಟನೆ ನೀಡಿದ ಬಗ್ಗೆ ವಿವರಿಸಿ ತಿಳಿಸಿದರೂ ನಮ್ಮ ಮಾತನ್ನು ಲೆಕ್ಕಿಸದೇ ಸುಮಾರು  3,000 ಜನರನ್ನು ಕರೆದುಕೊಂಡು ಸಾರ್ವಜನಿಕ ರಸ್ತೆಗಳನ್ನು ತಡೆದು ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೂ ಕಾಲ್ನಡಿಗೆಯಲ್ಲಿ ಘೋಷಣೆ ಕೂಗುತ್ತಾ ರಸ್ತೆ ತಡೆದು ಮೆರವಣಿಗೆ ಹೊರಟ್ಟಿದ್ದರು” ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

“ಸಾರ್ವಜನಿಕ ಸ್ಥಳವಾದ ರೈಲ್ವೆ ಸ್ಟೇಷನ್ ಮುಂಭಾಗ ಏಕಾಏಕಿ ಅಕ್ರಮ ಕೂಟ ಸೇರಿಸಿಕೊಂಡು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಲಾಗಿದೆ. ಸಾರ್ವಜನಿಕ ರಸ್ತೆಯಲ್ಲಿ ವಾಹನಗಳನ್ನು ತಡೆದು ಸಾರ್ವಜನಿಕರ ಸಂಚಾರಕ್ಕೆ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗಿದೆ” ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಎಫ್‌ಐಆರ್‌ ವಿರುದ್ಧ ಹೋರಾಟಗಾರರ ಆಕ್ರೋಶ

ಒಳಮೀಸಲಾತಿ ಹೋರಾಟದ ನಾಯಕರಾದ ಅಂಬಣ್ಣ ಅರೋಲಿಕರ್‌ ಪ್ರತಿಕ್ರಿಯಿಸಿ, “ಡಿಸೆಂಬರ್ 11ರ ಹೋರಾಟದಲ್ಲಿ ಭಾಗವಹಿಸಿದ 10 ಜನರ ಮೇಲೆ ಕೇಸ್ ದಾಖಲಾಗಿದೆ. ನಮ್ಮ ಹೋರಾಟಕ್ಕೆ ಕಾರಣವಾದವರು ಮುಖ್ಯಮಂತ್ರಿ (ಆರೋಪಿ-1), ಗೃಹ ಸಚಿವ (ಆರೋಪಿ-2), ಸಮಾಜ ಕಲ್ಯಾಣ ಇಲಾಖೆ ಸಚಿವ (ಆರೋಪಿ-3) ಎಂದು ಸ್ವಯಂ ಪ್ರೇರಿತ ಕೇಸ್ ದಾಖಲಿಸದಿದ್ದರೆ ನಾವೇ ಪ್ರಕರಣ ದಾಖಲಿಸಲಿದ್ದೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ವಕೀಲರು ಹಾಗೂ ಹೋರಾಟಗಾರರಾದ ಪಾವಗಡ ಶ್ರೀರಾಮ್‌ ಮಾತನಾಡಿ, “ಎರಡು ದಶಕಗಳ ಹೋರಾಟದಲ್ಲಿ ನಮ್ಮ ವಿರುದ್ಧ 18 ಪ್ರಕರಣಗಳನ್ನು ದಾಖಲಿಸಲಾಗಿದೆ. ಎಲ್ಲ ಪ್ರಕರಣದಲ್ಲೂ ನಾನು ಆರೋಪಿ ನಂ.1 ಆಗಿದ್ದೆ. ಈ ಪ್ರಕರಣದಲ್ಲಿ ಆರೋಪಿ ನಂ.3 ಮಾಡಿದ್ದಾರೆ. ಎಲ್ಲ ಪಕ್ಷಗಳು ನಮಗೆ ಮೋಸ ಮಾಡಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಭರವಸೆ ನೀಡಿದ್ದ ಕಾರಣಕ್ಕಾಗಿ ಈ ಅಧಿವೇಶನದಲ್ಲಿ ಗಮನ ಸೆಳೆಯಲು ಹೋರಾಟ ಹಮ್ಮಿಕೊಂಡಿದ್ದೆವು. ನಾವು ಯಾವುದೇ ಆಸ್ತಿಪಾಸ್ತಿ ನಷ್ಟ ಮಾಡಿಲ್ಲ. ಆದರೂ ಪ್ರಕರಣ ದಾಖಲಿಸಲಾಗಿದೆ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ” ಎಂದು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಹೋರಾಟಗಾರ ಭಾಸ್ಕರ್‌ ಪ್ರಸಾದ್, “ನಾನು ರೈಲ್ವೇ ಸ್ಟೇಷನ್ ಕಡೆ ತಲೆ ಹಾಕಿಯೇ ಅದೆಷ್ಟೋ ತಿಂಗಳುಗಳಾಗಿವೆ ಎಂಬುದು ನಿಜ ಸಂಗತಿ. ಆ ಪ್ರತಿಭಟನೆಯ ದಿನ ನಾನು ಬೇರೆ ಬೇರೆ ಏರ್ಪಾಡುಗಳು ಹಾಗೂ ನನ್ನ ರಚನೆಯ ‘ಮಾದಿಗ ಭಾರತ’ ಪುಸ್ತಕ ಬಿಡುಗಡೆಯ ಕಾರಣಕ್ಕಾಗಿ, ಬೆಳಿಗ್ಗೆ 10 ಗಂಟೆಗೆ ಫ್ರೀಡಂ ಪಾರ್ಕಿಗೆ ಹೋಗಿದ್ದವನು ಅಂದು ಸಂಜೆ ಪೊಲೀಸರು ಹೋರಾಟಗಾರರನ್ನೆಲ್ಲ ಬಂಧಿಸಿ ಕರೆದೊಯ್ಯುವವರೆಗೂ ಫ್ರೀಡಂ ಪಾರ್ಕ್ ಬಿಟ್ಟು ಆಚೀಚೆ ಕದಲಿಲ್ಲ. ಆದರೂ ನಾನು ಪ್ರಕರಣದ ಆರೋಪಿಯಾಗಿದ್ದೇನೆ. ನಾನು ಈ ಪ್ರಕರಣದಿಂದ ಎಸ್ಕೇಪ್ ಆಗಲು ಈ ವಿವರಣೆ ನೀಡ್ತಿಲ್ಲ” ಎಂದಿದ್ದಾರೆ.

“ರೈಲ್ವೆ ಸ್ಟೇಷನ್ ಮತ್ತು ಫ್ರೀಡಂ ಪಾರ್ಕ್‌ನಲ್ಲಿ ಇದುವರೆಗೂ ಅದೆಷ್ಟು ಸಾವಿರಾರು ಪ್ರತಿಭಟನೆಗಳು ನಡೆದಿವೆ. ಅವುಗಳಿಗಾಗಿ ಅದೆಷ್ಟು ಜನರ ಮೇಲೆ ಪ್ರಕರಣ ದಾಖಲಾಗಿದೆ ಎಂದು ಈಗ ಪೋಲಿಸರು ಹೇಳಬೇಕು. ತಾನು ಒಳಮೀಸಲಾತಿ ಪರ ಎಂದು ಬಿಜೆಪಿ ಸರ್ಕಾರ ಹೇಳಿಕೊಳ್ಳುತ್ತದೆ. ನಿಜವಾದ ಒಳಮೀಸಲಾತಿ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...