Homeಕರ್ನಾಟಕಬೆಂಗಳೂರು: ಡಿ.11ರಂದು ಒಳಮೀಸಲಾತಿ ಹೋರಾಟ ಸಂಘಟಿಸಿದ 10 ದಲಿತ ಮುಖಂಡರ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಡಿ.11ರಂದು ಒಳಮೀಸಲಾತಿ ಹೋರಾಟ ಸಂಘಟಿಸಿದ 10 ದಲಿತ ಮುಖಂಡರ ವಿರುದ್ಧ ಎಫ್‌ಐಆರ್‌

ಒಳಮೀಸಲಾತಿ ಹೋರಾಟಗಾರರು 2000-3000 ಜನರ ಅಕ್ರಮ ಕೂಟ ಸೇರಿಸಿಕೊಂಡು ಸಾರ್ವಜನಿಕರಿಗೆ ಅಡ್ಡಿಪಡಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ

- Advertisement -
- Advertisement -

ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಡಿಸೆಂಬರ್‌ 11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಹೋರಾಟ ಹಮ್ಮಿಕೊಂಡಿದ್ದ ಹೋರಾಟಗಾರರ ಮೇಲೆ ಬೆಂಗಳೂರಿನ ಕಾಟನ್‌ಪೇಟೆ ಪೊಲೀಸರು ಪ್ರಕರಣ ದಾಖಸಿದ್ದಾರೆ.

ಮಳೆ, ಚಳಿ, ಬಿಸಿಲೆನ್ನದೆ ಸಾಮಾಜಿಕ ನ್ಯಾಯಕ್ಕಾಗಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟವು ಹತ್ತನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟಗಾರರ ಮೇಲೆ ಈಗ ಕಾನೂನಿನ ಕುಣಿಕೆ ಬೀಸಲಾಗಿದೆ.

ಸಾರ್ವಜನಿಕರಿಗೆ ಅಡ್ಡಿಪಡಿಸಿ, ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪವನ್ನು ಹತ್ತು ಜನ ಹೋರಾಟಗಾರರ ವಿರುದ್ಧ ಹೊರಿಸಲಾಗಿದೆ. ಕರ್ನಾಟಕ ಪೊಲೀಸ್ ಆಕ್ಟ್‌ 1963 ಸೆಕ್ಷನ್‌ 103, ಐಪಿಸಿ ಸೆಕ್ಷನ್‌ 341, 143, 149, 188ರ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಶಿವರಾಯ ಅಕ್ಕರಕಿ, ಒಳಮೀಸಲಾತಿ ಹೋರಾಟಗಾರದ ಮುಂಚೂಣಿ ನಾಯಕರಾದ ಅಂಬಣ್ಣ ಅರೋಲಿಕರ್‌, ಮಾದಿಗ ದಂಡೋರ ಸಮಿತಿಯ ಪಾವಗಡ ಶ್ರೀರಾಮ್‌, ಪ್ರಾದೇಶಿಕ ಮಾದಿಗ ಸಂಘದ ಶಂಕರ್ ಪೂಜಾರಿ, ಎಸ್‌ಎಸ್‌ಎಸ್‌ಒ ಅಧ್ಯಕ್ಷ ಭಾಸ್ಕರ್‌ ಪ್ರಸಾದ್‌, ದಸಂಸ ಮುಖಂಡರಾದ ಎನ್‌.ಮೂರ್ತಿ, ಬಿ.ಗೋಪಾಲ್‌, ಹೆಣ್ಣೂರ್‌ ಶ್ರೀನಿವಾಸ್‌, ಎಂಆರ್‌ಎಚ್‌ಎಸ್‌ ಮುಖಂಡರಾದ ಭಾಗ್ಯಮ್ಮ, ಎಂಡಿಎಸ್‌ಎಸ್ ಮುಖಂಡರಾದ ಲಿಂಗರಾಜು ಅವರನ್ನು ಕ್ರಮವಾಗಿ ಆರೋಪಿಗಳನ್ನಾಗಿ ಮಾಡಲಾಗಿದೆ.

ಎಫ್‌ಐಆರ್‌ನಲ್ಲಿ ಏನಿದೆ?

ಕಾಟನ್‌ಪೇಟೆ ಪೊಲೀಸ್ ಇನ್‌ಸ್ಪೆಕ್ಟರ್‌ ಬಿ.ಬಾಲರಾಜು ಅವರ ದೂರುದಾರರಾಗಿದ್ದು, ಹೋರಾಟಗಾರರ ಮೇಲೆ ಆರೋಪಗಳನ್ನು ಹೊರಿಸಿದ್ದಾರೆ.

ಡಿಸೆಂಬರ್‌ 11ರಂದು ಒಳಮೀಸಲಾತಿ ಹೋರಾಟಗಾರರು ತಮ್ಮ ನೇತೃತ್ವದಲ್ಲಿ ಸುಮಾರು 2000-3000 ಜನರ ಅಕ್ರಮ ಕೂಟ ಸೇರಿಸಿಕೊಂಡು ರೈಲ್ವೆ ನಿಲ್ದಾಣದ ಆರ್‌ಎಂಎಸ್‌ ಗೇಟ್ ಮುಂಭಾಗದಲ್ಲಿ, ಶಾಂತಲಾ ಸರ್ಕಲ್‌ನಿಂದ ಖೋಡೆ ಸರ್ಕಲ್‌ ಕಡೆಗೆ ಹೋಗುವ ಸಾರ್ವಜನಿಕ ಮುಖ್ಯ ರಸ್ತೆಯ ವಾಹನಗಳನ್ನು ತಡೆದಿದ್ದಾರೆ. ಸುಮಾರು 11.30ರಿಂದ 12.30ರವರೆಗೆ ತಡೆದು ಮೆರವಣಿಗೆ ಮಾಡಲು ಏಕಾಏಕಿ ಬಂದು ಕೂಗಾಟ ನಡೆಸಿದ್ದಾರೆ ಎಂದು ದೂರಲಾಗಿದೆ.

“ಸಾರ್ವಜನಿಕ ಸಂಚಾರಕ್ಕೆ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿರುವ ಬಗ್ಗೆ ಮಾಹಿತಿ ಬಂದಿತು. ನಾನು (ಇನ್‌ಸ್ಪೆಕ್ಟರ್‌) ಸದರಿ ಸ್ಥಳಕ್ಕೆ ಸಿಬ್ಬಂದಿ ಜೊತೆಯಲ್ಲಿ ತೆರಳಿ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದೇನೆ. ಸದರಿ ಪ್ರತಿಭಟನಾಕಾರರನ್ನು ಮುಂಜಾಗ್ರತಾ ಕ್ರಮವಾಗಿ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ತಡೆಯಲಾಗಿದೆ. ಹೈಕೋರ್ಟ್‌ 03.03.2022ರಂದು ನೀಡಿರುವ ಆದೇಶದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ಹೊರತುಪಡಿಸಿ ಯಾವುದೇ ಸ್ಥಳದಲ್ಲಿ ಪ್ರತಿಭಟನೆ ಹಾಗೂ ಮೆರವಣಿಗೆಗೆ ಅವಕಾಶವಿಲ್ಲವೆಂದು ಹೇಳಲಾಗಿದೆ. 10.01.2022ರಲ್ಲಿ ಪ್ರಕಟನೆ ನೀಡಿದ ಬಗ್ಗೆ ವಿವರಿಸಿ ತಿಳಿಸಿದರೂ ನಮ್ಮ ಮಾತನ್ನು ಲೆಕ್ಕಿಸದೇ ಸುಮಾರು  3,000 ಜನರನ್ನು ಕರೆದುಕೊಂಡು ಸಾರ್ವಜನಿಕ ರಸ್ತೆಗಳನ್ನು ತಡೆದು ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೂ ಕಾಲ್ನಡಿಗೆಯಲ್ಲಿ ಘೋಷಣೆ ಕೂಗುತ್ತಾ ರಸ್ತೆ ತಡೆದು ಮೆರವಣಿಗೆ ಹೊರಟ್ಟಿದ್ದರು” ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

“ಸಾರ್ವಜನಿಕ ಸ್ಥಳವಾದ ರೈಲ್ವೆ ಸ್ಟೇಷನ್ ಮುಂಭಾಗ ಏಕಾಏಕಿ ಅಕ್ರಮ ಕೂಟ ಸೇರಿಸಿಕೊಂಡು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಲಾಗಿದೆ. ಸಾರ್ವಜನಿಕ ರಸ್ತೆಯಲ್ಲಿ ವಾಹನಗಳನ್ನು ತಡೆದು ಸಾರ್ವಜನಿಕರ ಸಂಚಾರಕ್ಕೆ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗಿದೆ” ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಎಫ್‌ಐಆರ್‌ ವಿರುದ್ಧ ಹೋರಾಟಗಾರರ ಆಕ್ರೋಶ

ಒಳಮೀಸಲಾತಿ ಹೋರಾಟದ ನಾಯಕರಾದ ಅಂಬಣ್ಣ ಅರೋಲಿಕರ್‌ ಪ್ರತಿಕ್ರಿಯಿಸಿ, “ಡಿಸೆಂಬರ್ 11ರ ಹೋರಾಟದಲ್ಲಿ ಭಾಗವಹಿಸಿದ 10 ಜನರ ಮೇಲೆ ಕೇಸ್ ದಾಖಲಾಗಿದೆ. ನಮ್ಮ ಹೋರಾಟಕ್ಕೆ ಕಾರಣವಾದವರು ಮುಖ್ಯಮಂತ್ರಿ (ಆರೋಪಿ-1), ಗೃಹ ಸಚಿವ (ಆರೋಪಿ-2), ಸಮಾಜ ಕಲ್ಯಾಣ ಇಲಾಖೆ ಸಚಿವ (ಆರೋಪಿ-3) ಎಂದು ಸ್ವಯಂ ಪ್ರೇರಿತ ಕೇಸ್ ದಾಖಲಿಸದಿದ್ದರೆ ನಾವೇ ಪ್ರಕರಣ ದಾಖಲಿಸಲಿದ್ದೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ವಕೀಲರು ಹಾಗೂ ಹೋರಾಟಗಾರರಾದ ಪಾವಗಡ ಶ್ರೀರಾಮ್‌ ಮಾತನಾಡಿ, “ಎರಡು ದಶಕಗಳ ಹೋರಾಟದಲ್ಲಿ ನಮ್ಮ ವಿರುದ್ಧ 18 ಪ್ರಕರಣಗಳನ್ನು ದಾಖಲಿಸಲಾಗಿದೆ. ಎಲ್ಲ ಪ್ರಕರಣದಲ್ಲೂ ನಾನು ಆರೋಪಿ ನಂ.1 ಆಗಿದ್ದೆ. ಈ ಪ್ರಕರಣದಲ್ಲಿ ಆರೋಪಿ ನಂ.3 ಮಾಡಿದ್ದಾರೆ. ಎಲ್ಲ ಪಕ್ಷಗಳು ನಮಗೆ ಮೋಸ ಮಾಡಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಭರವಸೆ ನೀಡಿದ್ದ ಕಾರಣಕ್ಕಾಗಿ ಈ ಅಧಿವೇಶನದಲ್ಲಿ ಗಮನ ಸೆಳೆಯಲು ಹೋರಾಟ ಹಮ್ಮಿಕೊಂಡಿದ್ದೆವು. ನಾವು ಯಾವುದೇ ಆಸ್ತಿಪಾಸ್ತಿ ನಷ್ಟ ಮಾಡಿಲ್ಲ. ಆದರೂ ಪ್ರಕರಣ ದಾಖಲಿಸಲಾಗಿದೆ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ” ಎಂದು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಹೋರಾಟಗಾರ ಭಾಸ್ಕರ್‌ ಪ್ರಸಾದ್, “ನಾನು ರೈಲ್ವೇ ಸ್ಟೇಷನ್ ಕಡೆ ತಲೆ ಹಾಕಿಯೇ ಅದೆಷ್ಟೋ ತಿಂಗಳುಗಳಾಗಿವೆ ಎಂಬುದು ನಿಜ ಸಂಗತಿ. ಆ ಪ್ರತಿಭಟನೆಯ ದಿನ ನಾನು ಬೇರೆ ಬೇರೆ ಏರ್ಪಾಡುಗಳು ಹಾಗೂ ನನ್ನ ರಚನೆಯ ‘ಮಾದಿಗ ಭಾರತ’ ಪುಸ್ತಕ ಬಿಡುಗಡೆಯ ಕಾರಣಕ್ಕಾಗಿ, ಬೆಳಿಗ್ಗೆ 10 ಗಂಟೆಗೆ ಫ್ರೀಡಂ ಪಾರ್ಕಿಗೆ ಹೋಗಿದ್ದವನು ಅಂದು ಸಂಜೆ ಪೊಲೀಸರು ಹೋರಾಟಗಾರರನ್ನೆಲ್ಲ ಬಂಧಿಸಿ ಕರೆದೊಯ್ಯುವವರೆಗೂ ಫ್ರೀಡಂ ಪಾರ್ಕ್ ಬಿಟ್ಟು ಆಚೀಚೆ ಕದಲಿಲ್ಲ. ಆದರೂ ನಾನು ಪ್ರಕರಣದ ಆರೋಪಿಯಾಗಿದ್ದೇನೆ. ನಾನು ಈ ಪ್ರಕರಣದಿಂದ ಎಸ್ಕೇಪ್ ಆಗಲು ಈ ವಿವರಣೆ ನೀಡ್ತಿಲ್ಲ” ಎಂದಿದ್ದಾರೆ.

“ರೈಲ್ವೆ ಸ್ಟೇಷನ್ ಮತ್ತು ಫ್ರೀಡಂ ಪಾರ್ಕ್‌ನಲ್ಲಿ ಇದುವರೆಗೂ ಅದೆಷ್ಟು ಸಾವಿರಾರು ಪ್ರತಿಭಟನೆಗಳು ನಡೆದಿವೆ. ಅವುಗಳಿಗಾಗಿ ಅದೆಷ್ಟು ಜನರ ಮೇಲೆ ಪ್ರಕರಣ ದಾಖಲಾಗಿದೆ ಎಂದು ಈಗ ಪೋಲಿಸರು ಹೇಳಬೇಕು. ತಾನು ಒಳಮೀಸಲಾತಿ ಪರ ಎಂದು ಬಿಜೆಪಿ ಸರ್ಕಾರ ಹೇಳಿಕೊಳ್ಳುತ್ತದೆ. ನಿಜವಾದ ಒಳಮೀಸಲಾತಿ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...