Homeಕರ್ನಾಟಕಬೆಂಗಳೂರು: ಡಿ.11ರಂದು ಒಳಮೀಸಲಾತಿ ಹೋರಾಟ ಸಂಘಟಿಸಿದ 10 ದಲಿತ ಮುಖಂಡರ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಡಿ.11ರಂದು ಒಳಮೀಸಲಾತಿ ಹೋರಾಟ ಸಂಘಟಿಸಿದ 10 ದಲಿತ ಮುಖಂಡರ ವಿರುದ್ಧ ಎಫ್‌ಐಆರ್‌

ಒಳಮೀಸಲಾತಿ ಹೋರಾಟಗಾರರು 2000-3000 ಜನರ ಅಕ್ರಮ ಕೂಟ ಸೇರಿಸಿಕೊಂಡು ಸಾರ್ವಜನಿಕರಿಗೆ ಅಡ್ಡಿಪಡಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ

- Advertisement -
- Advertisement -

ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಡಿಸೆಂಬರ್‌ 11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಹೋರಾಟ ಹಮ್ಮಿಕೊಂಡಿದ್ದ ಹೋರಾಟಗಾರರ ಮೇಲೆ ಬೆಂಗಳೂರಿನ ಕಾಟನ್‌ಪೇಟೆ ಪೊಲೀಸರು ಪ್ರಕರಣ ದಾಖಸಿದ್ದಾರೆ.

ಮಳೆ, ಚಳಿ, ಬಿಸಿಲೆನ್ನದೆ ಸಾಮಾಜಿಕ ನ್ಯಾಯಕ್ಕಾಗಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟವು ಹತ್ತನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟಗಾರರ ಮೇಲೆ ಈಗ ಕಾನೂನಿನ ಕುಣಿಕೆ ಬೀಸಲಾಗಿದೆ.

ಸಾರ್ವಜನಿಕರಿಗೆ ಅಡ್ಡಿಪಡಿಸಿ, ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪವನ್ನು ಹತ್ತು ಜನ ಹೋರಾಟಗಾರರ ವಿರುದ್ಧ ಹೊರಿಸಲಾಗಿದೆ. ಕರ್ನಾಟಕ ಪೊಲೀಸ್ ಆಕ್ಟ್‌ 1963 ಸೆಕ್ಷನ್‌ 103, ಐಪಿಸಿ ಸೆಕ್ಷನ್‌ 341, 143, 149, 188ರ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಶಿವರಾಯ ಅಕ್ಕರಕಿ, ಒಳಮೀಸಲಾತಿ ಹೋರಾಟಗಾರದ ಮುಂಚೂಣಿ ನಾಯಕರಾದ ಅಂಬಣ್ಣ ಅರೋಲಿಕರ್‌, ಮಾದಿಗ ದಂಡೋರ ಸಮಿತಿಯ ಪಾವಗಡ ಶ್ರೀರಾಮ್‌, ಪ್ರಾದೇಶಿಕ ಮಾದಿಗ ಸಂಘದ ಶಂಕರ್ ಪೂಜಾರಿ, ಎಸ್‌ಎಸ್‌ಎಸ್‌ಒ ಅಧ್ಯಕ್ಷ ಭಾಸ್ಕರ್‌ ಪ್ರಸಾದ್‌, ದಸಂಸ ಮುಖಂಡರಾದ ಎನ್‌.ಮೂರ್ತಿ, ಬಿ.ಗೋಪಾಲ್‌, ಹೆಣ್ಣೂರ್‌ ಶ್ರೀನಿವಾಸ್‌, ಎಂಆರ್‌ಎಚ್‌ಎಸ್‌ ಮುಖಂಡರಾದ ಭಾಗ್ಯಮ್ಮ, ಎಂಡಿಎಸ್‌ಎಸ್ ಮುಖಂಡರಾದ ಲಿಂಗರಾಜು ಅವರನ್ನು ಕ್ರಮವಾಗಿ ಆರೋಪಿಗಳನ್ನಾಗಿ ಮಾಡಲಾಗಿದೆ.

ಎಫ್‌ಐಆರ್‌ನಲ್ಲಿ ಏನಿದೆ?

ಕಾಟನ್‌ಪೇಟೆ ಪೊಲೀಸ್ ಇನ್‌ಸ್ಪೆಕ್ಟರ್‌ ಬಿ.ಬಾಲರಾಜು ಅವರ ದೂರುದಾರರಾಗಿದ್ದು, ಹೋರಾಟಗಾರರ ಮೇಲೆ ಆರೋಪಗಳನ್ನು ಹೊರಿಸಿದ್ದಾರೆ.

ಡಿಸೆಂಬರ್‌ 11ರಂದು ಒಳಮೀಸಲಾತಿ ಹೋರಾಟಗಾರರು ತಮ್ಮ ನೇತೃತ್ವದಲ್ಲಿ ಸುಮಾರು 2000-3000 ಜನರ ಅಕ್ರಮ ಕೂಟ ಸೇರಿಸಿಕೊಂಡು ರೈಲ್ವೆ ನಿಲ್ದಾಣದ ಆರ್‌ಎಂಎಸ್‌ ಗೇಟ್ ಮುಂಭಾಗದಲ್ಲಿ, ಶಾಂತಲಾ ಸರ್ಕಲ್‌ನಿಂದ ಖೋಡೆ ಸರ್ಕಲ್‌ ಕಡೆಗೆ ಹೋಗುವ ಸಾರ್ವಜನಿಕ ಮುಖ್ಯ ರಸ್ತೆಯ ವಾಹನಗಳನ್ನು ತಡೆದಿದ್ದಾರೆ. ಸುಮಾರು 11.30ರಿಂದ 12.30ರವರೆಗೆ ತಡೆದು ಮೆರವಣಿಗೆ ಮಾಡಲು ಏಕಾಏಕಿ ಬಂದು ಕೂಗಾಟ ನಡೆಸಿದ್ದಾರೆ ಎಂದು ದೂರಲಾಗಿದೆ.

“ಸಾರ್ವಜನಿಕ ಸಂಚಾರಕ್ಕೆ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿರುವ ಬಗ್ಗೆ ಮಾಹಿತಿ ಬಂದಿತು. ನಾನು (ಇನ್‌ಸ್ಪೆಕ್ಟರ್‌) ಸದರಿ ಸ್ಥಳಕ್ಕೆ ಸಿಬ್ಬಂದಿ ಜೊತೆಯಲ್ಲಿ ತೆರಳಿ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದೇನೆ. ಸದರಿ ಪ್ರತಿಭಟನಾಕಾರರನ್ನು ಮುಂಜಾಗ್ರತಾ ಕ್ರಮವಾಗಿ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ತಡೆಯಲಾಗಿದೆ. ಹೈಕೋರ್ಟ್‌ 03.03.2022ರಂದು ನೀಡಿರುವ ಆದೇಶದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ಹೊರತುಪಡಿಸಿ ಯಾವುದೇ ಸ್ಥಳದಲ್ಲಿ ಪ್ರತಿಭಟನೆ ಹಾಗೂ ಮೆರವಣಿಗೆಗೆ ಅವಕಾಶವಿಲ್ಲವೆಂದು ಹೇಳಲಾಗಿದೆ. 10.01.2022ರಲ್ಲಿ ಪ್ರಕಟನೆ ನೀಡಿದ ಬಗ್ಗೆ ವಿವರಿಸಿ ತಿಳಿಸಿದರೂ ನಮ್ಮ ಮಾತನ್ನು ಲೆಕ್ಕಿಸದೇ ಸುಮಾರು  3,000 ಜನರನ್ನು ಕರೆದುಕೊಂಡು ಸಾರ್ವಜನಿಕ ರಸ್ತೆಗಳನ್ನು ತಡೆದು ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೂ ಕಾಲ್ನಡಿಗೆಯಲ್ಲಿ ಘೋಷಣೆ ಕೂಗುತ್ತಾ ರಸ್ತೆ ತಡೆದು ಮೆರವಣಿಗೆ ಹೊರಟ್ಟಿದ್ದರು” ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

“ಸಾರ್ವಜನಿಕ ಸ್ಥಳವಾದ ರೈಲ್ವೆ ಸ್ಟೇಷನ್ ಮುಂಭಾಗ ಏಕಾಏಕಿ ಅಕ್ರಮ ಕೂಟ ಸೇರಿಸಿಕೊಂಡು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಲಾಗಿದೆ. ಸಾರ್ವಜನಿಕ ರಸ್ತೆಯಲ್ಲಿ ವಾಹನಗಳನ್ನು ತಡೆದು ಸಾರ್ವಜನಿಕರ ಸಂಚಾರಕ್ಕೆ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗಿದೆ” ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಎಫ್‌ಐಆರ್‌ ವಿರುದ್ಧ ಹೋರಾಟಗಾರರ ಆಕ್ರೋಶ

ಒಳಮೀಸಲಾತಿ ಹೋರಾಟದ ನಾಯಕರಾದ ಅಂಬಣ್ಣ ಅರೋಲಿಕರ್‌ ಪ್ರತಿಕ್ರಿಯಿಸಿ, “ಡಿಸೆಂಬರ್ 11ರ ಹೋರಾಟದಲ್ಲಿ ಭಾಗವಹಿಸಿದ 10 ಜನರ ಮೇಲೆ ಕೇಸ್ ದಾಖಲಾಗಿದೆ. ನಮ್ಮ ಹೋರಾಟಕ್ಕೆ ಕಾರಣವಾದವರು ಮುಖ್ಯಮಂತ್ರಿ (ಆರೋಪಿ-1), ಗೃಹ ಸಚಿವ (ಆರೋಪಿ-2), ಸಮಾಜ ಕಲ್ಯಾಣ ಇಲಾಖೆ ಸಚಿವ (ಆರೋಪಿ-3) ಎಂದು ಸ್ವಯಂ ಪ್ರೇರಿತ ಕೇಸ್ ದಾಖಲಿಸದಿದ್ದರೆ ನಾವೇ ಪ್ರಕರಣ ದಾಖಲಿಸಲಿದ್ದೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ವಕೀಲರು ಹಾಗೂ ಹೋರಾಟಗಾರರಾದ ಪಾವಗಡ ಶ್ರೀರಾಮ್‌ ಮಾತನಾಡಿ, “ಎರಡು ದಶಕಗಳ ಹೋರಾಟದಲ್ಲಿ ನಮ್ಮ ವಿರುದ್ಧ 18 ಪ್ರಕರಣಗಳನ್ನು ದಾಖಲಿಸಲಾಗಿದೆ. ಎಲ್ಲ ಪ್ರಕರಣದಲ್ಲೂ ನಾನು ಆರೋಪಿ ನಂ.1 ಆಗಿದ್ದೆ. ಈ ಪ್ರಕರಣದಲ್ಲಿ ಆರೋಪಿ ನಂ.3 ಮಾಡಿದ್ದಾರೆ. ಎಲ್ಲ ಪಕ್ಷಗಳು ನಮಗೆ ಮೋಸ ಮಾಡಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಭರವಸೆ ನೀಡಿದ್ದ ಕಾರಣಕ್ಕಾಗಿ ಈ ಅಧಿವೇಶನದಲ್ಲಿ ಗಮನ ಸೆಳೆಯಲು ಹೋರಾಟ ಹಮ್ಮಿಕೊಂಡಿದ್ದೆವು. ನಾವು ಯಾವುದೇ ಆಸ್ತಿಪಾಸ್ತಿ ನಷ್ಟ ಮಾಡಿಲ್ಲ. ಆದರೂ ಪ್ರಕರಣ ದಾಖಲಿಸಲಾಗಿದೆ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ” ಎಂದು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಹೋರಾಟಗಾರ ಭಾಸ್ಕರ್‌ ಪ್ರಸಾದ್, “ನಾನು ರೈಲ್ವೇ ಸ್ಟೇಷನ್ ಕಡೆ ತಲೆ ಹಾಕಿಯೇ ಅದೆಷ್ಟೋ ತಿಂಗಳುಗಳಾಗಿವೆ ಎಂಬುದು ನಿಜ ಸಂಗತಿ. ಆ ಪ್ರತಿಭಟನೆಯ ದಿನ ನಾನು ಬೇರೆ ಬೇರೆ ಏರ್ಪಾಡುಗಳು ಹಾಗೂ ನನ್ನ ರಚನೆಯ ‘ಮಾದಿಗ ಭಾರತ’ ಪುಸ್ತಕ ಬಿಡುಗಡೆಯ ಕಾರಣಕ್ಕಾಗಿ, ಬೆಳಿಗ್ಗೆ 10 ಗಂಟೆಗೆ ಫ್ರೀಡಂ ಪಾರ್ಕಿಗೆ ಹೋಗಿದ್ದವನು ಅಂದು ಸಂಜೆ ಪೊಲೀಸರು ಹೋರಾಟಗಾರರನ್ನೆಲ್ಲ ಬಂಧಿಸಿ ಕರೆದೊಯ್ಯುವವರೆಗೂ ಫ್ರೀಡಂ ಪಾರ್ಕ್ ಬಿಟ್ಟು ಆಚೀಚೆ ಕದಲಿಲ್ಲ. ಆದರೂ ನಾನು ಪ್ರಕರಣದ ಆರೋಪಿಯಾಗಿದ್ದೇನೆ. ನಾನು ಈ ಪ್ರಕರಣದಿಂದ ಎಸ್ಕೇಪ್ ಆಗಲು ಈ ವಿವರಣೆ ನೀಡ್ತಿಲ್ಲ” ಎಂದಿದ್ದಾರೆ.

“ರೈಲ್ವೆ ಸ್ಟೇಷನ್ ಮತ್ತು ಫ್ರೀಡಂ ಪಾರ್ಕ್‌ನಲ್ಲಿ ಇದುವರೆಗೂ ಅದೆಷ್ಟು ಸಾವಿರಾರು ಪ್ರತಿಭಟನೆಗಳು ನಡೆದಿವೆ. ಅವುಗಳಿಗಾಗಿ ಅದೆಷ್ಟು ಜನರ ಮೇಲೆ ಪ್ರಕರಣ ದಾಖಲಾಗಿದೆ ಎಂದು ಈಗ ಪೋಲಿಸರು ಹೇಳಬೇಕು. ತಾನು ಒಳಮೀಸಲಾತಿ ಪರ ಎಂದು ಬಿಜೆಪಿ ಸರ್ಕಾರ ಹೇಳಿಕೊಳ್ಳುತ್ತದೆ. ನಿಜವಾದ ಒಳಮೀಸಲಾತಿ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....