Homeಕರ್ನಾಟಕಬೆಂಗಳೂರು: ಡಿ.11ರಂದು ಒಳಮೀಸಲಾತಿ ಹೋರಾಟ ಸಂಘಟಿಸಿದ 10 ದಲಿತ ಮುಖಂಡರ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಡಿ.11ರಂದು ಒಳಮೀಸಲಾತಿ ಹೋರಾಟ ಸಂಘಟಿಸಿದ 10 ದಲಿತ ಮುಖಂಡರ ವಿರುದ್ಧ ಎಫ್‌ಐಆರ್‌

ಒಳಮೀಸಲಾತಿ ಹೋರಾಟಗಾರರು 2000-3000 ಜನರ ಅಕ್ರಮ ಕೂಟ ಸೇರಿಸಿಕೊಂಡು ಸಾರ್ವಜನಿಕರಿಗೆ ಅಡ್ಡಿಪಡಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ

- Advertisement -
- Advertisement -

ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಡಿಸೆಂಬರ್‌ 11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಹೋರಾಟ ಹಮ್ಮಿಕೊಂಡಿದ್ದ ಹೋರಾಟಗಾರರ ಮೇಲೆ ಬೆಂಗಳೂರಿನ ಕಾಟನ್‌ಪೇಟೆ ಪೊಲೀಸರು ಪ್ರಕರಣ ದಾಖಸಿದ್ದಾರೆ.

ಮಳೆ, ಚಳಿ, ಬಿಸಿಲೆನ್ನದೆ ಸಾಮಾಜಿಕ ನ್ಯಾಯಕ್ಕಾಗಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟವು ಹತ್ತನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟಗಾರರ ಮೇಲೆ ಈಗ ಕಾನೂನಿನ ಕುಣಿಕೆ ಬೀಸಲಾಗಿದೆ.

ಸಾರ್ವಜನಿಕರಿಗೆ ಅಡ್ಡಿಪಡಿಸಿ, ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪವನ್ನು ಹತ್ತು ಜನ ಹೋರಾಟಗಾರರ ವಿರುದ್ಧ ಹೊರಿಸಲಾಗಿದೆ. ಕರ್ನಾಟಕ ಪೊಲೀಸ್ ಆಕ್ಟ್‌ 1963 ಸೆಕ್ಷನ್‌ 103, ಐಪಿಸಿ ಸೆಕ್ಷನ್‌ 341, 143, 149, 188ರ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಶಿವರಾಯ ಅಕ್ಕರಕಿ, ಒಳಮೀಸಲಾತಿ ಹೋರಾಟಗಾರದ ಮುಂಚೂಣಿ ನಾಯಕರಾದ ಅಂಬಣ್ಣ ಅರೋಲಿಕರ್‌, ಮಾದಿಗ ದಂಡೋರ ಸಮಿತಿಯ ಪಾವಗಡ ಶ್ರೀರಾಮ್‌, ಪ್ರಾದೇಶಿಕ ಮಾದಿಗ ಸಂಘದ ಶಂಕರ್ ಪೂಜಾರಿ, ಎಸ್‌ಎಸ್‌ಎಸ್‌ಒ ಅಧ್ಯಕ್ಷ ಭಾಸ್ಕರ್‌ ಪ್ರಸಾದ್‌, ದಸಂಸ ಮುಖಂಡರಾದ ಎನ್‌.ಮೂರ್ತಿ, ಬಿ.ಗೋಪಾಲ್‌, ಹೆಣ್ಣೂರ್‌ ಶ್ರೀನಿವಾಸ್‌, ಎಂಆರ್‌ಎಚ್‌ಎಸ್‌ ಮುಖಂಡರಾದ ಭಾಗ್ಯಮ್ಮ, ಎಂಡಿಎಸ್‌ಎಸ್ ಮುಖಂಡರಾದ ಲಿಂಗರಾಜು ಅವರನ್ನು ಕ್ರಮವಾಗಿ ಆರೋಪಿಗಳನ್ನಾಗಿ ಮಾಡಲಾಗಿದೆ.

ಎಫ್‌ಐಆರ್‌ನಲ್ಲಿ ಏನಿದೆ?

ಕಾಟನ್‌ಪೇಟೆ ಪೊಲೀಸ್ ಇನ್‌ಸ್ಪೆಕ್ಟರ್‌ ಬಿ.ಬಾಲರಾಜು ಅವರ ದೂರುದಾರರಾಗಿದ್ದು, ಹೋರಾಟಗಾರರ ಮೇಲೆ ಆರೋಪಗಳನ್ನು ಹೊರಿಸಿದ್ದಾರೆ.

ಡಿಸೆಂಬರ್‌ 11ರಂದು ಒಳಮೀಸಲಾತಿ ಹೋರಾಟಗಾರರು ತಮ್ಮ ನೇತೃತ್ವದಲ್ಲಿ ಸುಮಾರು 2000-3000 ಜನರ ಅಕ್ರಮ ಕೂಟ ಸೇರಿಸಿಕೊಂಡು ರೈಲ್ವೆ ನಿಲ್ದಾಣದ ಆರ್‌ಎಂಎಸ್‌ ಗೇಟ್ ಮುಂಭಾಗದಲ್ಲಿ, ಶಾಂತಲಾ ಸರ್ಕಲ್‌ನಿಂದ ಖೋಡೆ ಸರ್ಕಲ್‌ ಕಡೆಗೆ ಹೋಗುವ ಸಾರ್ವಜನಿಕ ಮುಖ್ಯ ರಸ್ತೆಯ ವಾಹನಗಳನ್ನು ತಡೆದಿದ್ದಾರೆ. ಸುಮಾರು 11.30ರಿಂದ 12.30ರವರೆಗೆ ತಡೆದು ಮೆರವಣಿಗೆ ಮಾಡಲು ಏಕಾಏಕಿ ಬಂದು ಕೂಗಾಟ ನಡೆಸಿದ್ದಾರೆ ಎಂದು ದೂರಲಾಗಿದೆ.

“ಸಾರ್ವಜನಿಕ ಸಂಚಾರಕ್ಕೆ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿರುವ ಬಗ್ಗೆ ಮಾಹಿತಿ ಬಂದಿತು. ನಾನು (ಇನ್‌ಸ್ಪೆಕ್ಟರ್‌) ಸದರಿ ಸ್ಥಳಕ್ಕೆ ಸಿಬ್ಬಂದಿ ಜೊತೆಯಲ್ಲಿ ತೆರಳಿ ಹಿರಿಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದೇನೆ. ಸದರಿ ಪ್ರತಿಭಟನಾಕಾರರನ್ನು ಮುಂಜಾಗ್ರತಾ ಕ್ರಮವಾಗಿ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ತಡೆಯಲಾಗಿದೆ. ಹೈಕೋರ್ಟ್‌ 03.03.2022ರಂದು ನೀಡಿರುವ ಆದೇಶದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ಹೊರತುಪಡಿಸಿ ಯಾವುದೇ ಸ್ಥಳದಲ್ಲಿ ಪ್ರತಿಭಟನೆ ಹಾಗೂ ಮೆರವಣಿಗೆಗೆ ಅವಕಾಶವಿಲ್ಲವೆಂದು ಹೇಳಲಾಗಿದೆ. 10.01.2022ರಲ್ಲಿ ಪ್ರಕಟನೆ ನೀಡಿದ ಬಗ್ಗೆ ವಿವರಿಸಿ ತಿಳಿಸಿದರೂ ನಮ್ಮ ಮಾತನ್ನು ಲೆಕ್ಕಿಸದೇ ಸುಮಾರು  3,000 ಜನರನ್ನು ಕರೆದುಕೊಂಡು ಸಾರ್ವಜನಿಕ ರಸ್ತೆಗಳನ್ನು ತಡೆದು ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೂ ಕಾಲ್ನಡಿಗೆಯಲ್ಲಿ ಘೋಷಣೆ ಕೂಗುತ್ತಾ ರಸ್ತೆ ತಡೆದು ಮೆರವಣಿಗೆ ಹೊರಟ್ಟಿದ್ದರು” ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

“ಸಾರ್ವಜನಿಕ ಸ್ಥಳವಾದ ರೈಲ್ವೆ ಸ್ಟೇಷನ್ ಮುಂಭಾಗ ಏಕಾಏಕಿ ಅಕ್ರಮ ಕೂಟ ಸೇರಿಸಿಕೊಂಡು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಲಾಗಿದೆ. ಸಾರ್ವಜನಿಕ ರಸ್ತೆಯಲ್ಲಿ ವಾಹನಗಳನ್ನು ತಡೆದು ಸಾರ್ವಜನಿಕರ ಸಂಚಾರಕ್ಕೆ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗಿದೆ” ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಎಫ್‌ಐಆರ್‌ ವಿರುದ್ಧ ಹೋರಾಟಗಾರರ ಆಕ್ರೋಶ

ಒಳಮೀಸಲಾತಿ ಹೋರಾಟದ ನಾಯಕರಾದ ಅಂಬಣ್ಣ ಅರೋಲಿಕರ್‌ ಪ್ರತಿಕ್ರಿಯಿಸಿ, “ಡಿಸೆಂಬರ್ 11ರ ಹೋರಾಟದಲ್ಲಿ ಭಾಗವಹಿಸಿದ 10 ಜನರ ಮೇಲೆ ಕೇಸ್ ದಾಖಲಾಗಿದೆ. ನಮ್ಮ ಹೋರಾಟಕ್ಕೆ ಕಾರಣವಾದವರು ಮುಖ್ಯಮಂತ್ರಿ (ಆರೋಪಿ-1), ಗೃಹ ಸಚಿವ (ಆರೋಪಿ-2), ಸಮಾಜ ಕಲ್ಯಾಣ ಇಲಾಖೆ ಸಚಿವ (ಆರೋಪಿ-3) ಎಂದು ಸ್ವಯಂ ಪ್ರೇರಿತ ಕೇಸ್ ದಾಖಲಿಸದಿದ್ದರೆ ನಾವೇ ಪ್ರಕರಣ ದಾಖಲಿಸಲಿದ್ದೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ವಕೀಲರು ಹಾಗೂ ಹೋರಾಟಗಾರರಾದ ಪಾವಗಡ ಶ್ರೀರಾಮ್‌ ಮಾತನಾಡಿ, “ಎರಡು ದಶಕಗಳ ಹೋರಾಟದಲ್ಲಿ ನಮ್ಮ ವಿರುದ್ಧ 18 ಪ್ರಕರಣಗಳನ್ನು ದಾಖಲಿಸಲಾಗಿದೆ. ಎಲ್ಲ ಪ್ರಕರಣದಲ್ಲೂ ನಾನು ಆರೋಪಿ ನಂ.1 ಆಗಿದ್ದೆ. ಈ ಪ್ರಕರಣದಲ್ಲಿ ಆರೋಪಿ ನಂ.3 ಮಾಡಿದ್ದಾರೆ. ಎಲ್ಲ ಪಕ್ಷಗಳು ನಮಗೆ ಮೋಸ ಮಾಡಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಭರವಸೆ ನೀಡಿದ್ದ ಕಾರಣಕ್ಕಾಗಿ ಈ ಅಧಿವೇಶನದಲ್ಲಿ ಗಮನ ಸೆಳೆಯಲು ಹೋರಾಟ ಹಮ್ಮಿಕೊಂಡಿದ್ದೆವು. ನಾವು ಯಾವುದೇ ಆಸ್ತಿಪಾಸ್ತಿ ನಷ್ಟ ಮಾಡಿಲ್ಲ. ಆದರೂ ಪ್ರಕರಣ ದಾಖಲಿಸಲಾಗಿದೆ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ” ಎಂದು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಹೋರಾಟಗಾರ ಭಾಸ್ಕರ್‌ ಪ್ರಸಾದ್, “ನಾನು ರೈಲ್ವೇ ಸ್ಟೇಷನ್ ಕಡೆ ತಲೆ ಹಾಕಿಯೇ ಅದೆಷ್ಟೋ ತಿಂಗಳುಗಳಾಗಿವೆ ಎಂಬುದು ನಿಜ ಸಂಗತಿ. ಆ ಪ್ರತಿಭಟನೆಯ ದಿನ ನಾನು ಬೇರೆ ಬೇರೆ ಏರ್ಪಾಡುಗಳು ಹಾಗೂ ನನ್ನ ರಚನೆಯ ‘ಮಾದಿಗ ಭಾರತ’ ಪುಸ್ತಕ ಬಿಡುಗಡೆಯ ಕಾರಣಕ್ಕಾಗಿ, ಬೆಳಿಗ್ಗೆ 10 ಗಂಟೆಗೆ ಫ್ರೀಡಂ ಪಾರ್ಕಿಗೆ ಹೋಗಿದ್ದವನು ಅಂದು ಸಂಜೆ ಪೊಲೀಸರು ಹೋರಾಟಗಾರರನ್ನೆಲ್ಲ ಬಂಧಿಸಿ ಕರೆದೊಯ್ಯುವವರೆಗೂ ಫ್ರೀಡಂ ಪಾರ್ಕ್ ಬಿಟ್ಟು ಆಚೀಚೆ ಕದಲಿಲ್ಲ. ಆದರೂ ನಾನು ಪ್ರಕರಣದ ಆರೋಪಿಯಾಗಿದ್ದೇನೆ. ನಾನು ಈ ಪ್ರಕರಣದಿಂದ ಎಸ್ಕೇಪ್ ಆಗಲು ಈ ವಿವರಣೆ ನೀಡ್ತಿಲ್ಲ” ಎಂದಿದ್ದಾರೆ.

“ರೈಲ್ವೆ ಸ್ಟೇಷನ್ ಮತ್ತು ಫ್ರೀಡಂ ಪಾರ್ಕ್‌ನಲ್ಲಿ ಇದುವರೆಗೂ ಅದೆಷ್ಟು ಸಾವಿರಾರು ಪ್ರತಿಭಟನೆಗಳು ನಡೆದಿವೆ. ಅವುಗಳಿಗಾಗಿ ಅದೆಷ್ಟು ಜನರ ಮೇಲೆ ಪ್ರಕರಣ ದಾಖಲಾಗಿದೆ ಎಂದು ಈಗ ಪೋಲಿಸರು ಹೇಳಬೇಕು. ತಾನು ಒಳಮೀಸಲಾತಿ ಪರ ಎಂದು ಬಿಜೆಪಿ ಸರ್ಕಾರ ಹೇಳಿಕೊಳ್ಳುತ್ತದೆ. ನಿಜವಾದ ಒಳಮೀಸಲಾತಿ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...