Homeಕರ್ನಾಟಕಬೆಂಗಳೂರು: ಫ್ಯಾಕ್ಟ್‌ಚೆಕ್ಕರ್ ಜುಬೇರ್‌ಗೆ ಕೊಲೆ ಬೆದರಿಕೆ ಹಾಕಿದ್ದವರ ವಿರುದ್ಧ ಎಫ್.ಐ.ಆರ್.

ಬೆಂಗಳೂರು: ಫ್ಯಾಕ್ಟ್‌ಚೆಕ್ಕರ್ ಜುಬೇರ್‌ಗೆ ಕೊಲೆ ಬೆದರಿಕೆ ಹಾಕಿದ್ದವರ ವಿರುದ್ಧ ಎಫ್.ಐ.ಆರ್.

- Advertisement -
- Advertisement -

“ಕೆಲವು ಟ್ವಿಟರ್ ಬಳಕೆದಾರರು ನನ್ನ ವಿರುದ್ಧ ಗುಂಪು ಹಿಂಸಾಚಾರಕ್ಕೆ ಮತ್ತು ನನ್ನನ್ನು ಕೊಲೆ ಮಾಡುವುದಕ್ಕೆ ಕರೆ ನೀಡಿದ್ದಾರೆ’’ ಎಂದು ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ನೀಡಿದ ದೂರಿನ ಮೇರೆಗೆ ಬೆಂಗಳೂರು ಪೊಲೀಸರು ಎಫ್.ಐ.ಆರ್. ದಾಖಲಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಟ್ವಿಟರ್ ಹ್ಯಾಂಡಲ್ @Cyber_Huntss ಮತ್ತು ಹೆಸರಿಲ್ಲದ ಇತರ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕ ಕಿಡಿಗೇಡಿತನಕ್ಕೆ ಅನುಕೂಲಕರವಾದ ಹೇಳಿಕೆ, ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಕ್ರಿಮಿನಲ್ ಬೆದರಿಕೆ, ಶಾಂತಿ ಉಲ್ಲಂಘನೆ ಪ್ರಚೋದನೆ, ಉದ್ದೇಶಪೂರ್ವಕ ಅವಮಾನ ಮಾಡುವುದು- ಈ ಅಪರಾಧಗಳಿಗೆ ಸಂಬಂಧಿಸಿದ ನಿಬಂಧನೆಗಳನ್ನು ಎಫ್.ಐ.ಆರ್.ನಲ್ಲಿ ಹೆಸರಿಸಲಾಗಿದೆ.

ಆದರೆ ಎಫ್‌ಐಆರ್‌ನಲ್ಲಿ ಮಾಜಿ ಒಪಿಇಂಡಿಯಾ ಸಂಪಾದಕ ಅಜೀತ್ ಭಾರ್ತಿ ಹೆಸರನ್ನೂ ಸೇರಿಸುವಂತೆ ಪೊಲೀಸರಲ್ಲಿ ಜುಬೇರ್ ಒತ್ತಾಯಿಸಿದ್ದಾರೆ. “ಅಜಿತ್ ಅವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಸರಣಿ ಅಪರಾಧಗಳನ್ನು ಎಸಗಿದ್ದಾರೆ, ಕಾನೂನು ಕ್ರಮ ಜರುಗಿಸಬೇಕು’’ ಎಂದು ಆಗ್ರಹಿಸಿದ್ದಾರೆ.

ಫ್ಯಾಕ್ಟ್ ಚೆಕ್  ವೆಬ್‌ಸೈಟ್‌ `ಆಲ್ಟ್ ನ್ಯೂಸ್’ ಸಹ-ಸಂಸ್ಥಾಪಕ ಜುಬೇರ್ ಅವರು ಏಪ್ರಿಲ್‌ನಲ್ಲಿ 15 ಟ್ವಿಟರ್ ಹ್ಯಾಂಡಲ್‌ಗಳ ವಿರುದ್ಧ ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಟ್ವಿಟರ್ ಖಾತೆಗಳು ಸಾಮಾಜಿಕ ಮಾಧ್ಯಮದಲ್ಲಿ ನನ್ನ ವಿಳಾಸವನ್ನು ಬಹಿರಂಗಪಡಿಸಿವೆ, ಕೊಲೆ ಬೆದರಿಕೆಗಳನ್ನು ಕಳುಹಿಸಲಾಗಿದೆ ಮತ್ತು ಗುಂಪುಗಳ ನಡುವೆ ದ್ವೇಷದ ಭಾವನೆಯನ್ನು ಸೃಷ್ಟಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದರು.

ರಂಜಾನ್ ಮಾಸದ ವೇಳೆ ಸಾಕುಪ್ರಾಣಿಗಳ ಫುಡ್ ವೆಬ್‌ಸೈಟ್ ಮೂಲಕ 400 ಗ್ರಾಂ ಹಂದಿಮಾಂಸದ ಪ್ಯಾಕೆಟ್ ಅನ್ನು ಏಪ್ರಿಲ್ 9 ರಂದು ಟ್ವಿಟರ್ ಹ್ಯಾಂಡಲ್ @Cyber_Huntss ನನಗೆ ಕಳುಹಿಸಿದೆ ಎಂದು ಜುಬೈರ್ ಹೇಳಿದ್ದಾರೆ.

ಜುಬೇರ್ ಅವರಿಗೆ ಹಂದಿ ಮಾಂಸವನ್ನು ಆರ್ಡರ್ ಮಾಡಿರುವುದಾಗಿ ಈ ಹ್ಯಾಂಡಲ್ನ್ ನಲ್ಲಿ ಟ್ವೀಟ್ ಪೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್ ಮೂಲಕ ಬೆಂಗಳೂರಿನಲ್ಲಿರುವ ಜುಬೈರ್ ಅವರ ವಿಳಾಸವನ್ನು ಬಹಿರಂಗಪಡಿಸಲಾಗಿತ್ತು. ನಂತರ ಟ್ವೀಟ್ ಅನ್ನು ಅಳಿಸಲಾಗಿತ್ತು.

“ನನ್ನ ಧಾರ್ಮಿಕ ಗುರುತನ್ನು ಟಾರ್ಗೆಟ್ ಮಾಡಲಾಗಿದೆ. ಮುಸ್ಲಿಮರು ಸೇವಿಸದ ಹಂದಿಮಾಂಸವನ್ನು ಕಳಿಸುವ ಮೂಲಕ ಟಾರ್ಗೆಟ್ ಮಾಡಿರುವುದು ಸ್ಪಷ್ಟವಾಗಿದೆ’’ ಎಂದು ಜುಬೇರ್ ತಿಳಿದ್ದಾರೆ. “ನನ್ನ ಧಾರ್ಮಿಕ ಅಸ್ಮಿತೆ ಮತ್ತು ಘನತೆಯ ಮೇಲೆ ದಾಳಿ ಮಾಡುವುದಕ್ಕೆ ನಿಷೇಧಿತ ಮಾಂಸವನ್ನು ರಂಜಾನ್ ಮಾಸದ ವೇಳೆ ನನಗೆ ಕಳುಹಿಸಲಾಗಿದೆ’’ ಎಂದು ಅವರು ಆರೋಪಿಸಿದ್ದಾರೆ.

ನನ್ನ ವಿಳಾಸವನ್ನು ಬಹಿರಂಗಪಡಿಸಿರುವ ಟ್ವೀಟ್, ತನ್ನ ವಿರುದ್ಧ ಗುಂಪು ಹಿಂಸಾಚಾರಕ್ಕೆ ಕಾರಣವಾಗಬಹುದು ಎಂದು ಜುಬೇರ್ ಆತಂಕ ವ್ಯಕ್ತಪಡಿಸಿದ್ದಾರೆ. “ಕಳೆದ ಮಾರ್ಚ್ ತಿಂಗಳಿನಿಂದ ನಾನು ಸ್ವೀಕರಿಸಿರುವ ಕೊನೆಯಿಲ್ಲದ ದ್ವೇಷದ ಕರೆಗಳೊಂದಿಗೆ ಈ ಟ್ವೀಟ್ ಅನ್ನು ಪರಿಗಣಿಸಬೇಕು’’ ಎಂದು ಜುಬೇರ್ ಮನವಿ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಜುಬೈರ್ ಅವರು ಆನ್‌ಲೈನ್ ನಿಂದನೆಯನ್ನು ವ್ಯಾಪಕವಾಗಿ ಎದುರಿಸಿದ್ದಾರೆ. ಆನ್‌ಲೈನ್‌ನಲ್ಲಿ ಹಿಂದುತ್ವ ಬೆಂಬಲಿಗರಿಂದ ಬೆದರಿಕೆಗಳನ್ನು ಸ್ವೀಕರಿಸಿದ್ದಾರೆ. ಮಾರ್ಚ್‌ ತಿಂಗಳಿನಲ್ಲಿ ಹಲವಾರು ಹಿಂದುತ್ವವಾದಿ ಪ್ರಭಾವಿಗಳು ಆನ್‌ಲೈನ್‌ನಲ್ಲಿ ಬೆದರಿಕೆಗಳನ್ನು ಹಾಕಿದ್ದರು ಮತ್ತು ಕೆಲವರು ಜುಬೇರ್ ವಿರುದ್ಧ ಕಾನೂನು ಮೀರಿದ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೆದರಿಸಿದ್ದರು.

ತಮಿಳುನಾಡಿಗೆ ವಲಸೆ ಬಂದ ಬಿಹಾರಿ ಕಾರ್ಮಿಕರ ಹತ್ಯೆಯಾಗಿದೆ ಎಂದು ಹಬ್ಬಿಸಲಾಗಿದ್ದ ಸುಳ್ಳುಗಳನ್ನು ಆಲ್ಟ್ ನ್ಯೂಸ್ ಬಯಲಿಗೆಳೆದಿತ್ತು. “ಈ ಸುಳ್ಳುಗಳನ್ನು ಭೇದಿಸಿದ ನಂತರ ನನಗೆ ಬೆದರಿಕೆಗಳು ಹೆಚ್ಚಾಗಿ ಬರುತ್ತಿವೆ’’ ಎಂದು ಜುಬೇರ್ ದೂರಿದ್ದಾರೆ.

ಆ ಸಮಯದಲ್ಲಿ ಒಪಿಇಂಡಿಯಾದ ಮಾಜಿ ಸಂಪಾದಕ ಅಜೀತ್ ಭಾರ್ತಿ ಟ್ವೀಟ್ ಮಾಡಿ, “ಯೋಜನೆ ಚಾಲನೆ ಪಡೆದಿದೆ. ಈ ಬಾರಿ ಅವನು ಸಂಪೂರ್ಣವಾಗಿ ಸುನ್ನತಿ ಮಾಡಿಸಿಕೊಳ್ಳುತ್ತಾನೆ, ಅವನಿಗೆ ಮೂತ್ರ ವಿಸರ್ಜಿಸಲು ಪೈಪ್ ಅಗತ್ಯವಿದೆ’’ ಎಂದು ಬೆದರಿಕೆ ಹಾಕಿದ್ದನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...