Homeಕರ್ನಾಟಕಬೆಂಗಳೂರು: ಫ್ಯಾಕ್ಟ್‌ಚೆಕ್ಕರ್ ಜುಬೇರ್‌ಗೆ ಕೊಲೆ ಬೆದರಿಕೆ ಹಾಕಿದ್ದವರ ವಿರುದ್ಧ ಎಫ್.ಐ.ಆರ್.

ಬೆಂಗಳೂರು: ಫ್ಯಾಕ್ಟ್‌ಚೆಕ್ಕರ್ ಜುಬೇರ್‌ಗೆ ಕೊಲೆ ಬೆದರಿಕೆ ಹಾಕಿದ್ದವರ ವಿರುದ್ಧ ಎಫ್.ಐ.ಆರ್.

- Advertisement -
- Advertisement -

“ಕೆಲವು ಟ್ವಿಟರ್ ಬಳಕೆದಾರರು ನನ್ನ ವಿರುದ್ಧ ಗುಂಪು ಹಿಂಸಾಚಾರಕ್ಕೆ ಮತ್ತು ನನ್ನನ್ನು ಕೊಲೆ ಮಾಡುವುದಕ್ಕೆ ಕರೆ ನೀಡಿದ್ದಾರೆ’’ ಎಂದು ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ನೀಡಿದ ದೂರಿನ ಮೇರೆಗೆ ಬೆಂಗಳೂರು ಪೊಲೀಸರು ಎಫ್.ಐ.ಆರ್. ದಾಖಲಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಟ್ವಿಟರ್ ಹ್ಯಾಂಡಲ್ @Cyber_Huntss ಮತ್ತು ಹೆಸರಿಲ್ಲದ ಇತರ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕ ಕಿಡಿಗೇಡಿತನಕ್ಕೆ ಅನುಕೂಲಕರವಾದ ಹೇಳಿಕೆ, ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಕ್ರಿಮಿನಲ್ ಬೆದರಿಕೆ, ಶಾಂತಿ ಉಲ್ಲಂಘನೆ ಪ್ರಚೋದನೆ, ಉದ್ದೇಶಪೂರ್ವಕ ಅವಮಾನ ಮಾಡುವುದು- ಈ ಅಪರಾಧಗಳಿಗೆ ಸಂಬಂಧಿಸಿದ ನಿಬಂಧನೆಗಳನ್ನು ಎಫ್.ಐ.ಆರ್.ನಲ್ಲಿ ಹೆಸರಿಸಲಾಗಿದೆ.

ಆದರೆ ಎಫ್‌ಐಆರ್‌ನಲ್ಲಿ ಮಾಜಿ ಒಪಿಇಂಡಿಯಾ ಸಂಪಾದಕ ಅಜೀತ್ ಭಾರ್ತಿ ಹೆಸರನ್ನೂ ಸೇರಿಸುವಂತೆ ಪೊಲೀಸರಲ್ಲಿ ಜುಬೇರ್ ಒತ್ತಾಯಿಸಿದ್ದಾರೆ. “ಅಜಿತ್ ಅವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಸರಣಿ ಅಪರಾಧಗಳನ್ನು ಎಸಗಿದ್ದಾರೆ, ಕಾನೂನು ಕ್ರಮ ಜರುಗಿಸಬೇಕು’’ ಎಂದು ಆಗ್ರಹಿಸಿದ್ದಾರೆ.

ಫ್ಯಾಕ್ಟ್ ಚೆಕ್  ವೆಬ್‌ಸೈಟ್‌ `ಆಲ್ಟ್ ನ್ಯೂಸ್’ ಸಹ-ಸಂಸ್ಥಾಪಕ ಜುಬೇರ್ ಅವರು ಏಪ್ರಿಲ್‌ನಲ್ಲಿ 15 ಟ್ವಿಟರ್ ಹ್ಯಾಂಡಲ್‌ಗಳ ವಿರುದ್ಧ ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಟ್ವಿಟರ್ ಖಾತೆಗಳು ಸಾಮಾಜಿಕ ಮಾಧ್ಯಮದಲ್ಲಿ ನನ್ನ ವಿಳಾಸವನ್ನು ಬಹಿರಂಗಪಡಿಸಿವೆ, ಕೊಲೆ ಬೆದರಿಕೆಗಳನ್ನು ಕಳುಹಿಸಲಾಗಿದೆ ಮತ್ತು ಗುಂಪುಗಳ ನಡುವೆ ದ್ವೇಷದ ಭಾವನೆಯನ್ನು ಸೃಷ್ಟಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದರು.

ರಂಜಾನ್ ಮಾಸದ ವೇಳೆ ಸಾಕುಪ್ರಾಣಿಗಳ ಫುಡ್ ವೆಬ್‌ಸೈಟ್ ಮೂಲಕ 400 ಗ್ರಾಂ ಹಂದಿಮಾಂಸದ ಪ್ಯಾಕೆಟ್ ಅನ್ನು ಏಪ್ರಿಲ್ 9 ರಂದು ಟ್ವಿಟರ್ ಹ್ಯಾಂಡಲ್ @Cyber_Huntss ನನಗೆ ಕಳುಹಿಸಿದೆ ಎಂದು ಜುಬೈರ್ ಹೇಳಿದ್ದಾರೆ.

ಜುಬೇರ್ ಅವರಿಗೆ ಹಂದಿ ಮಾಂಸವನ್ನು ಆರ್ಡರ್ ಮಾಡಿರುವುದಾಗಿ ಈ ಹ್ಯಾಂಡಲ್ನ್ ನಲ್ಲಿ ಟ್ವೀಟ್ ಪೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್ ಮೂಲಕ ಬೆಂಗಳೂರಿನಲ್ಲಿರುವ ಜುಬೈರ್ ಅವರ ವಿಳಾಸವನ್ನು ಬಹಿರಂಗಪಡಿಸಲಾಗಿತ್ತು. ನಂತರ ಟ್ವೀಟ್ ಅನ್ನು ಅಳಿಸಲಾಗಿತ್ತು.

“ನನ್ನ ಧಾರ್ಮಿಕ ಗುರುತನ್ನು ಟಾರ್ಗೆಟ್ ಮಾಡಲಾಗಿದೆ. ಮುಸ್ಲಿಮರು ಸೇವಿಸದ ಹಂದಿಮಾಂಸವನ್ನು ಕಳಿಸುವ ಮೂಲಕ ಟಾರ್ಗೆಟ್ ಮಾಡಿರುವುದು ಸ್ಪಷ್ಟವಾಗಿದೆ’’ ಎಂದು ಜುಬೇರ್ ತಿಳಿದ್ದಾರೆ. “ನನ್ನ ಧಾರ್ಮಿಕ ಅಸ್ಮಿತೆ ಮತ್ತು ಘನತೆಯ ಮೇಲೆ ದಾಳಿ ಮಾಡುವುದಕ್ಕೆ ನಿಷೇಧಿತ ಮಾಂಸವನ್ನು ರಂಜಾನ್ ಮಾಸದ ವೇಳೆ ನನಗೆ ಕಳುಹಿಸಲಾಗಿದೆ’’ ಎಂದು ಅವರು ಆರೋಪಿಸಿದ್ದಾರೆ.

ನನ್ನ ವಿಳಾಸವನ್ನು ಬಹಿರಂಗಪಡಿಸಿರುವ ಟ್ವೀಟ್, ತನ್ನ ವಿರುದ್ಧ ಗುಂಪು ಹಿಂಸಾಚಾರಕ್ಕೆ ಕಾರಣವಾಗಬಹುದು ಎಂದು ಜುಬೇರ್ ಆತಂಕ ವ್ಯಕ್ತಪಡಿಸಿದ್ದಾರೆ. “ಕಳೆದ ಮಾರ್ಚ್ ತಿಂಗಳಿನಿಂದ ನಾನು ಸ್ವೀಕರಿಸಿರುವ ಕೊನೆಯಿಲ್ಲದ ದ್ವೇಷದ ಕರೆಗಳೊಂದಿಗೆ ಈ ಟ್ವೀಟ್ ಅನ್ನು ಪರಿಗಣಿಸಬೇಕು’’ ಎಂದು ಜುಬೇರ್ ಮನವಿ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಜುಬೈರ್ ಅವರು ಆನ್‌ಲೈನ್ ನಿಂದನೆಯನ್ನು ವ್ಯಾಪಕವಾಗಿ ಎದುರಿಸಿದ್ದಾರೆ. ಆನ್‌ಲೈನ್‌ನಲ್ಲಿ ಹಿಂದುತ್ವ ಬೆಂಬಲಿಗರಿಂದ ಬೆದರಿಕೆಗಳನ್ನು ಸ್ವೀಕರಿಸಿದ್ದಾರೆ. ಮಾರ್ಚ್‌ ತಿಂಗಳಿನಲ್ಲಿ ಹಲವಾರು ಹಿಂದುತ್ವವಾದಿ ಪ್ರಭಾವಿಗಳು ಆನ್‌ಲೈನ್‌ನಲ್ಲಿ ಬೆದರಿಕೆಗಳನ್ನು ಹಾಕಿದ್ದರು ಮತ್ತು ಕೆಲವರು ಜುಬೇರ್ ವಿರುದ್ಧ ಕಾನೂನು ಮೀರಿದ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೆದರಿಸಿದ್ದರು.

ತಮಿಳುನಾಡಿಗೆ ವಲಸೆ ಬಂದ ಬಿಹಾರಿ ಕಾರ್ಮಿಕರ ಹತ್ಯೆಯಾಗಿದೆ ಎಂದು ಹಬ್ಬಿಸಲಾಗಿದ್ದ ಸುಳ್ಳುಗಳನ್ನು ಆಲ್ಟ್ ನ್ಯೂಸ್ ಬಯಲಿಗೆಳೆದಿತ್ತು. “ಈ ಸುಳ್ಳುಗಳನ್ನು ಭೇದಿಸಿದ ನಂತರ ನನಗೆ ಬೆದರಿಕೆಗಳು ಹೆಚ್ಚಾಗಿ ಬರುತ್ತಿವೆ’’ ಎಂದು ಜುಬೇರ್ ದೂರಿದ್ದಾರೆ.

ಆ ಸಮಯದಲ್ಲಿ ಒಪಿಇಂಡಿಯಾದ ಮಾಜಿ ಸಂಪಾದಕ ಅಜೀತ್ ಭಾರ್ತಿ ಟ್ವೀಟ್ ಮಾಡಿ, “ಯೋಜನೆ ಚಾಲನೆ ಪಡೆದಿದೆ. ಈ ಬಾರಿ ಅವನು ಸಂಪೂರ್ಣವಾಗಿ ಸುನ್ನತಿ ಮಾಡಿಸಿಕೊಳ್ಳುತ್ತಾನೆ, ಅವನಿಗೆ ಮೂತ್ರ ವಿಸರ್ಜಿಸಲು ಪೈಪ್ ಅಗತ್ಯವಿದೆ’’ ಎಂದು ಬೆದರಿಕೆ ಹಾಕಿದ್ದನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...