Homeಕರ್ನಾಟಕಬೆಂಗಳೂರು: ಫ್ಯಾಕ್ಟ್‌ಚೆಕ್ಕರ್ ಜುಬೇರ್‌ಗೆ ಕೊಲೆ ಬೆದರಿಕೆ ಹಾಕಿದ್ದವರ ವಿರುದ್ಧ ಎಫ್.ಐ.ಆರ್.

ಬೆಂಗಳೂರು: ಫ್ಯಾಕ್ಟ್‌ಚೆಕ್ಕರ್ ಜುಬೇರ್‌ಗೆ ಕೊಲೆ ಬೆದರಿಕೆ ಹಾಕಿದ್ದವರ ವಿರುದ್ಧ ಎಫ್.ಐ.ಆರ್.

- Advertisement -
- Advertisement -

“ಕೆಲವು ಟ್ವಿಟರ್ ಬಳಕೆದಾರರು ನನ್ನ ವಿರುದ್ಧ ಗುಂಪು ಹಿಂಸಾಚಾರಕ್ಕೆ ಮತ್ತು ನನ್ನನ್ನು ಕೊಲೆ ಮಾಡುವುದಕ್ಕೆ ಕರೆ ನೀಡಿದ್ದಾರೆ’’ ಎಂದು ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ನೀಡಿದ ದೂರಿನ ಮೇರೆಗೆ ಬೆಂಗಳೂರು ಪೊಲೀಸರು ಎಫ್.ಐ.ಆರ್. ದಾಖಲಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಟ್ವಿಟರ್ ಹ್ಯಾಂಡಲ್ @Cyber_Huntss ಮತ್ತು ಹೆಸರಿಲ್ಲದ ಇತರ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕ ಕಿಡಿಗೇಡಿತನಕ್ಕೆ ಅನುಕೂಲಕರವಾದ ಹೇಳಿಕೆ, ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಕ್ರಿಮಿನಲ್ ಬೆದರಿಕೆ, ಶಾಂತಿ ಉಲ್ಲಂಘನೆ ಪ್ರಚೋದನೆ, ಉದ್ದೇಶಪೂರ್ವಕ ಅವಮಾನ ಮಾಡುವುದು- ಈ ಅಪರಾಧಗಳಿಗೆ ಸಂಬಂಧಿಸಿದ ನಿಬಂಧನೆಗಳನ್ನು ಎಫ್.ಐ.ಆರ್.ನಲ್ಲಿ ಹೆಸರಿಸಲಾಗಿದೆ.

ಆದರೆ ಎಫ್‌ಐಆರ್‌ನಲ್ಲಿ ಮಾಜಿ ಒಪಿಇಂಡಿಯಾ ಸಂಪಾದಕ ಅಜೀತ್ ಭಾರ್ತಿ ಹೆಸರನ್ನೂ ಸೇರಿಸುವಂತೆ ಪೊಲೀಸರಲ್ಲಿ ಜುಬೇರ್ ಒತ್ತಾಯಿಸಿದ್ದಾರೆ. “ಅಜಿತ್ ಅವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಸರಣಿ ಅಪರಾಧಗಳನ್ನು ಎಸಗಿದ್ದಾರೆ, ಕಾನೂನು ಕ್ರಮ ಜರುಗಿಸಬೇಕು’’ ಎಂದು ಆಗ್ರಹಿಸಿದ್ದಾರೆ.

ಫ್ಯಾಕ್ಟ್ ಚೆಕ್  ವೆಬ್‌ಸೈಟ್‌ `ಆಲ್ಟ್ ನ್ಯೂಸ್’ ಸಹ-ಸಂಸ್ಥಾಪಕ ಜುಬೇರ್ ಅವರು ಏಪ್ರಿಲ್‌ನಲ್ಲಿ 15 ಟ್ವಿಟರ್ ಹ್ಯಾಂಡಲ್‌ಗಳ ವಿರುದ್ಧ ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಟ್ವಿಟರ್ ಖಾತೆಗಳು ಸಾಮಾಜಿಕ ಮಾಧ್ಯಮದಲ್ಲಿ ನನ್ನ ವಿಳಾಸವನ್ನು ಬಹಿರಂಗಪಡಿಸಿವೆ, ಕೊಲೆ ಬೆದರಿಕೆಗಳನ್ನು ಕಳುಹಿಸಲಾಗಿದೆ ಮತ್ತು ಗುಂಪುಗಳ ನಡುವೆ ದ್ವೇಷದ ಭಾವನೆಯನ್ನು ಸೃಷ್ಟಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದರು.

ರಂಜಾನ್ ಮಾಸದ ವೇಳೆ ಸಾಕುಪ್ರಾಣಿಗಳ ಫುಡ್ ವೆಬ್‌ಸೈಟ್ ಮೂಲಕ 400 ಗ್ರಾಂ ಹಂದಿಮಾಂಸದ ಪ್ಯಾಕೆಟ್ ಅನ್ನು ಏಪ್ರಿಲ್ 9 ರಂದು ಟ್ವಿಟರ್ ಹ್ಯಾಂಡಲ್ @Cyber_Huntss ನನಗೆ ಕಳುಹಿಸಿದೆ ಎಂದು ಜುಬೈರ್ ಹೇಳಿದ್ದಾರೆ.

ಜುಬೇರ್ ಅವರಿಗೆ ಹಂದಿ ಮಾಂಸವನ್ನು ಆರ್ಡರ್ ಮಾಡಿರುವುದಾಗಿ ಈ ಹ್ಯಾಂಡಲ್ನ್ ನಲ್ಲಿ ಟ್ವೀಟ್ ಪೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್ ಮೂಲಕ ಬೆಂಗಳೂರಿನಲ್ಲಿರುವ ಜುಬೈರ್ ಅವರ ವಿಳಾಸವನ್ನು ಬಹಿರಂಗಪಡಿಸಲಾಗಿತ್ತು. ನಂತರ ಟ್ವೀಟ್ ಅನ್ನು ಅಳಿಸಲಾಗಿತ್ತು.

“ನನ್ನ ಧಾರ್ಮಿಕ ಗುರುತನ್ನು ಟಾರ್ಗೆಟ್ ಮಾಡಲಾಗಿದೆ. ಮುಸ್ಲಿಮರು ಸೇವಿಸದ ಹಂದಿಮಾಂಸವನ್ನು ಕಳಿಸುವ ಮೂಲಕ ಟಾರ್ಗೆಟ್ ಮಾಡಿರುವುದು ಸ್ಪಷ್ಟವಾಗಿದೆ’’ ಎಂದು ಜುಬೇರ್ ತಿಳಿದ್ದಾರೆ. “ನನ್ನ ಧಾರ್ಮಿಕ ಅಸ್ಮಿತೆ ಮತ್ತು ಘನತೆಯ ಮೇಲೆ ದಾಳಿ ಮಾಡುವುದಕ್ಕೆ ನಿಷೇಧಿತ ಮಾಂಸವನ್ನು ರಂಜಾನ್ ಮಾಸದ ವೇಳೆ ನನಗೆ ಕಳುಹಿಸಲಾಗಿದೆ’’ ಎಂದು ಅವರು ಆರೋಪಿಸಿದ್ದಾರೆ.

ನನ್ನ ವಿಳಾಸವನ್ನು ಬಹಿರಂಗಪಡಿಸಿರುವ ಟ್ವೀಟ್, ತನ್ನ ವಿರುದ್ಧ ಗುಂಪು ಹಿಂಸಾಚಾರಕ್ಕೆ ಕಾರಣವಾಗಬಹುದು ಎಂದು ಜುಬೇರ್ ಆತಂಕ ವ್ಯಕ್ತಪಡಿಸಿದ್ದಾರೆ. “ಕಳೆದ ಮಾರ್ಚ್ ತಿಂಗಳಿನಿಂದ ನಾನು ಸ್ವೀಕರಿಸಿರುವ ಕೊನೆಯಿಲ್ಲದ ದ್ವೇಷದ ಕರೆಗಳೊಂದಿಗೆ ಈ ಟ್ವೀಟ್ ಅನ್ನು ಪರಿಗಣಿಸಬೇಕು’’ ಎಂದು ಜುಬೇರ್ ಮನವಿ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಜುಬೈರ್ ಅವರು ಆನ್‌ಲೈನ್ ನಿಂದನೆಯನ್ನು ವ್ಯಾಪಕವಾಗಿ ಎದುರಿಸಿದ್ದಾರೆ. ಆನ್‌ಲೈನ್‌ನಲ್ಲಿ ಹಿಂದುತ್ವ ಬೆಂಬಲಿಗರಿಂದ ಬೆದರಿಕೆಗಳನ್ನು ಸ್ವೀಕರಿಸಿದ್ದಾರೆ. ಮಾರ್ಚ್‌ ತಿಂಗಳಿನಲ್ಲಿ ಹಲವಾರು ಹಿಂದುತ್ವವಾದಿ ಪ್ರಭಾವಿಗಳು ಆನ್‌ಲೈನ್‌ನಲ್ಲಿ ಬೆದರಿಕೆಗಳನ್ನು ಹಾಕಿದ್ದರು ಮತ್ತು ಕೆಲವರು ಜುಬೇರ್ ವಿರುದ್ಧ ಕಾನೂನು ಮೀರಿದ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೆದರಿಸಿದ್ದರು.

ತಮಿಳುನಾಡಿಗೆ ವಲಸೆ ಬಂದ ಬಿಹಾರಿ ಕಾರ್ಮಿಕರ ಹತ್ಯೆಯಾಗಿದೆ ಎಂದು ಹಬ್ಬಿಸಲಾಗಿದ್ದ ಸುಳ್ಳುಗಳನ್ನು ಆಲ್ಟ್ ನ್ಯೂಸ್ ಬಯಲಿಗೆಳೆದಿತ್ತು. “ಈ ಸುಳ್ಳುಗಳನ್ನು ಭೇದಿಸಿದ ನಂತರ ನನಗೆ ಬೆದರಿಕೆಗಳು ಹೆಚ್ಚಾಗಿ ಬರುತ್ತಿವೆ’’ ಎಂದು ಜುಬೇರ್ ದೂರಿದ್ದಾರೆ.

ಆ ಸಮಯದಲ್ಲಿ ಒಪಿಇಂಡಿಯಾದ ಮಾಜಿ ಸಂಪಾದಕ ಅಜೀತ್ ಭಾರ್ತಿ ಟ್ವೀಟ್ ಮಾಡಿ, “ಯೋಜನೆ ಚಾಲನೆ ಪಡೆದಿದೆ. ಈ ಬಾರಿ ಅವನು ಸಂಪೂರ್ಣವಾಗಿ ಸುನ್ನತಿ ಮಾಡಿಸಿಕೊಳ್ಳುತ್ತಾನೆ, ಅವನಿಗೆ ಮೂತ್ರ ವಿಸರ್ಜಿಸಲು ಪೈಪ್ ಅಗತ್ಯವಿದೆ’’ ಎಂದು ಬೆದರಿಕೆ ಹಾಕಿದ್ದನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...