Homeಕರ್ನಾಟಕಬೆಂಗಳೂರು: ಫ್ಯಾಕ್ಟ್‌ಚೆಕ್ಕರ್ ಜುಬೇರ್‌ಗೆ ಕೊಲೆ ಬೆದರಿಕೆ ಹಾಕಿದ್ದವರ ವಿರುದ್ಧ ಎಫ್.ಐ.ಆರ್.

ಬೆಂಗಳೂರು: ಫ್ಯಾಕ್ಟ್‌ಚೆಕ್ಕರ್ ಜುಬೇರ್‌ಗೆ ಕೊಲೆ ಬೆದರಿಕೆ ಹಾಕಿದ್ದವರ ವಿರುದ್ಧ ಎಫ್.ಐ.ಆರ್.

- Advertisement -
- Advertisement -

“ಕೆಲವು ಟ್ವಿಟರ್ ಬಳಕೆದಾರರು ನನ್ನ ವಿರುದ್ಧ ಗುಂಪು ಹಿಂಸಾಚಾರಕ್ಕೆ ಮತ್ತು ನನ್ನನ್ನು ಕೊಲೆ ಮಾಡುವುದಕ್ಕೆ ಕರೆ ನೀಡಿದ್ದಾರೆ’’ ಎಂದು ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ನೀಡಿದ ದೂರಿನ ಮೇರೆಗೆ ಬೆಂಗಳೂರು ಪೊಲೀಸರು ಎಫ್.ಐ.ಆರ್. ದಾಖಲಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಟ್ವಿಟರ್ ಹ್ಯಾಂಡಲ್ @Cyber_Huntss ಮತ್ತು ಹೆಸರಿಲ್ಲದ ಇತರ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕ ಕಿಡಿಗೇಡಿತನಕ್ಕೆ ಅನುಕೂಲಕರವಾದ ಹೇಳಿಕೆ, ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಕ್ರಿಮಿನಲ್ ಬೆದರಿಕೆ, ಶಾಂತಿ ಉಲ್ಲಂಘನೆ ಪ್ರಚೋದನೆ, ಉದ್ದೇಶಪೂರ್ವಕ ಅವಮಾನ ಮಾಡುವುದು- ಈ ಅಪರಾಧಗಳಿಗೆ ಸಂಬಂಧಿಸಿದ ನಿಬಂಧನೆಗಳನ್ನು ಎಫ್.ಐ.ಆರ್.ನಲ್ಲಿ ಹೆಸರಿಸಲಾಗಿದೆ.

ಆದರೆ ಎಫ್‌ಐಆರ್‌ನಲ್ಲಿ ಮಾಜಿ ಒಪಿಇಂಡಿಯಾ ಸಂಪಾದಕ ಅಜೀತ್ ಭಾರ್ತಿ ಹೆಸರನ್ನೂ ಸೇರಿಸುವಂತೆ ಪೊಲೀಸರಲ್ಲಿ ಜುಬೇರ್ ಒತ್ತಾಯಿಸಿದ್ದಾರೆ. “ಅಜಿತ್ ಅವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಸರಣಿ ಅಪರಾಧಗಳನ್ನು ಎಸಗಿದ್ದಾರೆ, ಕಾನೂನು ಕ್ರಮ ಜರುಗಿಸಬೇಕು’’ ಎಂದು ಆಗ್ರಹಿಸಿದ್ದಾರೆ.

ಫ್ಯಾಕ್ಟ್ ಚೆಕ್  ವೆಬ್‌ಸೈಟ್‌ `ಆಲ್ಟ್ ನ್ಯೂಸ್’ ಸಹ-ಸಂಸ್ಥಾಪಕ ಜುಬೇರ್ ಅವರು ಏಪ್ರಿಲ್‌ನಲ್ಲಿ 15 ಟ್ವಿಟರ್ ಹ್ಯಾಂಡಲ್‌ಗಳ ವಿರುದ್ಧ ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಟ್ವಿಟರ್ ಖಾತೆಗಳು ಸಾಮಾಜಿಕ ಮಾಧ್ಯಮದಲ್ಲಿ ನನ್ನ ವಿಳಾಸವನ್ನು ಬಹಿರಂಗಪಡಿಸಿವೆ, ಕೊಲೆ ಬೆದರಿಕೆಗಳನ್ನು ಕಳುಹಿಸಲಾಗಿದೆ ಮತ್ತು ಗುಂಪುಗಳ ನಡುವೆ ದ್ವೇಷದ ಭಾವನೆಯನ್ನು ಸೃಷ್ಟಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದರು.

ರಂಜಾನ್ ಮಾಸದ ವೇಳೆ ಸಾಕುಪ್ರಾಣಿಗಳ ಫುಡ್ ವೆಬ್‌ಸೈಟ್ ಮೂಲಕ 400 ಗ್ರಾಂ ಹಂದಿಮಾಂಸದ ಪ್ಯಾಕೆಟ್ ಅನ್ನು ಏಪ್ರಿಲ್ 9 ರಂದು ಟ್ವಿಟರ್ ಹ್ಯಾಂಡಲ್ @Cyber_Huntss ನನಗೆ ಕಳುಹಿಸಿದೆ ಎಂದು ಜುಬೈರ್ ಹೇಳಿದ್ದಾರೆ.

ಜುಬೇರ್ ಅವರಿಗೆ ಹಂದಿ ಮಾಂಸವನ್ನು ಆರ್ಡರ್ ಮಾಡಿರುವುದಾಗಿ ಈ ಹ್ಯಾಂಡಲ್ನ್ ನಲ್ಲಿ ಟ್ವೀಟ್ ಪೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್ ಮೂಲಕ ಬೆಂಗಳೂರಿನಲ್ಲಿರುವ ಜುಬೈರ್ ಅವರ ವಿಳಾಸವನ್ನು ಬಹಿರಂಗಪಡಿಸಲಾಗಿತ್ತು. ನಂತರ ಟ್ವೀಟ್ ಅನ್ನು ಅಳಿಸಲಾಗಿತ್ತು.

“ನನ್ನ ಧಾರ್ಮಿಕ ಗುರುತನ್ನು ಟಾರ್ಗೆಟ್ ಮಾಡಲಾಗಿದೆ. ಮುಸ್ಲಿಮರು ಸೇವಿಸದ ಹಂದಿಮಾಂಸವನ್ನು ಕಳಿಸುವ ಮೂಲಕ ಟಾರ್ಗೆಟ್ ಮಾಡಿರುವುದು ಸ್ಪಷ್ಟವಾಗಿದೆ’’ ಎಂದು ಜುಬೇರ್ ತಿಳಿದ್ದಾರೆ. “ನನ್ನ ಧಾರ್ಮಿಕ ಅಸ್ಮಿತೆ ಮತ್ತು ಘನತೆಯ ಮೇಲೆ ದಾಳಿ ಮಾಡುವುದಕ್ಕೆ ನಿಷೇಧಿತ ಮಾಂಸವನ್ನು ರಂಜಾನ್ ಮಾಸದ ವೇಳೆ ನನಗೆ ಕಳುಹಿಸಲಾಗಿದೆ’’ ಎಂದು ಅವರು ಆರೋಪಿಸಿದ್ದಾರೆ.

ನನ್ನ ವಿಳಾಸವನ್ನು ಬಹಿರಂಗಪಡಿಸಿರುವ ಟ್ವೀಟ್, ತನ್ನ ವಿರುದ್ಧ ಗುಂಪು ಹಿಂಸಾಚಾರಕ್ಕೆ ಕಾರಣವಾಗಬಹುದು ಎಂದು ಜುಬೇರ್ ಆತಂಕ ವ್ಯಕ್ತಪಡಿಸಿದ್ದಾರೆ. “ಕಳೆದ ಮಾರ್ಚ್ ತಿಂಗಳಿನಿಂದ ನಾನು ಸ್ವೀಕರಿಸಿರುವ ಕೊನೆಯಿಲ್ಲದ ದ್ವೇಷದ ಕರೆಗಳೊಂದಿಗೆ ಈ ಟ್ವೀಟ್ ಅನ್ನು ಪರಿಗಣಿಸಬೇಕು’’ ಎಂದು ಜುಬೇರ್ ಮನವಿ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಜುಬೈರ್ ಅವರು ಆನ್‌ಲೈನ್ ನಿಂದನೆಯನ್ನು ವ್ಯಾಪಕವಾಗಿ ಎದುರಿಸಿದ್ದಾರೆ. ಆನ್‌ಲೈನ್‌ನಲ್ಲಿ ಹಿಂದುತ್ವ ಬೆಂಬಲಿಗರಿಂದ ಬೆದರಿಕೆಗಳನ್ನು ಸ್ವೀಕರಿಸಿದ್ದಾರೆ. ಮಾರ್ಚ್‌ ತಿಂಗಳಿನಲ್ಲಿ ಹಲವಾರು ಹಿಂದುತ್ವವಾದಿ ಪ್ರಭಾವಿಗಳು ಆನ್‌ಲೈನ್‌ನಲ್ಲಿ ಬೆದರಿಕೆಗಳನ್ನು ಹಾಕಿದ್ದರು ಮತ್ತು ಕೆಲವರು ಜುಬೇರ್ ವಿರುದ್ಧ ಕಾನೂನು ಮೀರಿದ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೆದರಿಸಿದ್ದರು.

ತಮಿಳುನಾಡಿಗೆ ವಲಸೆ ಬಂದ ಬಿಹಾರಿ ಕಾರ್ಮಿಕರ ಹತ್ಯೆಯಾಗಿದೆ ಎಂದು ಹಬ್ಬಿಸಲಾಗಿದ್ದ ಸುಳ್ಳುಗಳನ್ನು ಆಲ್ಟ್ ನ್ಯೂಸ್ ಬಯಲಿಗೆಳೆದಿತ್ತು. “ಈ ಸುಳ್ಳುಗಳನ್ನು ಭೇದಿಸಿದ ನಂತರ ನನಗೆ ಬೆದರಿಕೆಗಳು ಹೆಚ್ಚಾಗಿ ಬರುತ್ತಿವೆ’’ ಎಂದು ಜುಬೇರ್ ದೂರಿದ್ದಾರೆ.

ಆ ಸಮಯದಲ್ಲಿ ಒಪಿಇಂಡಿಯಾದ ಮಾಜಿ ಸಂಪಾದಕ ಅಜೀತ್ ಭಾರ್ತಿ ಟ್ವೀಟ್ ಮಾಡಿ, “ಯೋಜನೆ ಚಾಲನೆ ಪಡೆದಿದೆ. ಈ ಬಾರಿ ಅವನು ಸಂಪೂರ್ಣವಾಗಿ ಸುನ್ನತಿ ಮಾಡಿಸಿಕೊಳ್ಳುತ್ತಾನೆ, ಅವನಿಗೆ ಮೂತ್ರ ವಿಸರ್ಜಿಸಲು ಪೈಪ್ ಅಗತ್ಯವಿದೆ’’ ಎಂದು ಬೆದರಿಕೆ ಹಾಕಿದ್ದನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1962ರ ಯುದ್ಧದಲ್ಲಿ ಸೈನ್ಯಕ್ಕೆ 600 ಕೆಜಿ ಚಿನ್ನ ದಾನ ಮಾಡಿದ್ದ ದರ್ಭಂಗಾದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ನಿಧನ

ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ 2025 ಜನವರಿ 12 ರಂದು ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ...

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ...

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...