Homeಕರ್ನಾಟಕಬೆಂಗಳೂರು: ಫ್ಯಾಕ್ಟ್‌ಚೆಕ್ಕರ್ ಜುಬೇರ್‌ಗೆ ಕೊಲೆ ಬೆದರಿಕೆ ಹಾಕಿದ್ದವರ ವಿರುದ್ಧ ಎಫ್.ಐ.ಆರ್.

ಬೆಂಗಳೂರು: ಫ್ಯಾಕ್ಟ್‌ಚೆಕ್ಕರ್ ಜುಬೇರ್‌ಗೆ ಕೊಲೆ ಬೆದರಿಕೆ ಹಾಕಿದ್ದವರ ವಿರುದ್ಧ ಎಫ್.ಐ.ಆರ್.

- Advertisement -
- Advertisement -

“ಕೆಲವು ಟ್ವಿಟರ್ ಬಳಕೆದಾರರು ನನ್ನ ವಿರುದ್ಧ ಗುಂಪು ಹಿಂಸಾಚಾರಕ್ಕೆ ಮತ್ತು ನನ್ನನ್ನು ಕೊಲೆ ಮಾಡುವುದಕ್ಕೆ ಕರೆ ನೀಡಿದ್ದಾರೆ’’ ಎಂದು ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ನೀಡಿದ ದೂರಿನ ಮೇರೆಗೆ ಬೆಂಗಳೂರು ಪೊಲೀಸರು ಎಫ್.ಐ.ಆರ್. ದಾಖಲಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಟ್ವಿಟರ್ ಹ್ಯಾಂಡಲ್ @Cyber_Huntss ಮತ್ತು ಹೆಸರಿಲ್ಲದ ಇತರ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕ ಕಿಡಿಗೇಡಿತನಕ್ಕೆ ಅನುಕೂಲಕರವಾದ ಹೇಳಿಕೆ, ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಕ್ರಿಮಿನಲ್ ಬೆದರಿಕೆ, ಶಾಂತಿ ಉಲ್ಲಂಘನೆ ಪ್ರಚೋದನೆ, ಉದ್ದೇಶಪೂರ್ವಕ ಅವಮಾನ ಮಾಡುವುದು- ಈ ಅಪರಾಧಗಳಿಗೆ ಸಂಬಂಧಿಸಿದ ನಿಬಂಧನೆಗಳನ್ನು ಎಫ್.ಐ.ಆರ್.ನಲ್ಲಿ ಹೆಸರಿಸಲಾಗಿದೆ.

ಆದರೆ ಎಫ್‌ಐಆರ್‌ನಲ್ಲಿ ಮಾಜಿ ಒಪಿಇಂಡಿಯಾ ಸಂಪಾದಕ ಅಜೀತ್ ಭಾರ್ತಿ ಹೆಸರನ್ನೂ ಸೇರಿಸುವಂತೆ ಪೊಲೀಸರಲ್ಲಿ ಜುಬೇರ್ ಒತ್ತಾಯಿಸಿದ್ದಾರೆ. “ಅಜಿತ್ ಅವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಸರಣಿ ಅಪರಾಧಗಳನ್ನು ಎಸಗಿದ್ದಾರೆ, ಕಾನೂನು ಕ್ರಮ ಜರುಗಿಸಬೇಕು’’ ಎಂದು ಆಗ್ರಹಿಸಿದ್ದಾರೆ.

ಫ್ಯಾಕ್ಟ್ ಚೆಕ್  ವೆಬ್‌ಸೈಟ್‌ `ಆಲ್ಟ್ ನ್ಯೂಸ್’ ಸಹ-ಸಂಸ್ಥಾಪಕ ಜುಬೇರ್ ಅವರು ಏಪ್ರಿಲ್‌ನಲ್ಲಿ 15 ಟ್ವಿಟರ್ ಹ್ಯಾಂಡಲ್‌ಗಳ ವಿರುದ್ಧ ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಟ್ವಿಟರ್ ಖಾತೆಗಳು ಸಾಮಾಜಿಕ ಮಾಧ್ಯಮದಲ್ಲಿ ನನ್ನ ವಿಳಾಸವನ್ನು ಬಹಿರಂಗಪಡಿಸಿವೆ, ಕೊಲೆ ಬೆದರಿಕೆಗಳನ್ನು ಕಳುಹಿಸಲಾಗಿದೆ ಮತ್ತು ಗುಂಪುಗಳ ನಡುವೆ ದ್ವೇಷದ ಭಾವನೆಯನ್ನು ಸೃಷ್ಟಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದರು.

ರಂಜಾನ್ ಮಾಸದ ವೇಳೆ ಸಾಕುಪ್ರಾಣಿಗಳ ಫುಡ್ ವೆಬ್‌ಸೈಟ್ ಮೂಲಕ 400 ಗ್ರಾಂ ಹಂದಿಮಾಂಸದ ಪ್ಯಾಕೆಟ್ ಅನ್ನು ಏಪ್ರಿಲ್ 9 ರಂದು ಟ್ವಿಟರ್ ಹ್ಯಾಂಡಲ್ @Cyber_Huntss ನನಗೆ ಕಳುಹಿಸಿದೆ ಎಂದು ಜುಬೈರ್ ಹೇಳಿದ್ದಾರೆ.

ಜುಬೇರ್ ಅವರಿಗೆ ಹಂದಿ ಮಾಂಸವನ್ನು ಆರ್ಡರ್ ಮಾಡಿರುವುದಾಗಿ ಈ ಹ್ಯಾಂಡಲ್ನ್ ನಲ್ಲಿ ಟ್ವೀಟ್ ಪೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್ ಮೂಲಕ ಬೆಂಗಳೂರಿನಲ್ಲಿರುವ ಜುಬೈರ್ ಅವರ ವಿಳಾಸವನ್ನು ಬಹಿರಂಗಪಡಿಸಲಾಗಿತ್ತು. ನಂತರ ಟ್ವೀಟ್ ಅನ್ನು ಅಳಿಸಲಾಗಿತ್ತು.

“ನನ್ನ ಧಾರ್ಮಿಕ ಗುರುತನ್ನು ಟಾರ್ಗೆಟ್ ಮಾಡಲಾಗಿದೆ. ಮುಸ್ಲಿಮರು ಸೇವಿಸದ ಹಂದಿಮಾಂಸವನ್ನು ಕಳಿಸುವ ಮೂಲಕ ಟಾರ್ಗೆಟ್ ಮಾಡಿರುವುದು ಸ್ಪಷ್ಟವಾಗಿದೆ’’ ಎಂದು ಜುಬೇರ್ ತಿಳಿದ್ದಾರೆ. “ನನ್ನ ಧಾರ್ಮಿಕ ಅಸ್ಮಿತೆ ಮತ್ತು ಘನತೆಯ ಮೇಲೆ ದಾಳಿ ಮಾಡುವುದಕ್ಕೆ ನಿಷೇಧಿತ ಮಾಂಸವನ್ನು ರಂಜಾನ್ ಮಾಸದ ವೇಳೆ ನನಗೆ ಕಳುಹಿಸಲಾಗಿದೆ’’ ಎಂದು ಅವರು ಆರೋಪಿಸಿದ್ದಾರೆ.

ನನ್ನ ವಿಳಾಸವನ್ನು ಬಹಿರಂಗಪಡಿಸಿರುವ ಟ್ವೀಟ್, ತನ್ನ ವಿರುದ್ಧ ಗುಂಪು ಹಿಂಸಾಚಾರಕ್ಕೆ ಕಾರಣವಾಗಬಹುದು ಎಂದು ಜುಬೇರ್ ಆತಂಕ ವ್ಯಕ್ತಪಡಿಸಿದ್ದಾರೆ. “ಕಳೆದ ಮಾರ್ಚ್ ತಿಂಗಳಿನಿಂದ ನಾನು ಸ್ವೀಕರಿಸಿರುವ ಕೊನೆಯಿಲ್ಲದ ದ್ವೇಷದ ಕರೆಗಳೊಂದಿಗೆ ಈ ಟ್ವೀಟ್ ಅನ್ನು ಪರಿಗಣಿಸಬೇಕು’’ ಎಂದು ಜುಬೇರ್ ಮನವಿ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಜುಬೈರ್ ಅವರು ಆನ್‌ಲೈನ್ ನಿಂದನೆಯನ್ನು ವ್ಯಾಪಕವಾಗಿ ಎದುರಿಸಿದ್ದಾರೆ. ಆನ್‌ಲೈನ್‌ನಲ್ಲಿ ಹಿಂದುತ್ವ ಬೆಂಬಲಿಗರಿಂದ ಬೆದರಿಕೆಗಳನ್ನು ಸ್ವೀಕರಿಸಿದ್ದಾರೆ. ಮಾರ್ಚ್‌ ತಿಂಗಳಿನಲ್ಲಿ ಹಲವಾರು ಹಿಂದುತ್ವವಾದಿ ಪ್ರಭಾವಿಗಳು ಆನ್‌ಲೈನ್‌ನಲ್ಲಿ ಬೆದರಿಕೆಗಳನ್ನು ಹಾಕಿದ್ದರು ಮತ್ತು ಕೆಲವರು ಜುಬೇರ್ ವಿರುದ್ಧ ಕಾನೂನು ಮೀರಿದ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೆದರಿಸಿದ್ದರು.

ತಮಿಳುನಾಡಿಗೆ ವಲಸೆ ಬಂದ ಬಿಹಾರಿ ಕಾರ್ಮಿಕರ ಹತ್ಯೆಯಾಗಿದೆ ಎಂದು ಹಬ್ಬಿಸಲಾಗಿದ್ದ ಸುಳ್ಳುಗಳನ್ನು ಆಲ್ಟ್ ನ್ಯೂಸ್ ಬಯಲಿಗೆಳೆದಿತ್ತು. “ಈ ಸುಳ್ಳುಗಳನ್ನು ಭೇದಿಸಿದ ನಂತರ ನನಗೆ ಬೆದರಿಕೆಗಳು ಹೆಚ್ಚಾಗಿ ಬರುತ್ತಿವೆ’’ ಎಂದು ಜುಬೇರ್ ದೂರಿದ್ದಾರೆ.

ಆ ಸಮಯದಲ್ಲಿ ಒಪಿಇಂಡಿಯಾದ ಮಾಜಿ ಸಂಪಾದಕ ಅಜೀತ್ ಭಾರ್ತಿ ಟ್ವೀಟ್ ಮಾಡಿ, “ಯೋಜನೆ ಚಾಲನೆ ಪಡೆದಿದೆ. ಈ ಬಾರಿ ಅವನು ಸಂಪೂರ್ಣವಾಗಿ ಸುನ್ನತಿ ಮಾಡಿಸಿಕೊಳ್ಳುತ್ತಾನೆ, ಅವನಿಗೆ ಮೂತ್ರ ವಿಸರ್ಜಿಸಲು ಪೈಪ್ ಅಗತ್ಯವಿದೆ’’ ಎಂದು ಬೆದರಿಕೆ ಹಾಕಿದ್ದನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...