Homeಕರ್ನಾಟಕಬೆಂಗಳೂರು: ಫ್ಯಾಕ್ಟ್‌ಚೆಕ್ಕರ್ ಜುಬೇರ್‌ಗೆ ಕೊಲೆ ಬೆದರಿಕೆ ಹಾಕಿದ್ದವರ ವಿರುದ್ಧ ಎಫ್.ಐ.ಆರ್.

ಬೆಂಗಳೂರು: ಫ್ಯಾಕ್ಟ್‌ಚೆಕ್ಕರ್ ಜುಬೇರ್‌ಗೆ ಕೊಲೆ ಬೆದರಿಕೆ ಹಾಕಿದ್ದವರ ವಿರುದ್ಧ ಎಫ್.ಐ.ಆರ್.

- Advertisement -
- Advertisement -

“ಕೆಲವು ಟ್ವಿಟರ್ ಬಳಕೆದಾರರು ನನ್ನ ವಿರುದ್ಧ ಗುಂಪು ಹಿಂಸಾಚಾರಕ್ಕೆ ಮತ್ತು ನನ್ನನ್ನು ಕೊಲೆ ಮಾಡುವುದಕ್ಕೆ ಕರೆ ನೀಡಿದ್ದಾರೆ’’ ಎಂದು ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ನೀಡಿದ ದೂರಿನ ಮೇರೆಗೆ ಬೆಂಗಳೂರು ಪೊಲೀಸರು ಎಫ್.ಐ.ಆರ್. ದಾಖಲಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಟ್ವಿಟರ್ ಹ್ಯಾಂಡಲ್ @Cyber_Huntss ಮತ್ತು ಹೆಸರಿಲ್ಲದ ಇತರ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕ ಕಿಡಿಗೇಡಿತನಕ್ಕೆ ಅನುಕೂಲಕರವಾದ ಹೇಳಿಕೆ, ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಕ್ರಿಮಿನಲ್ ಬೆದರಿಕೆ, ಶಾಂತಿ ಉಲ್ಲಂಘನೆ ಪ್ರಚೋದನೆ, ಉದ್ದೇಶಪೂರ್ವಕ ಅವಮಾನ ಮಾಡುವುದು- ಈ ಅಪರಾಧಗಳಿಗೆ ಸಂಬಂಧಿಸಿದ ನಿಬಂಧನೆಗಳನ್ನು ಎಫ್.ಐ.ಆರ್.ನಲ್ಲಿ ಹೆಸರಿಸಲಾಗಿದೆ.

ಆದರೆ ಎಫ್‌ಐಆರ್‌ನಲ್ಲಿ ಮಾಜಿ ಒಪಿಇಂಡಿಯಾ ಸಂಪಾದಕ ಅಜೀತ್ ಭಾರ್ತಿ ಹೆಸರನ್ನೂ ಸೇರಿಸುವಂತೆ ಪೊಲೀಸರಲ್ಲಿ ಜುಬೇರ್ ಒತ್ತಾಯಿಸಿದ್ದಾರೆ. “ಅಜಿತ್ ಅವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಸರಣಿ ಅಪರಾಧಗಳನ್ನು ಎಸಗಿದ್ದಾರೆ, ಕಾನೂನು ಕ್ರಮ ಜರುಗಿಸಬೇಕು’’ ಎಂದು ಆಗ್ರಹಿಸಿದ್ದಾರೆ.

ಫ್ಯಾಕ್ಟ್ ಚೆಕ್  ವೆಬ್‌ಸೈಟ್‌ `ಆಲ್ಟ್ ನ್ಯೂಸ್’ ಸಹ-ಸಂಸ್ಥಾಪಕ ಜುಬೇರ್ ಅವರು ಏಪ್ರಿಲ್‌ನಲ್ಲಿ 15 ಟ್ವಿಟರ್ ಹ್ಯಾಂಡಲ್‌ಗಳ ವಿರುದ್ಧ ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಟ್ವಿಟರ್ ಖಾತೆಗಳು ಸಾಮಾಜಿಕ ಮಾಧ್ಯಮದಲ್ಲಿ ನನ್ನ ವಿಳಾಸವನ್ನು ಬಹಿರಂಗಪಡಿಸಿವೆ, ಕೊಲೆ ಬೆದರಿಕೆಗಳನ್ನು ಕಳುಹಿಸಲಾಗಿದೆ ಮತ್ತು ಗುಂಪುಗಳ ನಡುವೆ ದ್ವೇಷದ ಭಾವನೆಯನ್ನು ಸೃಷ್ಟಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದರು.

ರಂಜಾನ್ ಮಾಸದ ವೇಳೆ ಸಾಕುಪ್ರಾಣಿಗಳ ಫುಡ್ ವೆಬ್‌ಸೈಟ್ ಮೂಲಕ 400 ಗ್ರಾಂ ಹಂದಿಮಾಂಸದ ಪ್ಯಾಕೆಟ್ ಅನ್ನು ಏಪ್ರಿಲ್ 9 ರಂದು ಟ್ವಿಟರ್ ಹ್ಯಾಂಡಲ್ @Cyber_Huntss ನನಗೆ ಕಳುಹಿಸಿದೆ ಎಂದು ಜುಬೈರ್ ಹೇಳಿದ್ದಾರೆ.

ಜುಬೇರ್ ಅವರಿಗೆ ಹಂದಿ ಮಾಂಸವನ್ನು ಆರ್ಡರ್ ಮಾಡಿರುವುದಾಗಿ ಈ ಹ್ಯಾಂಡಲ್ನ್ ನಲ್ಲಿ ಟ್ವೀಟ್ ಪೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್ ಮೂಲಕ ಬೆಂಗಳೂರಿನಲ್ಲಿರುವ ಜುಬೈರ್ ಅವರ ವಿಳಾಸವನ್ನು ಬಹಿರಂಗಪಡಿಸಲಾಗಿತ್ತು. ನಂತರ ಟ್ವೀಟ್ ಅನ್ನು ಅಳಿಸಲಾಗಿತ್ತು.

“ನನ್ನ ಧಾರ್ಮಿಕ ಗುರುತನ್ನು ಟಾರ್ಗೆಟ್ ಮಾಡಲಾಗಿದೆ. ಮುಸ್ಲಿಮರು ಸೇವಿಸದ ಹಂದಿಮಾಂಸವನ್ನು ಕಳಿಸುವ ಮೂಲಕ ಟಾರ್ಗೆಟ್ ಮಾಡಿರುವುದು ಸ್ಪಷ್ಟವಾಗಿದೆ’’ ಎಂದು ಜುಬೇರ್ ತಿಳಿದ್ದಾರೆ. “ನನ್ನ ಧಾರ್ಮಿಕ ಅಸ್ಮಿತೆ ಮತ್ತು ಘನತೆಯ ಮೇಲೆ ದಾಳಿ ಮಾಡುವುದಕ್ಕೆ ನಿಷೇಧಿತ ಮಾಂಸವನ್ನು ರಂಜಾನ್ ಮಾಸದ ವೇಳೆ ನನಗೆ ಕಳುಹಿಸಲಾಗಿದೆ’’ ಎಂದು ಅವರು ಆರೋಪಿಸಿದ್ದಾರೆ.

ನನ್ನ ವಿಳಾಸವನ್ನು ಬಹಿರಂಗಪಡಿಸಿರುವ ಟ್ವೀಟ್, ತನ್ನ ವಿರುದ್ಧ ಗುಂಪು ಹಿಂಸಾಚಾರಕ್ಕೆ ಕಾರಣವಾಗಬಹುದು ಎಂದು ಜುಬೇರ್ ಆತಂಕ ವ್ಯಕ್ತಪಡಿಸಿದ್ದಾರೆ. “ಕಳೆದ ಮಾರ್ಚ್ ತಿಂಗಳಿನಿಂದ ನಾನು ಸ್ವೀಕರಿಸಿರುವ ಕೊನೆಯಿಲ್ಲದ ದ್ವೇಷದ ಕರೆಗಳೊಂದಿಗೆ ಈ ಟ್ವೀಟ್ ಅನ್ನು ಪರಿಗಣಿಸಬೇಕು’’ ಎಂದು ಜುಬೇರ್ ಮನವಿ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಜುಬೈರ್ ಅವರು ಆನ್‌ಲೈನ್ ನಿಂದನೆಯನ್ನು ವ್ಯಾಪಕವಾಗಿ ಎದುರಿಸಿದ್ದಾರೆ. ಆನ್‌ಲೈನ್‌ನಲ್ಲಿ ಹಿಂದುತ್ವ ಬೆಂಬಲಿಗರಿಂದ ಬೆದರಿಕೆಗಳನ್ನು ಸ್ವೀಕರಿಸಿದ್ದಾರೆ. ಮಾರ್ಚ್‌ ತಿಂಗಳಿನಲ್ಲಿ ಹಲವಾರು ಹಿಂದುತ್ವವಾದಿ ಪ್ರಭಾವಿಗಳು ಆನ್‌ಲೈನ್‌ನಲ್ಲಿ ಬೆದರಿಕೆಗಳನ್ನು ಹಾಕಿದ್ದರು ಮತ್ತು ಕೆಲವರು ಜುಬೇರ್ ವಿರುದ್ಧ ಕಾನೂನು ಮೀರಿದ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೆದರಿಸಿದ್ದರು.

ತಮಿಳುನಾಡಿಗೆ ವಲಸೆ ಬಂದ ಬಿಹಾರಿ ಕಾರ್ಮಿಕರ ಹತ್ಯೆಯಾಗಿದೆ ಎಂದು ಹಬ್ಬಿಸಲಾಗಿದ್ದ ಸುಳ್ಳುಗಳನ್ನು ಆಲ್ಟ್ ನ್ಯೂಸ್ ಬಯಲಿಗೆಳೆದಿತ್ತು. “ಈ ಸುಳ್ಳುಗಳನ್ನು ಭೇದಿಸಿದ ನಂತರ ನನಗೆ ಬೆದರಿಕೆಗಳು ಹೆಚ್ಚಾಗಿ ಬರುತ್ತಿವೆ’’ ಎಂದು ಜುಬೇರ್ ದೂರಿದ್ದಾರೆ.

ಆ ಸಮಯದಲ್ಲಿ ಒಪಿಇಂಡಿಯಾದ ಮಾಜಿ ಸಂಪಾದಕ ಅಜೀತ್ ಭಾರ್ತಿ ಟ್ವೀಟ್ ಮಾಡಿ, “ಯೋಜನೆ ಚಾಲನೆ ಪಡೆದಿದೆ. ಈ ಬಾರಿ ಅವನು ಸಂಪೂರ್ಣವಾಗಿ ಸುನ್ನತಿ ಮಾಡಿಸಿಕೊಳ್ಳುತ್ತಾನೆ, ಅವನಿಗೆ ಮೂತ್ರ ವಿಸರ್ಜಿಸಲು ಪೈಪ್ ಅಗತ್ಯವಿದೆ’’ ಎಂದು ಬೆದರಿಕೆ ಹಾಕಿದ್ದನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...