Homeಕರ್ನಾಟಕಬೆಂಗಳೂರು: ಫ್ಯಾಕ್ಟ್‌ಚೆಕ್ಕರ್ ಜುಬೇರ್‌ಗೆ ಕೊಲೆ ಬೆದರಿಕೆ ಹಾಕಿದ್ದವರ ವಿರುದ್ಧ ಎಫ್.ಐ.ಆರ್.

ಬೆಂಗಳೂರು: ಫ್ಯಾಕ್ಟ್‌ಚೆಕ್ಕರ್ ಜುಬೇರ್‌ಗೆ ಕೊಲೆ ಬೆದರಿಕೆ ಹಾಕಿದ್ದವರ ವಿರುದ್ಧ ಎಫ್.ಐ.ಆರ್.

- Advertisement -
- Advertisement -

“ಕೆಲವು ಟ್ವಿಟರ್ ಬಳಕೆದಾರರು ನನ್ನ ವಿರುದ್ಧ ಗುಂಪು ಹಿಂಸಾಚಾರಕ್ಕೆ ಮತ್ತು ನನ್ನನ್ನು ಕೊಲೆ ಮಾಡುವುದಕ್ಕೆ ಕರೆ ನೀಡಿದ್ದಾರೆ’’ ಎಂದು ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ನೀಡಿದ ದೂರಿನ ಮೇರೆಗೆ ಬೆಂಗಳೂರು ಪೊಲೀಸರು ಎಫ್.ಐ.ಆರ್. ದಾಖಲಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಟ್ವಿಟರ್ ಹ್ಯಾಂಡಲ್ @Cyber_Huntss ಮತ್ತು ಹೆಸರಿಲ್ಲದ ಇತರ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕ ಕಿಡಿಗೇಡಿತನಕ್ಕೆ ಅನುಕೂಲಕರವಾದ ಹೇಳಿಕೆ, ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಕ್ರಿಮಿನಲ್ ಬೆದರಿಕೆ, ಶಾಂತಿ ಉಲ್ಲಂಘನೆ ಪ್ರಚೋದನೆ, ಉದ್ದೇಶಪೂರ್ವಕ ಅವಮಾನ ಮಾಡುವುದು- ಈ ಅಪರಾಧಗಳಿಗೆ ಸಂಬಂಧಿಸಿದ ನಿಬಂಧನೆಗಳನ್ನು ಎಫ್.ಐ.ಆರ್.ನಲ್ಲಿ ಹೆಸರಿಸಲಾಗಿದೆ.

ಆದರೆ ಎಫ್‌ಐಆರ್‌ನಲ್ಲಿ ಮಾಜಿ ಒಪಿಇಂಡಿಯಾ ಸಂಪಾದಕ ಅಜೀತ್ ಭಾರ್ತಿ ಹೆಸರನ್ನೂ ಸೇರಿಸುವಂತೆ ಪೊಲೀಸರಲ್ಲಿ ಜುಬೇರ್ ಒತ್ತಾಯಿಸಿದ್ದಾರೆ. “ಅಜಿತ್ ಅವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಸರಣಿ ಅಪರಾಧಗಳನ್ನು ಎಸಗಿದ್ದಾರೆ, ಕಾನೂನು ಕ್ರಮ ಜರುಗಿಸಬೇಕು’’ ಎಂದು ಆಗ್ರಹಿಸಿದ್ದಾರೆ.

ಫ್ಯಾಕ್ಟ್ ಚೆಕ್  ವೆಬ್‌ಸೈಟ್‌ `ಆಲ್ಟ್ ನ್ಯೂಸ್’ ಸಹ-ಸಂಸ್ಥಾಪಕ ಜುಬೇರ್ ಅವರು ಏಪ್ರಿಲ್‌ನಲ್ಲಿ 15 ಟ್ವಿಟರ್ ಹ್ಯಾಂಡಲ್‌ಗಳ ವಿರುದ್ಧ ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಟ್ವಿಟರ್ ಖಾತೆಗಳು ಸಾಮಾಜಿಕ ಮಾಧ್ಯಮದಲ್ಲಿ ನನ್ನ ವಿಳಾಸವನ್ನು ಬಹಿರಂಗಪಡಿಸಿವೆ, ಕೊಲೆ ಬೆದರಿಕೆಗಳನ್ನು ಕಳುಹಿಸಲಾಗಿದೆ ಮತ್ತು ಗುಂಪುಗಳ ನಡುವೆ ದ್ವೇಷದ ಭಾವನೆಯನ್ನು ಸೃಷ್ಟಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದರು.

ರಂಜಾನ್ ಮಾಸದ ವೇಳೆ ಸಾಕುಪ್ರಾಣಿಗಳ ಫುಡ್ ವೆಬ್‌ಸೈಟ್ ಮೂಲಕ 400 ಗ್ರಾಂ ಹಂದಿಮಾಂಸದ ಪ್ಯಾಕೆಟ್ ಅನ್ನು ಏಪ್ರಿಲ್ 9 ರಂದು ಟ್ವಿಟರ್ ಹ್ಯಾಂಡಲ್ @Cyber_Huntss ನನಗೆ ಕಳುಹಿಸಿದೆ ಎಂದು ಜುಬೈರ್ ಹೇಳಿದ್ದಾರೆ.

ಜುಬೇರ್ ಅವರಿಗೆ ಹಂದಿ ಮಾಂಸವನ್ನು ಆರ್ಡರ್ ಮಾಡಿರುವುದಾಗಿ ಈ ಹ್ಯಾಂಡಲ್ನ್ ನಲ್ಲಿ ಟ್ವೀಟ್ ಪೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್ ಮೂಲಕ ಬೆಂಗಳೂರಿನಲ್ಲಿರುವ ಜುಬೈರ್ ಅವರ ವಿಳಾಸವನ್ನು ಬಹಿರಂಗಪಡಿಸಲಾಗಿತ್ತು. ನಂತರ ಟ್ವೀಟ್ ಅನ್ನು ಅಳಿಸಲಾಗಿತ್ತು.

“ನನ್ನ ಧಾರ್ಮಿಕ ಗುರುತನ್ನು ಟಾರ್ಗೆಟ್ ಮಾಡಲಾಗಿದೆ. ಮುಸ್ಲಿಮರು ಸೇವಿಸದ ಹಂದಿಮಾಂಸವನ್ನು ಕಳಿಸುವ ಮೂಲಕ ಟಾರ್ಗೆಟ್ ಮಾಡಿರುವುದು ಸ್ಪಷ್ಟವಾಗಿದೆ’’ ಎಂದು ಜುಬೇರ್ ತಿಳಿದ್ದಾರೆ. “ನನ್ನ ಧಾರ್ಮಿಕ ಅಸ್ಮಿತೆ ಮತ್ತು ಘನತೆಯ ಮೇಲೆ ದಾಳಿ ಮಾಡುವುದಕ್ಕೆ ನಿಷೇಧಿತ ಮಾಂಸವನ್ನು ರಂಜಾನ್ ಮಾಸದ ವೇಳೆ ನನಗೆ ಕಳುಹಿಸಲಾಗಿದೆ’’ ಎಂದು ಅವರು ಆರೋಪಿಸಿದ್ದಾರೆ.

ನನ್ನ ವಿಳಾಸವನ್ನು ಬಹಿರಂಗಪಡಿಸಿರುವ ಟ್ವೀಟ್, ತನ್ನ ವಿರುದ್ಧ ಗುಂಪು ಹಿಂಸಾಚಾರಕ್ಕೆ ಕಾರಣವಾಗಬಹುದು ಎಂದು ಜುಬೇರ್ ಆತಂಕ ವ್ಯಕ್ತಪಡಿಸಿದ್ದಾರೆ. “ಕಳೆದ ಮಾರ್ಚ್ ತಿಂಗಳಿನಿಂದ ನಾನು ಸ್ವೀಕರಿಸಿರುವ ಕೊನೆಯಿಲ್ಲದ ದ್ವೇಷದ ಕರೆಗಳೊಂದಿಗೆ ಈ ಟ್ವೀಟ್ ಅನ್ನು ಪರಿಗಣಿಸಬೇಕು’’ ಎಂದು ಜುಬೇರ್ ಮನವಿ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಜುಬೈರ್ ಅವರು ಆನ್‌ಲೈನ್ ನಿಂದನೆಯನ್ನು ವ್ಯಾಪಕವಾಗಿ ಎದುರಿಸಿದ್ದಾರೆ. ಆನ್‌ಲೈನ್‌ನಲ್ಲಿ ಹಿಂದುತ್ವ ಬೆಂಬಲಿಗರಿಂದ ಬೆದರಿಕೆಗಳನ್ನು ಸ್ವೀಕರಿಸಿದ್ದಾರೆ. ಮಾರ್ಚ್‌ ತಿಂಗಳಿನಲ್ಲಿ ಹಲವಾರು ಹಿಂದುತ್ವವಾದಿ ಪ್ರಭಾವಿಗಳು ಆನ್‌ಲೈನ್‌ನಲ್ಲಿ ಬೆದರಿಕೆಗಳನ್ನು ಹಾಕಿದ್ದರು ಮತ್ತು ಕೆಲವರು ಜುಬೇರ್ ವಿರುದ್ಧ ಕಾನೂನು ಮೀರಿದ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೆದರಿಸಿದ್ದರು.

ತಮಿಳುನಾಡಿಗೆ ವಲಸೆ ಬಂದ ಬಿಹಾರಿ ಕಾರ್ಮಿಕರ ಹತ್ಯೆಯಾಗಿದೆ ಎಂದು ಹಬ್ಬಿಸಲಾಗಿದ್ದ ಸುಳ್ಳುಗಳನ್ನು ಆಲ್ಟ್ ನ್ಯೂಸ್ ಬಯಲಿಗೆಳೆದಿತ್ತು. “ಈ ಸುಳ್ಳುಗಳನ್ನು ಭೇದಿಸಿದ ನಂತರ ನನಗೆ ಬೆದರಿಕೆಗಳು ಹೆಚ್ಚಾಗಿ ಬರುತ್ತಿವೆ’’ ಎಂದು ಜುಬೇರ್ ದೂರಿದ್ದಾರೆ.

ಆ ಸಮಯದಲ್ಲಿ ಒಪಿಇಂಡಿಯಾದ ಮಾಜಿ ಸಂಪಾದಕ ಅಜೀತ್ ಭಾರ್ತಿ ಟ್ವೀಟ್ ಮಾಡಿ, “ಯೋಜನೆ ಚಾಲನೆ ಪಡೆದಿದೆ. ಈ ಬಾರಿ ಅವನು ಸಂಪೂರ್ಣವಾಗಿ ಸುನ್ನತಿ ಮಾಡಿಸಿಕೊಳ್ಳುತ್ತಾನೆ, ಅವನಿಗೆ ಮೂತ್ರ ವಿಸರ್ಜಿಸಲು ಪೈಪ್ ಅಗತ್ಯವಿದೆ’’ ಎಂದು ಬೆದರಿಕೆ ಹಾಕಿದ್ದನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...