Homeಕರ್ನಾಟಕಬೆಂಗಳೂರು: ಫ್ಯಾಕ್ಟ್‌ಚೆಕ್ಕರ್ ಜುಬೇರ್‌ಗೆ ಕೊಲೆ ಬೆದರಿಕೆ ಹಾಕಿದ್ದವರ ವಿರುದ್ಧ ಎಫ್.ಐ.ಆರ್.

ಬೆಂಗಳೂರು: ಫ್ಯಾಕ್ಟ್‌ಚೆಕ್ಕರ್ ಜುಬೇರ್‌ಗೆ ಕೊಲೆ ಬೆದರಿಕೆ ಹಾಕಿದ್ದವರ ವಿರುದ್ಧ ಎಫ್.ಐ.ಆರ್.

- Advertisement -
- Advertisement -

“ಕೆಲವು ಟ್ವಿಟರ್ ಬಳಕೆದಾರರು ನನ್ನ ವಿರುದ್ಧ ಗುಂಪು ಹಿಂಸಾಚಾರಕ್ಕೆ ಮತ್ತು ನನ್ನನ್ನು ಕೊಲೆ ಮಾಡುವುದಕ್ಕೆ ಕರೆ ನೀಡಿದ್ದಾರೆ’’ ಎಂದು ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ನೀಡಿದ ದೂರಿನ ಮೇರೆಗೆ ಬೆಂಗಳೂರು ಪೊಲೀಸರು ಎಫ್.ಐ.ಆರ್. ದಾಖಲಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಟ್ವಿಟರ್ ಹ್ಯಾಂಡಲ್ @Cyber_Huntss ಮತ್ತು ಹೆಸರಿಲ್ಲದ ಇತರ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕ ಕಿಡಿಗೇಡಿತನಕ್ಕೆ ಅನುಕೂಲಕರವಾದ ಹೇಳಿಕೆ, ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಕ್ರಿಮಿನಲ್ ಬೆದರಿಕೆ, ಶಾಂತಿ ಉಲ್ಲಂಘನೆ ಪ್ರಚೋದನೆ, ಉದ್ದೇಶಪೂರ್ವಕ ಅವಮಾನ ಮಾಡುವುದು- ಈ ಅಪರಾಧಗಳಿಗೆ ಸಂಬಂಧಿಸಿದ ನಿಬಂಧನೆಗಳನ್ನು ಎಫ್.ಐ.ಆರ್.ನಲ್ಲಿ ಹೆಸರಿಸಲಾಗಿದೆ.

ಆದರೆ ಎಫ್‌ಐಆರ್‌ನಲ್ಲಿ ಮಾಜಿ ಒಪಿಇಂಡಿಯಾ ಸಂಪಾದಕ ಅಜೀತ್ ಭಾರ್ತಿ ಹೆಸರನ್ನೂ ಸೇರಿಸುವಂತೆ ಪೊಲೀಸರಲ್ಲಿ ಜುಬೇರ್ ಒತ್ತಾಯಿಸಿದ್ದಾರೆ. “ಅಜಿತ್ ಅವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಸರಣಿ ಅಪರಾಧಗಳನ್ನು ಎಸಗಿದ್ದಾರೆ, ಕಾನೂನು ಕ್ರಮ ಜರುಗಿಸಬೇಕು’’ ಎಂದು ಆಗ್ರಹಿಸಿದ್ದಾರೆ.

ಫ್ಯಾಕ್ಟ್ ಚೆಕ್  ವೆಬ್‌ಸೈಟ್‌ `ಆಲ್ಟ್ ನ್ಯೂಸ್’ ಸಹ-ಸಂಸ್ಥಾಪಕ ಜುಬೇರ್ ಅವರು ಏಪ್ರಿಲ್‌ನಲ್ಲಿ 15 ಟ್ವಿಟರ್ ಹ್ಯಾಂಡಲ್‌ಗಳ ವಿರುದ್ಧ ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಟ್ವಿಟರ್ ಖಾತೆಗಳು ಸಾಮಾಜಿಕ ಮಾಧ್ಯಮದಲ್ಲಿ ನನ್ನ ವಿಳಾಸವನ್ನು ಬಹಿರಂಗಪಡಿಸಿವೆ, ಕೊಲೆ ಬೆದರಿಕೆಗಳನ್ನು ಕಳುಹಿಸಲಾಗಿದೆ ಮತ್ತು ಗುಂಪುಗಳ ನಡುವೆ ದ್ವೇಷದ ಭಾವನೆಯನ್ನು ಸೃಷ್ಟಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದರು.

ರಂಜಾನ್ ಮಾಸದ ವೇಳೆ ಸಾಕುಪ್ರಾಣಿಗಳ ಫುಡ್ ವೆಬ್‌ಸೈಟ್ ಮೂಲಕ 400 ಗ್ರಾಂ ಹಂದಿಮಾಂಸದ ಪ್ಯಾಕೆಟ್ ಅನ್ನು ಏಪ್ರಿಲ್ 9 ರಂದು ಟ್ವಿಟರ್ ಹ್ಯಾಂಡಲ್ @Cyber_Huntss ನನಗೆ ಕಳುಹಿಸಿದೆ ಎಂದು ಜುಬೈರ್ ಹೇಳಿದ್ದಾರೆ.

ಜುಬೇರ್ ಅವರಿಗೆ ಹಂದಿ ಮಾಂಸವನ್ನು ಆರ್ಡರ್ ಮಾಡಿರುವುದಾಗಿ ಈ ಹ್ಯಾಂಡಲ್ನ್ ನಲ್ಲಿ ಟ್ವೀಟ್ ಪೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್ ಮೂಲಕ ಬೆಂಗಳೂರಿನಲ್ಲಿರುವ ಜುಬೈರ್ ಅವರ ವಿಳಾಸವನ್ನು ಬಹಿರಂಗಪಡಿಸಲಾಗಿತ್ತು. ನಂತರ ಟ್ವೀಟ್ ಅನ್ನು ಅಳಿಸಲಾಗಿತ್ತು.

“ನನ್ನ ಧಾರ್ಮಿಕ ಗುರುತನ್ನು ಟಾರ್ಗೆಟ್ ಮಾಡಲಾಗಿದೆ. ಮುಸ್ಲಿಮರು ಸೇವಿಸದ ಹಂದಿಮಾಂಸವನ್ನು ಕಳಿಸುವ ಮೂಲಕ ಟಾರ್ಗೆಟ್ ಮಾಡಿರುವುದು ಸ್ಪಷ್ಟವಾಗಿದೆ’’ ಎಂದು ಜುಬೇರ್ ತಿಳಿದ್ದಾರೆ. “ನನ್ನ ಧಾರ್ಮಿಕ ಅಸ್ಮಿತೆ ಮತ್ತು ಘನತೆಯ ಮೇಲೆ ದಾಳಿ ಮಾಡುವುದಕ್ಕೆ ನಿಷೇಧಿತ ಮಾಂಸವನ್ನು ರಂಜಾನ್ ಮಾಸದ ವೇಳೆ ನನಗೆ ಕಳುಹಿಸಲಾಗಿದೆ’’ ಎಂದು ಅವರು ಆರೋಪಿಸಿದ್ದಾರೆ.

ನನ್ನ ವಿಳಾಸವನ್ನು ಬಹಿರಂಗಪಡಿಸಿರುವ ಟ್ವೀಟ್, ತನ್ನ ವಿರುದ್ಧ ಗುಂಪು ಹಿಂಸಾಚಾರಕ್ಕೆ ಕಾರಣವಾಗಬಹುದು ಎಂದು ಜುಬೇರ್ ಆತಂಕ ವ್ಯಕ್ತಪಡಿಸಿದ್ದಾರೆ. “ಕಳೆದ ಮಾರ್ಚ್ ತಿಂಗಳಿನಿಂದ ನಾನು ಸ್ವೀಕರಿಸಿರುವ ಕೊನೆಯಿಲ್ಲದ ದ್ವೇಷದ ಕರೆಗಳೊಂದಿಗೆ ಈ ಟ್ವೀಟ್ ಅನ್ನು ಪರಿಗಣಿಸಬೇಕು’’ ಎಂದು ಜುಬೇರ್ ಮನವಿ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಜುಬೈರ್ ಅವರು ಆನ್‌ಲೈನ್ ನಿಂದನೆಯನ್ನು ವ್ಯಾಪಕವಾಗಿ ಎದುರಿಸಿದ್ದಾರೆ. ಆನ್‌ಲೈನ್‌ನಲ್ಲಿ ಹಿಂದುತ್ವ ಬೆಂಬಲಿಗರಿಂದ ಬೆದರಿಕೆಗಳನ್ನು ಸ್ವೀಕರಿಸಿದ್ದಾರೆ. ಮಾರ್ಚ್‌ ತಿಂಗಳಿನಲ್ಲಿ ಹಲವಾರು ಹಿಂದುತ್ವವಾದಿ ಪ್ರಭಾವಿಗಳು ಆನ್‌ಲೈನ್‌ನಲ್ಲಿ ಬೆದರಿಕೆಗಳನ್ನು ಹಾಕಿದ್ದರು ಮತ್ತು ಕೆಲವರು ಜುಬೇರ್ ವಿರುದ್ಧ ಕಾನೂನು ಮೀರಿದ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಹೆದರಿಸಿದ್ದರು.

ತಮಿಳುನಾಡಿಗೆ ವಲಸೆ ಬಂದ ಬಿಹಾರಿ ಕಾರ್ಮಿಕರ ಹತ್ಯೆಯಾಗಿದೆ ಎಂದು ಹಬ್ಬಿಸಲಾಗಿದ್ದ ಸುಳ್ಳುಗಳನ್ನು ಆಲ್ಟ್ ನ್ಯೂಸ್ ಬಯಲಿಗೆಳೆದಿತ್ತು. “ಈ ಸುಳ್ಳುಗಳನ್ನು ಭೇದಿಸಿದ ನಂತರ ನನಗೆ ಬೆದರಿಕೆಗಳು ಹೆಚ್ಚಾಗಿ ಬರುತ್ತಿವೆ’’ ಎಂದು ಜುಬೇರ್ ದೂರಿದ್ದಾರೆ.

ಆ ಸಮಯದಲ್ಲಿ ಒಪಿಇಂಡಿಯಾದ ಮಾಜಿ ಸಂಪಾದಕ ಅಜೀತ್ ಭಾರ್ತಿ ಟ್ವೀಟ್ ಮಾಡಿ, “ಯೋಜನೆ ಚಾಲನೆ ಪಡೆದಿದೆ. ಈ ಬಾರಿ ಅವನು ಸಂಪೂರ್ಣವಾಗಿ ಸುನ್ನತಿ ಮಾಡಿಸಿಕೊಳ್ಳುತ್ತಾನೆ, ಅವನಿಗೆ ಮೂತ್ರ ವಿಸರ್ಜಿಸಲು ಪೈಪ್ ಅಗತ್ಯವಿದೆ’’ ಎಂದು ಬೆದರಿಕೆ ಹಾಕಿದ್ದನು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...