Homeಕರೋನಾ ತಲ್ಲಣಕೊರೊನಾ ವಿರುದ್ಧ ಬೆಂಗಳೂರು ಬೆಂಕಿ ಹತ್ತಿ ಉರಿಯುವಾಗ ಬಾವಿ ತೋಡಿದರಂತೆ

ಕೊರೊನಾ ವಿರುದ್ಧ ಬೆಂಗಳೂರು ಬೆಂಕಿ ಹತ್ತಿ ಉರಿಯುವಾಗ ಬಾವಿ ತೋಡಿದರಂತೆ

- Advertisement -
- Advertisement -

ಕೋವಿಡ್ ಬಿಕ್ಕಟ್ಟನ್ನು ‘ಆ ಭಗವಂತ’ನ ಮೇಲೆ ಬಿಟ್ಟು ಕರ್ನಾಟಕದ ಆರೋಗ್ಯ ಸಚಿವರು ತಮ್ಮ ನಿಶ್ಕ್ರಿಯತೆಯನ್ನು ತಾವೆ ಒಪ್ಪಿಕೊಂಡಂತಾಗಿದೆ. ದೇಶದಲ್ಲಿ ಕೋವಿಡ್‍ನ ಮೊದಲನೆ ಪ್ರಕರಣ ಕಂಡು ಹೆಚ್ಚು ಕಡಿಮೆ ನಾಲ್ಕು ತಿಂಗಳುಗಳು ಕಳೆದರೂ, ರಾಜ್ಯ ಸರ್ಕಾರ ಯಾವ ತಯಾರಿಯನ್ನೂ ಮಾಡಿಕೊಂಡಂತಿಲ್ಲ.

ಏಪ್ರಿಲ್ ಮತ್ತು ಮೇ ಎರಡು ತಿಂಗಳುಗಳ ಲಾಕ್‍ಡೌನಿನ ಸಮಯವಕಾಶವಿದ್ದರೂ ಸಹ, ಬರುವ ಆಪತ್ತಿಗೆ ಸರ್ಕಾರ ಯಾವ ವ್ಯವಸ್ಥೆಯನ್ನೂ ಮಾಡಲಿಲ್ಲ. ಲಾಕ್‍ಡೌನ್, ಸೀಲ್‍ಡೌನ್ ಬಿಟ್ಟು ಸರ್ಕಾರಕ್ಕೆ ಬೇರೆ ಯಾವ ಕಾರ್ಯತಂತ್ರ ತೋಚುತ್ತಿಲ್ಲವೆನಿಸುತ್ತದೆ. ಬೆಂಗಳೂರಿನಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಏರಿ 40,000ಕ್ಕು ಹೆಚ್ಚು ತಲುಪಿದೆ. ಇಂತಹ ಸಂದರ್ಭದಲ್ಲಿ ಎಲ್ಲವೂ ಎಡವಟ್ಟಾಗಿ ನಡೆಡಿದೆ.

ಪರೀಕ್ಷೆಗಳಲ್ಲಿ ಬಹಳಷ್ಟು ಬ್ಯಾಕ್‍ಲಾಗ್ ಇದ್ದು ಪರೀಕ್ಷೆಯ ಫಲಿತಾಂಶ ಪಡೆಯಲು 7 ದಿನ ಕಾಯಬೇಕಾಗಿದೆ. ಆಸ್ಪತ್ರೆಗಳಲ್ಲಿನ ಬೆಡ್‍ಗಳ ನಿರ್ವಹಣೆಗಾಗಿ ಇರುವ ಬಿಬಿಎಂಪಿಯ ಸಾಫ್ಟ್‍ವೇರ್ ಅಪ್ಲಿಕೇಶನ್‍ನಿಂದ ಯಾವ ಪ್ರಯೊಜನವೂ ಕಾಣಿಸುತ್ತಿಲ್ಲ. ಗಂಭೀರ ಸ್ಥಿತಿಯಲ್ಲಿರುವ ಒಬ್ಬ ರೋಗಿಯ ಪರವಾಗಿ ಬೆಡ್ ಲಭ್ಯತೆಯಿರುವ ಆಸ್ಪತ್ರೆಗೆ ಕರೆ ಮಾಡಿದಾಗ, ನಮ್ಮಲ್ಲಿ ಬೆಡ್‍ಗಳಿವೆ ಆದರೆ ಸಿಬ್ಬಂದಿಗಳ ತೀವ್ರ ಕೊರತೆಯಿಂದಾಗಿ ರೋಗಿಗಳನ್ನು ದಾಖಲಿಸಿಕೊಳ್ಳಲಾಗುತ್ತಿಲ್ಲವೆಂದು ಪ್ರತಿಕ್ರಿಯೆ ಬಂತು.

ಮತ್ತೊಂದು ಆಸ್ಪತ್ರೆಗೆ ಕರೆ ಮಾಡಿದಾಗ ನಮ್ಮಲ್ಲಿ ಬೆಡ್‍ಗಳಿಲ್ಲವೆಂದು ಹೇಳಿದರು. ‘ಬಿಬಿಎಂಪಿಯ ಸಾಫ್ಟ್‍ವೇರ್ ಅಪ್ಲಿಕೇಶನ್‍ನಲ್ಲಿ ನಿಮ್ಮ ಆಸ್ಪತ್ರೆಯಲ್ಲಿ 250 ಬೆಡ್‍ಗಳಿವೆಯೆಂದು ತೋರುಸಿತ್ತಿದೆಯಲ್ಲ’ ಎಂದು ಕೇಳಿದಾಗ, ಪ್ರತಿಕ್ರಿಯೆ ನೀಡುತ್ತಿದ್ದ ಸಿಬ್ಬಂದಿ ಹೌದಾ, ಅಂತಹದ್ದೊಂದು ಅಪ್ಲಿಕೇಶನ್ ಇದೆಯೆಂದೇ ನನಗೆ ಗೊತ್ತಿಲ್ಲ, ದಯವಿಟ್ಟು ಅದರ ಲಿಂಕ್ ಕಳುಹಿಸಿಯೆಂದರು.

ಈ ರೀತಿ ಬೆಡ್‍ಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆಯುವುದು ತಪ್ಪಿಲ್ಲ. ಖಾಸಗಿ ಆಸ್ಪತ್ರೆಗಳೊಂದಿಗೆ ಮತ್ತೊಮ್ಮೆ ಚರ್ಚೆ ಮಾಡುವುದಿಲ್ಲ, ಇನ್ನೇನಿದ್ದರೂ ಕಠಿಣ ಕ್ರಮಕ್ಕೆ ಇಳಿಯುತ್ತೇವೆಯೆಂದು ಮುಖ್ಯಮಂತ್ರಿಗಳು ಟ್ವೀಟ್ ಮಾಡಿದರೂ, ಖಾಸಗಿ ಆಸ್ಪತ್ರೆಗಳಿಗೆ ಅದರ ಬಿಸಿ ತಟ್ಟಿದಂತಿಲ್ಲ. ಬದಲಿಗೆ ತಮ್ಮ ಷರತ್ತುಗಳನ್ನು ಒಪ್ಪಿಕೊಳ್ಳುವಂತೆ ಮತ್ತಷ್ಟು ಬಲವಾಗಿ ಪಟ್ಟುಹಿಡಿದಂತಿದೆ. ನಮಗೆ ಸರಕಾರದಿಂದ ಬಾಕಿಯಿರುವ ಹಣವನ್ನು ಪಾವಿತಿಸುವವರೆಗು ನಾವು 50% ಬೆಡ್‍ಗಳನ್ನು ಸರಕಾರದಿಂದ ರೆಫರ್ ಮಾಡಿದ ರೋಗಿಗಳಿಗೆ ಮೀಸಲಿಡುವುದಿಲ್ಲವೆಂದು ಖಾಸಗಿ ಆಸ್ಪತ್ರೆಗಳು ತಿಳಿಸಿವೆ.

ಕಳೆದ 20 ವರ್ಷಗಳಿಂದ ಖಾಸಗಿ ಆಸ್ಪತ್ರೆಗಳನ್ನು ಪೋಷಿಸಿ ಸರ್ಕಾರಗಳು ತಮ್ಮ ಜುಟ್ಟನ್ನು ಅವರ ಕೈಯಿಗೆ ಕೊಟ್ಟ ಪರಿಣಾಮವು ಈಗ ಸ್ಪಷ್ಟವಾಗಿ ಕಾಣುತ್ತಿದೆ. ಈ ಸಂದಿಗ್ಧ ಪರಿಸ್ಥಿತಿ ಮುಂದಕ್ಕೆ ಏನಾಗಬಹುದೆಂದು ಬಹುಶಃ ‘ಆ ಭಗವಂತನನ್ನೇ’ ಕೇಳಬೇಕು.

ಖಾಸಗಿ ವ್ಯವಸ್ಥೆಯನ್ನು ತನ್ನ ಹತೋಟಿಗೆ ತೆಗೆದುಕೊಳ್ಳುವುದಿರಲಿ, ತನ್ನದೇ ಸಾರ್ವಜನಿಕ ವ್ಯವಸ್ಥೆಯನ್ನೂ ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಆರೋಗ್ಯ ಸಿಬ್ಬಂದಿಗಳ ಕೊರತೆಯಿರುವ ಕಾರಣ ಇತರ ಇಲಾಖೆಗಳಿಂದ ಸಿಬ್ಬಂದಿಗಳನ್ನು ಆರೋಗ್ಯ ಕೇಂದ್ರಗಳಿಗೆ ನಿಯೋಜಿಸಲಾಗಿದೆ. ಆದರೆ, ಎಷ್ಟೋ ಕೇಂದ್ರಗಳಲ್ಲಿ ನಿಯೋಜಿಸಲಾದ ಸಿಬ್ಬಂದಿಗಳು ಹಾಜರಾಗಿಲ್ಲ. ಈಗ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೆ ತಕ್ಕ ಬೆಂಬಲ ವ್ಯವಸ್ಥೆಯೂ ಇಲ್ಲ. ಉದಾಹರಣೆಗೆ, ದಿನನಿತ್ಯ ಅಪಾಯವನ್ನು ಎದುರಿಸಿ ಇಡೀ ಆರೋಗ್ಯ ವ್ಯವಸ್ಥೆಯ ಅಡಿಪಾಯವಾಗಿರುವ ಆಶಾ ಕಾರ್ಯಕರ್ತರಿಗೆ ವಿಶೇಷ ಬೆಂಬಲ ನೀಡಿ ಅವರನ್ನು ರಕ್ಷಿಸಿ ಪ್ರೋತ್ಸಾಹಿಸುವ ಬದಲು ಅವರಿಗೆ ಕಳೆದ ಮೂರು ತಿಂಗಳುಗಳಿಂದ ‘ಗೌರವ’ ಧನವೂ ನೀಡಿಲ್ಲ. ಅದೇ ರೀತಿ ಯಾವುದೇ ರಕ್ಷಣಾ ಕವಚಗಳನ್ನು ನೀಡದೇ, ಕ್ರಮಬದ್ದವಾಗಿ ಅವರನ್ನು ಕೋವಿಡ್ ಪರಿಕ್ಷಿಗೆ ಒಳಪಡಿಸದೇ, ಚಿಕಿತ್ಸೆಗಾಗಿ ವಿಮೆ ಸೌಲಭ್ಯ ಮತ್ತು ಇತರ ಭದ್ರತೆಗಳನ್ನು ನೀಡದೇ ಸರ್ಕಾರ ಪೌರಕಾರ್ಮಿಕರನ್ನು ಅಪಾಯದ ಅಂಚಿಗೆ ತಲ್ಲಿದೆ. ಈ ರೀತಿ ಕೋವಿಡ್ ವಿರುದ್ಧ ಮುಂಚೂಣಿಯಲ್ಲಿ ಹೋರಾಡುತ್ತಿರುವ ಆರೋಗ್ಯ ಸಿಬ್ಬಂದಿ ವರ್ಗದೊಂದಿಗೆ ರಾಜ್ಯ ಸರ್ಕಾರ ತುಚ್ಛವಾಗಿ ನಡೆದುಕೊಂಡಿದೆ.

ಸಮುದಾಯಗಳು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಕೇಂದ್ರಬಿಂದು ಎಂಬುದು ಎಲ್ಲಾ ತಜ್ಞರಿಗೆ ತಿಳಿದಿರುವ ವಿಷಯ. ಆದರೂ ಕಳೆದ ನಾಲ್ಕು ತಿಂಗಳುಗಳಿಂದ ಈ ದಿಕ್ಕಿನಲ್ಲಿ ಯಾವ ವಿಧದ ತಯಾರಿಯೂ ಮಾಡಲಾಗಿಲ್ಲ. ಬೆಂಕಿ ಹೊತ್ತಿ ಉರಿಯುವಾಗ ಬಾವಿ ತೋಡಿದಂತೆ, ಬಿಬಿಎಂಪಿ ಈಗ ಬೆಂಗಳೂರಿನ ಎಲ್ಲಾ ವಾರ್ಡ್ ಸಮಿತಿಗಳನ್ನು ಪುನರ್ಚೇತನಗೊಳಿಸಲು ಹೊರಟಿದೆ. ತಡವಾಗಿಯಾದರೂ ಈ ಕ್ರಮ ಕೈಗೊಂಡಿರುವುದು ಬಹಳ ಉತ್ತಮ ಬೆಳವಣಿಗೆ.

ವಾರ್ಡ್ ಸಮಿತಿಗಳು ಕೇವಲ ಕೋವಿಡ್ ರೋಗ ನಿಯಂತ್ರಣ ಮಾತ್ರವಲ್ಲದೇ, ಕೋವಿಡ್ ಸಂಬಂಧಿತ ಕಳಂಕ, ತಾರತಮ್ಯ, ಭಯ, ಆತಂಕವನ್ನು ಕಡಿಮೆ ಮಾಡಲು ವಿಶೇಷ ಕಾಳಜಿವಹಿಸಬೇಕಿದೆ. ಹಾಗೆಯೇ ಸುಳ್ಳು ಮಾಹಿತಿ, ಭಯ ಹುಟ್ಟಿಸುವ ವದಂತಿಗಳನ್ನು ತಡೆಗಟ್ಟುವಲ್ಲಿಯೂ ವಾರ್ಡ್ ಸಮಿತಿಗಳು ಮುಖ್ಯ ಪಾತ್ರ ವಹಿಸಬೇಕಿವೆ. ಕೋವಿಡ್ ರೋಗಿಗಳು ಮಾತ್ರವಲ್ಲದೇ, ಇತರ ರೋಗಗಳಿಂದ ಬಳಲುತ್ತಿರುವವರಿಗು ಆರೋಗ್ಯ ಸೇವೆಗಳು ಕೈಗೆಟುವಂತೆ ಮಾಡುವುದು, ನೀರು, ಚರಂಡಿ ಮುಂತಾದ ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಲು ಬಿಬಿಎಂಪಿಯ ಗಮನ ಸೆಳೆಯುವುದು, ಸ್ಥಳೀಯ ನಾಯಕರನ್ನು, ಚುನಾಯಿತ ಪ್ರತಿನಿಧಿಗಳನ್ನು ಸಂಪರ್ಕಿಸಿ ಅವರ ಬೆಂಬಲ ಪಡೆಯುವುದು ಮುಂತಾದ ಜವಾಬ್ದಾರಿಗಳನ್ನು ವಾರ್ಡ್ ಸಮಿತಿಗಳು ನಿರ್ವಹಿಸಬೇಕಿದೆ.

ಈವರೆಗೆ ಕೋವಿಡ್ ಬಿಕ್ಕಟ್ಟನ್ನು ನಿಭಾಯಿಸಲು ಭಗವಂತ ಏನು ಮಾಡಿದನೋ ಗೊತ್ತಿಲ್ಲ. ಆದರೇ ಈ ನಾಡಿನ ಜನಸಾಮಾನ್ಯರು ತಮ್ಮವರಿಗಾಗಿ ಬಹಳ ಶ್ರಮಿಸುತ್ತಿದ್ದಾರೆ. ಲಾಕ್‍ಡೌನ್ ಸಮಯದಲ್ಲಿ ರೇಶನ್ ಕಿಟ್‍ಗಳನ್ನು ಹೊಂದಿಸಿಕೊಂಡು ವಿತರಿಸುವುದು, ವಲಸೆ ಕಾರ್ಮಿಕರಿಗಾಗಿ ಊಟದ ವ್ಯವಸ್ಥೆ, ಅವರು ಮನೆಗೆ ತೆರೆಳಲು ಸಹಾಯ ಇವೆಲ್ಲವನ್ನು ಜನಸಾಮಾನ್ಯರೇ ನಿಭಾಯಿಸಿದ್ದಾರೆ.

ಜನಸಾಮಾನ್ಯರು ಕೇವಲ ಶ್ರಮಿಸುವುದಲ್ಲದೇ ಸರ್ಕಾರದಲ್ಲಿ ಉತ್ತರದಾಯಿತ್ವ, ಪಾರದರ್ಶಕತೆಗಾಗಿ ಒತ್ತಾಯಿಸಬೇಕಿದೆ. ಸರ್ಕಾರದ ಕ್ರಮಗಳು ಸೂಕ್ತವಿಲ್ಲದಿದ್ದಲ್ಲಿ, ಅವುಗಳನ್ನು ಪ್ರಶ್ನಿಸಬೇಕಿದೆ. ಮುಂಬೈಯಿನ ಧಾರಾವಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿ ಇವತ್ತು ನಿಯಂತ್ರಣದಲ್ಲಿರುವುದು ಯಾವುದೋ ದೊಡ್ಡ ಮಟ್ಟದ ತಾಂತ್ರಿಕ ಶಕ್ತಿಯಿಂದಲ್ಲ. ಅಲ್ಲಿನ ಸಮುದಾಯ ಕೋವಿಡ್ ನಿಯಂತ್ರಣದಲ್ಲಿ ಪಾಲ್ಗೊಂಡು ಜನರಿಗೆ ಮಾಹಿತಿ ನೀಡಿ, ಅವರಲ್ಲಿ ಭಯ ಆತಂಕವನ್ನು ತಡೆಗಟ್ಟಿ, ಅಗತ್ಯ ಆರೋಗ್ಯ ಸೇವೆಗಳನ್ನು ಸಮಯಕ್ಕೆ ಸರಿಯಾಗಿ ಕೈಗೆಟುಕುವಂತೆ ಮಾಡಿದ ಪರಿಣಾಮ ಇಂದು ಧಾರಾವಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿ ಸಮಸ್ಯೆ ನಿಯಂತ್ರಣದಲ್ಲಿದೆ. “ಭಗವಂತನ” ಮೇಲೆ ಈ ಬಿಕ್ಕಟ್ಟಿನ ಹೊರೆ ಹಾಕುವ ಬದಲು, ಸಂವಿಧಾನಬದ್ಧವಾಗಿ ಪ್ರಜಾಸತಾತ್ಮಕವಾದ ನಮ್ಮ ನಾಗರಿಕತ್ವದ ಹಕ್ಕುಗಳನುಸಾರವಾಗಿ ಈ ಬಿಕಟ್ಟಿನಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕಿದೆ.

-ಡಾ.ಅಖಿಲಾ ವಾಸನ್


ಇದನ್ನು ಓದಿ: ದುಬೆ ಹತ್ಯೆ ಪ್ರಕರಣದ ತನಿಖಾ ತಂಡವನ್ನು ಅಂಗೀಕರಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...