Homeಕರೋನಾ ತಲ್ಲಣಕೊರೊನಾ ವಿರುದ್ಧ ಬೆಂಗಳೂರು ಬೆಂಕಿ ಹತ್ತಿ ಉರಿಯುವಾಗ ಬಾವಿ ತೋಡಿದರಂತೆ

ಕೊರೊನಾ ವಿರುದ್ಧ ಬೆಂಗಳೂರು ಬೆಂಕಿ ಹತ್ತಿ ಉರಿಯುವಾಗ ಬಾವಿ ತೋಡಿದರಂತೆ

- Advertisement -
- Advertisement -

ಕೋವಿಡ್ ಬಿಕ್ಕಟ್ಟನ್ನು ‘ಆ ಭಗವಂತ’ನ ಮೇಲೆ ಬಿಟ್ಟು ಕರ್ನಾಟಕದ ಆರೋಗ್ಯ ಸಚಿವರು ತಮ್ಮ ನಿಶ್ಕ್ರಿಯತೆಯನ್ನು ತಾವೆ ಒಪ್ಪಿಕೊಂಡಂತಾಗಿದೆ. ದೇಶದಲ್ಲಿ ಕೋವಿಡ್‍ನ ಮೊದಲನೆ ಪ್ರಕರಣ ಕಂಡು ಹೆಚ್ಚು ಕಡಿಮೆ ನಾಲ್ಕು ತಿಂಗಳುಗಳು ಕಳೆದರೂ, ರಾಜ್ಯ ಸರ್ಕಾರ ಯಾವ ತಯಾರಿಯನ್ನೂ ಮಾಡಿಕೊಂಡಂತಿಲ್ಲ.

ಏಪ್ರಿಲ್ ಮತ್ತು ಮೇ ಎರಡು ತಿಂಗಳುಗಳ ಲಾಕ್‍ಡೌನಿನ ಸಮಯವಕಾಶವಿದ್ದರೂ ಸಹ, ಬರುವ ಆಪತ್ತಿಗೆ ಸರ್ಕಾರ ಯಾವ ವ್ಯವಸ್ಥೆಯನ್ನೂ ಮಾಡಲಿಲ್ಲ. ಲಾಕ್‍ಡೌನ್, ಸೀಲ್‍ಡೌನ್ ಬಿಟ್ಟು ಸರ್ಕಾರಕ್ಕೆ ಬೇರೆ ಯಾವ ಕಾರ್ಯತಂತ್ರ ತೋಚುತ್ತಿಲ್ಲವೆನಿಸುತ್ತದೆ. ಬೆಂಗಳೂರಿನಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಏರಿ 40,000ಕ್ಕು ಹೆಚ್ಚು ತಲುಪಿದೆ. ಇಂತಹ ಸಂದರ್ಭದಲ್ಲಿ ಎಲ್ಲವೂ ಎಡವಟ್ಟಾಗಿ ನಡೆಡಿದೆ.

ಪರೀಕ್ಷೆಗಳಲ್ಲಿ ಬಹಳಷ್ಟು ಬ್ಯಾಕ್‍ಲಾಗ್ ಇದ್ದು ಪರೀಕ್ಷೆಯ ಫಲಿತಾಂಶ ಪಡೆಯಲು 7 ದಿನ ಕಾಯಬೇಕಾಗಿದೆ. ಆಸ್ಪತ್ರೆಗಳಲ್ಲಿನ ಬೆಡ್‍ಗಳ ನಿರ್ವಹಣೆಗಾಗಿ ಇರುವ ಬಿಬಿಎಂಪಿಯ ಸಾಫ್ಟ್‍ವೇರ್ ಅಪ್ಲಿಕೇಶನ್‍ನಿಂದ ಯಾವ ಪ್ರಯೊಜನವೂ ಕಾಣಿಸುತ್ತಿಲ್ಲ. ಗಂಭೀರ ಸ್ಥಿತಿಯಲ್ಲಿರುವ ಒಬ್ಬ ರೋಗಿಯ ಪರವಾಗಿ ಬೆಡ್ ಲಭ್ಯತೆಯಿರುವ ಆಸ್ಪತ್ರೆಗೆ ಕರೆ ಮಾಡಿದಾಗ, ನಮ್ಮಲ್ಲಿ ಬೆಡ್‍ಗಳಿವೆ ಆದರೆ ಸಿಬ್ಬಂದಿಗಳ ತೀವ್ರ ಕೊರತೆಯಿಂದಾಗಿ ರೋಗಿಗಳನ್ನು ದಾಖಲಿಸಿಕೊಳ್ಳಲಾಗುತ್ತಿಲ್ಲವೆಂದು ಪ್ರತಿಕ್ರಿಯೆ ಬಂತು.

ಮತ್ತೊಂದು ಆಸ್ಪತ್ರೆಗೆ ಕರೆ ಮಾಡಿದಾಗ ನಮ್ಮಲ್ಲಿ ಬೆಡ್‍ಗಳಿಲ್ಲವೆಂದು ಹೇಳಿದರು. ‘ಬಿಬಿಎಂಪಿಯ ಸಾಫ್ಟ್‍ವೇರ್ ಅಪ್ಲಿಕೇಶನ್‍ನಲ್ಲಿ ನಿಮ್ಮ ಆಸ್ಪತ್ರೆಯಲ್ಲಿ 250 ಬೆಡ್‍ಗಳಿವೆಯೆಂದು ತೋರುಸಿತ್ತಿದೆಯಲ್ಲ’ ಎಂದು ಕೇಳಿದಾಗ, ಪ್ರತಿಕ್ರಿಯೆ ನೀಡುತ್ತಿದ್ದ ಸಿಬ್ಬಂದಿ ಹೌದಾ, ಅಂತಹದ್ದೊಂದು ಅಪ್ಲಿಕೇಶನ್ ಇದೆಯೆಂದೇ ನನಗೆ ಗೊತ್ತಿಲ್ಲ, ದಯವಿಟ್ಟು ಅದರ ಲಿಂಕ್ ಕಳುಹಿಸಿಯೆಂದರು.

ಈ ರೀತಿ ಬೆಡ್‍ಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆಯುವುದು ತಪ್ಪಿಲ್ಲ. ಖಾಸಗಿ ಆಸ್ಪತ್ರೆಗಳೊಂದಿಗೆ ಮತ್ತೊಮ್ಮೆ ಚರ್ಚೆ ಮಾಡುವುದಿಲ್ಲ, ಇನ್ನೇನಿದ್ದರೂ ಕಠಿಣ ಕ್ರಮಕ್ಕೆ ಇಳಿಯುತ್ತೇವೆಯೆಂದು ಮುಖ್ಯಮಂತ್ರಿಗಳು ಟ್ವೀಟ್ ಮಾಡಿದರೂ, ಖಾಸಗಿ ಆಸ್ಪತ್ರೆಗಳಿಗೆ ಅದರ ಬಿಸಿ ತಟ್ಟಿದಂತಿಲ್ಲ. ಬದಲಿಗೆ ತಮ್ಮ ಷರತ್ತುಗಳನ್ನು ಒಪ್ಪಿಕೊಳ್ಳುವಂತೆ ಮತ್ತಷ್ಟು ಬಲವಾಗಿ ಪಟ್ಟುಹಿಡಿದಂತಿದೆ. ನಮಗೆ ಸರಕಾರದಿಂದ ಬಾಕಿಯಿರುವ ಹಣವನ್ನು ಪಾವಿತಿಸುವವರೆಗು ನಾವು 50% ಬೆಡ್‍ಗಳನ್ನು ಸರಕಾರದಿಂದ ರೆಫರ್ ಮಾಡಿದ ರೋಗಿಗಳಿಗೆ ಮೀಸಲಿಡುವುದಿಲ್ಲವೆಂದು ಖಾಸಗಿ ಆಸ್ಪತ್ರೆಗಳು ತಿಳಿಸಿವೆ.

ಕಳೆದ 20 ವರ್ಷಗಳಿಂದ ಖಾಸಗಿ ಆಸ್ಪತ್ರೆಗಳನ್ನು ಪೋಷಿಸಿ ಸರ್ಕಾರಗಳು ತಮ್ಮ ಜುಟ್ಟನ್ನು ಅವರ ಕೈಯಿಗೆ ಕೊಟ್ಟ ಪರಿಣಾಮವು ಈಗ ಸ್ಪಷ್ಟವಾಗಿ ಕಾಣುತ್ತಿದೆ. ಈ ಸಂದಿಗ್ಧ ಪರಿಸ್ಥಿತಿ ಮುಂದಕ್ಕೆ ಏನಾಗಬಹುದೆಂದು ಬಹುಶಃ ‘ಆ ಭಗವಂತನನ್ನೇ’ ಕೇಳಬೇಕು.

ಖಾಸಗಿ ವ್ಯವಸ್ಥೆಯನ್ನು ತನ್ನ ಹತೋಟಿಗೆ ತೆಗೆದುಕೊಳ್ಳುವುದಿರಲಿ, ತನ್ನದೇ ಸಾರ್ವಜನಿಕ ವ್ಯವಸ್ಥೆಯನ್ನೂ ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಆರೋಗ್ಯ ಸಿಬ್ಬಂದಿಗಳ ಕೊರತೆಯಿರುವ ಕಾರಣ ಇತರ ಇಲಾಖೆಗಳಿಂದ ಸಿಬ್ಬಂದಿಗಳನ್ನು ಆರೋಗ್ಯ ಕೇಂದ್ರಗಳಿಗೆ ನಿಯೋಜಿಸಲಾಗಿದೆ. ಆದರೆ, ಎಷ್ಟೋ ಕೇಂದ್ರಗಳಲ್ಲಿ ನಿಯೋಜಿಸಲಾದ ಸಿಬ್ಬಂದಿಗಳು ಹಾಜರಾಗಿಲ್ಲ. ಈಗ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೆ ತಕ್ಕ ಬೆಂಬಲ ವ್ಯವಸ್ಥೆಯೂ ಇಲ್ಲ. ಉದಾಹರಣೆಗೆ, ದಿನನಿತ್ಯ ಅಪಾಯವನ್ನು ಎದುರಿಸಿ ಇಡೀ ಆರೋಗ್ಯ ವ್ಯವಸ್ಥೆಯ ಅಡಿಪಾಯವಾಗಿರುವ ಆಶಾ ಕಾರ್ಯಕರ್ತರಿಗೆ ವಿಶೇಷ ಬೆಂಬಲ ನೀಡಿ ಅವರನ್ನು ರಕ್ಷಿಸಿ ಪ್ರೋತ್ಸಾಹಿಸುವ ಬದಲು ಅವರಿಗೆ ಕಳೆದ ಮೂರು ತಿಂಗಳುಗಳಿಂದ ‘ಗೌರವ’ ಧನವೂ ನೀಡಿಲ್ಲ. ಅದೇ ರೀತಿ ಯಾವುದೇ ರಕ್ಷಣಾ ಕವಚಗಳನ್ನು ನೀಡದೇ, ಕ್ರಮಬದ್ದವಾಗಿ ಅವರನ್ನು ಕೋವಿಡ್ ಪರಿಕ್ಷಿಗೆ ಒಳಪಡಿಸದೇ, ಚಿಕಿತ್ಸೆಗಾಗಿ ವಿಮೆ ಸೌಲಭ್ಯ ಮತ್ತು ಇತರ ಭದ್ರತೆಗಳನ್ನು ನೀಡದೇ ಸರ್ಕಾರ ಪೌರಕಾರ್ಮಿಕರನ್ನು ಅಪಾಯದ ಅಂಚಿಗೆ ತಲ್ಲಿದೆ. ಈ ರೀತಿ ಕೋವಿಡ್ ವಿರುದ್ಧ ಮುಂಚೂಣಿಯಲ್ಲಿ ಹೋರಾಡುತ್ತಿರುವ ಆರೋಗ್ಯ ಸಿಬ್ಬಂದಿ ವರ್ಗದೊಂದಿಗೆ ರಾಜ್ಯ ಸರ್ಕಾರ ತುಚ್ಛವಾಗಿ ನಡೆದುಕೊಂಡಿದೆ.

ಸಮುದಾಯಗಳು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಕೇಂದ್ರಬಿಂದು ಎಂಬುದು ಎಲ್ಲಾ ತಜ್ಞರಿಗೆ ತಿಳಿದಿರುವ ವಿಷಯ. ಆದರೂ ಕಳೆದ ನಾಲ್ಕು ತಿಂಗಳುಗಳಿಂದ ಈ ದಿಕ್ಕಿನಲ್ಲಿ ಯಾವ ವಿಧದ ತಯಾರಿಯೂ ಮಾಡಲಾಗಿಲ್ಲ. ಬೆಂಕಿ ಹೊತ್ತಿ ಉರಿಯುವಾಗ ಬಾವಿ ತೋಡಿದಂತೆ, ಬಿಬಿಎಂಪಿ ಈಗ ಬೆಂಗಳೂರಿನ ಎಲ್ಲಾ ವಾರ್ಡ್ ಸಮಿತಿಗಳನ್ನು ಪುನರ್ಚೇತನಗೊಳಿಸಲು ಹೊರಟಿದೆ. ತಡವಾಗಿಯಾದರೂ ಈ ಕ್ರಮ ಕೈಗೊಂಡಿರುವುದು ಬಹಳ ಉತ್ತಮ ಬೆಳವಣಿಗೆ.

ವಾರ್ಡ್ ಸಮಿತಿಗಳು ಕೇವಲ ಕೋವಿಡ್ ರೋಗ ನಿಯಂತ್ರಣ ಮಾತ್ರವಲ್ಲದೇ, ಕೋವಿಡ್ ಸಂಬಂಧಿತ ಕಳಂಕ, ತಾರತಮ್ಯ, ಭಯ, ಆತಂಕವನ್ನು ಕಡಿಮೆ ಮಾಡಲು ವಿಶೇಷ ಕಾಳಜಿವಹಿಸಬೇಕಿದೆ. ಹಾಗೆಯೇ ಸುಳ್ಳು ಮಾಹಿತಿ, ಭಯ ಹುಟ್ಟಿಸುವ ವದಂತಿಗಳನ್ನು ತಡೆಗಟ್ಟುವಲ್ಲಿಯೂ ವಾರ್ಡ್ ಸಮಿತಿಗಳು ಮುಖ್ಯ ಪಾತ್ರ ವಹಿಸಬೇಕಿವೆ. ಕೋವಿಡ್ ರೋಗಿಗಳು ಮಾತ್ರವಲ್ಲದೇ, ಇತರ ರೋಗಗಳಿಂದ ಬಳಲುತ್ತಿರುವವರಿಗು ಆರೋಗ್ಯ ಸೇವೆಗಳು ಕೈಗೆಟುವಂತೆ ಮಾಡುವುದು, ನೀರು, ಚರಂಡಿ ಮುಂತಾದ ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಲು ಬಿಬಿಎಂಪಿಯ ಗಮನ ಸೆಳೆಯುವುದು, ಸ್ಥಳೀಯ ನಾಯಕರನ್ನು, ಚುನಾಯಿತ ಪ್ರತಿನಿಧಿಗಳನ್ನು ಸಂಪರ್ಕಿಸಿ ಅವರ ಬೆಂಬಲ ಪಡೆಯುವುದು ಮುಂತಾದ ಜವಾಬ್ದಾರಿಗಳನ್ನು ವಾರ್ಡ್ ಸಮಿತಿಗಳು ನಿರ್ವಹಿಸಬೇಕಿದೆ.

ಈವರೆಗೆ ಕೋವಿಡ್ ಬಿಕ್ಕಟ್ಟನ್ನು ನಿಭಾಯಿಸಲು ಭಗವಂತ ಏನು ಮಾಡಿದನೋ ಗೊತ್ತಿಲ್ಲ. ಆದರೇ ಈ ನಾಡಿನ ಜನಸಾಮಾನ್ಯರು ತಮ್ಮವರಿಗಾಗಿ ಬಹಳ ಶ್ರಮಿಸುತ್ತಿದ್ದಾರೆ. ಲಾಕ್‍ಡೌನ್ ಸಮಯದಲ್ಲಿ ರೇಶನ್ ಕಿಟ್‍ಗಳನ್ನು ಹೊಂದಿಸಿಕೊಂಡು ವಿತರಿಸುವುದು, ವಲಸೆ ಕಾರ್ಮಿಕರಿಗಾಗಿ ಊಟದ ವ್ಯವಸ್ಥೆ, ಅವರು ಮನೆಗೆ ತೆರೆಳಲು ಸಹಾಯ ಇವೆಲ್ಲವನ್ನು ಜನಸಾಮಾನ್ಯರೇ ನಿಭಾಯಿಸಿದ್ದಾರೆ.

ಜನಸಾಮಾನ್ಯರು ಕೇವಲ ಶ್ರಮಿಸುವುದಲ್ಲದೇ ಸರ್ಕಾರದಲ್ಲಿ ಉತ್ತರದಾಯಿತ್ವ, ಪಾರದರ್ಶಕತೆಗಾಗಿ ಒತ್ತಾಯಿಸಬೇಕಿದೆ. ಸರ್ಕಾರದ ಕ್ರಮಗಳು ಸೂಕ್ತವಿಲ್ಲದಿದ್ದಲ್ಲಿ, ಅವುಗಳನ್ನು ಪ್ರಶ್ನಿಸಬೇಕಿದೆ. ಮುಂಬೈಯಿನ ಧಾರಾವಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿ ಇವತ್ತು ನಿಯಂತ್ರಣದಲ್ಲಿರುವುದು ಯಾವುದೋ ದೊಡ್ಡ ಮಟ್ಟದ ತಾಂತ್ರಿಕ ಶಕ್ತಿಯಿಂದಲ್ಲ. ಅಲ್ಲಿನ ಸಮುದಾಯ ಕೋವಿಡ್ ನಿಯಂತ್ರಣದಲ್ಲಿ ಪಾಲ್ಗೊಂಡು ಜನರಿಗೆ ಮಾಹಿತಿ ನೀಡಿ, ಅವರಲ್ಲಿ ಭಯ ಆತಂಕವನ್ನು ತಡೆಗಟ್ಟಿ, ಅಗತ್ಯ ಆರೋಗ್ಯ ಸೇವೆಗಳನ್ನು ಸಮಯಕ್ಕೆ ಸರಿಯಾಗಿ ಕೈಗೆಟುಕುವಂತೆ ಮಾಡಿದ ಪರಿಣಾಮ ಇಂದು ಧಾರಾವಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿ ಸಮಸ್ಯೆ ನಿಯಂತ್ರಣದಲ್ಲಿದೆ. “ಭಗವಂತನ” ಮೇಲೆ ಈ ಬಿಕ್ಕಟ್ಟಿನ ಹೊರೆ ಹಾಕುವ ಬದಲು, ಸಂವಿಧಾನಬದ್ಧವಾಗಿ ಪ್ರಜಾಸತಾತ್ಮಕವಾದ ನಮ್ಮ ನಾಗರಿಕತ್ವದ ಹಕ್ಕುಗಳನುಸಾರವಾಗಿ ಈ ಬಿಕಟ್ಟಿನಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕಿದೆ.

-ಡಾ.ಅಖಿಲಾ ವಾಸನ್


ಇದನ್ನು ಓದಿ: ದುಬೆ ಹತ್ಯೆ ಪ್ರಕರಣದ ತನಿಖಾ ತಂಡವನ್ನು ಅಂಗೀಕರಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...