Homeಕರೋನಾ ತಲ್ಲಣಕೊರೊನಾ ವಿರುದ್ಧ ಬೆಂಗಳೂರು ಬೆಂಕಿ ಹತ್ತಿ ಉರಿಯುವಾಗ ಬಾವಿ ತೋಡಿದರಂತೆ

ಕೊರೊನಾ ವಿರುದ್ಧ ಬೆಂಗಳೂರು ಬೆಂಕಿ ಹತ್ತಿ ಉರಿಯುವಾಗ ಬಾವಿ ತೋಡಿದರಂತೆ

- Advertisement -
- Advertisement -

ಕೋವಿಡ್ ಬಿಕ್ಕಟ್ಟನ್ನು ‘ಆ ಭಗವಂತ’ನ ಮೇಲೆ ಬಿಟ್ಟು ಕರ್ನಾಟಕದ ಆರೋಗ್ಯ ಸಚಿವರು ತಮ್ಮ ನಿಶ್ಕ್ರಿಯತೆಯನ್ನು ತಾವೆ ಒಪ್ಪಿಕೊಂಡಂತಾಗಿದೆ. ದೇಶದಲ್ಲಿ ಕೋವಿಡ್‍ನ ಮೊದಲನೆ ಪ್ರಕರಣ ಕಂಡು ಹೆಚ್ಚು ಕಡಿಮೆ ನಾಲ್ಕು ತಿಂಗಳುಗಳು ಕಳೆದರೂ, ರಾಜ್ಯ ಸರ್ಕಾರ ಯಾವ ತಯಾರಿಯನ್ನೂ ಮಾಡಿಕೊಂಡಂತಿಲ್ಲ.

ಏಪ್ರಿಲ್ ಮತ್ತು ಮೇ ಎರಡು ತಿಂಗಳುಗಳ ಲಾಕ್‍ಡೌನಿನ ಸಮಯವಕಾಶವಿದ್ದರೂ ಸಹ, ಬರುವ ಆಪತ್ತಿಗೆ ಸರ್ಕಾರ ಯಾವ ವ್ಯವಸ್ಥೆಯನ್ನೂ ಮಾಡಲಿಲ್ಲ. ಲಾಕ್‍ಡೌನ್, ಸೀಲ್‍ಡೌನ್ ಬಿಟ್ಟು ಸರ್ಕಾರಕ್ಕೆ ಬೇರೆ ಯಾವ ಕಾರ್ಯತಂತ್ರ ತೋಚುತ್ತಿಲ್ಲವೆನಿಸುತ್ತದೆ. ಬೆಂಗಳೂರಿನಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಏರಿ 40,000ಕ್ಕು ಹೆಚ್ಚು ತಲುಪಿದೆ. ಇಂತಹ ಸಂದರ್ಭದಲ್ಲಿ ಎಲ್ಲವೂ ಎಡವಟ್ಟಾಗಿ ನಡೆಡಿದೆ.

ಪರೀಕ್ಷೆಗಳಲ್ಲಿ ಬಹಳಷ್ಟು ಬ್ಯಾಕ್‍ಲಾಗ್ ಇದ್ದು ಪರೀಕ್ಷೆಯ ಫಲಿತಾಂಶ ಪಡೆಯಲು 7 ದಿನ ಕಾಯಬೇಕಾಗಿದೆ. ಆಸ್ಪತ್ರೆಗಳಲ್ಲಿನ ಬೆಡ್‍ಗಳ ನಿರ್ವಹಣೆಗಾಗಿ ಇರುವ ಬಿಬಿಎಂಪಿಯ ಸಾಫ್ಟ್‍ವೇರ್ ಅಪ್ಲಿಕೇಶನ್‍ನಿಂದ ಯಾವ ಪ್ರಯೊಜನವೂ ಕಾಣಿಸುತ್ತಿಲ್ಲ. ಗಂಭೀರ ಸ್ಥಿತಿಯಲ್ಲಿರುವ ಒಬ್ಬ ರೋಗಿಯ ಪರವಾಗಿ ಬೆಡ್ ಲಭ್ಯತೆಯಿರುವ ಆಸ್ಪತ್ರೆಗೆ ಕರೆ ಮಾಡಿದಾಗ, ನಮ್ಮಲ್ಲಿ ಬೆಡ್‍ಗಳಿವೆ ಆದರೆ ಸಿಬ್ಬಂದಿಗಳ ತೀವ್ರ ಕೊರತೆಯಿಂದಾಗಿ ರೋಗಿಗಳನ್ನು ದಾಖಲಿಸಿಕೊಳ್ಳಲಾಗುತ್ತಿಲ್ಲವೆಂದು ಪ್ರತಿಕ್ರಿಯೆ ಬಂತು.

ಮತ್ತೊಂದು ಆಸ್ಪತ್ರೆಗೆ ಕರೆ ಮಾಡಿದಾಗ ನಮ್ಮಲ್ಲಿ ಬೆಡ್‍ಗಳಿಲ್ಲವೆಂದು ಹೇಳಿದರು. ‘ಬಿಬಿಎಂಪಿಯ ಸಾಫ್ಟ್‍ವೇರ್ ಅಪ್ಲಿಕೇಶನ್‍ನಲ್ಲಿ ನಿಮ್ಮ ಆಸ್ಪತ್ರೆಯಲ್ಲಿ 250 ಬೆಡ್‍ಗಳಿವೆಯೆಂದು ತೋರುಸಿತ್ತಿದೆಯಲ್ಲ’ ಎಂದು ಕೇಳಿದಾಗ, ಪ್ರತಿಕ್ರಿಯೆ ನೀಡುತ್ತಿದ್ದ ಸಿಬ್ಬಂದಿ ಹೌದಾ, ಅಂತಹದ್ದೊಂದು ಅಪ್ಲಿಕೇಶನ್ ಇದೆಯೆಂದೇ ನನಗೆ ಗೊತ್ತಿಲ್ಲ, ದಯವಿಟ್ಟು ಅದರ ಲಿಂಕ್ ಕಳುಹಿಸಿಯೆಂದರು.

ಈ ರೀತಿ ಬೆಡ್‍ಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆಯುವುದು ತಪ್ಪಿಲ್ಲ. ಖಾಸಗಿ ಆಸ್ಪತ್ರೆಗಳೊಂದಿಗೆ ಮತ್ತೊಮ್ಮೆ ಚರ್ಚೆ ಮಾಡುವುದಿಲ್ಲ, ಇನ್ನೇನಿದ್ದರೂ ಕಠಿಣ ಕ್ರಮಕ್ಕೆ ಇಳಿಯುತ್ತೇವೆಯೆಂದು ಮುಖ್ಯಮಂತ್ರಿಗಳು ಟ್ವೀಟ್ ಮಾಡಿದರೂ, ಖಾಸಗಿ ಆಸ್ಪತ್ರೆಗಳಿಗೆ ಅದರ ಬಿಸಿ ತಟ್ಟಿದಂತಿಲ್ಲ. ಬದಲಿಗೆ ತಮ್ಮ ಷರತ್ತುಗಳನ್ನು ಒಪ್ಪಿಕೊಳ್ಳುವಂತೆ ಮತ್ತಷ್ಟು ಬಲವಾಗಿ ಪಟ್ಟುಹಿಡಿದಂತಿದೆ. ನಮಗೆ ಸರಕಾರದಿಂದ ಬಾಕಿಯಿರುವ ಹಣವನ್ನು ಪಾವಿತಿಸುವವರೆಗು ನಾವು 50% ಬೆಡ್‍ಗಳನ್ನು ಸರಕಾರದಿಂದ ರೆಫರ್ ಮಾಡಿದ ರೋಗಿಗಳಿಗೆ ಮೀಸಲಿಡುವುದಿಲ್ಲವೆಂದು ಖಾಸಗಿ ಆಸ್ಪತ್ರೆಗಳು ತಿಳಿಸಿವೆ.

ಕಳೆದ 20 ವರ್ಷಗಳಿಂದ ಖಾಸಗಿ ಆಸ್ಪತ್ರೆಗಳನ್ನು ಪೋಷಿಸಿ ಸರ್ಕಾರಗಳು ತಮ್ಮ ಜುಟ್ಟನ್ನು ಅವರ ಕೈಯಿಗೆ ಕೊಟ್ಟ ಪರಿಣಾಮವು ಈಗ ಸ್ಪಷ್ಟವಾಗಿ ಕಾಣುತ್ತಿದೆ. ಈ ಸಂದಿಗ್ಧ ಪರಿಸ್ಥಿತಿ ಮುಂದಕ್ಕೆ ಏನಾಗಬಹುದೆಂದು ಬಹುಶಃ ‘ಆ ಭಗವಂತನನ್ನೇ’ ಕೇಳಬೇಕು.

ಖಾಸಗಿ ವ್ಯವಸ್ಥೆಯನ್ನು ತನ್ನ ಹತೋಟಿಗೆ ತೆಗೆದುಕೊಳ್ಳುವುದಿರಲಿ, ತನ್ನದೇ ಸಾರ್ವಜನಿಕ ವ್ಯವಸ್ಥೆಯನ್ನೂ ಪರಿಣಾಮಕಾರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಆರೋಗ್ಯ ಸಿಬ್ಬಂದಿಗಳ ಕೊರತೆಯಿರುವ ಕಾರಣ ಇತರ ಇಲಾಖೆಗಳಿಂದ ಸಿಬ್ಬಂದಿಗಳನ್ನು ಆರೋಗ್ಯ ಕೇಂದ್ರಗಳಿಗೆ ನಿಯೋಜಿಸಲಾಗಿದೆ. ಆದರೆ, ಎಷ್ಟೋ ಕೇಂದ್ರಗಳಲ್ಲಿ ನಿಯೋಜಿಸಲಾದ ಸಿಬ್ಬಂದಿಗಳು ಹಾಜರಾಗಿಲ್ಲ. ಈಗ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೆ ತಕ್ಕ ಬೆಂಬಲ ವ್ಯವಸ್ಥೆಯೂ ಇಲ್ಲ. ಉದಾಹರಣೆಗೆ, ದಿನನಿತ್ಯ ಅಪಾಯವನ್ನು ಎದುರಿಸಿ ಇಡೀ ಆರೋಗ್ಯ ವ್ಯವಸ್ಥೆಯ ಅಡಿಪಾಯವಾಗಿರುವ ಆಶಾ ಕಾರ್ಯಕರ್ತರಿಗೆ ವಿಶೇಷ ಬೆಂಬಲ ನೀಡಿ ಅವರನ್ನು ರಕ್ಷಿಸಿ ಪ್ರೋತ್ಸಾಹಿಸುವ ಬದಲು ಅವರಿಗೆ ಕಳೆದ ಮೂರು ತಿಂಗಳುಗಳಿಂದ ‘ಗೌರವ’ ಧನವೂ ನೀಡಿಲ್ಲ. ಅದೇ ರೀತಿ ಯಾವುದೇ ರಕ್ಷಣಾ ಕವಚಗಳನ್ನು ನೀಡದೇ, ಕ್ರಮಬದ್ದವಾಗಿ ಅವರನ್ನು ಕೋವಿಡ್ ಪರಿಕ್ಷಿಗೆ ಒಳಪಡಿಸದೇ, ಚಿಕಿತ್ಸೆಗಾಗಿ ವಿಮೆ ಸೌಲಭ್ಯ ಮತ್ತು ಇತರ ಭದ್ರತೆಗಳನ್ನು ನೀಡದೇ ಸರ್ಕಾರ ಪೌರಕಾರ್ಮಿಕರನ್ನು ಅಪಾಯದ ಅಂಚಿಗೆ ತಲ್ಲಿದೆ. ಈ ರೀತಿ ಕೋವಿಡ್ ವಿರುದ್ಧ ಮುಂಚೂಣಿಯಲ್ಲಿ ಹೋರಾಡುತ್ತಿರುವ ಆರೋಗ್ಯ ಸಿಬ್ಬಂದಿ ವರ್ಗದೊಂದಿಗೆ ರಾಜ್ಯ ಸರ್ಕಾರ ತುಚ್ಛವಾಗಿ ನಡೆದುಕೊಂಡಿದೆ.

ಸಮುದಾಯಗಳು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಕೇಂದ್ರಬಿಂದು ಎಂಬುದು ಎಲ್ಲಾ ತಜ್ಞರಿಗೆ ತಿಳಿದಿರುವ ವಿಷಯ. ಆದರೂ ಕಳೆದ ನಾಲ್ಕು ತಿಂಗಳುಗಳಿಂದ ಈ ದಿಕ್ಕಿನಲ್ಲಿ ಯಾವ ವಿಧದ ತಯಾರಿಯೂ ಮಾಡಲಾಗಿಲ್ಲ. ಬೆಂಕಿ ಹೊತ್ತಿ ಉರಿಯುವಾಗ ಬಾವಿ ತೋಡಿದಂತೆ, ಬಿಬಿಎಂಪಿ ಈಗ ಬೆಂಗಳೂರಿನ ಎಲ್ಲಾ ವಾರ್ಡ್ ಸಮಿತಿಗಳನ್ನು ಪುನರ್ಚೇತನಗೊಳಿಸಲು ಹೊರಟಿದೆ. ತಡವಾಗಿಯಾದರೂ ಈ ಕ್ರಮ ಕೈಗೊಂಡಿರುವುದು ಬಹಳ ಉತ್ತಮ ಬೆಳವಣಿಗೆ.

ವಾರ್ಡ್ ಸಮಿತಿಗಳು ಕೇವಲ ಕೋವಿಡ್ ರೋಗ ನಿಯಂತ್ರಣ ಮಾತ್ರವಲ್ಲದೇ, ಕೋವಿಡ್ ಸಂಬಂಧಿತ ಕಳಂಕ, ತಾರತಮ್ಯ, ಭಯ, ಆತಂಕವನ್ನು ಕಡಿಮೆ ಮಾಡಲು ವಿಶೇಷ ಕಾಳಜಿವಹಿಸಬೇಕಿದೆ. ಹಾಗೆಯೇ ಸುಳ್ಳು ಮಾಹಿತಿ, ಭಯ ಹುಟ್ಟಿಸುವ ವದಂತಿಗಳನ್ನು ತಡೆಗಟ್ಟುವಲ್ಲಿಯೂ ವಾರ್ಡ್ ಸಮಿತಿಗಳು ಮುಖ್ಯ ಪಾತ್ರ ವಹಿಸಬೇಕಿವೆ. ಕೋವಿಡ್ ರೋಗಿಗಳು ಮಾತ್ರವಲ್ಲದೇ, ಇತರ ರೋಗಗಳಿಂದ ಬಳಲುತ್ತಿರುವವರಿಗು ಆರೋಗ್ಯ ಸೇವೆಗಳು ಕೈಗೆಟುವಂತೆ ಮಾಡುವುದು, ನೀರು, ಚರಂಡಿ ಮುಂತಾದ ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಲು ಬಿಬಿಎಂಪಿಯ ಗಮನ ಸೆಳೆಯುವುದು, ಸ್ಥಳೀಯ ನಾಯಕರನ್ನು, ಚುನಾಯಿತ ಪ್ರತಿನಿಧಿಗಳನ್ನು ಸಂಪರ್ಕಿಸಿ ಅವರ ಬೆಂಬಲ ಪಡೆಯುವುದು ಮುಂತಾದ ಜವಾಬ್ದಾರಿಗಳನ್ನು ವಾರ್ಡ್ ಸಮಿತಿಗಳು ನಿರ್ವಹಿಸಬೇಕಿದೆ.

ಈವರೆಗೆ ಕೋವಿಡ್ ಬಿಕ್ಕಟ್ಟನ್ನು ನಿಭಾಯಿಸಲು ಭಗವಂತ ಏನು ಮಾಡಿದನೋ ಗೊತ್ತಿಲ್ಲ. ಆದರೇ ಈ ನಾಡಿನ ಜನಸಾಮಾನ್ಯರು ತಮ್ಮವರಿಗಾಗಿ ಬಹಳ ಶ್ರಮಿಸುತ್ತಿದ್ದಾರೆ. ಲಾಕ್‍ಡೌನ್ ಸಮಯದಲ್ಲಿ ರೇಶನ್ ಕಿಟ್‍ಗಳನ್ನು ಹೊಂದಿಸಿಕೊಂಡು ವಿತರಿಸುವುದು, ವಲಸೆ ಕಾರ್ಮಿಕರಿಗಾಗಿ ಊಟದ ವ್ಯವಸ್ಥೆ, ಅವರು ಮನೆಗೆ ತೆರೆಳಲು ಸಹಾಯ ಇವೆಲ್ಲವನ್ನು ಜನಸಾಮಾನ್ಯರೇ ನಿಭಾಯಿಸಿದ್ದಾರೆ.

ಜನಸಾಮಾನ್ಯರು ಕೇವಲ ಶ್ರಮಿಸುವುದಲ್ಲದೇ ಸರ್ಕಾರದಲ್ಲಿ ಉತ್ತರದಾಯಿತ್ವ, ಪಾರದರ್ಶಕತೆಗಾಗಿ ಒತ್ತಾಯಿಸಬೇಕಿದೆ. ಸರ್ಕಾರದ ಕ್ರಮಗಳು ಸೂಕ್ತವಿಲ್ಲದಿದ್ದಲ್ಲಿ, ಅವುಗಳನ್ನು ಪ್ರಶ್ನಿಸಬೇಕಿದೆ. ಮುಂಬೈಯಿನ ಧಾರಾವಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿ ಇವತ್ತು ನಿಯಂತ್ರಣದಲ್ಲಿರುವುದು ಯಾವುದೋ ದೊಡ್ಡ ಮಟ್ಟದ ತಾಂತ್ರಿಕ ಶಕ್ತಿಯಿಂದಲ್ಲ. ಅಲ್ಲಿನ ಸಮುದಾಯ ಕೋವಿಡ್ ನಿಯಂತ್ರಣದಲ್ಲಿ ಪಾಲ್ಗೊಂಡು ಜನರಿಗೆ ಮಾಹಿತಿ ನೀಡಿ, ಅವರಲ್ಲಿ ಭಯ ಆತಂಕವನ್ನು ತಡೆಗಟ್ಟಿ, ಅಗತ್ಯ ಆರೋಗ್ಯ ಸೇವೆಗಳನ್ನು ಸಮಯಕ್ಕೆ ಸರಿಯಾಗಿ ಕೈಗೆಟುಕುವಂತೆ ಮಾಡಿದ ಪರಿಣಾಮ ಇಂದು ಧಾರಾವಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿ ಸಮಸ್ಯೆ ನಿಯಂತ್ರಣದಲ್ಲಿದೆ. “ಭಗವಂತನ” ಮೇಲೆ ಈ ಬಿಕ್ಕಟ್ಟಿನ ಹೊರೆ ಹಾಕುವ ಬದಲು, ಸಂವಿಧಾನಬದ್ಧವಾಗಿ ಪ್ರಜಾಸತಾತ್ಮಕವಾದ ನಮ್ಮ ನಾಗರಿಕತ್ವದ ಹಕ್ಕುಗಳನುಸಾರವಾಗಿ ಈ ಬಿಕಟ್ಟಿನಲ್ಲಿ ಸರ್ಕಾರದೊಂದಿಗೆ ಕೈಜೋಡಿಸಬೇಕಿದೆ.

-ಡಾ.ಅಖಿಲಾ ವಾಸನ್


ಇದನ್ನು ಓದಿ: ದುಬೆ ಹತ್ಯೆ ಪ್ರಕರಣದ ತನಿಖಾ ತಂಡವನ್ನು ಅಂಗೀಕರಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...