Homeಚಳವಳಿನಮ್ಮ ಪ್ರೀತಿಯ ಮುಂದೆ ನಿಮ್ಮ ದ್ವೇಷದ ಸೋಲು ನಿಶ್ಚಯ- ಲವ್ ಜಿಹಾದ್ ವಿರೋಧಿಸಿ, ಪ್ರೀತಿಗಾಗಿ ಪ್ರತಿಭಟನೆ!

ನಮ್ಮ ಪ್ರೀತಿಯ ಮುಂದೆ ನಿಮ್ಮ ದ್ವೇಷದ ಸೋಲು ನಿಶ್ಚಯ- ಲವ್ ಜಿಹಾದ್ ವಿರೋಧಿಸಿ, ಪ್ರೀತಿಗಾಗಿ ಪ್ರತಿಭಟನೆ!

ದ್ವೇಷ ಬಿಟ್ಟು ಪ್ರೀತಿಯನ್ನು ಆಯ್ಕೆ ಮಾಡೋಣ. ಪ್ರೀತಿಯಿಂದ ಮಾತ್ರ ಸಮಾನತೆಯ ಸಮಾಜ ಕಟ್ಟಲು ಸಾಧ್ಯ, ಪ್ರೀತಿ ಬೇಕು, ದ್ವೇಷ ಬೇಡ.

- Advertisement -
- Advertisement -

ಕರ್ನಾಟಕ ಸೇರಿದಂತೆ ಬಿಜೆಪಿ ಆಡಳಿತದ ಸರ್ಕಾರವಿರುವ ರಾಜ್ಯಗಳಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ತರುವುದಾಗಿ ಆಯಾ ರಾಜ್ಯಗಳ ಮುಖ್ಯಮಂತ್ರಿಗಳು ಹೇಳಿಕೆ ನೀಡುತ್ತಿರುವುದನ್ನು ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಪ್ರೀತಿಗಾಗಿ ಪ್ರತಿಭಟನೆ ನಡೆಯುತ್ತಿದೆ.

ನಮ್ಮ ಪ್ರೀತಿಯ ಮುಂದೆ ನಿಮ್ಮ ದ್ವೇಷದ ಸೋಲು ನಿಶ್ಚಯ, ದ್ವೇಷ ಬಿಟ್ಟು ಪ್ರೀತಿಯನ್ನು ಆಯ್ಕೆ ಮಾಡೋಣ. ಪ್ರೀತಿಯಿಂದ ಮಾತ್ರ ಸಮಾನತೆಯ ಸಮಾಜ ಕಟ್ಟಲು ಸಾಧ್ಯ, ಪ್ರೀತಿ ಬೇಕು, ದ್ವೇಷ ಬೇಡ ಎಂಬ ಭಿತ್ತಿಪತ್ರಗಳನ್ನು ಹಿಡಿದು ನೂರಾರು ಮಂದಿ ಇಂದು ಪ್ರತಿಭಟನೆ ನಡೆಸಿದ್ದಾರೆ.

ಕರ್ನಾಟಕದ ಮಹಿಳಾ, ದಲಿತ, ಮುಸ್ಲಿಂ, ಲಿಂಗತ್ವ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ, ಮಾನವ ಹಕ್ಕುಗಳ ಸಂಘಟನೆಗಳು ಜಂಟಿ ಆಂದೋಲನ ಸಮಿತಿ ಜಂಟಿಯಾಗಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿವೆ.

ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!

 

ಲವ್ ಜಿಹಾದ್ ನಡೆಯುತ್ತಿದೆ ಎಂದು ಆರೋಪಿಸಿ, ಕಾನೂನು ತರುವ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಸಿ.ಟಿ.ರವಿ, ಶಶಿಕಲಾ ಜೊಲ್ಲೆ ಇವರುಗಳನ್ನು ಟ್ಯಾಗ್ ಮಾಡಿ, “ಪ್ರೀತಿ ಸಂವಿಧಾನದ ಸರಳ ಪಾಠ. ಆದರೆ ನೀವು ಸಂವಿಧಾನವನ್ನು ಇಷ್ಟಪಡುವುದಿಲ್ಲ ಅಥವಾ ಅರ್ಥಮಾಡಿಕೊಳ್ಳುವುದಿಲ್ಲ. ಆದ್ದರಿಂದ, ನೀವು ಅದನ್ನು ತಿಳಿದುಕೊಳ್ಳುವವರೆಗೆ ನಾವು ಪ್ರತಿಭಟನೆ ಪುನರಾವರ್ತಿಸುತ್ತೇವೆ!” ಎಂದಿದ್ದಾರೆ.
ದೇಶದ ಆರ್ಥಿಕತೆ ಕುಸಿದಿದೆ. ಕೃಷಿ ಮಸೂದೆಗಳ ವಿರುದ್ಧ ರೈತರು ದೆಹಲಿಯಲ್ಲಿ ಹೋರಾಡುತ್ತಿದ್ದಾರೆ. ಇಂತಹ ಸ್ಥಿತಿಯಲ್ಲಿ ಜನರ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಇಲ್ಲದ ಲವ್ ಜಿಹಾದ್ ಚರ್ಚೆಯನ್ನು ಮುನ್ನಲೆಗೆ ತಂದಿದೆ ಎಂದು ಸಮಿತಿ ಕಿಡಿಕಾರಿದೆ.

ಮಹಿಳೆಯರ ರಕ್ಷಣೆಯ ಹೆಸರಿನಲ್ಲಿ ಮಹಿಳೆಯರು ಯಾರನ್ನು ಪ್ರೀತಿಸಬೇಕು, ಯಾರನ್ನು ಮದುವೆಯಾಗಬೇಕು ಎಂದು ಬಿಜೆಪಿ ನಿಯಂತ್ರಿಸುವ ಹುನ್ನಾರ ನಡೆಸುತ್ತಿದೆ. ಇಂತಹ ಕಾನೂನುಗಳ ಮೂಲಕ ನಮ್ಮ ಸಮಾಜವನ್ನು ಜಾತಿ, ಧರ್ಮಗಳ ಆಧಾರಲ್ಲಿ ಮತ್ತಷ್ಟು ವಿಭಜಿಸುವ, ಸಮುದಾಯದ ನಾಗರಿಕತೆಗೆ ಧಕ್ಕೆ ತರುವುದನ್ನು ನಾವು ವಿರೋಧಿಸುತ್ತೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಘಟನೆಗಳು ಪ್ರೀತಿಸೋದು ತಪ್ಪಾ? ಎಂಬ ಟ್ವಿಟರ್‌ ಖಾತೆಯ ವೇದಿಕೆಯಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಾರೆ.  ’ಅಂತರ ಧಾರ್ಮಿಕ ಪ್ರೀತಿಯ ಅಪರಾಧೀಕರಣದ ವಿರುದ್ಧ ಅಭಿಯಾನ’ ಎಂಬ ಶೀರ್ಷಿಕೆಯಡಿ ತಮ್ಮ ಖಾತೆಯನ್ನು ಲವ್ ಜಿಹಾದ್ ವಿರುದ್ಧದ ಅಭಿಯಾನ ಎಂದು ಕರೆದಿದ್ದಾರೆ.

ಇಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೂಡ ‘ಲವ್ ಜಿಹಾದ್’ ತಡೆಗೆ ಕಾನೂನು ರೂಪಿಸುವ ಮುಖ್ಯಮಂತ್ರಿ ಅವರ ಘೋಷಣೆ, ತಮ್ಮ ಆಡಳಿತದ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಹತಾಶ ಪ್ರಯತ್ನವಲ್ಲದೇ ಇನ್ನೇನಲ್ಲ. ಕೋಮುದ್ವೇಷವನ್ನು ಹುಟ್ಟುಹಾಕಿ ರಾಜಕೀಯದ ಬೇಳೆ ಬೇಯಿಸುವ ದುರುದ್ದೇಶವಲ್ಲದೇ ಬೇರೆ ಯಾವ ಸದುದ್ದೇಶ ಈ ಘೋಷಣೆಗೆ ಇಲ್ಲ ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...