Homeಚಳವಳಿನಮ್ಮ ಪ್ರೀತಿಯ ಮುಂದೆ ನಿಮ್ಮ ದ್ವೇಷದ ಸೋಲು ನಿಶ್ಚಯ- ಲವ್ ಜಿಹಾದ್ ವಿರೋಧಿಸಿ, ಪ್ರೀತಿಗಾಗಿ ಪ್ರತಿಭಟನೆ!

ನಮ್ಮ ಪ್ರೀತಿಯ ಮುಂದೆ ನಿಮ್ಮ ದ್ವೇಷದ ಸೋಲು ನಿಶ್ಚಯ- ಲವ್ ಜಿಹಾದ್ ವಿರೋಧಿಸಿ, ಪ್ರೀತಿಗಾಗಿ ಪ್ರತಿಭಟನೆ!

ದ್ವೇಷ ಬಿಟ್ಟು ಪ್ರೀತಿಯನ್ನು ಆಯ್ಕೆ ಮಾಡೋಣ. ಪ್ರೀತಿಯಿಂದ ಮಾತ್ರ ಸಮಾನತೆಯ ಸಮಾಜ ಕಟ್ಟಲು ಸಾಧ್ಯ, ಪ್ರೀತಿ ಬೇಕು, ದ್ವೇಷ ಬೇಡ.

- Advertisement -
- Advertisement -

ಕರ್ನಾಟಕ ಸೇರಿದಂತೆ ಬಿಜೆಪಿ ಆಡಳಿತದ ಸರ್ಕಾರವಿರುವ ರಾಜ್ಯಗಳಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ತರುವುದಾಗಿ ಆಯಾ ರಾಜ್ಯಗಳ ಮುಖ್ಯಮಂತ್ರಿಗಳು ಹೇಳಿಕೆ ನೀಡುತ್ತಿರುವುದನ್ನು ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಪ್ರೀತಿಗಾಗಿ ಪ್ರತಿಭಟನೆ ನಡೆಯುತ್ತಿದೆ.

ನಮ್ಮ ಪ್ರೀತಿಯ ಮುಂದೆ ನಿಮ್ಮ ದ್ವೇಷದ ಸೋಲು ನಿಶ್ಚಯ, ದ್ವೇಷ ಬಿಟ್ಟು ಪ್ರೀತಿಯನ್ನು ಆಯ್ಕೆ ಮಾಡೋಣ. ಪ್ರೀತಿಯಿಂದ ಮಾತ್ರ ಸಮಾನತೆಯ ಸಮಾಜ ಕಟ್ಟಲು ಸಾಧ್ಯ, ಪ್ರೀತಿ ಬೇಕು, ದ್ವೇಷ ಬೇಡ ಎಂಬ ಭಿತ್ತಿಪತ್ರಗಳನ್ನು ಹಿಡಿದು ನೂರಾರು ಮಂದಿ ಇಂದು ಪ್ರತಿಭಟನೆ ನಡೆಸಿದ್ದಾರೆ.

ಕರ್ನಾಟಕದ ಮಹಿಳಾ, ದಲಿತ, ಮುಸ್ಲಿಂ, ಲಿಂಗತ್ವ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ, ಮಾನವ ಹಕ್ಕುಗಳ ಸಂಘಟನೆಗಳು ಜಂಟಿ ಆಂದೋಲನ ಸಮಿತಿ ಜಂಟಿಯಾಗಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿವೆ.

ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!

 

ಲವ್ ಜಿಹಾದ್ ನಡೆಯುತ್ತಿದೆ ಎಂದು ಆರೋಪಿಸಿ, ಕಾನೂನು ತರುವ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಸಿ.ಟಿ.ರವಿ, ಶಶಿಕಲಾ ಜೊಲ್ಲೆ ಇವರುಗಳನ್ನು ಟ್ಯಾಗ್ ಮಾಡಿ, “ಪ್ರೀತಿ ಸಂವಿಧಾನದ ಸರಳ ಪಾಠ. ಆದರೆ ನೀವು ಸಂವಿಧಾನವನ್ನು ಇಷ್ಟಪಡುವುದಿಲ್ಲ ಅಥವಾ ಅರ್ಥಮಾಡಿಕೊಳ್ಳುವುದಿಲ್ಲ. ಆದ್ದರಿಂದ, ನೀವು ಅದನ್ನು ತಿಳಿದುಕೊಳ್ಳುವವರೆಗೆ ನಾವು ಪ್ರತಿಭಟನೆ ಪುನರಾವರ್ತಿಸುತ್ತೇವೆ!” ಎಂದಿದ್ದಾರೆ.
ದೇಶದ ಆರ್ಥಿಕತೆ ಕುಸಿದಿದೆ. ಕೃಷಿ ಮಸೂದೆಗಳ ವಿರುದ್ಧ ರೈತರು ದೆಹಲಿಯಲ್ಲಿ ಹೋರಾಡುತ್ತಿದ್ದಾರೆ. ಇಂತಹ ಸ್ಥಿತಿಯಲ್ಲಿ ಜನರ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಇಲ್ಲದ ಲವ್ ಜಿಹಾದ್ ಚರ್ಚೆಯನ್ನು ಮುನ್ನಲೆಗೆ ತಂದಿದೆ ಎಂದು ಸಮಿತಿ ಕಿಡಿಕಾರಿದೆ.

ಮಹಿಳೆಯರ ರಕ್ಷಣೆಯ ಹೆಸರಿನಲ್ಲಿ ಮಹಿಳೆಯರು ಯಾರನ್ನು ಪ್ರೀತಿಸಬೇಕು, ಯಾರನ್ನು ಮದುವೆಯಾಗಬೇಕು ಎಂದು ಬಿಜೆಪಿ ನಿಯಂತ್ರಿಸುವ ಹುನ್ನಾರ ನಡೆಸುತ್ತಿದೆ. ಇಂತಹ ಕಾನೂನುಗಳ ಮೂಲಕ ನಮ್ಮ ಸಮಾಜವನ್ನು ಜಾತಿ, ಧರ್ಮಗಳ ಆಧಾರಲ್ಲಿ ಮತ್ತಷ್ಟು ವಿಭಜಿಸುವ, ಸಮುದಾಯದ ನಾಗರಿಕತೆಗೆ ಧಕ್ಕೆ ತರುವುದನ್ನು ನಾವು ವಿರೋಧಿಸುತ್ತೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಘಟನೆಗಳು ಪ್ರೀತಿಸೋದು ತಪ್ಪಾ? ಎಂಬ ಟ್ವಿಟರ್‌ ಖಾತೆಯ ವೇದಿಕೆಯಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಾರೆ.  ’ಅಂತರ ಧಾರ್ಮಿಕ ಪ್ರೀತಿಯ ಅಪರಾಧೀಕರಣದ ವಿರುದ್ಧ ಅಭಿಯಾನ’ ಎಂಬ ಶೀರ್ಷಿಕೆಯಡಿ ತಮ್ಮ ಖಾತೆಯನ್ನು ಲವ್ ಜಿಹಾದ್ ವಿರುದ್ಧದ ಅಭಿಯಾನ ಎಂದು ಕರೆದಿದ್ದಾರೆ.

ಇಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೂಡ ‘ಲವ್ ಜಿಹಾದ್’ ತಡೆಗೆ ಕಾನೂನು ರೂಪಿಸುವ ಮುಖ್ಯಮಂತ್ರಿ ಅವರ ಘೋಷಣೆ, ತಮ್ಮ ಆಡಳಿತದ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಹತಾಶ ಪ್ರಯತ್ನವಲ್ಲದೇ ಇನ್ನೇನಲ್ಲ. ಕೋಮುದ್ವೇಷವನ್ನು ಹುಟ್ಟುಹಾಕಿ ರಾಜಕೀಯದ ಬೇಳೆ ಬೇಯಿಸುವ ದುರುದ್ದೇಶವಲ್ಲದೇ ಬೇರೆ ಯಾವ ಸದುದ್ದೇಶ ಈ ಘೋಷಣೆಗೆ ಇಲ್ಲ ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...