Homeದಲಿತ್ ಫೈಲ್ಸ್ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

- Advertisement -
- Advertisement -

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ ಮೇಲೆ ದಾಂಧಲೆ-ದೌರ್ಜನ್ಯ ನಡೆಸಿದ್ದಾರೆ.

ಗಂಗಸಂದ್ರ ಗ್ರಾಮದ ಬಿ.ಎಂ ಕಾವಲ್ ಸರ್ವೇ ನಂ.24ರಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಮಾದಿಗ ಸಮುದಾಯದ ಹಲವು ಕುಟುಂಬಗಳ ಭೂಮಿ ಇದೆ. ಸುಮಾರು 60-70 ವರ್ಷಗಳ ಹಿಂದೆಯೇ ಸರ್ಕಾರ ಈ ಭೂಮಿಯನ್ನು ದಲಿತ ಕುಟುಂಬಗಳ ಹೆಸರಿಗೆ ನೋಂದಣಿ ಮಾಡಿಕೊಟ್ಟಿದೆ. ಗ್ರಾಮದ ದಲಿತ ಕುಟುಂಬಗಳು ಮೂರು ತಲೆ ಮಾರುಗಳಿಂದ ಆ ಭೂಮಿಯನ್ನು ಉಳಿಸಿಕೊಂಡು ಬಂದಿದ್ದಾರೆ. ಆದರೆ, ಈಗ ಏಕಾಏಕಿ ಆ ಭೂಮಿಗೆ ಕಗ್ಗಲೀಪುರ ವಲಯ ಅರಣ್ಯಾಧಿಕಾರಿ ಮತ್ತು ಅವರ ಮೇಲಧಿಕಾರಿ ಎಸಿಎಫ್‌ ಹಾಗೂ ಪೊಲೀಸರು ದಾಳಿ ಮಾಡಿದ್ದಾರೆ. ಭೂಮಿ ಅರಣ್ಯ ಇಲಾಖೆಗೆ ಸೇರಿದ್ದೆಂದು ಭೂಮಿಯನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. 

ಮಾತ್ರವಲ್ಲದೆ, ಸುಮಾರು 50 ಮಂದಿ ಗೂಂಡಾಗಳಿಗೆ ಅರಣ್ಯ ಗಾರ್ಡ್‌ಗಳ ವೇಷ ತೊಡಿಸಿ, ಅರಣ್ಯ ಸಿಬ್ಬಂದಿಗಳೆಂದು ಬಿಂಬಿಸಿ, ದಲಿತ ನಿವಾಸಿಗಳ ಮೇಲೆ ದರ್ಪ ಮೆರೆದಿದ್ದಾರೆ ಎಂದು ಭೂ-ಒಡೆತನ ಹೊಂದಿರುವ ದಲಿತರು ಆರೋಪಿಸಿದ್ದಾರೆ. 

ದಲಿತ ಕುಟುಂಬಗಳ ಬಳಿ ಆ ಭೂಮಿಗೆ ಸಂಬಂಧಿಸಿದ ಆರ್‌ಟಿಸಿ, ಎಂಆರ್‌ ಕಾಪಿಗಳಿವೆ. ಆದರೆ, ದುರಸ್ತಿಯಾಗಿಲ್ಲ ಎಂಬ ಏಕೈಕ ನೆಪ ಇಟ್ಟುಕೊಂಡು ಈ ಭೂಮಿ ಮೀಸಲು ಅರಣ್ಯದ ಬಫರ್ ವಲಯವೆಂದು ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ. ದಾಖಲಾತಿಗಳನ್ನು ಅಧಿಕಾರಿಗಳಿಗೆ ತೋರಿಸಿದರೆ, ಇವು ಸ್ವಾತಂತ್ರ್ಯ ನಂತರ ಕೊಟ್ಟಿರುವ ದಾಖಲೆಗಳು. ಆದರೆ, ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರ ಕಾಲದಲ್ಲೇ ಇದು ಅರಣ್ಯ ಭೂಮಿ ಅಂತ ಆಗಿದೆ. ಇದು ಅರಣ್ಯ ಇಲಾಖೆಗೆ ಸೇರಿದ್ದು ಎಂದು ಮೊಂಡುತನದ ವಾದ ಮಾಡುತ್ತಿರುವ ಅಧಿಕಾರಿಗಳು, ದಲಿತ ಕುಟುಂಬಗಳ ಮೇಲೆ ಗೂಂಡಾವರ್ತನೆ ತೋರಿದ್ದಾರೆ.

ಅಲ್ಲಿನ ನಿವಾಸಿಗಳು ತಮ್ಮ ಭೂಮಿಯ ರಕ್ಷಣೆಗಾಗಿ ಹಾಕಿದ್ದ ಡಾ. ಬಿ.ಆರ್‌ ಅಂಬೇಡ್ಕರ್ ರವರ ಭಾವಚಿತ್ರವಿದ್ದ ಬೋರ್ಡ್ ಕಿತ್ತು ಎಸೆದಿರುವ ಅಧಿಕಾರಿಗಳು, ದಲಿತರ ಭೂಮಿಗೆ ಕಾಂಪೌಂಡ್‌ ನಿರ್ಮಿಸಲು ಮುಂದಾಗಿದ್ದಾರೆ.

“ಭೂಮಿ ನಮ್ಮದು ಎಂಬುದಕ್ಕೆ ನಮ್ಮ ಬಳಿ ದಾಖಲೆಗಳಿವೆ. ಸರ್ಕಾರವೇ ನಮ್ಮ ಪೂರ್ವಜರ ಹೆಸರಿಗೆ ಭೂಮಿಯನ್ನು ವರ್ಗಾಯಿಸಿ, ಕಂದಾಯ ಇಲಾಖೆಯಡಿ ದಾಖಲೆಗಳನ್ನು ಮಾಡಿ ಕೊಟ್ಟಿದೆ. ನಮ್ಮ ಜೀವನಕ್ಕೆ ಈ ಭೂಮಿಯೇ ಆಧಾರವಾಗಿದೆ. ಹಲವು ವರ್ಷಗಳಿಂದ ಈ ಭೂಮಿಯನ್ನು ಉಳಿಸಿಕೊಂಡು ಬಂದಿದ್ದೇವೆ. ಆದರೆ, ಅರಣ್ಯ ಅಧಿಕಾರಿಗಳು ನಮ್ಮ ಭೂಮಿಯನ್ನು ಕಸಿಕೊಳ್ಳುತ್ತಿದ್ದಾರೆ” ಎಂದು ದಲಿತ ಕುಟುಂಬಗಳು ನೋವು ತೋಡಿಕೊಳ್ಳುತ್ತಿದ್ದಾರೆ. 

ಅಧಿಕಾರಿಗಳ ದೌರ್ಜನ್ಯದ ಮಾಹಿತಿ ತಿಳಿದ ಸಿಐಟಿಯು ಪ್ರಧಾನ ಕಾರ್ಯದರ್ಶಿ ಟಿ.ಯಶವಂತ್ ಅವರು ಸ್ಥಳಕ್ಕೆ ಧಾವಿಸಿದ್ದು, ಅಧಿಕಾರಿಗಳ ಕಿರುಕುಳವನ್ನು ಖಂಡಿಸಿದ್ದಾರೆ. ನಿವಾಸಿಗಳೊಂದಿಗೆ ಸ್ಥಳದಲ್ಲಿಯೇ ಪ್ರತಿಭಟನೆ ನಡೆಸಿದ್ದಾರೆ.

“ಸೋಮವಾರವಷ್ಟೇ ಇದೇ ಭೂಮಿ ವಿಚಾರವಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್‌ ಅವರನ್ನು ಭೇಟಿ ಮಾಡಿದ್ದೆವು. ಕಂದಾಯ ದಾಖಲಾತಿ ಸ್ಪಷ್ಟವಾಗಿದ್ದರೂ, ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಮಂಜೂರಾಗಿರುವ ಭೂಮಿಯನ್ನ ಅರಣ್ಯ ಇಲಾಖೆಯವರು ವಶಪಡಿಸಿಕೊಳ್ಳಲು ಮುಂದಾಗಿದ್ದಾರೆ. ಕುಟುಂಬಗಳಿಗೆ ತೊಂದರೆ, ಕಿರುಕುಳ ನೀಡುತ್ತಿದ್ದಾರೆ ಎಂಬ ವಿಚಾರವನ್ನು ಜಿಲ್ಲಾಧಿಕಾರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ” ಎಂದು ಯಶವಂತ್‌ ತಿಳಿಸಿದ್ದಾರೆ.

“ನಮ್ಮ ಮನವಿ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ‘ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆ ನಡುವೆ ದಾಖಲಾತಿ ಮತ್ತು ಗಡಿ ವಿಚಾರದಲ್ಲಿ ಗೊಂದಲವಿದ್ದರೆ, ಅವುಗಳನ್ನ ನಿವಾರಿಸಲು ಎಸ್‌ಐಟಿ ರಚನೆ ಮಾಡಿಕೊಂಡಿದ್ದೇವೆ. ಬೆಂಗಳೂರಿನಲ್ಲಿ ಆ ಎಸ್‌ಐಟಿಗೆ ಅಧ್ಯಕ್ಷ ನಾನೇ ಆಗಿದ್ದೇನೆ. ಬೆಂಗಳೂರು ಎಸ್‌ಐಟಿ ಅಥವಾ ರಾಜ್ಯ ಎಸ್‌ಐಟಿಯಲ್ಲಿ ಗಂಗಸಂದ್ರದ ಭೂಮಿ ವಿಚಾರ ಚರ್ಚೆಗೆ ಬಂದಿಲ್ಲ. ನಿಮ್ಮ  ಕಂದಾಯ ದಾಖಲಾತಿಗಳು ಸ್ಪಷ್ಟವಾಗಿರುವ ಕಡೆಗೆ ಅರಣ್ಯ ಅಧಿಕಾರಿಗಳು ಹೋರಬಾರದೆಂದು ಡಿಸಿಎಫ್‌ ರವೀಂದ್ರ ಮೂಲಕ ಸ್ಪಷ್ಟ ಸೂಚನೆ ಕೊಡುತ್ತೇನೆ’ ಎಂಬುದಾಗಿ ಭರವಸೆ ನೀಡಿದ್ದರು. ಆದರೂ, ಇಂದು ಅರಣ್ಯ ಅಧಿಕಾರಿಗಳು ಏಕಾಏಕಿ ದಲಿತರ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿದ್ದಾರೆ” ಎಂದು ಯಶವಂತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರಣ್ಯ ಅಧಿಕಾರಿಗಳು ಕಾನೂನುಬಾಹಿರವಾಗಿ ದಲಿತರ ಭೂಮಿಯನ್ನು ಕಬ್ಜ ಮಾಡಲು ಬಂದಿದ್ದಾರೆ. 60/70 ವರ್ಷಗಳಿಂದ ಈ ಭೂಮಿಯನ್ನ ಉಳಿಸಿಕೊಂಡಿರುವ ಬಡವರನ್ನೇ ಅಪರಾಧಿಗಳನ್ನಾಗಿ ಮಾಡಲು ಮುಂದಾಗಿದ್ದಾರೆ. ವಿಧಾನಸಭೆಯಲ್ಲಿ ಭೂವಿವಾದದ ವಿಚಾರಗಳು ಚರ್ಚೆಗೆ ಬಂದಾಗ, ಅರಣ್ಯ ಇಲಾಖೆಯ ಸಚಿವರು, ‘ಯಾವುದೇ ಭೂಮಿಯಾಗಿದ್ದರೂ, 2-3 ಎಕರೆ ಭೂಮಿಯಲ್ಲಿ ಕೃಷಿ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸಬಾರದು’ ಎಂದು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಆದರೂ, ಇಲ್ಲಿ ಎಲ್ಲ ದಾಖಲೆಗಳು ಸ್ಪಷ್ಟವಾಗಿದ್ದರೂ, ಅಧಿಕಾರಿಗಳು ಭೂಮಿಯನ್ನು ಕಿತ್ತುಕೊಳ್ಳಲು ಹವಣಿಸುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

“ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ತಕ್ಷಣ ಮಧ್ಯ ಪ್ರವೇಶ ಮಾಡಬೇಕು. ಇಲ್ಲಿ ಅಕ್ರಮವಾಗಿ ಕಾಂಪೌಂಡ್ ಹಾಕಿ ದಲಿತರ ಭೂಮಿಯನ್ನು ಕಬ್ಜ ಮಾಡಿ, ತೊಂದರೆ ಕೊಡುತ್ತಿರುವ ಅಧಿಕಾರಿಗಳನ್ನು ತಡೆಯಬೇಕು. ಮತ್ತೆ ಈ ಭೂಮಿಯನ್ನು ವಿವಾದಕ್ಕೆ ಸಿಲುಕಿಸಿ, ದಲಿತ ಕುಟುಂಬಗಳಿಗೆ ತೊಂದರೆ ಕೊಡದಂತೆ ಸ್ಪಷ್ಟ ನಿರ್ದೇಶನ ನೀಡಬೇಕು” ಎಂದು ಯಶವಂತ್ ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...