Homeದಲಿತ್ ಫೈಲ್ಸ್ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

- Advertisement -
- Advertisement -

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ ಮೇಲೆ ದಾಂಧಲೆ-ದೌರ್ಜನ್ಯ ನಡೆಸಿದ್ದಾರೆ.

ಗಂಗಸಂದ್ರ ಗ್ರಾಮದ ಬಿ.ಎಂ ಕಾವಲ್ ಸರ್ವೇ ನಂ.24ರಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಮಾದಿಗ ಸಮುದಾಯದ ಹಲವು ಕುಟುಂಬಗಳ ಭೂಮಿ ಇದೆ. ಸುಮಾರು 60-70 ವರ್ಷಗಳ ಹಿಂದೆಯೇ ಸರ್ಕಾರ ಈ ಭೂಮಿಯನ್ನು ದಲಿತ ಕುಟುಂಬಗಳ ಹೆಸರಿಗೆ ನೋಂದಣಿ ಮಾಡಿಕೊಟ್ಟಿದೆ. ಗ್ರಾಮದ ದಲಿತ ಕುಟುಂಬಗಳು ಮೂರು ತಲೆ ಮಾರುಗಳಿಂದ ಆ ಭೂಮಿಯನ್ನು ಉಳಿಸಿಕೊಂಡು ಬಂದಿದ್ದಾರೆ. ಆದರೆ, ಈಗ ಏಕಾಏಕಿ ಆ ಭೂಮಿಗೆ ಕಗ್ಗಲೀಪುರ ವಲಯ ಅರಣ್ಯಾಧಿಕಾರಿ ಮತ್ತು ಅವರ ಮೇಲಧಿಕಾರಿ ಎಸಿಎಫ್‌ ಹಾಗೂ ಪೊಲೀಸರು ದಾಳಿ ಮಾಡಿದ್ದಾರೆ. ಭೂಮಿ ಅರಣ್ಯ ಇಲಾಖೆಗೆ ಸೇರಿದ್ದೆಂದು ಭೂಮಿಯನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. 

ಮಾತ್ರವಲ್ಲದೆ, ಸುಮಾರು 50 ಮಂದಿ ಗೂಂಡಾಗಳಿಗೆ ಅರಣ್ಯ ಗಾರ್ಡ್‌ಗಳ ವೇಷ ತೊಡಿಸಿ, ಅರಣ್ಯ ಸಿಬ್ಬಂದಿಗಳೆಂದು ಬಿಂಬಿಸಿ, ದಲಿತ ನಿವಾಸಿಗಳ ಮೇಲೆ ದರ್ಪ ಮೆರೆದಿದ್ದಾರೆ ಎಂದು ಭೂ-ಒಡೆತನ ಹೊಂದಿರುವ ದಲಿತರು ಆರೋಪಿಸಿದ್ದಾರೆ. 

ದಲಿತ ಕುಟುಂಬಗಳ ಬಳಿ ಆ ಭೂಮಿಗೆ ಸಂಬಂಧಿಸಿದ ಆರ್‌ಟಿಸಿ, ಎಂಆರ್‌ ಕಾಪಿಗಳಿವೆ. ಆದರೆ, ದುರಸ್ತಿಯಾಗಿಲ್ಲ ಎಂಬ ಏಕೈಕ ನೆಪ ಇಟ್ಟುಕೊಂಡು ಈ ಭೂಮಿ ಮೀಸಲು ಅರಣ್ಯದ ಬಫರ್ ವಲಯವೆಂದು ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ. ದಾಖಲಾತಿಗಳನ್ನು ಅಧಿಕಾರಿಗಳಿಗೆ ತೋರಿಸಿದರೆ, ಇವು ಸ್ವಾತಂತ್ರ್ಯ ನಂತರ ಕೊಟ್ಟಿರುವ ದಾಖಲೆಗಳು. ಆದರೆ, ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರ ಕಾಲದಲ್ಲೇ ಇದು ಅರಣ್ಯ ಭೂಮಿ ಅಂತ ಆಗಿದೆ. ಇದು ಅರಣ್ಯ ಇಲಾಖೆಗೆ ಸೇರಿದ್ದು ಎಂದು ಮೊಂಡುತನದ ವಾದ ಮಾಡುತ್ತಿರುವ ಅಧಿಕಾರಿಗಳು, ದಲಿತ ಕುಟುಂಬಗಳ ಮೇಲೆ ಗೂಂಡಾವರ್ತನೆ ತೋರಿದ್ದಾರೆ.

ಅಲ್ಲಿನ ನಿವಾಸಿಗಳು ತಮ್ಮ ಭೂಮಿಯ ರಕ್ಷಣೆಗಾಗಿ ಹಾಕಿದ್ದ ಡಾ. ಬಿ.ಆರ್‌ ಅಂಬೇಡ್ಕರ್ ರವರ ಭಾವಚಿತ್ರವಿದ್ದ ಬೋರ್ಡ್ ಕಿತ್ತು ಎಸೆದಿರುವ ಅಧಿಕಾರಿಗಳು, ದಲಿತರ ಭೂಮಿಗೆ ಕಾಂಪೌಂಡ್‌ ನಿರ್ಮಿಸಲು ಮುಂದಾಗಿದ್ದಾರೆ.

“ಭೂಮಿ ನಮ್ಮದು ಎಂಬುದಕ್ಕೆ ನಮ್ಮ ಬಳಿ ದಾಖಲೆಗಳಿವೆ. ಸರ್ಕಾರವೇ ನಮ್ಮ ಪೂರ್ವಜರ ಹೆಸರಿಗೆ ಭೂಮಿಯನ್ನು ವರ್ಗಾಯಿಸಿ, ಕಂದಾಯ ಇಲಾಖೆಯಡಿ ದಾಖಲೆಗಳನ್ನು ಮಾಡಿ ಕೊಟ್ಟಿದೆ. ನಮ್ಮ ಜೀವನಕ್ಕೆ ಈ ಭೂಮಿಯೇ ಆಧಾರವಾಗಿದೆ. ಹಲವು ವರ್ಷಗಳಿಂದ ಈ ಭೂಮಿಯನ್ನು ಉಳಿಸಿಕೊಂಡು ಬಂದಿದ್ದೇವೆ. ಆದರೆ, ಅರಣ್ಯ ಅಧಿಕಾರಿಗಳು ನಮ್ಮ ಭೂಮಿಯನ್ನು ಕಸಿಕೊಳ್ಳುತ್ತಿದ್ದಾರೆ” ಎಂದು ದಲಿತ ಕುಟುಂಬಗಳು ನೋವು ತೋಡಿಕೊಳ್ಳುತ್ತಿದ್ದಾರೆ. 

ಅಧಿಕಾರಿಗಳ ದೌರ್ಜನ್ಯದ ಮಾಹಿತಿ ತಿಳಿದ ಸಿಐಟಿಯು ಪ್ರಧಾನ ಕಾರ್ಯದರ್ಶಿ ಟಿ.ಯಶವಂತ್ ಅವರು ಸ್ಥಳಕ್ಕೆ ಧಾವಿಸಿದ್ದು, ಅಧಿಕಾರಿಗಳ ಕಿರುಕುಳವನ್ನು ಖಂಡಿಸಿದ್ದಾರೆ. ನಿವಾಸಿಗಳೊಂದಿಗೆ ಸ್ಥಳದಲ್ಲಿಯೇ ಪ್ರತಿಭಟನೆ ನಡೆಸಿದ್ದಾರೆ.

“ಸೋಮವಾರವಷ್ಟೇ ಇದೇ ಭೂಮಿ ವಿಚಾರವಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್‌ ಅವರನ್ನು ಭೇಟಿ ಮಾಡಿದ್ದೆವು. ಕಂದಾಯ ದಾಖಲಾತಿ ಸ್ಪಷ್ಟವಾಗಿದ್ದರೂ, ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಮಂಜೂರಾಗಿರುವ ಭೂಮಿಯನ್ನ ಅರಣ್ಯ ಇಲಾಖೆಯವರು ವಶಪಡಿಸಿಕೊಳ್ಳಲು ಮುಂದಾಗಿದ್ದಾರೆ. ಕುಟುಂಬಗಳಿಗೆ ತೊಂದರೆ, ಕಿರುಕುಳ ನೀಡುತ್ತಿದ್ದಾರೆ ಎಂಬ ವಿಚಾರವನ್ನು ಜಿಲ್ಲಾಧಿಕಾರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ” ಎಂದು ಯಶವಂತ್‌ ತಿಳಿಸಿದ್ದಾರೆ.

“ನಮ್ಮ ಮನವಿ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ‘ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆ ನಡುವೆ ದಾಖಲಾತಿ ಮತ್ತು ಗಡಿ ವಿಚಾರದಲ್ಲಿ ಗೊಂದಲವಿದ್ದರೆ, ಅವುಗಳನ್ನ ನಿವಾರಿಸಲು ಎಸ್‌ಐಟಿ ರಚನೆ ಮಾಡಿಕೊಂಡಿದ್ದೇವೆ. ಬೆಂಗಳೂರಿನಲ್ಲಿ ಆ ಎಸ್‌ಐಟಿಗೆ ಅಧ್ಯಕ್ಷ ನಾನೇ ಆಗಿದ್ದೇನೆ. ಬೆಂಗಳೂರು ಎಸ್‌ಐಟಿ ಅಥವಾ ರಾಜ್ಯ ಎಸ್‌ಐಟಿಯಲ್ಲಿ ಗಂಗಸಂದ್ರದ ಭೂಮಿ ವಿಚಾರ ಚರ್ಚೆಗೆ ಬಂದಿಲ್ಲ. ನಿಮ್ಮ  ಕಂದಾಯ ದಾಖಲಾತಿಗಳು ಸ್ಪಷ್ಟವಾಗಿರುವ ಕಡೆಗೆ ಅರಣ್ಯ ಅಧಿಕಾರಿಗಳು ಹೋರಬಾರದೆಂದು ಡಿಸಿಎಫ್‌ ರವೀಂದ್ರ ಮೂಲಕ ಸ್ಪಷ್ಟ ಸೂಚನೆ ಕೊಡುತ್ತೇನೆ’ ಎಂಬುದಾಗಿ ಭರವಸೆ ನೀಡಿದ್ದರು. ಆದರೂ, ಇಂದು ಅರಣ್ಯ ಅಧಿಕಾರಿಗಳು ಏಕಾಏಕಿ ದಲಿತರ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿದ್ದಾರೆ” ಎಂದು ಯಶವಂತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರಣ್ಯ ಅಧಿಕಾರಿಗಳು ಕಾನೂನುಬಾಹಿರವಾಗಿ ದಲಿತರ ಭೂಮಿಯನ್ನು ಕಬ್ಜ ಮಾಡಲು ಬಂದಿದ್ದಾರೆ. 60/70 ವರ್ಷಗಳಿಂದ ಈ ಭೂಮಿಯನ್ನ ಉಳಿಸಿಕೊಂಡಿರುವ ಬಡವರನ್ನೇ ಅಪರಾಧಿಗಳನ್ನಾಗಿ ಮಾಡಲು ಮುಂದಾಗಿದ್ದಾರೆ. ವಿಧಾನಸಭೆಯಲ್ಲಿ ಭೂವಿವಾದದ ವಿಚಾರಗಳು ಚರ್ಚೆಗೆ ಬಂದಾಗ, ಅರಣ್ಯ ಇಲಾಖೆಯ ಸಚಿವರು, ‘ಯಾವುದೇ ಭೂಮಿಯಾಗಿದ್ದರೂ, 2-3 ಎಕರೆ ಭೂಮಿಯಲ್ಲಿ ಕೃಷಿ ಮಾಡುತ್ತಿರುವವರನ್ನು ಒಕ್ಕಲೆಬ್ಬಿಸಬಾರದು’ ಎಂದು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಆದರೂ, ಇಲ್ಲಿ ಎಲ್ಲ ದಾಖಲೆಗಳು ಸ್ಪಷ್ಟವಾಗಿದ್ದರೂ, ಅಧಿಕಾರಿಗಳು ಭೂಮಿಯನ್ನು ಕಿತ್ತುಕೊಳ್ಳಲು ಹವಣಿಸುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

“ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ತಕ್ಷಣ ಮಧ್ಯ ಪ್ರವೇಶ ಮಾಡಬೇಕು. ಇಲ್ಲಿ ಅಕ್ರಮವಾಗಿ ಕಾಂಪೌಂಡ್ ಹಾಕಿ ದಲಿತರ ಭೂಮಿಯನ್ನು ಕಬ್ಜ ಮಾಡಿ, ತೊಂದರೆ ಕೊಡುತ್ತಿರುವ ಅಧಿಕಾರಿಗಳನ್ನು ತಡೆಯಬೇಕು. ಮತ್ತೆ ಈ ಭೂಮಿಯನ್ನು ವಿವಾದಕ್ಕೆ ಸಿಲುಕಿಸಿ, ದಲಿತ ಕುಟುಂಬಗಳಿಗೆ ತೊಂದರೆ ಕೊಡದಂತೆ ಸ್ಪಷ್ಟ ನಿರ್ದೇಶನ ನೀಡಬೇಕು” ಎಂದು ಯಶವಂತ್ ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...