Homeಕರ್ನಾಟಕಬೆಂಗಳೂರು: ಫೇಸ್‌ಬುಕ್‌ ಗೆಳತಿಯಿಂದ ವಂಚನೆ, 37 ಲಕ್ಷ ರೂ. ಕಳೆದುಕೊಂಡ ಸ್ವಾಮೀಜಿ

ಬೆಂಗಳೂರು: ಫೇಸ್‌ಬುಕ್‌ ಗೆಳತಿಯಿಂದ ವಂಚನೆ, 37 ಲಕ್ಷ ರೂ. ಕಳೆದುಕೊಂಡ ಸ್ವಾಮೀಜಿ

- Advertisement -
- Advertisement -

ಸಾಮಾಜಿಕ ಮಾಧ್ಯಮವಾದ ಫೇಸ್‌ಬುಕ್‌ನಲ್ಲಿ ಪರಿಚಯವಾದ ಯುವತಿಯೊಬ್ಬರು ಕಂಬಾಳು ಮಹಾಸಂಸ್ಥಾನದ ಚನ್ನವೀರ ಶಿವಾಚಾರ್ಯ ಸ್ವಾಮೀಜಿಯವರಿಗೆ 37 ಲಕ್ಷ ರೂಪಾಯಿ ವಂಚಿಸಿರುವುದು ಬೆಳಕಿಗೆ ಬಂದಿದೆ.

ಫೇಸ್‌ಬುಕ್‌ನಲ್ಲಿ ಪರಿಚಯವಾಗಿ, ನಂತರ ವಿಡಿಯೊ ಕಾಲ್‌ಗಳ ಮೂಲಕ ಸಲುಗೆ ತೋರುತ್ತಿದ್ದ ಯುವತಿಯು ಚನ್ನವೀರ ಶಿವಾಚಾರ್ಯ ಸ್ವಾಮೀಜಿಯಿಂದ 37 ಲಕ್ಷ ರೂಪಾಯಿ ಕಸಿದುಕೊಂಡಿರುವ ಸಂಬಂಧ ದಾಬಸ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ಆಗಿದೆ.

“ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಅವರು ಹಣ ವರ್ಗಾವಣೆ ದಾಖಲೆ ಸಮೇತ ವಂಚನೆ ಬಗ್ಗೆ ದೂರು ನೀಡಿದ್ದಾರೆ. ಆರೋಪಿ ಎನ್ನಲಾದ ಯುವತಿ ವರ್ಷಾ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ.

ಏನಿದು ಪ್ರಕರಣ?

ಶಿವಾಚಾರ್ಯ ಸ್ವಾಮೀಜಿಗೆ 2020ರಲ್ಲಿ ವರ್ಷಾ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್‌ ಬಂದಿತ್ತು. ಅವರನ್ನು ಸ್ವಾಮೀಜಿ ಫ್ರೆಂಡ್ ಮಾಡಿಕೊಂಡಿದ್ದರು. ಅಧ್ಯಾತ್ಮದಲ್ಲಿ ಆಸಕ್ತಿ ಇದೆ ಎನ್ನುತ್ತಾ ಯುವತಿಯು ಸ್ವಾಮೀಜಿಯೊಂದಿಗೆ ಚಾಟ್ ಮಾಡುತ್ತಿದ್ದಳು. ಸ್ವಾಮೀಜಿಯ ಮೊಬೈಲ್ ನಂಬರ್‌ ಪಡೆದು, ತನ್ನ ನಂಬರ್‌ ಕೂಡ ಶೇರ್‌ ಮಾಡಿಕೊಂಡಿದ್ದಳು ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಮೊಬೈಲ್ ನಂಬರ್ ಪಡೆದ ಬಳಿಕ ವಾಟ್ಸ್‌ಆ್ಯಪ್‌ನಲ್ಲಿ ಚಾಟ್‌ ಕೂಡ ಮಾಡುತ್ತಿದ್ದರು. ತಾನೊಬ್ಬ ಅನಾಥೆ ಎನ್ನುತ್ತಿದ್ದ ವರ್ಷಾ, ವಿಡಿಯೊ ಕಾಲ್‌ ಮಾಡಲಾರಂಭಿಸಿದ್ದಳು. ಹಲವು ಬಾರಿ ವಿಡಿಯೊ ಕರೆ ಮಾಡಿದ್ದ ಯುವತಿ, ಎಂದಿಗೂ ಮುಖ ತೋರಿಸಿರಲಿಲ್ಲ. ಕೈ–ಕಾಲುಗಳನ್ನು ಮಾತ್ರ ತೋರಿಸಿ ಮಾತನಾಡುತ್ತಿದ್ದಳು” ಎಂದೂ ಸ್ವಾಮೀಜಿ ದೂರಿನಲ್ಲಿ ಹೇಳಿದ್ದಾರೆ.

“ಹೋಟೆಲ್ ಮ್ಯಾನೇಜ್‌ಮೆಂಟ್ ಕೋರ್ಸ್ ಮಾಡುತ್ತಿರುವುದಾಗಿ ಹೇಳಿಕೊಂಡು 2 ಲಕ್ಷ ರೂಪಾಯಿ ನನ್ನಿಂದ ಪಡೆದುಕೊಂಡಿದ್ದಳು. ತನ್ನ ಹೆಸರಿನಲ್ಲಿರುವ ಜಮೀನನ್ನು ಮಠದ ಹೆಸರಿಗೆ ಬರೆದುಕೊಡುವುದಾಗಿ ಹೇಳಿ, ಹಂತಹಂತವಾಗಿ ಹೆಚ್ಚುವರಿಯಾಗಿ 35 ಲಕ್ಷ ರೂಪಾಯಿ ವರ್ಗಾವಣೆ ಮಾಡಿಸಿಕೊಂಡಿದ್ದಳು” ಎಂದು ಸ್ವಾಮೀಜಿ ತಿಳಿಸಿದ್ದಾರೆ.

“ಜಮೀನು ದಾಖಲೆ ತರುವ ವೇಳೆ ನನ್ನ ಮೇಲೆ ಹಲ್ಲೆಯಾಗಿದೆ, ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ವರ್ಷಾ ಹೇಳಿಕೊಂಡಿದ್ದರು. ಆಸ್ಪತ್ರೆಯ ಬಿಲ್ ಪಾವತಿಗಾಗಿ ಮತ್ತೆ ಹಣದ ಕೋರಿಕೆ ಇಟ್ಟಿದ್ದಳು. ಆನಂತರ ಅನುಮಾನಗೊಂಡು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಪರಿಚಯಸ್ಥರೊಬ್ಬರನ್ನು ಕಳಿಸಿ ವಿಚಾರಿಸಿದೆ. ವರ್ಷಾ ಎಂಬವರು ಯಾರೂ ದಾಖಲಾಗಿಲ್ಲ ಎಂದು ತಿಳಿಯಿತು” ಎಂದಿದ್ದಾರೆ ಸ್ವಾಮೀಜಿ.

ಇದನ್ನೂ ಓದಿರಿ: ಚಂಡೀಗಢ: ಬಿಜೆಪಿ ಸಂಸದೆ ಜೊತೆ ವಾಗ್ವಾದ; ಸದನದಿಂದ ಎಎಪಿ ಕೌನ್ಸಿಲರ್‌ಗಳ ಅಮಾನತು

“ವರ್ಷಾ ಸ್ನೇಹಿತೆ ಎನ್ನಲಾದ ಮಂಜುಳಾಗೆ ಕಾಲ್‌ ಮಾಡಿದಾಗ, 55 ಲಕ್ಷ ರೂಪಾಯಿ ಸಾಲ ಮಾಡಿ ವರ್ಷಾರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಕೊಂಡು ಬಂದಿದ್ದೇನೆ ಎಂದು ಹೇಳಿದ್ದರು. ಆಸ್ಪತ್ರೆಗೆ ನೀಡಿರುವ ಹಣವನ್ನು ಸಾಲದ ರೂಪದಲ್ಲಿ ತಂದಿದ್ದು, ಅದನ್ನು ತೀರಿಸಬೇಕು. ನೀವು ಹಣ ನೀಡದಿದ್ದರೆ ವರ್ಷಾ ಜೊತೆಗಿನ ಸಲುಗೆಯ ವಿಷಯವನ್ನು ಎಲ್ಲರಿಗೂ ಹೇಳಿ ಮರ್ಯಾದೆ ತೆಗೆಯುತ್ತೇನೆ ಎಂದು ಬೆದರಿಸಲಾಗಿತ್ತು” ಎಂದು ಸ್ವಾಮೀಜಿ ಹೇಳಿರುವುದಾಗಿ ವರದಿಯಾಗಿದೆ.

ವರ್ಷಾ ಕಡೆಯವರು ಎನ್ನಲಾದ ಮಂಜುಳಾ ಹಾಗೂ ಇತರರು ಮೇ 23ರಂದು ಮಠಕ್ಕೆ ಹೋಗಿ ಗಲಾಟೆ ಮಾಡಿದ್ದರು. 55 ಲಕ್ಷ ರೂಪಾಯಿ ವಾಪಸ್‌ ಕೊಡುವಂತೆ ಸ್ವಾಮೀಜಿಗೆ ಧಮ್ಕಿ ಹಾಕಿದ್ದರು. ಇದಾದ ನಂತರ ಸ್ವಾಮೀಜಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ ಎನ್ನಲಾಗಿದೆ.

ಸ್ವಾಮೀಜಿ ಸುಮಾರು 50 ಲಕ್ಷ ರೂಪಾಯಿವರೆಗೂ ಹಣ ಕಳೆದುಕೊಂಡಿರುವ ಸಾಧ್ಯತೆ ಇದೆ. ವರ್ಷಾ ಮತ್ತು ಮಂಜುಳಾ ನಡುವಿನ ಸಂಬಂಧ ಏನೆಂಬುದು ತನಿಖೆಯಿಂದ ಬಯಲಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೇಸ್‌ಬುಕ್‌ ಮೂಲಕ ಪರಿಚಯವಾಗಿ, ಬೆತ್ತಲೆ ವಿಡಿಯೊ ಕಾಲ್ ಮಾಡುವ ಮೂಲಕ ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಸಾಕಷ್ಟು ವರದಿಯಾಗಿವೆ. ಸ್ವಾಮೀಜಿಯೇ ಇಂತಹದ್ದೊಂದು ಜಾಲಕ್ಕೆ ಸಿಲುಕಿರುವುದು ಹಲವು ಚರ್ಚೆಗೆ ಅವಕಾಶ ನೀಡಿದೆ. ಚನ್ನವೀರ ಶಿವಾಚಾರ್ಯ ಸ್ವಾಮೀಜಿಯವರು ಇಷ್ಟು ಕಾಲ ಎಚ್ಚೆತ್ತುಕೊಳ್ಳದೆ ಇದ್ದದ್ದು ಏಕೆ? 37 ಲಕ್ಷ ರೂಪಾಯಿಯವರೆಗೂ ಅಪರಿಚಿತ ಯುವತಿಗೆ ಹಣ ವರ್ಗಾಯಿಸಿದ್ದು ಹೇಗೆ? ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...